ಪ್ರೇಮಿಗಳೇ ಹಿಂದೂ ಸಂಘಟನೆಗೆ ಭಯಪಡಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ ಎಂದ ಯುವ ಕಾಂಗ್ರೆಸ್ – Kannada News | Yuva Congress to Protect Lovers from Moral Policing on Valentine’s Day in Karnataka
ಬೆಂಗಳೂರು ಫೆ.13: ಫೆಬ್ರವರಿ 14ರ ಪ್ರೇಮಿಗಳ ದಿನದಂದು (Valentine’s Day) ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ನಡೆಯುವ ನೈತಿಕ ಪೊಲೀಸ್ಗಿರಿಯನ್ನು ತಡೆಯಲು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸನ್ನದ್ಧವಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗ ದಳದಂತಹ ಸಂಘಟನೆಗಳ ಪುಂಡಾಟಿಕೆಗೆ ಹೆದರಬೇಕಿಲ್ಲ, ಪ್ರೇಮಿಗಳ ರಕ್ಷಣೆಗೆ ನಾವು ‘ಪ್ರೀತಿಯ ಸೈನಿಕರಾಗಿ’ ನಿಲ್ಲಲಿದ್ದೇವೆ ಎಂದು ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಘೋಷಿಸಿದ್ದಾರೆ. ಪ್ರತಿ ವರ್ಷ ಪ್ರೇಮಿಗಳ ದಿನದಂದು ಹಿಂದೂ ಪರ ಸಂಘಟನೆಗಳು ಪಾರ್ಕ್ಗಳು, ಮಾಲ್ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ…