Category Archives: Blog

Your blog category

IPL 2026: ನೋಡುವವರಿಲ್ಲ, ಟಿಆರ್​ಪಿಯೂ ಇಲ್ಲ..! ಕಳೆಗುಂದಿದ ಐಪಿಎಲ್ ಜನಪ್ರಿಯತೆ – Kannada News | IPL 2026 Popularity Decline: TRP and Viewership Drop, Advertisers Lose Interest

2026 ರ ಐಪಿಎಲ್‌ನಲ್ಲಿ (IPL 2026) ಈಗಾಗಲೇ 47 ಪಂದ್ಯಗಳು ಮುಗಿದಿವೆ. ಅಂದರೆ ಐಪಿಎಲ್​ನ ಅರ್ಧ ಪ್ರಯಾಣ ಮುಗಿದಂತ್ತಾಗಿದೆ. ಆರಂಭದಲ್ಲಿ ಐಪಿಎಲ್​ಗೆ ಸಿಕ್ಕ ಬೆಂಬಲ ಪಂದ್ಯಗಳು ಮುಂದುವರೆದಂತೆ ಕಳೆಗುಂದಿದಂತೆ ಕಾಣುತ್ತಿದೆ. ಇದಕ್ಕೆ ಕಾರಣ ಕಳೆದ ಆವೃತ್ತಿಯಂತೆ ಈ ಆವೃತ್ತಿಯಲ್ಲೂ ಬರಿ ಬ್ಯಾಟರ್​ಗಳ ಪಾರುಪತ್ಯವೇ ಹೆಚ್ಚಾಗಿರುವುದು. ಇದರ ಜೊತೆಗೆ ಇನ್ನು ಅನೇಕ ಕಾರಣಗಳು ಐಪಿಎಲ್​ ಮೇಲೆ ಅಭಿಮಾನಿಗಳು ಉತ್ಸಾಹ ಕಳೆದುಕೊಳ್ಳುವಂತೆ ಮಾಡುತ್ತಿವೆ. ಇದೀಗ ಅದಕ್ಕೆ ಪೂರಕವೆಂಬಂತೆ ಹೊರಬಿದ್ದಿರುವ ವರದಿಯೊಂದು ಐಪಿಎಲ್ ಜನಪ್ರಿಯತೆ ಕಡಿಮೆಯಾಗುತ್ತಿದೆ ಎಂಬುದನ್ನು ಬಹಿರಂಗಪಡಿಸಿದೆ. ವರದಿಯ ಪ್ರಕಾರ, 2026 ರ ಐಪಿಎಲ್​ನ ಟಿಆರ್​ಪಿಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ. ಮಾತ್ರವಲ್ಲದೆ ಐಪಿಎಲ್ ವೀಕ್ಷಿಸುವವರ ಸಂಖ್ಯೆಯಲ್ಲೂ ಇಳಿಮುಖ ಕಂಡುಬಂದಿದೆ. ಇದರ ಪರಿಣಾಮವೆಂಬಂತೆ ಜಾಹೀರಾತುದಾರರ ಸಂಖ್ಯೆಯೂ ಕಡಿಮೆಯಾಗಿದೆ.

ಟಿಆರ್​ಪಿಯಲ್ಲಿ ಕುಸಿತ

ಮೊದಲಿಗೆ ಟೆಲಿವಿಷನ್ ರೇಟಿಂಗ್ ಪಾಯಿಂಟ್‌ ಬಗ್ಗೆ ಹೇಳುವುದಾದರೆ.. TAM ಸ್ಪೋರ್ಟ್ಸ್ ಮತ್ತು BARC ಇಂಡಿಯಾ ನೀಡಿರುವ ವರದಿ ಪ್ರಕಾರ, ಐಪಿಎಲ್ 2026 ರ ಟಿಆರ್​ಪಿ ಶೇಕಡಾ 18.8 ರಷ್ಟು ಕಡಿಮೆಯಾಗಿದೆ. ಅಂದರೆ ಐಪಿಎಲ್ 2026 ರ ಟಿಆರ್​ಪಿ 4.57 ರಿಂದ 3.71 ಕ್ಕೆ ಇಳಿದಿದೆ. ಇದರ ಜೊತೆಗೆ ಈ ಬಾರಿಯ ಐಪಿಎಲ್ ವೀಕ್ಷಕರ ಸಂಖ್ಯೆಯೂ ಶೇ.26 ರಷ್ಟು ಕಡಿಮೆಯಾಗಿದೆ. ಅಂದರೆ ಐಪಿಎಲ್ ವೀಕ್ಷಕರ ಸಂಖ್ಯೆ 124 ಮಿಲಿಯನ್‌ನಿಂದ 113.6 ಮಿಲಿಯನ್‌ಗೆ ಕುಸಿದಿದೆ.

ಜಾಹೀರಾತುದಾರರ ನಿರಾಸಕ್ತಿ

ಐಪಿಎಲ್ 2026 ರಲ್ಲಿ ವೀಕ್ಷಕರ ಸಂಖ್ಯೆ ಕಡಿಮೆಯಾದ್ದರ ಪರಿಣಾಮವಾಗಿ ಜಾಹೀರಾತುದಾರರು ಸಹ ಆಸಕ್ತಿ ಕಳೆದುಕೊಳ್ಳುತ್ತಿರುವಂತೆ ತೋರುತ್ತಿದೆ. ಐಪಿಎಲ್ 2026 ಜಾಹೀರಾತುದಾರರು ಶೇಕಡಾ 31 ರಷ್ಟು ಕುಸಿತ ಕಂಡಿದ್ದಾರೆ. ಹಿಂದೆ, ಜಾಹೀರಾತುದಾರರ ಸಂಖ್ಯೆ 65 ಮೀರಿತ್ತು, ಆದರೆ ಈಗ ಅದು 45 ಕ್ಕೆ ಕುಸಿದಿದೆ.

ಇಂತಹ ಪರಿಸ್ಥಿತಿಗೆ ಕಾರಣವೇನು?

ಈಗ ಪ್ರಶ್ನೆ ಏನೆಂದರೆ, ಟಿಆರ್‌ಪಿ, ವೀಕ್ಷಕರ ಸಂಖ್ಯೆ ಮತ್ತು ಜಾಹೀರಾತುದಾರರ ಸಂಖ್ಯೆಯಲ್ಲಿನ ಕುಸಿತಕ್ಕೆ ಕಾರಣವೇನು? ಎಂಬುದು. ಇದಕ್ಕೆ ಕಾರಣ, ಲೀಗ್‌ನ ಸ್ವರೂಪದ ದೀರ್ಘೀಕರಣ, ಪಂದ್ಯಗಳನ್ನು ಫ್ಲಾಟ್ ಪಿಚ್‌ಗಳಲ್ಲಿ ಆಡಿಸುತ್ತಿರುವುದು ಮತ್ತು ಫ್ಯಾಂಟಸಿ ಅಪ್ಲಿಕೇಶನ್‌ಗಳ ಮೇಲಿನ ನಿಷೇಧ ಸೇರಿದಂತೆ ಹಲವಾರು ಕಾರಣಗಳನ್ನು ಉಲ್ಲೇಖಿಸಲಾಗುತ್ತಿದೆ. ಫ್ಲಾಟ್ ಪಿಚ್‌ಗಳಲ್ಲಿ ಪಂದ್ಯಗಳನ್ನು ಆಯೋಜನೆ ಮಾಡುತ್ತಿರುವುದರಿಂದ ಕೇವಲ ಬ್ಯಾಟರ್​ಗಳ ಅಬ್ಬರವೇ ಹೆಚ್ಚಿದೆ. ಇದರಿಂದ ಆಟದಲ್ಲಿನ ಸಮತೋಲನೆ ಮಾಯಾವಾಗಿರುವುದು ಅಭಿಮಾನಿಗಳ ನಿರಾಸಕ್ತಿಗೆ ಕಾರಣವಾಗಿದೆ.

SRH vs KKR: ಸುನಿಲ್ ನರೈನ್ ‘ಡಬಲ್ ಸೆಂಚುರಿ’; ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ ಮೊದಲ ವಿದೇಶಿಗ

ಹಾಗೆಯೇ ಫ್ಯಾಂಟಸಿ ಅಪ್ಲಿಕೇಶನ್‌ಗಳ ಮೇಲಿನ ನಿಷೇಧವು ಐಪಿಎಲ್‌ನಲ್ಲಿ ಆಸಕ್ತಿಯನ್ನು ಕಡಿಮೆ ಮಾಡಿದೆ. ಇದಲ್ಲದೆ, ವೀಕ್ಷಕರ ಅಭ್ಯಾಸದಲ್ಲಿನ ಇತ್ತೀಚಿನ ಬದಲಾವಣೆಗಳು ಟಿಆರ್‌ಪಿಗಳಲ್ಲಿನ ಕುಸಿತಕ್ಕೆ ಪ್ರಮುಖ ಕಾರಣ. ಹೆಚ್ಚಿನ ವೀಕ್ಷಕರು ಈಗ ತಾವು ಬೆಂಬಲಿಸುವ ತಂಡಗಳನ್ನು ಒಳಗೊಂಡ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ. ತಮ್ಮ ನೆಚ್ಚಿನ ತಂಡದ ಪಂದ್ಯಗಳನ್ನು ಹೊರತುಪಡಿಸಿ ಉಳಿದ ಪಂದ್ಯಗಳನ್ನು ವೀಕ್ಷಿಸುವವರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಐಪಿಎಲ್​ನ​ಜನಪ್ರಿಯತೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ ಎಂಬುದರಲ್ಲಿ ಅನುಮಾನವಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:27 pm, Mon, 4 May 26

Source link

Free Online Courses: 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎನ್‌ಸಿಇಆರ್‌ಟಿಯಿಂದ ಉಚಿತ ಆನ್‌ಲೈನ್ ಕೋರ್ಸ್ ಆರಂಭ! – Kannada News | NCERT SWAYAM Free Online Courses for 11th and 12th Graders: Boost Exam Prep

11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯನ್ನು ಸುಲಭ ಹಾಗೂ ಸರಳಗೊಳಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (NCERT) ಈಗ ಮಹತ್ವದ ಉಪಕ್ರಮವನ್ನು ಕೈಗೊಂಡಿದೆ. ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ‘ಸ್ವಯಂ’ (SWAYAM) ಪೋರ್ಟಲ್ ಮೂಲಕ ಉಚಿತ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದೆ. ಈ ಉಪಕ್ರಮವು ವಿದ್ಯಾರ್ಥಿಗಳಿಗೆ ವಿಷಯಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ನೀಡುವುದಲ್ಲದೆ, ಮನೆಯಿಂದಲೇ ತಮ್ಮ ಪರೀಕ್ಷಾ ಸಿದ್ಧತೆಯನ್ನು ಬಲಪಡಿಸಲು ಮತ್ತು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಲು ಉತ್ತಮ ಅವಕಾಶವನ್ನು ಕಲ್ಪಿಸಿಕೊಡುತ್ತದೆ.

ಈ ವಿಶೇಷ ಕಾರ್ಯಕ್ರಮದ ಅಡಿಯಲ್ಲಿ ಒಟ್ಟು 11 ಪ್ರಮುಖ ವಿಷಯಗಳಲ್ಲಿ ಕೋರ್ಸ್‌ಗಳನ್ನು ನೀಡಲಾಗುತ್ತಿದೆ. ಇದರಲ್ಲಿ ಲೆಕ್ಕಶಾಸ್ತ್ರ, ಜೀವಶಾಸ್ತ್ರ, ರಸಾಯನಶಾಸ್ತ್ರ, ಅರ್ಥಶಾಸ್ತ್ರ, ಭೂಗೋಳಶಾಸ್ತ್ರ, ಭೌತಶಾಸ್ತ್ರ, ಗಣಿತ, ಮನೋವಿಜ್ಞಾನ, ಸಮಾಜಶಾಸ್ತ್ರ, ವ್ಯವಹಾರ ಅಧ್ಯಯನ ಮತ್ತು ಇಂಗ್ಲಿಷ್ ವಿಷಯಗಳು ಒಳಗೊಂಡಿವೆ. ಪ್ರತಿಯೊಂದು ಕೋರ್ಸ್ ಅನ್ನು 21 ವಾರಗಳ ಅವಧಿಗೆ ವಿನ್ಯಾಸಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಯಾವುದೇ ಹೆಚ್ಚಿನ ಮಾನಸಿಕ ಒತ್ತಡವಿಲ್ಲದೆ ತಮ್ಮದೇ ಆದ ವೇಗದಲ್ಲಿ ಅಧ್ಯಯನ ಮಾಡಲು ಇಲ್ಲಿ ಅವಕಾಶವಿದೆ. ಇದು ವಿದ್ಯಾರ್ಥಿಗಳಿಗೆ ಪಠ್ಯದ ಪ್ರತಿಯೊಂದು ಅಂಶವನ್ನು ವಿವರವಾಗಿ ಅರ್ಥಮಾಡಿಕೊಳ್ಳಲು ನೆರವಾಗಲಿದೆ.

