Category Archives: Blog

Your blog category

ಮೆಜೆಸ್ಟಿಕ್​ನಲ್ಲಿ ತನ್ನ 2 ವರ್ಷದ ಮಗುವನ್ನೇ ಮಾರಿದಳಾ ತಾಯಿ! ತಂದೆಯಿಂದಲೇ ಗಂಭೀರ ಆರೋಪ – Kannada News | Bengaluru Shocker: Man Accuses Wife of Selling 2 Year Old Son for Rs. 5 Lakh After Dispute

ಬೆಂಗಳೂರು, ಮೇ 04: ಗಂಡ ಹೆಂಡತಿಯ ಜಗಳದ ನಡುವೆ ಕೂಸು ಬಡವಾಯ್ತು ಎನ್ನುವ ಹಾಗೆ ಪತಿ ಪತ್ನಿ ಕಲಹದಲ್ಲಿ ತಾಯಿಯೇ ಮಗು ಮಾರಾಟ (Child Sale) ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪತಿಯೊಂದಿಗೆ ಜಗಳ ಆಡಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟ ಪತ್ನಿ,ಇಬ್ಬರು ಮಕ್ಕಳನ್ನ ಮೆಜೆಸ್ಟಿಕ್​ನಲ್ಲಿ ಬಿಟ್ಟು ಇನ್ನೊಂದು ಮಗುವನ್ನು ಮಾರಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ.

ಮೂವರು ಮಕ್ಕಳ ಜೊತೆ ಮನೆ ಬಿಟ್ಟ ಪತ್ನಿ

ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸ ಮಾಡ್ತಿದ್ದ ರವಿ ಬಾಬು ದಂಪತಿ ಮದುವೆಯಾಗಿ 16 ವರ್ಷಗಳಾಗಿತ್ತು. ಆಗಾಗ ಗಂಡ ಹೆಂಡತಿ ನಡುವೆ ನಡೆಯುತ್ತಿದ್ದ ಜಗಳದ ಕಾರಣಕ್ಕೆ ಗಂಡನ ಮೇಲಿನ ಕೋಪದಿಂದ ಹೆಂಡತಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟು ಪರಾರಿಯಾಗಿದ್ದಳು.

ಮಕ್ಕಳೊಂದಿಗೆ ಮನೆ ಬಿಟ್ಟ ಪತ್ನಿ ಇಬ್ಬರು ಮಕ್ಕಳನ್ನು ಮೆಜೆಸ್ಟಿಕ್​ನಲ್ಲಿ ಬಿಟ್ಟು ಇನ್ನೊಂದು ಮಗುವನ್ನು ಕರೆದೊಯ್ದಿದ್ದಳು ಎನ್ನಲಾಗಿದೆ. ಮೆಜೆಸ್ಟಿಕ್​ನಲ್ಲಿ ಬಿಟ್ಟಿದ್ದ ಇಬ್ಬರು ಮಕ್ಕಳು ಹೇಗೋ ಮನೆ ಹುಡುಕಿಕೊಂಡು ತಂದೆ ಬಳಿಗೆ ವಾಪಾಸ್ ಬಂದಿದ್ದಾರೆ. ಆದರೆ ಪತ್ನಿ ಕರೆದೊಯ್ದಿದ್ದ ಎರಡೂವರೆ ವರ್ಷದ ಗಂಡು ಮಗುವನ್ನು ಆಕೆಯೇ 5 ಲಕ್ಷ ರೂ.ಗೆ ಮಾರಾಟ ಮಾಡಿದ್ದಾಳೆಂದು ಪತಿ ರವಿ ಬಾಬು ಆರೋಪಿಸಿದ್ದಾರೆ. ತನ್ನ ಪತ್ನಿ ಜಗಳದ ನಂತರ ಬೇರೊಬ್ಬ ಮಹಿಳೆಯ ಮಾತು ಕೇಳಿ ಈ ರೀತಿ ಮಾಡಿದ್ದಾಳೆ ಎಂದು ರವಿ ಆರೋಪಿಸಿದ್ದಾರೆ.

ಮಗು ಮಾರಾಟಕ್ಕೆ ಕುಟುಂಬದವರ ಸಾಥ್!

ಮಗುವನ್ನ ಮಾರಾಟ ಮಾಡುವ ಬಗ್ಗೆ ಪತ್ನಿ ಎಲ್ಲರಿಗೂ ಹೇಳಿಕೊಂಡಿದ್ದಾಳೆ ಎಂದು ಆರೋಪಿಸಿರುವ ರವಿ ಬಾಬು, ಪತ್ನಿಯ ಪೋಷಕರು ಕೂಡ ಮಗು ಮಾರಾಟಕ್ಕೆ ಸಾಥ್ ನೀಡಿದ್ದಾರೆ ಎಂದು ಹೇಳಿದ್ದಾರೆ. ತನ್ನಿಬ್ಬರು ಮಕ್ಕಳು ಮನೆಗೆ ವಾಪಸಾಗುವ ಮುನ್ನ ಅವರ ಅಜ್ಜಿ ಹಾಗೂ ಮಗು ಮಾರಾಟಕ್ಕೆ ಸಹಾಯ ಮಾಡಿದ ಮಹಿಳೆ ಬಳಿ ನಮ್ಮ ಅಮ್ಮನನ್ನು ಕಳುಹಿಸಿಕೊಡಿ ಎಂದು ಮಕ್ಕಳು ಕೇಳಿಕೊಂಟಿದ್ದರು. ಆದರೂ ಅವರಿಬ್ಬರನ್ನು ಗದರಿಸಿ ಕಳುಹಿಸಿದ್ದಾರೆ ಎಂದು ರವಿ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಗರ್ಭಿಣಿ ಪತ್ನಿ ಎಂಟ್ರಿ! ಮುಂದೇನಾಯ್ತು ಗೊತ್ತಾ?

ಪೊಲೀಸರ ನಿರ್ಲಕ್ಷ್ಯ

ಅದಲ್ಲದೆ ತನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಪತಿ, ಮಗುವಿನ ಮಾರಾಟವಾಗಿದೆ ಎಂದು ಹೇಳಿದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂಬುದು ಆತನ ಆರೋಪ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಬ್ಬಲ್​​ ಡೆಕ್ಕರ್​​ ಫ್ಲೈಓವರ್​ ಮೇಲೆ ಪ್ರತಿನಿತ್ಯ ಅಪಘಾತ: ಅವೈಜ್ಞಾನಿಕ ಕಾಮಗಾರಿಯ ಆರೋಪ – Kannada News | Bengaluru Double Decker Flyover: Daily Accidents Blamed on Unscientific Construction

ಬೆಂಗಳೂರು, ಮೇ 04: ನಗರದಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸ್ಥಳಗಳಲ್ಲೊಂದಾದ ಸಿಲ್ಕ್ ಬೋರ್ಡ್​​ನ ಟ್ರಾಫಿಕ್​​ಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ, ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್​​ವರೆಗೆ ಡಬ್ಬಲ್​​ ಡೆಕ್ಕರ್​​ ಫ್ಲೈಓವರ್​​ ನಿರ್ಮಾಣದ ಬಗ್ಗೆ ಘೋಷಣೆ ಮಾಡಿತ್ತು. ಇದರ ಕಾಮಗಾರಿ ಮುಗಿದು ಸಂಪುರ್ಣವಾಗಿ ವಾಹನಗಳ ಸಂಚಾರಕ್ಕೂ ಮುಕ್ತವಾಗಿದೆ. ಹೀಗಾಗಿ ಸುಗಮ ಸಂಚಾರದ ನಿರೀಕ್ಷೆಯಲ್ಲಿದ್ದ ಬೆಂಗಳೂರಿನ ವಾಹನಸವಾರರು ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ಲೈ ಓವರ್​​ ಮೇಲೆ ವಾಹನಗಳು ಸ್ಕಿಡ್​​ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಫ್ಲೈ ಓವರ್ ‌ಮೇಲೆ ಪಾದಚಾರಿಗಳು ಹೋಗಲು ಸಣ್ಣದಾಗಿ ಕಟ್ಟೆ ಕಟ್ಟಿದ್ದು, ಇದರಿಂದ ವಾಹನಗಳು ಸಂಚಾರ ಮಾಡುವ ವೇಳೆ ಗೊತ್ತಾಗದೆ ಇದರ ಮೇಲೆ ಹತ್ತಿ ಸ್ಕಿಡ್​ ಆಗುತ್ತಿದೆಯಂತೆ. ಹೀಗಾಗಿ ವಾಹನ ಸವಾರರು ಡಬಲ್ ಡೆಕ್ಕರ್ ಸಹವಾಸವೇ ಬೇಡಪ್ಪಾ ಬೇಡ ಅಂತಿದ್ದಾರೆ. ಫುಟ್​​ ಪಾತ್​​ ಇರುವ ಬಗ್ಗೆ ಒಂದು ಸೂಚನಾ ಫಲಕವನ್ನಾದರೂ ಹಾಕಬೇಕು, ಅಥವಾ ರೇಡಿಯಂ ಸ್ಟೀಕರ್, ವೈಟ್ ಪೈಂಟ್ ಬಳಿದು ಫುಟ್​​ ಪಾತ್​​ ಇರುವ ಬಗ್ಗೆ ವಾಹನ ಸವಾರರಿಗೆ ಅರಿವು ಮೂಡಿಸಬೇಕು. ಆದರೆ ಅದ್ಯಾವುದೂ ಇಲ್ಲಿ ಇರದ ಕಾರಣ ಪ್ರತಿದಿನ ಒಂದಲ್ಲ ಒಂದು ಅಪಘಾತಗಳು ಇಲ್ಲಿ ಆಗುತ್ತಲೇ ಇವೆ ಎಂಬ ಮಾತುಗಳು ಕೇಳಿಬಂದಿವೆ.

ಇದನ್ನೂ ಓದಿ: ಬೆಂಗಳೂರಿನ ಆರ್‌ವಿ ರಸ್ತೆ-ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಹೇಗಿದೆ ನೋಡಿ

ಇನ್ನು ಟ್ರಾಫಿಕ್ ಕಡಿಮೆ ಆಗುತ್ತೆ ಎಂದು ಡಬಲ್ ಡೆಕ್ಕರ್ ನಿರ್ಮಾಣ ಮಾಡಿದ್ದಾರೆ. ಆದರೆ ರಾಗಿಗುಡ್ಡ ಬಳಿ ಆಗುತ್ತಿರುವ ಟ್ರಾಫಿಕ್ ನಿಂದ ವಾಹನ ಸವಾರರು ಬೇಸತ್ತಿದ್ದಾರೆ. ಬೆಳಗ್ಗೆ ಹಾಗೂ ಸಂಜೆ ಡಬಲ್ ಡೆಕ್ಕರ್ ಕಡೆ ಬರಲೇಬೇಡಿ ಎಂಬ‌ ರೀತಿ ಆಗಿದೆ. ಫ್ಲೈ ಓವರ್ ಮೇಲೆಯೇ ಟ್ರಾಫಿಕ್ ಆಗುತ್ತಿದೆ ಎಂದು ವಾಹನ ಸವಾರರು ಅಲವತ್ತುಕೊಂಡಿದ್ದಾರೆ. 449 ಕೋಟಿ ರೂಪಾಯಿ ವೆಚ್ಚದಲ್ಲಿ 3.36 ಕಿಮೀ ವಿಸ್ತೀರ್ಣವಿರುವ ಈ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಿಸಲಾಗಿದೆ. ಲೂಪ್ ಮತ್ತು ಇಳಿಜಾರು ಸೇರಿ 5.12 ಕಿಮೀ ವಿಸ್ತೀರ್ಣವನ್ನು ಇದು ಹೊಂದಿದೆ. ಕಳೆದ ವರ್ಷ ರಾಗಿಗುಡ್ಡದಿಂದ ಕೆ.ಆರ್. ಪುರ ಮತ್ತು ಹೊಸೂರು ಭಾಗದ ಕಡೆಗಿನ ಫ್ಲೈಓವರ್​​ ಮಾರ್ಗ ವಾಹನ ಸಂಚಾರಕ್ಕೆ ಮುಕ್ತವಾಗಿದ್ದರೆ, ವಾರದ ಹಿಂದೆ ಸಿಲ್ಕ್​​ಬೋರ್ಡ್ ಮತ್ತು ಕೆ.ಆರ್. ಪುರ ಭಾಗದಿಂದ ರಾಗಿಗುಡ್ಡ ಕಡೆ ಬರುವ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Weekly Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ತಿಳಿಯಿರಿ – Kannada News | Weekly Horoscope May 3 9, 2026: Your Astrological Predictions and Fortunes

2026ರ ಮೇ ೦೩ರಿಂದ ೦೯ರವರೆಗೆ ಮೊದಲ ವಾರದಲ್ಲಿ ಮನಸ್ತಾಪ, ಪ್ರೀತಿಪಾತ್ರರ ಜೊತೆ ಮಾತುಕತೆ, ಪ್ರಯತ್ನಕ್ಕೆ ಫಲ, ಸಂವಹನದಿಂದ ಲಾಭ, ಪ್ರವಾಸಕ್ಕೆ ಒತ್ತಾಯ, ಹಿರಿಯರಲ್ಲಿ ಗೌರವ, ಕಾರ್ಯಕ್ಕಾಗಿ ಓಡಾಟ ಇವೆಲ್ಲ ಇರಲಿದೆ.

ಮೇಷ:

ವೃತ್ತಿಜೀವನದಲ್ಲಿ ಸಣ್ಣಪುಟ್ಟ ಅಡೆತಡೆಗಳಿದ್ದರೂ ಆರ್ಥಿಕ ಲಾಭ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಕುಟುಂಬದ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಹೊಸ ಹೂಡಿಕೆಗೆ ಈ ವಾರ ಪೂರಕವಾಗಿದೆ.

​ವೃಷಭ:

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಸಂಗಾತಿಯೊಂದಿಗೆ ಸಣ್ಣ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಹಳೆಯ ಸಾಲಗಳಿಂದ ಮುಕ್ತಿ ಸಿಗಬಹುದು.

​ಮಿಥುನ:

​ನಿಮ್ಮ ಕ್ರಿಯಾಶೀಲತೆಗೆ ಹೊಸ ವೇದಿಕೆ ಸಿಗಲಿದೆ. ದೂರದ ಪ್ರಯಾಣದ ಯೋಗವಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಬಹುದು. ವ್ಯಾಪಾರದಲ್ಲಿ ಲಾಭಾಂಶ ಹೆಚ್ಚಾಗಲಿದ್ದು, ಮಿತ್ರರ ಸಹಕಾರ ದೊರೆಯಲಿದೆ.

​ಕರ್ಕಾಟಕ:

​ಆತ್ಮವಿಶ್ವಾಸದಿಂದ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಸ್ಥಿರಾಸ್ತಿ ಖರೀದಿಯ ಆಲೋಚನೆ ಫಲಪ್ರದವಾಗಲಿದೆ. ಮಕ್ಕಳ ಶಿಕ್ಷಣದ ಬಗ್ಗೆ ಶುಭ ಸುದ್ದಿ ಕೇಳುವಿರಿ. ಕೋಪದ ಮೇಲೆ ನಿಯಂತ್ರಣವಿರಲಿ, ಮಾನಸಿಕ ನೆಮ್ಮದಿ ಮುಖ್ಯ.

​ಸಿಂಹ:

ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಸರ್ಕಾರಿ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳಲಿವೆ. ಉದ್ಯೋಗ ಬದಲಾವಣೆಗೆ ಇದು ಸಕಾಲ. ಪ್ರೀತಿಪಾತ್ರರ ಜೊತೆ ಪ್ರವಾಸ ಹೋಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ.

​ಕನ್ಯಾ:

ಆರ್ಥಿಕವಾಗಿ ಏರಿಳಿತಗಳಿದ್ದರೂ ಖರ್ಚಿನ ಮೇಲೆ ಹಿಡಿತ ಸಾಧಿಸುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಲಭಿಸುವ ವಾರವಿದು.

​ತುಲಾ:

​ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ಸಂಗಾತಿಯ ಬೆಂಬಲದಿಂದ ದೊಡ್ಡ ಕಾರ್ಯವೊಂದನ್ನು ಸಾಧಿಸುವಿರಿ. ಹಣಕಾಸಿನ ವಹಿವಾಟಿನಲ್ಲಿ ಎಚ್ಚರಿಕೆ ಇರಲಿ. ನಿಮ್ಮ ತಾಳ್ಮೆ ಈ ವಾರ ನಿಮಗೆ ಗೆಲುವು ತಂದುಕೊಡಲಿದೆ.

​ವೃಶ್ಚಿಕ:

​ಶತ್ರುಗಳ ಪಿತೂರಿ ಫಲಿಸದು, ವಿಜಯ ನಿಮ್ಮದಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಅನಿರೀಕ್ಷಿತ ಧನಾಗಮನವಾಗುವ ಸಂಭವವಿದೆ. ದೀರ್ಘಕಾಲದ ಅನಾರೋಗ್ಯದಿಂದ ಚೇತರಿಸಿಕೊಳ್ಳುವಿರಿ.

​ಧನು:

ಗುರುಬಲದ ಪ್ರಭಾವದಿಂದ ಶುಭ ಕಾರ್ಯಗಳು ನೆರವೇರಲಿವೆ. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ಹೂಡಿಕೆಯಲ್ಲಿ ಲಾಭ ಕಂಡುಬರುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ಹೊಸ ಅವಕಾಶಗಳು ದೊರೆಯಲಿವೆ. ವಿನಮ್ರತೆ ಕಾಪಾಡಿಕೊಳ್ಳಿ.

​ಮಕರ:

ಕೆಲಸದಲ್ಲಿ ಅತಿಯಾದ ಆತುರ ಬೇಡ. ಸಣ್ಣಪುಟ್ಟ ಹೂಡಿಕೆಗಳು ಭವಿಷ್ಯದಲ್ಲಿ ಲಾಭ ನೀಡುತ್ತವೆ. ಸಹೋದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗದಂತೆ ನೋಡಿಕೊಳ್ಳಿ. ಪ್ರವಾಸದಿಂದ ಮನಸ್ಸಿಗೆ ಉಲ್ಲಾಸ ದೊರೆಯಲಿದೆ.

​ಕುಂಭ:

​ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಹಳೆಯ ಸ್ನೇಹಿತರನ್ನು ಭೇಟಿಯಾಗುವಿರಿ. ನ್ಯಾಯಾಲಯದ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಪ್ರೀತಿಯ ವಿಷಯದಲ್ಲಿ ಗೊಂದಲವಿರಬಹುದು, ಸ್ಪಷ್ಟ ಸಂವಹನ ನಡೆಸಿ. ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಇರುತ್ತದೆ.

​ಮೀನ:

ಆಧ್ಯಾತ್ಮಿಕ ಚಿಂತನೆ ಹೆಚ್ಚಾಗಲಿದೆ. ದಾನಧರ್ಮಗಳಲ್ಲಿ ಪಾಲ್ಗೊಳ್ಳುವಿರಿ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಮಾತಿಗೆ ಮನ್ನಣೆ ಸಿಗಲಿದೆ. ಮನೆಯಲ್ಲಿ ಮಂಗಳ ಕಾರ್ಯದ ಮಾತುಕತೆ ನಡೆಯಬಹುದು. ಹೊಸ ಮಿತ್ರರ ಪರಿಚಯವಾಗಲಿದೆ.

– ಲೋಹಿತ ಹೆಬ್ಬಾರ್

Source link

KKR: ಕೆಕೆಆರ್​ನಿಂದ ಹೀಗೊಂದು ಕಮ್​ಬ್ಯಾಕ್: ಪ್ಲೇಆಫ್ ರೇಸ್‌ಗೆ ಮತ್ತೆ ಪ್ರವೇಶ? – Kannada News | KKR Greate comeback from Kolkata Knight Riders: Back in the playoff race?

ಬೆಂಗಳೂರು (ಮೇ. 04): ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡವು ಐಪಿಎಲ್ 2026 ರ ಪ್ಲೇಆಫ್ ರೇಸ್‌ನಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳುವತ್ತ ಚಿತ್ತನೆಟ್ಟಿದೆ. ಆರಂಭದಲ್ಲಿ ಸೋಲಿನಿಂದ ಕಂಗೆಟ್ಟಿದ್ದ ರಹಾನೆ ಪಡೆ ಈಗ ಭರ್ಜರಿ ಕಮ್​ಬ್ಯಾಕ್ ಮಾಡಿದೆ. ನಿನ್ನೆ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಅವರ ತವರು ಮೈದಾನದಲ್ಲಿ 7 ವಿಕೆಟ್‌ಗಳಿಂದ ಸೋಲಿಸಿತು. ಟಾಸ್ ಗೆದ್ದ ನಂತರ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಸನ್‌ರೈಸರ್ಸ್ ತಂಡವು ಟ್ರಾವಿಸ್ ಹೆಡ್ ಅವರ ನೆರವಿನಿಂದ ಭರ್ಜರಿ ಆರಂಭ ಪಡೆಯಿತು, ಆದರೆ ಕೆಕೆಆರ್‌ನ ಬೌಲರ್‌ಗಳು ಮಧ್ಯಮ ಓವರ್‌ಗಳಲ್ಲಿ ಬಲವಾದ ಬೌಲಿಂಗ್ ಪ್ರದರ್ಶಿಸಿದರು. ಹೈದರಾಬಾದ್ ತಂಡವು 19 ಓವರ್‌ಗಳಲ್ಲಿ ಕೇವಲ 165 ರನ್‌ಗಳಿಗೆ ಆಲೌಟ್ ಆಯಿತು.

ವರುಣ್ ಮತ್ತು ನರೈನ್ ಸ್ಪಿನ್‌ಗೆ ಸಿಲುಕಿದ ಸನ್‌ರೈಸರ್ಸ್

ಸನ್‌ರೈಸರ್ಸ್ ತಂಡವನ್ನು ಕಡಿಮೆ ಮೊತ್ತಕ್ಕೆ ಸೀಮಿತಗೊಳಿಸಿದ ಕೀರ್ತಿ ಕೆಕೆಆರ್ ಬೌಲರ್‌ಗಳಿಗೆ ಸಲ್ಲುತ್ತದೆ, ವರುಣ್ ಚಕ್ರವರ್ತಿ ಮತ್ತೊಮ್ಮೆ ಪರಿಣಾಮಕಾರಿ ಎಂದು ಸಾಬೀತುಪಡಿಸಿದರು. ವರುಣ್ 36 ರನ್‌ಗಳಿಗೆ ಮೂರು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರೆ, ಅನುಭವಿ ಸುನಿಲ್ ನರೈನ್ ಮತ್ತು ಕಾರ್ತಿಕ್ ತ್ಯಾಗಿ ತಲಾ ಎರಡು ವಿಕೆಟ್‌ಗಳನ್ನು ಪಡೆದು ಹೈದರಾಬಾದ್‌ನ ಮಧ್ಯಮ ಕ್ರಮಾಂಕವನ್ನು ಮುರಿದರು. ಟ್ರಾವಿಸ್ ಹೆಡ್ 28 ಎಸೆತಗಳಲ್ಲಿ 61 ರನ್‌ಗಳ ಇನ್ನಿಂಗ್ಸ್ ಆಡಿದರೂ, ಅವರ ಔಟಾದ ನಂತರ ಇತರ ಬ್ಯಾಟ್ಸ್‌ಮನ್‌ಗಳಿಗೆ ಹಿಡಿತ ಸಾಧಿಸಲು ಸಾಧ್ಯವಾಗಲಿಲ್ಲ. ಪಂದ್ಯದ ನಂತರ ನಾಯಕ ರಹಾನೆ ಅವರು ತಮ್ಮ ಬೌಲಿಂಗ್ ಘಟಕ ಮತ್ತು ಕೋಚ್ ಡ್ವೇನ್ ಬ್ರಾವೋ ಅವರ ತಂತ್ರಗಳನ್ನು ಶ್ಲಾಘಿಸಿದರು.

ಗೆಲುವಿನ ಹಾದಿಯನ್ನು ಸುಲಭಗೊಳಿಸಿದ ರಘುವಂಶಿ ಮತ್ತು ರಹಾನೆ

166 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ಆರಂಭದಿಂದಲೇ ತಮ್ಮ ನಿಯಂತ್ರಣವನ್ನು ಕಾಯ್ದುಕೊಂಡಿತು. ಯುವ ಬ್ಯಾಟ್ಸ್‌ಮನ್ ಅಂಗ್‌ಕ್ರಿಶ್ ರಘುವಂಶಿ ಮೈದಾನದಾದ್ಯಂತ ಹೊಡೆತಗಳನ್ನು ಬಾರಿಸಿ ಅದ್ಭುತ ಅರ್ಧಶತಕ ಗಳಿಸಿದರು ಮತ್ತು ಅನುಭವಿ ಅಜಿಂಕ್ಯ ರಹಾನೆ ಅವರೊಂದಿಗೆ ಎರಡನೇ ವಿಕೆಟ್‌ಗೆ 84 ರನ್‌ಗಳ ನಿರ್ಣಾಯಕ ಜೊತೆಯಾಟ ಹಂಚಿಕೊಂಡರು. ರಹಾನೆ ಕೂಡ ತಮ್ಮ ಜವಾಬ್ದಾರಿಯನ್ನು ಅದ್ಭುತವಾಗಿ ಪೂರೈಸಿದರು, 43 ರನ್‌ಗಳ ಸಂಯೋಜಿತ ಇನ್ನಿಂಗ್ಸ್ ಆಡಿ ತಂಡವು ಒತ್ತಡಕ್ಕೊಳಗಾಗದಂತೆ ನೋಡಿಕೊಂಡರು. ಕೆಕೆಆರ್ ಕೇವಲ 18.2 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ಗಳ ನಷ್ಟಕ್ಕೆ ಗುರಿಯನ್ನು ತಲುಪಿತು.

GT vs PBKS: ಪಂಜಾಬ್ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದ ಗುಜರಾತ್

ಪ್ಲೇಆಫ್ ರೇಸ್‌ನಲ್ಲಿ ಕೆಕೆಆರ್ ಬಲಿಷ್ಠ ಕಮ್​ಬ್ಯಾಕ್

ಸತತ ಮೂರನೇ ಗೆಲುವಿನೊಂದಿಗೆ, ಕೆಕೆಆರ್ ಪ್ಲೇಆಫ್ ಓಟವನ್ನು ರೋಮಾಂಚಕಾರಿಯನ್ನಾಗಿ ಮಾಡಿದೆ. 9 ಪಂದ್ಯಗಳಿಂದ 7 ಅಂಕಗಳೊಂದಿಗೆ, ತಂಡವು ಅಗ್ರ 4 ಸ್ಥಾನಕ್ಕಾಗಿ ಸ್ಪರ್ಧಿಯಾಗಿ ಉಳಿದಿದೆ. ಮುಂದಿನ ಸುತ್ತಿಗೆ ಮುನ್ನಡೆಯಲು ಅವರು ತಮ್ಮ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾಗಿದ್ದರೂ, ತಂಡದ ಪ್ರಸ್ತುತ ಫಾರ್ಮ್ ಮತ್ತು ಡ್ರೆಸ್ಸಿಂಗ್ ರೂಮ್ ವಾತಾವರಣವು ಪುನರಾಗಮನಕ್ಕೆ ಬಲವಾದ ಭರವಸೆಯನ್ನು ನೀಡುತ್ತದೆ ಎಂದು ರಹಾನೆ ಹೇಳಿದ್ದಾರೆ. ಮೊದಲ ಐದು ಪಂದ್ಯಗಳನ್ನು ಸೋತ ನಂತರವೂ ತಂಡದ ನೈತಿಕ ಸ್ಥೈರ್ಯವು ಹಾಗೆಯೇ ಉಳಿದಿದೆ ಮತ್ತು ನಾವು ಕೊನೆಯವರೆಗೂ ಆ ಆವೇಗವನ್ನು ಕಾಯ್ದುಕೊಳ್ಳಲು ಬಯಸುತ್ತೇವೆ ಎಂದು ನಾಯಕ ರಹಾನೆ ಸ್ಪಷ್ಟಪಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Vegetable Price Hike: ಬೆಂಗಳೂರಿನಲ್ಲಿ ತರಕಾರಿ ಭಾರಿ ಏರಿಕೆ! ಕಂಗಾಲಾದ ಗ್ರಾಹಕರು – Kannada News | Bengaluru Vegetable Price Hike: Beans Touches Rs 160 Per KG, Rates Double Within 15 Days Due to Rain and Heat

ಬೆಂಗಳೂರು, ಮೇ 4: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಜನರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆಯ ಶಾಕ್ ಎದುರಾಗುತ್ತಿದೆ. ಹೋಟೆಲ್ ತಿಂಡಿಗಳ ಬೆಲೆ ಏರಿಕೆಯ ಬೆನ್ನಲ್ಲೇ, ಈಗ ತರಕಾರಿ ದರಗಳು (Vegetable Price Hike) ಕೂಡ ಗಗನಕ್ಕೇರಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಕಳೆದ ಕೇವಲ 15 ದಿನಗಳ ಅಂತರದಲ್ಲಿ ಬಹುತೇಕ ಎಲ್ಲಾ ತರಕಾರಿಗಳ ಬೆಲೆ ಎರಡು ಪಟ್ಟು ಹೆಚ್ಚಾಗಿದ್ದು, ಮನೆಯಲ್ಲಿ ಅಡುಗೆ ಮಾಡುವುದು ಕೂಡ ದುಬಾರಿಯಾಗಿದೆ.

ಬೀನ್ಸ್​ಗೆ ಬಂಗಾರದ ಬೆಲೆ

ಸದ್ಯ ಮಾರುಕಟ್ಟೆಯಲ್ಲಿ ಬೀನ್ಸ್ ದರ ಕೇಳಿದರೆ ಗ್ರಾಹಕರು ಬೆಚ್ಚಿಬೀಳುತ್ತಿದ್ದಾರೆ. ಎರಡು ವಾರಗಳ ಹಿಂದೆ ಕೆಜಿಗೆ 60 ರೂಪಾಯಿ ಇದ್ದ ಬೀನ್ಸ್ ಬೆಲೆ ಈಗ 160 ರೂಪಾಯಿಗೆ ತಲುಪಿದೆ. ಈ ಹಿಂದೆ ಚೀಲ ತುಂಬಾ ತರಕಾರಿ ತರುತ್ತಿದ್ದ ಜನ, ಈಗ 500 ರೂಪಾಯಿ ನೀಡಿದರೂ ಎರಡು ಬ್ಯಾಗ್ ತರಕಾರಿ ತುಂಬಿಸಲು ಪರದಾಡುವಂತಾಗಿದೆ.

ತರಕಾರಿ ಬೆಲೆ ಏರಿಕೆಗೆ ಕಾರಣಗಳೇನು?

ರಾಜ್ಯದಲ್ಲಿ ತೀವ್ರವಾಗಿ ಸುಡುತ್ತಿರುವ ಬಿಸಿಲಿನ ತಾಪಮಾನ ಮತ್ತು ಅಕಾಲಿಕವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತರಕಾರಿ ಉತ್ಪಾದನೆ ಗಣನೀಯವಾಗಿ ಕುಸಿದಿದೆ. ಇದರೊಂದಿಗೆ ಸಾಲು ಸಾಲು ಶುಭ ಸಮಾರಂಭಗಳು ಮತ್ತು ಫಂಕ್ಷನ್‌ಗಳು ಇರುವುದರಿಂದ ತರಕಾರಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಪೂರೈಕೆ ಕಡಿಮೆಯಾಗಿ ಬೇಡಿಕೆ ಹೆಚ್ಚಾದ ಕಾರಣ ಬೆಲೆಗಳು ಏರಿಕೆಯಾಗುತ್ತಿವೆ.

ರಾಜ್ಯದ ಪ್ರಮುಖ ತರಕಾರಿ ಬೆಳೆಯುವ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದಲ್ಲಿ ಈ ಬಾರಿ ತೀವ್ರವಾದ ಬಿಸಿಲು ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆಗಳಿಗೆ ಭಾರಿ ಹಾನಿಯಾಗಿದೆ. ಅತಿಯಾದ ಶಾಖದಿಂದಾಗಿ ಹೂವುಗಳು ಉದುರಿ ಇಳುವರಿ ಕಡಿಮೆಯಾಗಿದ್ದರೆ, ಇತ್ತೀಚೆಗೆ ಸುರಿದ ಗುಡುಗು ಸಹಿತ ಮಳೆಯಿಂದ ತರಕಾರಿ ಬೆಳೆ ನಾಶವಾಗಿದೆ. ಇದರಿಂದ ಮಾರುಕಟ್ಟೆಗೆ ಬರುವ ತರಕಾರಿಗಳ ಪ್ರಮಾಣ ಶೇ 30 ರಿಂದ 40ರಷ್ಟು ಕುಸಿದಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆ ಸಾಧ್ಯವಾಗುತ್ತಿಲ್ಲ.

ಕೇವಲ ಹವಾಮಾನವಷ್ಟೇ ಅಲ್ಲದೆ, ಪ್ರಸ್ತುತ ಮದುವೆ ಮತ್ತು ಸಾಲು ಸಾಲು ಹಬ್ಬಗಳ ಸೀಸನ್ ಇರುವುದರಿಂದ ತರಕಾರಿಗಳಿಗೆ ಬೇಡಿಕೆ ಗಣನೀಯವಾಗಿ ಹೆಚ್ಚಿದೆ. ಇದರೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಸ್ಥಿರತೆಯ ನಡುವೆಯೂ, ಹೊರ ರಾಜ್ಯಗಳಿಂದ (ಆಂಧ್ರಪ್ರದೇಶ ಮತ್ತು ತಮಿಳುನಾಡು) ಬರುವ ತರಕಾರಿಗಳ ಸಾರಿಗೆ ವೆಚ್ಚವು ದರ ಏರಿಕೆಗೆ ಮತ್ತೊಂದು ಕಾರಣವಾಗಿದೆ.

ಇದನ್ನೂ ಓದಿ: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆ

ಒಂದೆಡೆ ಎಲ್ಪಿಜಿ ದರ ಭಾರಿ ಏರಿಕೆಯಾಗಿದ್ದು, ಹೋಟೆಲ್ ಉದ್ಯಮ ಈಗಾಲೇ ಸಂಕಷ್ಟಕ್ಕೆ ಸಿಲುಕಿದೆ. ಅದರೊಂದಿಗೆ ಇದೀಗ ತರಕಾರಿ ಬೆಲೆಯೂ ಗಗನ್ಕೇರಿದ್ದು ಮತ್ತಷ್ಟು ಹೊಡೆತ ನೀಡಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಈ ಬೆಲೆಗಳಿಂದಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ವರದಿ: ಅರುಣ್​ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗುಜರಾತ್ ಟೈಟಾನ್ಸ್​ ಬೆಂಕಿ ಬೌಲಿಂಗ್: ಎಲ್ಲರ ಲೆಕ್ಕಾಚಾರ ಉಲ್ಟಾ ಪಲ್ಟಾ! – Kannada News | GT’s Bowling Masterclass: Three Matches, Three Total Shutdowns!

ಐಪಿಎಲ್ 2026ರ ಸೀಸನ್‌ನಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವು ತನ್ನ ಬೌಲಿಂಗ್ ಶಕ್ತಿಯ ಮೂಲಕ ಪಂದ್ಯಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದೆ. ಬ್ಯಾಟಿಂಗ್‌ ಸ್ನೇಹಿ ಪಿಚ್‌ಗಳ ನಡುವೆಯೂ, ಜಿಟಿ ಬೌಲರ್‌ಗಳು ಶಿಸ್ತುಬದ್ಧ ದಾಳಿ ನಡೆಸಿ ಬಲಿಷ್ಠ ತಂಡಗಳನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ ಮೂರು ಪಂದ್ಯಗಳಲ್ಲಿನ ಫಲಿತಾಂಶ.

  •  ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಜಯ: ಚೆನ್ನೈನ ತವರು ನೆಲದಲ್ಲೇ ನಡೆದ ಈ ಪಂದ್ಯದಲ್ಲಿ ಸಿಎಸ್‌ಕೆ ಬ್ಯಾಟರ್‌ಗಳನ್ನು ಕಟ್ಟಿಹಾಕಿದ ಜಿಟಿ ಬೌಲರ್‌ಗಳು, ಅವರನ್ನು ಕೇವಲ 158/7 ರನ್‌ಗಳಿಗೆ ನಿಯಂತ್ರಿಸಿದರು. ಈ ಮೊತ್ತವನ್ನು ಬೆನ್ನಟ್ಟಿದ ಗುಜರಾತ್, 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.
  •  ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಜಯ: ಆರ್​ಸಿಬಿ ಸ್ಫೋಟಕ ಬ್ಯಾಟಿಂಗ್ ಪಡೆಯನ್ನು ಗುಜರಾತ್ ಟೈಟಾನ್ಸ್​ ಬೌಲರ್‌ಗಳು ಸಂಪೂರ್ಣವಾಗಿ ಕಟ್ಟಿ ಹಾಕಿದ್ದರು. ಅರ್ಶದ್ ಖಾನ್ (3/22) ಮತ್ತು ರಶೀದ್ ಖಾನ್ (2/19) ಅವರ ಮಾರಕ ದಾಳಿಗೆ ತತ್ತರಿಸಿದ ಆರ್‌ಸಿಬಿ ಕೇವಲ 155 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ 4 ವಿಕೆಟ್‌ಗಳ ಜಯ ಸಾಧಿಸಿತು.
  • ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಜಯ: ನಿನ್ನೆ ನಡೆದ ಪಂದ್ಯದಲ್ಲೂ ತನ್ನ ಬೌಲಿಂಗ್ ವೈಭವವನ್ನು ಮುಂದುವರಿಸಿದ ಗುಜರಾತ್ ಟೈಟಾನ್ಸ್, ಪಂಜಾಬ್ ಕಿಂಗ್ಸ್ ತಂಡವನ್ನು 163/9 ರನ್‌ಗಳಿಗೆ ನಿಯಂತ್ರಿಸಿತು. ಪಂಜಾಬ್ ಪಡೆಯ ಪ್ರಮುಖ ವಿಕೆಟ್‌ಗಳನ್ನು ನಿಯಮಿತವಾಗಿ ಪಡೆಯುವ ಮೂಲಕ ದೊಡ್ಡ ಮೊತ್ತ ಗಳಿಸಲು ಅವಕಾಶ ನೀಡಲಿಲ್ಲ. ಈ ಪಂದ್ಯವನ್ನು ಗುಜರಾತ್ ಟೈಟಾನ್ಸ್ 4 ವಿಕೆಟ್​ಗಳಿಂದ ಗೆದ್ದುಕೊಂಡಿತು.