ಈ ಆನ್‌ಲೈನ್ ಕಲಿಕಾ ವಿಧಾನದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕದ ಮಾಹಿತಿಯಷ್ಟೇ ಅಲ್ಲದೆ, ಪರಿಣಿತರಿಂದ ವೀಡಿಯೊ ಉಪನ್ಯಾಸಗಳು, ಚರ್ಚಾ ವೇದಿಕೆಗಳು ಮತ್ತು ತಜ್ಞರ ನೇರ ಮಾರ್ಗದರ್ಶನದಂತಹ ಆಧುನಿಕ ಸೌಲಭ್ಯಗಳು ಲಭ್ಯವಿವೆ. ವಿದ್ಯಾರ್ಥಿಗಳು ತಮ್ಮ ಕಲಿಕಾ ಮಟ್ಟವನ್ನು ಪರೀಕ್ಷಿಸಿಕೊಳ್ಳಲು ಕಾಲಕಾಲಕ್ಕೆ ರಸಪ್ರಶ್ನೆಗಳು ಮತ್ತು ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಕೋರ್ಸ್ ಪೂರ್ಣಗೊಳಿಸಿದ ನಂತರ ನಡೆಯುವ ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾದವರಿಗೆ ಅಧಿಕೃತ ಪ್ರಮಾಣಪತ್ರವನ್ನು ಸಹ ನೀಡಲಾಗುತ್ತದೆ, ಇದು ಅವರ ಶೈಕ್ಷಣಿಕ ವೃತ್ತಿಜೀವನಕ್ಕೆ ಹೆಚ್ಚಿನ ಮೌಲ್ಯವನ್ನು ತಂದುಕೊಡಲಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಈ ಯೋಜನೆಯ ಮತ್ತೊಂದು ಪ್ರಮುಖ ಪ್ರಯೋಜನವೆಂದರೆ ಅದರ ನಮ್ಯತೆ. ವಿದ್ಯಾರ್ಥಿಗಳು ಹಗಲು ಅಥವಾ ರಾತ್ರಿ ಎನ್ನದೆ ತಮಗೆ ಅನುಕೂಲಕರವಾದ ಸಮಯದಲ್ಲಿ ಮತ್ತು ಎಲ್ಲಿಂದಲಾದರೂ ಈ ಕೋರ್ಸ್‌ಗಳನ್ನು ಪ್ರವೇಶಿಸಬಹುದು. ಈ ವ್ಯವಸ್ಥೆಯು ಅವರ ಶಾಲಾ ಶಿಕ್ಷಣದ ಜೊತೆಗೆ ಹೆಚ್ಚಿನ ಅಭ್ಯಾಸ ಮಾಡಲು ಪೂರಕವಾಗಿದೆ. ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ ೧ರ ಒಳಗಾಗಿ ಸ್ವಯಂ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಮೌಲ್ಯಮಾಪನ ಪ್ರಕ್ರಿಯೆಯು ಸೆಪ್ಟೆಂಬರ್ 7 ರಿಂದ ಆರಂಭವಾಗಿ, ಸೆಪ್ಟೆಂಬರ್ 15 ರಂದು ಅಂತಿಮ ಪರೀಕ್ಷೆಗಳೊಂದಿಗೆ ಈ ಕೋರ್ಸ್ ಮುಕ್ತಾಯಗೊಳ್ಳಲಿದೆ.

ಅರ್ಜಿ ಸಲ್ಲಿಸಲು ಆಸಕ್ತಿಯಿರುವ ವಿದ್ಯಾರ್ಥಿಗಳು ಮೊದಲು ಸ್ವಯಂ (SWAYAM) ಪೋರ್ಟಲ್‌ಗೆ ಭೇಟಿ ನೀಡಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಅಲ್ಲಿ ತಮಗೆ ಇಷ್ಟವಾದ ವಿಷಯವನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ಸಾಮಗ್ರಿಗಳನ್ನು ಉಚಿತವಾಗಿ ಪಡೆಯಬಹುದು. ನಿಗದಿತ ಕಾರ್ಯಯೋಜನೆಗಳು ಮತ್ತು ಪರೀಕ್ಷೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತು ಉನ್ನತ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಎನ್‌ಸಿಇಆರ್‌ಟಿಯ ಈ ಯೋಜನೆಯು ಅತ್ಯುತ್ತಮ ವೇದಿಕೆಯಾಗಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಎಂಕೆಗೆ ಭರ್ಜರಿ ಶಾಕ್: ಭದ್ರಕೋಟೆಯಲ್ಲೇ ಹಾಲಿ ಸಿಎಂ ಸ್ಟಾಲಿನ್​​ ಮಣಿಸಿದ ಟಿವಿಕೆ

ಚೆನ್ನೈ, ಮೇ 04: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಭ್ಯರ್ಥಿ ಎಂ.ಕೆ. ಸ್ಟಾಲಿನ್ ಉತ್ತರ ಚೆನ್ನೈನ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿ ವಿ.ಎಸ್​.ಬಾಬು ವಿರುದ್ಧ ಸೋಲುಂಡಿದ್ದು, ಆಡಳಿತಾರೂಢ ಪಕ್ಷಕ್ಕೆ ನಟ ದಳಪತಿ ವಿಜಯ್​​ ಶಾಕ್​​ ಮೇಲೆ ಶಾಕ್​​ ನೀಡಿದ್ದಾರೆ. ಉಭಯ ಅಭ್ಯರ್ಥಿಗಳ ನಡುವೆ ಆರಂಭದಿಂದಲೂ ಭಾರಿ ಪೈಪೋಟಿ ಇತ್ತಾದರೂ ಅಂತಿಮವಾಗಿ ಎಂ.ಕೆ. ಸ್ಟಾಲಿನ್ ಟಿವಿಕೆ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದಾರೆ.

ಭಧ್ರ ಕೋಟೆಯಲ್ಲಿಯೇ ಡಿಎಂಕೆಗೆ ಮುಖಭಂಗ

ಕಳೆದ ಕೆಲವು ವರ್ಷಗಳಿಂದ ಕೊಳತ್ತೂರು ಕ್ಷೇತ್ರ ಡಿಎಂಕೆಯ ಭದ್ರ ಕೋಟೆಯಾಗಿದ್ದು, ಎಂ.ಕೆ. ಸ್ಟಾಲಿನ್ 2011ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2021ರ ಚುನಾವಣೆಯಲ್ಲಿ ಅವರು ಎಐಎಡಿಎಂಕೆ ಅಭ್ಯರ್ಥಿ ಆದಿ ರಾಜಾರಾಮ್ ವಿರುದ್ಧ 70,000ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದರು. ಆದರೆ ಈ ಬಾರಿಯ ಚುನಾವಣಾ ಫಲಿತಾಂಶ ಡಿಎಂಗೆ ಮರ್ಮಾಘಾತ ಉಂಟುಮಾಡಿದೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದೆ)

Source link

ಭಾರತದ ‘ಪ್ಯಾಡ್‌ಮ್ಯಾನ್’ಗೆ ನೋಬೆಲ್ ಗೌರವ: 2026ರ ಶಾಂತಿ ಪ್ರಶಸ್ತಿಗೆ ಅರುಣಾಚಲಂ ಮುರುಗಾನಂದಂ ನಾಮನಿರ್ದೇಶನ! – Kannada News | Arunachalam Muruganantham: India’s Padman Eyes 2026 Nobel Peace Prize for Hygiene Work

ದೆಹಲಿ, ಮೇ.4: ಕೊಯಮತ್ತೂರಿನ ಸಾಮಾಜಿಕ ಉದ್ಯಮಿ ಹಾಗೂ ‘ಪ್ಯಾಡ್‌ಮ್ಯಾನ್’ ಖ್ಯಾತಿಯ ಅರುಣಾಚಲಂ ಮುರುಗಾನಂದಂ ಅವರು 2026ರ ನೋಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ. ಈ ನಾಮನಿರ್ದೇಶನದ ಸುದ್ದಿ ಕೇಳಿ ತಮಗೆ ಮೊದಲು ನಂಬಲು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ. ನೋಬೆಲ್ ಪ್ರಶಸ್ತಿಗೆ ನಾವಾಗಿಯೇ ಹೆಸರು ಸಲ್ಲಿಸಲು ಅಥವಾ ಕುಟುಂಬದವರು ಶಿಫಾರಸು ಮಾಡಲು ಸಾಧ್ಯವಿಲ್ಲ, ಇದನ್ನು ಮೂರನೇ ವ್ಯಕ್ತಿಗಳೇ ಮಾಡಬೇಕು ಎಂದು ಹೇಳಿದ್ದಾರೆ. ಪಾಂಡಿಚೇರಿಯ ಅರವಿಂದ್ ಕಣ್ಣಿನ ಆಸ್ಪತ್ರೆಯ ಡೀನ್ ಮತ್ತು ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕದ ತಂಡಗಳು ಮುರುಗಾನಂದಂ ಅವರ ಹೆಸರನ್ನು ನಾಮನಿರ್ದೇಶನಕ್ಕಾಗಿ ಸಲ್ಲಿಸಿದ್ದವು. ಇವರು ಸಲ್ಲಿಸಿದ ನಾಮನಿರ್ದೇಶನವು ಕೇವಲ 24 ಗಂಟೆಗಳ ಒಳಗಾಗಿ ಅಂಗೀಕರಿಸಲ್ಪಟ್ಟಿದೆ.

ಯಾರು ಈ ಅರುಣಾಚಲಂ ಮುರುಗಾನಂದಂ?

ಅರುಣಾಚಲಂ ಮುರುಗಾನಂದಂ ಅವರು ಗ್ರಾಮೀಣ ಮಹಿಳೆಯರ ಋತುಸ್ರಾವದ ನೈರ್ಮಲ್ಯಕ್ಕಾಗಿ ಕಡಿಮೆ ವೆಚ್ಚದ ಸ್ಯಾನಿಟರಿ ಪ್ಯಾಡ್ ತಯಾರಿಸುವ ಯಂತ್ರವನ್ನು ಸಂಶೋಧಿಸಿದವರು. ಶಾಲೆಯಿಂದ ಅರ್ಧಕ್ಕೇ ಹೊರಬಂದಿದ್ದ ಇವರು, ತಮ್ಮ ಪತ್ನಿ ಅನುಭವಿಸುತ್ತಿದ್ದ ತೊಂದರೆಯನ್ನು ಕಂಡು ಈ ಯಂತ್ರವನ್ನು ತಯಾರಿಸಲು ನಿರ್ಧರಿಸಿದರು. ಇವರನ್ನು 2026ರ ನೋಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ. ಈ ನಾಮನಿರ್ದೇಶನವನ್ನು ಪಾಂಡಿಚೇರಿಯ ಅರವಿಂದ್ ಕಣ್ಣಿನ ಆಸ್ಪತ್ರೆಯ ಡೀನ್ ಮತ್ತು ಅಮೆರಿಕದ ತಂಡಗಳು ಸಲ್ಲಿಸಿದ್ದು, ಕೇವಲ 24 ಗಂಟೆಗಳಲ್ಲಿ ಇದನ್ನು ಅಂಗೀಕರಿಸಲಾಗಿದೆ.

ಇಲ್ಲಿದೆ ನೋಡಿ ಸ್ಟೋರಿ:

ಪ್ರಮುಖ ಸಾಧನೆಗಳು

ಮಾರುಕಟ್ಟೆಯಲ್ಲಿ ದೊರೆಯುವ ಪ್ಯಾಡ್‌ಗಳಿಗಿಂತ ಹತ್ತನೇ ಒಂದು ಭಾಗದಷ್ಟು ಕಡಿಮೆ ಬೆಲೆಯಲ್ಲಿ ಪ್ಯಾಡ್ ತಯಾರಿಸುವ ಯಂತ್ರವನ್ನು ಕಂಡುಹಿಡಿದರು. ಜಯಶ್ರೀ ಇಂಡಸ್ಟ್ರೀಸ್ ಎಂಬ ಕಂಪನಿಯನ್ನು ಸ್ಥಾಪಿಸಿ. ಇವರ ಈ ಸಂಸ್ಥೆಯ ಮೂಲಕ ಭಾರತದಾದ್ಯಂತ ಮತ್ತು 11ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸಾವಿರಾರು ಯಂತ್ರಗಳನ್ನು ಅಳವಡಿಸಲಾಗಿದೆ. ಈ ಯಂತ್ರಗಳ ಮೂಲಕ ಸಾವಿರಾರು ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: ‘R’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ ಗೊತ್ತಾ?

ಇವರಿಗೆ ಸಿಕ್ಕ ಗೌರವಗಳು:

ಭಾರತ ಸರ್ಕಾರವು 2016ರಲ್ಲಿ ಇವರಿಗೆ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿದೆ. 2014ರಲ್ಲಿ ಟೈಮ್ಸ್ ನಿಯತಕಾಲಿಕೆಯು ಇವರನ್ನು ವಿಶ್ವದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯಲ್ಲಿ ಸೇರಿಸಿತ್ತು. ಇವರ ಜೀವನದ ಹೋರಾಟವನ್ನು ಆಧರಿಸಿ ಅಕ್ಷಯ್ ಕುಮಾರ್ ಅಭಿನಯದ ‘ಪ್ಯಾಡ್ ಮ್ಯಾನ್’ ಸಿನಿಮಾ ನಿರ್ಮಿಸಲಾಗಿದೆ. ಇವರ ಕಥೆಯನ್ನು ಹೇಳುವ ‘ಪೀರಿಯಡ್. ಎಂಡ್ ಆಫ್ ಸೆಂಟೆನ್ಸ್’ ಎಂಬ ಸಾಕ್ಷ್ಯಚಿತ್ರವು ಆಸ್ಕರ್ ಪ್ರಶಸ್ತಿಯನ್ನೂ ಪಡೆದಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಗಲಕೋಟೆಯಲ್ಲಿ ಯತ್ನಾಳ್​​ ಪ್ರಚಾರ ಮಾಡಿದ್ರೂ ಬಿಜಿಪಿ ಏಕೆ ಗೆಲ್ಲಲಿಲ್ಲ: ಸಚಿವ ತಿಮ್ಮಾಪುರ್ ಹೇಳಿದ್ದಿಷ್ಟು – Kannada News | Minister Timmapur on Bagalkote By election Victory: Congresss Collective Effort and Development Wins

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗಳಿಸಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ  ಶ್ರಮದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು. ಬಿಜೆಪಿಯು ಹಿಂದುತ್ವದ ಟ್ರಂಪ್ ಕಾರ್ಡ್ ಬಳಸಿ, ಯತ್ನಾಳ್​​​ರನ್ನ ಕರೆತಂದಿದ್ದರು ಎಂಬ ಪ್ರಶ್ನಗೆ ಉತ್ತರಿಸಿ ಅವರು, ಪದೇ ಪದೇ ಹಿಂದುತ್ವ, ಹಿಂದೂ ಎಂದು ಭಾಷಣ ಮಾಡುತ್ತಿದ್ದರು. ನಾವು, ಉಮೇಶ್ ಮೇಟಿ ಹಿಂದೂ ಅಲ್ಲವಾ ಎಂದು ಪ್ರಚಾರ ಮಾಡಿದ್ದೇವು. ಎಲ್ಲರ ಶ್ರಮದಿಂದ ಕಾಂಗ್ರೆಸ್ ಗೆದ್ದಿದೆ. ನಮ್ಮ ಸರಕಾರದ ಅಭಿವೃದ್ಧಿ ಕಾರ್ಯ ಗ್ಯಾರಂಟಿಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಬಿಜೆಪಿಯವರನ್ನು ಜನ ತಿರಸ್ಕಾರ ಮಾಡಿದ್ದಾರೆ ಎಂಬುದಕ್ಕೆ ಈ ಚುನಾವಣೆ ಫಲಿತಾಂಶವೇ ಸಾಕ್ಷಿ ಎಂದು ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