ಗುಜರಾತ್ ಟೈಟಾನ್ಸ್​ ಪಡೆಯ ಶಕ್ತಿ ಏನು?

  •  ಸಿರಾಜ್, ರಬಾಡ ಮಿಂಚಿಂಗ್: ಈ ಸೀಸನ್​ನಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಕಗಿಸೊ ರಬಾಡ ಪವರ್‌ಪ್ಲೇನಲ್ಲಿ ವಿಕೆಟ್ ಪಡೆಯುವ ಮೂಲಕ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಡುತ್ತಿದ್ದಾರೆ.
  • ರಶೀದ್ ಖಾನ್ ಮ್ಯಾಜಿಕ್: ಮಧ್ಯದ ಓವರ್‌ಗಳಲ್ಲಿ ರಶೀದ್ ಖಾನ್ ರನ್ ವೇಗಕ್ಕೆ ಬ್ರೇಕ್ ಹಾಕುವುದಲ್ಲದೆ, ಎದುರಾಳಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.
  • ಜೇಸನ್ ಹೋಲ್ಡರ್ ಅನುಭವ: ಡೆತ್ ಓವರ್‌ಗಳಲ್ಲಿ ಜೇಸನ್ ಹೋಲ್ಡರ್ ಅವರ ವೈವಿಧ್ಯಮಯ ಬೌಲಿಂಗ್ ಎದುರಾಳಿಗಳಿಗೆ ರನ್ ಗಳಿಸಲು ಕಷ್ಟವಾಗುವಂತೆ ಮಾಡುತ್ತಿದೆ.

ಇದನ್ನೂ ಓದಿ: 15,660 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್​ನ 3 ತಂಡಗಳು ಮಾರಾಟ..!

ಫಲಿತಾಂಶ ಮತ್ತು ಅಂಕಪಟ್ಟಿ:

ಈ ಸತತ ಮೂರು ಜಯಗಳೊಂದಿಗೆ ಗುಜರಾತ್ ಟೈಟಾನ್ಸ್ ಪ್ಲೇ-ಆಫ್ ರೇಸ್‌ನಲ್ಲಿ ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಬೌಲರ್‌ಗಳ ಈ ಸಾಂಘಿಕ ಪ್ರದರ್ಶನವು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಮುಂಬರುವ ಪಂದ್ಯಗಳಲ್ಲಿ ಎದುರಾಳಿಗಳಿಗೆ ನಡುಕ ಹುಟ್ಟಿಸಿದೆ. ಇದೇ ಸಾಂಘಿಕ ಪ್ರದರ್ಶನವನ್ನು ಮುಂದುವರೆಸಿದರೆ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್​ಗೇರುವುದನ್ನು ಎದುರು ನೋಡಬಹುದು.

Source link

Horoscope Today: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 4, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ತದಿಗೆ ಮತ್ತು ಅನುರಾಧ ನಕ್ಷತ್ರದ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ.

ರಾಹುಕಾಲವು ಬೆಳಗ್ಗೆ 7:29 ರಿಂದ 9:07 ರವರೆಗೆ ಇರುತ್ತದೆ. ಸರ್ವಸಿದ್ಧಿಕಾಲ ಹಾಗೂ ಶುಭಕಾಲವು ಬೆಳಗ್ಗೆ 9:07 ರಿಂದ 10:41 ರವರೆಗೆ ಇರುತ್ತದೆ. ಇಂದು ರವಿ ಮೇಷ ರಾಶಿಯಲ್ಲಿದ್ದು, ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Source link

Assembly Election Results 2026 Live: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಲೈವ್ ವಿಡಿಯೋ – Kannada News | Assembly Election Results 2026 Live Streaming on 5 State Vidhan Sabha poll Result Online in Kannada

ಪಂಚ ರಾಜ್ಯಗಳ ಚುನಾವಣೆಗಳ ಫಲಿತಾಂಶ ಆರಂಭವಾಗಿದೆ, ಅಸ್ಸಾಂ, ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಪಟ್ಟಕ್ಕಾಗಿ ಬಿಗ್ ಫೈಟ್​​ ನಡೆಲಿದೆ. ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಕ್ಷಣ ಕ್ಷಣದ ಲೈವ್ ವಿಡಿಯೋ ಇಲ್ಲಿದೆ ನೋಡಿ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಅಬ್ಬಬ್ಬಾ! ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಎಲ್ಲದಕ್ಕಿಂತ ಉತ್ತಮ! – Kannada News | Bangalore Air Pollution Crisis: Bengaluru Air quality gets better along with all places

ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಎಲ್ಲದಕ್ಕಿಂತ ಉತ್ತಮ!

ಬೆಂಗಳೂರು, ಮೇ 04: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ  (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಕೇವಲ 88ರಷ್ಟಿದ್ದು, ಅತ್ಯಂತ ಒಳ್ಳೆಯ ಗುಣಮಟ್ಟದಲ್ಲಿದೆ. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ವಾಯು ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿತ್ತು. ಹಲವು ಬಾರಿ 200ರ ಗಡಿ ತಲುಪಿತ್ತು. ಆದರೆ ಇತ್ತೀಚೆಗೆ AQI ಸುಧಾರಣೆ ಕಂಡುಬಂದಿತ್ತು. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಹುಬ್ಬಳ್ಳಿ ಏರ್ ಕ್ವಾಲಿಟಿ ಇಂದು 68ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 88
  • ಮಂಗಳೂರು-122
  • ಮೈಸೂರು – 104
  • ಬೆಳಗಾವಿ – 50
  • ಕಲಬುರ್ಗಿ-93
  • ಶಿವಮೊಗ್ಗ –100
  • ಬಳ್ಳಾರಿ – 110
  • ಹುಬ್ಬಳ್ಳಿ- 68
  • ಉಡುಪಿ –110
  • ವಿಜಯಪುರ – 75

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮಿಳುನಾಡು ಇತಿಹಾಸದಲ್ಲಿ ಸಿಎಂ ಆದ ಚಿತ್ರರಂಗದ ತಾರೆಯರಿವರು – Kannada News | Vijay’s TVK: Can Dalapathi Redefine Tamil Nadu Politics Amid Election Counting?