West Bengal Election Results: ಮಧ್ಯಾಹ್ನದೊಳಗೆ ದೀದಿ ಟಾಟಾ ಬೈ-ಬೈ ಹೇಳ್ತಾರೆ; ಚುನಾವಣೆಗೂ ಮೊದಲೇ ಭವಿಷ್ಯ ನುಡಿದಿದ್ದರು ಅಮಿತ್ ಶಾ – Kannada News | By 1 o clock Didi Tata Bye Bye Amit Shah Prediction Old Video on West Bengal Election results goes Viral

ನವದೆಹಲಿ, ಮೇ 4: ಪಶ್ಚಿಮ ಬಂಗಾಳದ (West Bengal Assembly Elections Results) ಮಹಾರಾಣಿಯಾಗಿ ಮೆರೆದ ಮಮತಾ ಬ್ಯಾನರ್ಜಿ (Mamata Banerjee) ಅವರ ಯುಗಾಂತ್ಯವಾಗಿದೆ. 15 ವರ್ಷಗಳಿಂದ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಈ ಬಾರಿ ತೀವ್ರ ಮುಖಭಂಗ ಅನುಭವಿಸಿದೆ. ಬದಲಾವಣೆ ಬಯಸಿರುವ ಜನರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೇಸರಿ ಧ್ವಜ ಹಾರಿಸಲೇಬೇಕೆಂದು ಹಠ ತೊಟ್ಟಿದ್ದ ಬಿಜೆಪಿ ಈ ಬಾರಿ ಭಾರೀ ಪ್ರಚಾರ ಕಾರ್ಯ ನಡೆಸಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಪಶ್ಚಿಮ ಬಂಗಾಳದ ಮೂಲೆ-ಮೂಲೆಯಲ್ಲೂ ಸಾಲು-ಸಾಲು ಪ್ರಚಾರದ ರ್ಯಾಲಿ ನಡೆಸಿದ್ದರು. ಅದರ ಪರಿಣಾಮವಾಗಿ ದೀದಿ ತೆರೆಮರೆಗೆ ಸರಿದಿದ್ದಾರೆ. ಇಂದಿನ ಫಲಿತಾಂಶದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಚುನಾವಣಾ ಪ್ರಚಾರದ ವೇಳೆಯೇ ಭವಿಷ್ಯ ನುಡಿದಿರುವ ವಿಡಿಯೋವೊಂದು ಮತ್ತೆ ಟ್ರೆಂಡಿಂಗ್​​ನಲ್ಲಿದೆ.

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದ್ದು, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸತತ ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾಗುವ ಕನಸು ನುಚ್ಚುನೂರಾಗಿದೆ. ಇದರ ನಡುವೆ ಕೇಂದ್ರ ಸಚಿವ ಅಮಿತ್ ಶಾ ಅವರು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಆಡಳಿತದ ಅಂತ್ಯದ ಭವಿಷ್ಯ ನುಡಿದಿರುವ ಹಳೆಯ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ 148 ಸ್ಥಾನಗಳ ಬಹುಮತದ ಗಡಿಯನ್ನು ಬಿಜೆಪಿ ದಾಟಿದೆ. ಹೀಗಾಗಿ, ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತವಾಗಿದೆ.

ಇದನ್ನೂ ಓದಿ: Election Commission of India Results 2026: ಅಸ್ಸಾಂ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ಫಲಿತಾಂಶ ಆನ್‌ಲೈನ್‌ನಲ್ಲಿ ನೋಡುವುದು ಹೇಗೆ? ಇಲ್ಲಿವೆ ಸಿಂಪಲ್ ಸ್ಟೆಪ್ಸ್!

ಪಶ್ಚಿಮ ಮೇದಿನಿಪುರದ ಚಾಂಡಿಪುರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ್ದ ಅಮಿತ್ ಶಾ, “ಮೇ 4ರಂದು ಬೆಳಗ್ಗೆ ಮತ ಎಣಿಕೆ ಶುರುವಾಗುತ್ತದೆ. 8 ಗಂಟೆಗೆ ಬ್ಯಾಲೆಟ್ ಬಾಕ್ಸ್​ಗಳನ್ನು ತೆರೆಯಲಾಗುತ್ತದೆ. 9 ಗಂಟೆಗೆ ಮೊದಲ ಸುತ್ತಿನ ಮತ ಎಣಿಕೆ ಮುಗಿಯುತ್ತದೆ. 10 ಗಂಟೆಗೆ 2ನೇ ಸುತ್ತಿನ ಮತ ಎಣಿಕೆ ಮುಗಿಯುತ್ತದೆ. ಮಧ್ಯಾಹ್ನ 1 ಗಂಟೆಯೊಳಗೆ ದೀದಿ ಟಾಟಾ, ಬೈ-ಬೈ ಹೇಳಿ ಮನೆಗೆ ಹೊರಡುತ್ತಾರೆ. ಸಂಜೆ ಫಲಿತಾಂಶ ಪ್ರಕಟವಾಗುವ ಅಗತ್ಯವೂ ಇರುವುದಿಲ್ಲ. ಅವರ ಸಮಯ ಮುಗಿದಿದೆ” ಎಂದು ಲೇವಡಿ ಮಾಡಿದ್ದರು. ಆ ಮಾತು ಇದೀಗ ನಿಜವಾಗಿದೆ. ಮಧ್ಯಾಹ್ನದೊಳಗೇ ಬಿಜೆಪಿ ಬಹುಮತ ದಾಟಿದ್ದು, ಟಿಎಂಸಿಗೆ ಭಾರೀ ಮುಖಭಂಗವಾಗಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಅಧಿಕಾರ ಸ್ಥಾಪನೆಯತ್ತ ಬಿಜೆಪಿ; ನಿಚ್ಚಳ ಬಹುಮತ ಬಹುತೇಕ ನಿಶ್ಚಿತ

ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿಯ ಪ್ರಕಾರ, ಬಿಜೆಪಿ 193 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಕೇವಲ 93 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಇದರೊಂದಿಗೆ, ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿ ಸರ್ಕಾರ ರಚಿಸಲು ಬಿಜೆಪಿ ಸಜ್ಜಾಗಿದೆ. ತೃಣಮೂಲ ಕಾಂಗ್ರೆಸ್‌ನ 15 ವರ್ಷಗಳ ಆಡಳಿತ ಮತ್ತು ಅದಕ್ಕೂ ಮೊದಲು 34 ವರ್ಷಗಳ ಕಾಲ ಕಮ್ಯುನಿಸ್ಟರ ಆಳ್ವಿಕೆಯನ್ನು ಕಂಡ ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿ ಬಿಜೆಪಿ ಅಧಿಕಾರಕ್ಕೆ ಏರಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಿವಿಕೆ ಭರವಸೆಗಳು: ಗೃಹಿಣಿಯರಿಗೆ 2,500 ರೂ, ವೃದ್ಧರಿಗೆ 3,000 ರೂ, ಉಚಿತ ಗ್ಯಾಸ್, ವಧುವಿಗೆ ಚಿನ್ನ ಇತ್ಯಾದಿ ಕೊಡುಗೆ – Kannada News | Vijay’s TVK Tamilaga Vettri Kazhagam Tamil Nadu election manifesto, poll promises highlights

ಟಿವಿಕೆ ಗೆಲುವನ್ನು ಸಂಭ್ರಮಿಸುತ್ತಿರುವ ಮಹಿಳೆImage Credit source: PTI

ಚೆನ್ನೈ, ಮೇ 4: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಸಿನಿಮಾ ಸ್ಟಾರ್ ದಳಪತಿ ವಿಜಯ್ (Thalapathi Vijay) ನೇತೃತ್ವದ ಟಿವಿಕೆ ಪಕ್ಷ ಅಚ್ಚರಿ ಗೆಲುವು ದಾಖಲಿಸಿದೆ. ಇತ್ತೀಚೆಗಷ್ಟೇ ಆರಂಭಗೊಂಡ ಟಿವಿಕೆ ಪಕ್ಷ ಈ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಯುವಕರಿಗೆ ಹೊಸ ಆಡಳಿತದ ಭರವಸೆ ಮೂಡಿಸಿದ ಜೊತೆಗೆ ಪ್ರಣಾಳಿಕೆ ಮೂಲಕ ಹಲವು ಭರವಸೆಗಳನ್ನೂ ಟಿವಿಕೆ ನೀಡಿತ್ತು. ಮನೆಯ ಯಜಮಾನ್ತಿಗೆ ಮಾಸಿಕ 2,500 ರೂ ಸೇರಿದಂತೆ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಯುವಕರಿಗೆ, ರೈತರಿಗೆ ಭರ್ಜರಿ ಕೊಡುಗೆಗಳನ್ನು ನೀಡುವ ಭರವಸೆಯನ್ನು ನೀಡಲಾಗಿತ್ತು.

ಟಿವಿಕೆ ಚುನಾವಣಾ ಪ್ರಣಾಳಿಕೆಯಲ್ಲಿನ ಮುಖ್ಯಾಂಶಗಳು

ಮನೆ ಮತ್ತು ಮಹಿಳೆಯರಿಗೆ ಕೊಡುಗೆಗಳು

  • ಮನೆಯ ಯಜಮಾನ್ತಿಗೆ ತಿಂಗಳಿಗೆ 2,500 ರೂ ಸಹಾಯಧನ
  • ಅನ್ನಪೂರ್ಣಿ ಸೂಪರ್ ಸಿಕ್ಸ್ ಸ್ಕೀಮ್ ಮೂಲಕ ಪ್ರತೀ ಕುಟುಂಬಕ್ಕೆ ವರ್ಷಕ್ಕೆ ಆರು ಉಚಿತ ಎಲ್​ಪಿಜಿ ಸಿಲಿಂಡರ್
  • ವಾರ್ಷಿಕ 5 ಲಕ್ಷ ರೂಗಿಂತ ಕಡಿಮೆ ಆದಾಯವಿರುವ ಕುಟುಂಬದ ಹೆಣ್ಮಗಳ ಮದುವೆಗೆ 8 ಗ್ರಾಮ್ ಚಿನ್ನ ಮತ್ತು ರೇಷ್ಮೆ ಸೀರೆ ಕೊಡುಗೆ.
  • ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂವರೆಗೆ ಬಡ್ಡಿರಹಿತ ಸಾಲ.
  • ವೆಟ್ರಿ ಪ್ರಯಾಣಂ ಸ್ಕೀಮ್ ಮೂಲಕ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ.
  • ಕಾಮರಾಜರ್ ಕಲಿವಿ ಉರುದಿ ತಿಟ್ಟಂ ಸ್ಕೀಮ್ ಮೂಲಕ ಮಕ್ಕಳಿಗೆ ಶಿಕ್ಷಣ ಮುಂದುವರಿಸಲು ನೆರವಾಗಲು ಪೋಷಕರಿಗೆ ವರ್ಷಕ್ಕೆ 15,000 ರೂ ಸಹಾಯಧನ.
  • ಪ್ರತೀ ನವಜಾತ ಶಿಶುವಿಗೆ ಚಿನ್ನದ ಉಂಗುರ ಮತ್ತು ವೆಲ್ಕಮ್ ಕಿಟ್.
  • ರೇಷನ್ ಅಂಗಡಿಗಳು, ಶಾಲೆ ಮತ್ತು ಕಾಲೇಜುಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆಯ ವ್ಯವಸ್ಥೆ.

ಇದನ್ನೂ ಓದಿ: ವಿಜಯ್ vs ಎನ್‌ಟಿಆರ್: ಇಬ್ಬರು ಸೂಪರ್‌ಸ್ಟಾರ್‌ಗಳು, ಎರಡು ಭಿನ್ನ ದಾರಿಗಳು; ಹೀಗೊಂದು ಹೋಲಿಕೆ

ವಿದ್ಯುತ್ ಮತ್ತು ಅವಶ್ಯತೆಗಳು

  • ಪ್ರತೀ ಮನೆಗೆ 200 ಯುನಿಟ್​ಗಳಷ್ಟು ಉಚಿತ ವಿದ್ಯುತ್
  • ಎಲ್ಲಾ ಮನೆಗಳಿಗೂ ಉಚಿತ ಕುಡಿಯುವ ನೀರಿನ ಸಂಪರ್ಕ.
  • ಕೃಷಿ ಮತ್ತು ರೈತರಿಗೆ ಬೆಂಬಲ
  • ಕೃಷಿ ಸಹಕಾರಿ ಬೆಳೆ ಸಾಲಗಳು ಶೇ. 50ರಷ್ಟು ಮನ್ನಾ
  • ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ, ಬೆಳೆ ವಿಮೆ ಮತ್ತು ಕೃಷಿ ಬೆಂಬಲ.

ಯುವಜನರು, ವಿದ್ಯಾರ್ಥಿಗಳಿಗೆ ನೆರವು

  • ನಿರುದ್ಯೋಗಿಗಳಿಗೆ ಧನಸಹಾಯ ನೀಡಲಾಗುತ್ತದೆ. ಪದವೀಧರರಿಗೆ ತಿಂಗಳಿಗೆ 4,000 ರೂ, ಹಾಗು ಡಿಪ್ಲೊಮಾ ಆದವರಿಗೆ ತಿಂಗಳಿಗೆ 2,000-2,500 ರೂ ನೆರವು.
  • 5 ಲಕ್ಷ ಯುವಕರಿಗೆ ಸ್ಟೈಪೆಂಡ್ ಜೊತೆಗೆ ಇಂಟರ್ನ್​ಶಿಪ್.
  • 5 ಲಕ್ಷ ಹೊಸ ಸರ್ಕಾರಿ ನೌಕರಿಗಳು
  • 20 ಲಕ್ಷ ರೂವರೆಗೆ ಅಡಮಾನರಹಿತ ಶಿಕ್ಷಣ ಸಾಲ
  • ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತವಾದ ಎಐ ಶಕ್ತ ಕೋಚಿಂಗ್ ಸೌಲಭ್ಯ
  • ನೂರು ಕಾಮರಾಜರ್ ಶಾಲೆಗಳು

ಇದನ್ನೂ ಓದಿ: ದಳಪತಿ ಕಿಂಗ್ ಮೇಕರ್ ಅಲ್ಲ, ಕಿಂಗ್; ತಮಿಳುನಾಡಿಗೆ ವಿಜಯ್ ಮುಂದಿನ ಸಿಎಂ?