ತಮಿಳುನಾಡು ಮತ್ತು ಸಿನಿಮಾ ರಾಜಕಾರಣಕ್ಕೆ ಬಿಡಿಸಲಾಗದ ನಂಟಿದೆ. ಬೆಳ್ಳಿಪರದೆಯ ಮೇಲೆ ಮಿಂಚಿದ ತಾರೆಗಳು ಜನನಾಯಕರಾಗಿ ಹೊರಹೊಮ್ಮುವ ಇಲ್ಲಿನ ಸಂಪ್ರದಾಯ ಈಗ ಹೊಸ ಹಂತಕ್ಕೆ ಬಂದು ನಿಂತಿದೆ. ರಾಜ್ಯದಲ್ಲಿ ಚುನಾವಣಾ ಕಣ ಸಿದ್ಧವಾಗಿ, ಮತ ಎಣಿಕೆಯ ಕ್ಷಣಗಣನೆ ಆರಂಭವಾಗಿರುವ ಈ ಸಂದರ್ಭದಲ್ಲಿ, ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಪ್ರಭಾವ ಎಷ್ಟಿರಬಹುದು ಎಂಬ ಚರ್ಚೆ ಜೋರಾಗಿದೆ.

ಈ ಹಿಂದೆ ಎಂ.ಜಿ. ರಾಮಚಂದ್ರನ್ (MGR) ಅವರು ತಮ್ಮ ಸಿನೆಮಾ ವರ್ಚಸ್ಸಿನಿಂದ ಎಐಎಡಿಎಂಕೆ ಕಟ್ಟಿ ಸತತ ಮೂರು ಬಾರಿ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದರು. ಅವರ ಹಾದಿಯಲ್ಲೇ ಬಂದ ಜಯಲಲಿತಾ ಅವರು ‘ಅಮ್ಮ’ನಾಗಿ ರಾಜ್ಯವಾಳಿದರು. ಚಿತ್ರಕಥೆಗಾರರಾಗಿದ್ದ ಎಂ. ಕರುಣಾನಿಧಿ ಅವರು ದಶಕಗಳ ಕಾಲ ಡಿಎಂಕೆ ಪಕ್ಷದ ಭದ್ರಕೋಟೆಯನ್ನು ಕಾಯ್ದುಕೊಂಡಿದ್ದರು. ಇದೀಗ ಮತ ಎಣಿಕೆಯ ಈ ಸಂದರ್ಭದಲ್ಲಿ ವಿಜಯ್ ಅವರು ಈ ದಿಗ್ಗಜರ ಸಾಲಿಗೆ ಸೇರಬಲ್ಲರೇ ಎಂಬುದು ಸದ್ಯದ ಕುತೂಹಲ.

ಬದಲಾದ ರಾಜಕೀಯ ಚಿತ್ರಣ:

ಈ ಹಿಂದೆ ‘ಕ್ಯಾಪ್ಟನ್’ ವಿಜಯಕಾಂತ್ ಅವರು ಡಿಎಂಡಿಕೆ ಮೂಲಕ ಅಲ್ಪಾವಧಿಯಲ್ಲಿ ವಿರೋಧ ಪಕ್ಷದ ಸ್ಥಾನಕ್ಕೇರಿ ಅಚ್ಚರಿ ಮೂಡಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ಕಮಲ್ ಹಾಸನ್ ಅವರ ‘ಮಕ್ಕಳ್ ನೀಧಿ ಮೈಯಂ’ ಆಡಳಿತ ಸುಧಾರಣೆಯ ಮಾತನಾಡುತ್ತಾ ಮತದಾರರ ಗಮನ ಸೆಳೆದಿತ್ತು. ಆದರೆ, ದಳಪತಿ ವಿಜಯ್ ಅವರ ಎಂಟ್ರಿ ಇವೆಲ್ಲಕ್ಕಿಂತ ಭಿನ್ನವಾಗಿದೆ. ಅಪಾರ ಯುವ ಸಮೂಹವನ್ನು ಹೊಂದಿರುವ ವಿಜಯ್, ಚುನಾವಣಾ ಕಣದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದ್ದಾರೆ.

ಇದನ್ನೂ ಓದಿ: ಮತ ಎಣಿಕೆ ದಿನ ತಿರುಪತಿಯಲ್ಲಿ ತ್ರಿಷಾ; ವಿಜಯ್​​ಗೋಸ್ಕರ ವಿಶೇಷ ಪೂಜೆ?

ಮತ ಎಣಿಕೆಯತ್ತ ಎಲ್ಲರ ಚಿತ್ತ:

ಚುನಾವಣೋತ್ತರ ಸಮೀಕ್ಷೆಗಳು ಮತ್ತು ರಾಜಕೀಯ ವಿಶ್ಲೇಷಕರು ವಿಜಯ್ ಅವರ ಪ್ರಭಾವದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಒಂದು ಕಾಲದಲ್ಲಿ ಸಿನಿಮಾ ತಾರೆಗಳೇ ಆಳುತ್ತಿದ್ದ ತಮಿಳುನಾಡಿನಲ್ಲಿ, ಈಗಿನ ಮತದಾರರು ನಟ ವಿಜಯ್ ಅವರಿಗೆ ‘ಪವರ್’ ನೀಡುತ್ತಾರಾ? ಅಥವಾ ಹಳೆಯ ದ್ರಾವಿಡ ಪಕ್ಷಗಳೇ ಅಧಿಪತ್ಯ ಮುಂದುವರಿಸುತ್ತವೆಯೇ? ಎಂಬ ಪ್ರಶ್ನೆಗೆ ಮತ ಎಣಿಕೆಯ ಅಂತ್ಯದಲ್ಲಿ ಉತ್ತರ ಸಿಗಲಿದೆ. ವಿಜಯ್ ಅವರ ಈ ಹೊಸ ಇನ್ನಿಂಗ್ಸ್ ತಮಿಳು ರಾಜಕೀಯದ ಭವಿಷ್ಯವನ್ನು ನಿರ್ಧರಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link