ಸಾಮಾಜಿಕ ಭದ್ರತೆ ಮತ್ತು ಆರೋಗ್ಯ

  • ವೃದ್ಧರಿಗೆ ಮತ್ತು ವಿಶೇಷ ಚೇತನರಿಗೆ ಮಾಸಿಕ 3,000 ರೂ ಪಿಂಚಣಿ
  • ಪ್ರತೀ ಕುಟುಂಬಕ್ಕೆ 25 ಲಕ್ಷ ರೂ ಹೆಲ್ತ್ ಇನ್ಷೂರೆನ್ಸ್ ಪಾಲಿಸಿ. ಆಧುನಿಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯ, ಉಚಿತ ಆರೋಗ್ಯ ತಪಾಸಣೆ ಇತ್ಯಾದಿ ಸೌಲಭ್ಯ.
  • ತಮಿಳುನಾಡನ್ನು ಮಾದಕವಸ್ತು ಮುಕ್ತ ಮಾಡಲು ವಿವಿಧ ಕ್ರಮಗಳು

ಮೀನುಗಾರರಿಗೆ ಕೊಡುಗೆಗಳು

  • ಮೀನುಗಾರಿಕೆ ಕಡಿಮೆ ಇರುವ ಸೀಸನ್​ನಲ್ಲಿ ಮೀನುಗಾರರಿಗೆ 27,000 ರೂ ಸಹಾಯಧನ
  • ಮೀನುಗಾರಿಕೆ ದೋಣಿಗೆ ಬಳಸುವ ಡೀಸಲ್​ಗೆ ಸಬ್ಸಿಡಿ, 25 ಲಕ್ಷ ರೂ ಅಪಘಾತ ವಿಮೆ
  • ಮೀನುಗಾರರಿಗೆ ಖಾಯಂ ವಸತಿ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ! ಕೊನೆಗೂ ಮಮತಾರನ್ನು ಸೋಲಿಸಿದ್ಹೇಗೆ ಬಿಜೆಪಿ? ಇಲ್ಲಿವೆ ಕೆಲವು ಇಂಟರೆಸ್ಟಿಂಗ್ ಮಾಹಿತಿ – Kannada News | West Bengal Election Result 2026: How BJP Defeated Mamata Banerjee; Analysis of Muslim and Women Vote Shifts

ಕೈಬಿಟ್ಟ ಮಹಿಳಾ ಮತದಾರರು: ಮಮತಾ ಬ್ಯಾನರ್ಜಿ ಅವರ ‘ಲಕ್ಷ್ಮಿ ಭಂಡಾರ್’ ಯೋಜನೆಗೆ ಪ್ರತಿಯಾಗಿ ಬಿಜೆಪಿ ಘೋಷಿಸಿದ ಮಹಿಳೆಯರಿಗೆ ಮಾಸಿಕ 3,000 ರೂ. ಮತ್ತು ಉಚಿತ ಬಸ್ ಪ್ರಯಾಣದ ಭರವಸೆ ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ, ದೀದಿಯ ಸಾಂಪ್ರದಾಯಿಕ ಮಹಿಳಾ ಮತಬ್ಯಾಂಕ್ ಈ ಬಾರಿ ಚದುರಿರುವುದು ಸ್ಪಷ್ಟವಾಗಿದೆ.

Source link

Thalapathy Vijay: ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ? ಬಾಲ್ಯದಿಂದ ರಾಜಕೀಯದವರೆಗಿನ ಆಸಕ್ತಿದಾಯಕ ಮಾಹಿತಿ ಇಲ್ಲಿದೆ – Kannada News | Thalapathy Vijay’s Political Debut: TVK’s 2026 Election Strategy and Journey from Actor to Leader

ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ

ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಚಿತ್ರರಂಗದ ತಾರೆಯರು ಆಡಳಿತದ ಚುಕ್ಕಾಣಿ ಹಿಡಿದ ಉದಾಹರಣೆಗಳು ಸಾಕಷ್ಟಿವೆ. ಈಗ ಅದೇ ಹಾದಿಯಲ್ಲಿ ಸಾಗಿರುವ ‘ದಳಪತಿ‘ ವಿಜಯ್, ತಮ್ಮ ‘ತಮಿಳಗ ವೆಟ್ಟಿ ಕಳಗಂ’ (TVK) ಪಕ್ಷದ ಮೂಲಕ 2026ರ ವಿಧಾನಸಭಾ ಚುನಾವಣಾ ಕಣದಲ್ಲಿ ಅಚ್ಚರಿಯ ಮುನ್ನಡೆ ಸಾಧಿಸುವ ಸೂಚನೆ ನೀಡಿದ್ದಾರೆ. ನಟನೆಯಿಂದ ರಾಜಕೀಯದವರೆಗೆ ಅವರ ಈ ಸುದೀರ್ಘ ಪಯಣ ಮತ್ತು ಅವರ ಶೈಕ್ಷಣಿಕ ಹಿನ್ನೆಲೆಯ ಆಸಕ್ತಿದಾಯಕ ಮಾಹಿತಿ ಇಲ್ಲಿದೆ.

ಜೋಸೆಫ್ ವಿಜಯ್ ‘ದಳಪತಿ’ಯಾದ ಕಥೆ:

ಜೂನ್ 22, 1974 ರಂದು ಜನಿಸಿದ ಇವರ ಪೂರ್ಣ ಹೆಸರು ಜೋಸೆಫ್ ವಿಜಯ್ ಚಂದ್ರಶೇಖರ್. ಇವರು ಮೂಲತಃ ಸಿನಿಮಾ ಕುಟುಂಬದಿಂದ ಬಂದವರು. ತಂದೆ ಎಸ್.ಎ. ಚಂದ್ರಶೇಖರ್ ಖ್ಯಾತ ನಿರ್ದೇಶಕರಾದರೆ, ತಾಯಿ ಶೋಭಾ ಚಂದ್ರಶೇಖರ್ ಪ್ರತಿಭಾವಂತ ಹಿನ್ನೆಲೆ ಗಾಯಕಿ. ಮನೆಯಲ್ಲಿದ್ದ ಕಲಾತ್ಮಕ ವಾತಾವರಣವು ವಿಜಯ್ ಅವರನ್ನು ಬಾಲ್ಯದಲ್ಲೇ ಬಣ್ಣದ ಲೋಕದತ್ತ ಸೆಳೆಯಿತು.

ಶಿಕ್ಷಣ ಮತ್ತು ನಟನೆಯ ನಡುವಿನ ಸಮತೋಲನ:

ವಿಜಯ್ ತಮ್ಮ ಶಾಲಾ ಶಿಕ್ಷಣವನ್ನು ಚೆನ್ನೈನ ಫಾತಿಮಾ ಮತ್ತು ಬಾಲಲೋಕ್ ಶಾಲೆಯಲ್ಲಿ ಪೂರ್ಣಗೊಳಿಸಿದರು. ಓದಿನಲ್ಲಿ ಸಾಧಾರಣ ಆಸಕ್ತಿ ಹೊಂದಿದ್ದರೂ, ನಟನೆಯಲ್ಲಿ ಅವರಿಗಿದ್ದ ಉತ್ಸಾಹ ಅಪಾರವಾಗಿತ್ತು. ನಂತರ ಅವರು ಚೆನ್ನೈನ ಪ್ರತಿಷ್ಠಿತ ಲೊಯೊಲಾ ಕಾಲೇಜಿನಲ್ಲಿ ‘ವಿಶುವಲ್ ಕಮ್ಯುನಿಕೇಶನ್’ (Visual Communication) ಕೋರ್ಸ್‌ಗೆ ಸೇರಿದರು. ಆದರೆ, ಆ ಹೊತ್ತಿಗಾಗಲೇ ಅವರ ಮನಸ್ಸು ಸಂಪೂರ್ಣವಾಗಿ ಬೆಳ್ಳಿಪರದೆಯ ಮೇಲೆ ನೆಟ್ಟಿತ್ತು.

ಪದವಿ ಅರ್ಧಕ್ಕೆ ನಿಲ್ಲಲು ಕಾರಣವೇನು?

ಕಾಲೇಜು ದಿನಗಳಲ್ಲಿದ್ದಾಗಲೇ ವಿಜಯ್‌ಗೆ ಸಿನಿಮಾಗಳಲ್ಲಿ ನಟಿಸಲು ಸಾಲು ಸಾಲು ಅವಕಾಶಗಳು ಬರಲಾರಂಭಿಸಿದವು. ಒಂದೆಡೆ ಚಿತ್ರೀಕರಣದ ಒತ್ತಡ, ಮತ್ತೊಂದೆಡೆ ಅಭ್ಯಾಸ; ಈ ಎರಡನ್ನೂ ನಿಭಾಯಿಸುವುದು ಕಷ್ಟವಾಯಿತು. ಆಗ ವಿಜಯ್ ಒಂದು ದಿಟ್ಟ ನಿರ್ಧಾರ ತೆಗೆದುಕೊಂಡರು. ಓದಿಗಿಂತ ನಟನೆಯೇ ತಮ್ಮ ಜೀವನದ ಗುರಿ ಎಂದು ನಿರ್ಧರಿಸಿ, ಕಾಲೇಜು ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟು ಪೂರ್ಣಪ್ರಮಾಣದಲ್ಲಿ ಚಿತ್ರರಂಗಕ್ಕೆ ಧುಮುಕಿದರು.

ಇದನ್ನೂ ಓದಿ: ವಿಜಯದ ಬೆನ್ನಲ್ಲೇ ವಿಜಯ್​ ನಿವಾಸಕ್ಕೆ ನಟಿ ತ್ರಿಷಾ ಆಗಮನ

ಚಿತ್ರರಂಗದ ಯಶಸ್ಸು ಮತ್ತು ಗೌರವ:

ತಮ್ಮ 18ನೇ ವಯಸ್ಸಿನಲ್ಲಿ ‘ನಾಳಯ ತೀರ್ಪು’ ಚಿತ್ರದ ಮೂಲಕ ನಾಯಕ ನಟನಾಗಿ ಪಾದಾರ್ಪಣೆ ಮಾಡಿದ ವಿಜಯ್, ಇದುವರೆಗೆ 69 ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು ಅವರು ದಕ್ಷಿಣ ಭಾರತದ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಮತ್ತು ಜನಪ್ರಿಯ ನಟರಲ್ಲಿ ಒಬ್ಬರು. ಅಂದು ಪದವಿ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೂ, ಚಿತ್ರರಂಗಕ್ಕೆ ಅವರು ನೀಡಿದ ಅಸಾಧಾರಣ ಕೊಡುಗೆಯನ್ನು ಪರಿಗಣಿಸಿ 2007ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಲಾಯಿತು.

ರಾಜಕೀಯ ಪ್ರವೇಶ ಮತ್ತು 2026ರ ಸವಾಲು:

2009ರಲ್ಲಿ ‘ವಿಜಯ್ ಮಕ್ಕಳ್ ಅಯ್ಯಕಂ’ ಎಂಬ ಅಭಿಮಾನಿ ಸಂಘಟನೆಯ ಮೂಲಕ ಸಮಾಜ ಸೇವೆ ಆರಂಭಿಸಿದ ವಿಜಯ್, ಇಂದು ‘ಟಿವಿಕೆ’ ಪಕ್ಷದ ಮೂಲಕ ಪ್ರಬಲ ರಾಜಕೀಯ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ. ಆರಂಭಿಕ ಪ್ರವೃತ್ತಿಗಳ ಪ್ರಕಾರ, ವಿಜಯ್ ಅವರ ಸಿನಿಮಾ ವರ್ಚಸ್ಸು ಈಗ ಮತಗಳಾಗಿ ಪರಿವರ್ತನೆಯಾಗುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದು ತಮಿಳುನಾಡು ರಾಜಕೀಯದಲ್ಲಿ ಹೊಸ ಬದಲಾವಣೆಯ ಮುನ್ಸೂಚನೆಯಾಗಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:37 pm, Mon, 4 May 26

Source link

Tamil Nadu Election Result: ತಮಿಳುನಾಡಲ್ಲಿ ದಳಪತಿ ಕೀರ್ತಿ ಪತಾಕೆ, ಕಾಂಗ್ರೆಸ್​​​ಗೆ ಬಿಗ್ ಆಫರ್ – Kannada News | Tamil Nadu Assembly Election Result: TVK Invites Congress For Alliance In Tamil Nadu As Party Falls Short Of Majority

ಚೆನ್ನೈ, (ಮೇ 04): ತಮಿಳುನಾಡು  ರಾಜಕೀಯದಲ್ಲಿ (Tamilnadu Politics) ದಳಪತಿ ಸಂಚಲನ ಮೂಡಿಸಿದ್ದಾರೆ. ದ್ರಾವಿಡ ಪಕ್ಷಗಳ ದಶಕಗಳ ಪ್ರಾಬಲ್ಯವನ್ನು ಮುರಿದ ದಳಪತಿ ವಿಜಯ್ (Vijay) ನೇತೃತ್ವದ ತಮಿಳಗಾ ವೆಟ್ರಿ ಕಲಗಂ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ (Election) ಭರ್ಜರಿ ಸಾಧನೆ ಮಾಡಿದೆ. ಇದರೊಂದಗೆ ತಮಿಳುನಾಡಿನಲ್ಲಿ ದಶಕಗಳಿಂದ ನಡೆಯುತ್ತಿರುವ ದ್ರಾವಿಡ ರಾಜಕೀಯದ ಲೆಕ್ಕಾಚಾರವನ್ನೇ ವಿಜಯ್ ಉಲ್ಟಾ ಮಾಡಿದ್ದಾರೆ. ಇನ್ನು ಟಿವಿಕೆ ಗಮನಾರ್ಹ ಸಾಧನೆ ಬಗ್ಗೆ ವಿಜಯ್ ತಂದೆ ಎಸ್​.ಎ.ಚಂದ್ರಶೇಖರ್ ಫುಲ್ ಖುಷ್ ಆಗಿದ್ದು, ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್​ಗೆ ಆಫರ್ ನೀಡಿದ್ದಾರೆ.

ಟಿವಿಕೆ ಗೆದ್ದಿರುವುದಕ್ಕೆ ಮಾಧ್ಯಮಗಳ ಜತೆ ಖುಷಿ ಹಂಚಿಕೊಂಡಿರುವ ವಿಜಯ್ ತಂದೆ ಎಸ್​.ಎ.ಚಂದ್ರಶೇಖರ್,ಟಿವಿಕೆಗೆ ಬಹುಮತ ಬಂದಿದ್ದಕ್ಕೆ ನನಗೆ ಬಹಳ ಸಂತೋಷವಾಗಿದೆ. ಕಾಂಗ್ರೆಸ್ ಜೊತೆ ಅಧಿಕಾರ ಹಂಚಿಕೊಳ್ಳಲು ಸಿದ್ಧ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ರಾಹುಲ್​​ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್​​? ಅಸಲಿಗೆ ಆಗಿದ್ದೇನು?

Source link