Category Archives: Blog

Your blog category

SRH vs KKR: ಬಲಿಷ್ಠ ಸನ್‌ರೈಸರ್ಸ್​ಗೆ ಸೋಲುಣಿಸಿದ ಕೆಕೆಆರ್ – Kannada News | IPL 2026 Match 45: KKR Dominates SRH at Home, Secures Third Victory

ಐಪಿಎಲ್ 2026 (IPL 2026) ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (SRH vs KKR)​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಅವರ ನೆಲದಲ್ಲೇ ಮಣಿಸಿದ ಕೆಕೆಆರ್ ಈ ಆವೃತ್ತಿಯಲ್ಲಿ ಮೂರನೇ ಗೆಲುವು ದಾಖಲಿಸಿತು. ಇತ್ತ ಸತತ ಗೆಲುವುಗಳಿಂದ ಬೀಗುತ್ತಿದ್ದ ಸನ್‌ರೈಸರ್ಸ್ ಲೀಗ್​ನಲ್ಲಿ 4ನೇ ಸೋಲು ಎದುರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ 165 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಕೇವಲ 3 ವಿಕೆಟ್‌ಗಳನ್ನು ಕಳೆದುಕೊಂಡು 18.2 ಓವರ್​ಗಳಲ್ಲಿ ಜಯದ ನಗೆ ಬೀರಿತು.

ಸನ್‌ರೈಸರ್ಸ್​ಗೆ ಸ್ಫೋಟಕ ಆರಂಭ

ಈ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಇದಕ್ಕೆ ಪೂರಕವಾಗಿ ತಂಡಕ್ಕೆ ಉತ್ತಮ ಆರಂಭವೂ ಸಿಕ್ಕಿತು. ಅಭಿಷೇಕ್ ಹಾಗೂ ಹೆಡ್ ಮೊದಲ ವಿಕೆಟ್​ಗೆ 44 ರನ್​​ಗಳ ಜೊತೆಯಾಟವನ್ನು ಹಂಚಿಕೊಂಡರು. ಆ ನಂತರ ಹೆಡ್ ಹಾಗೂ ಕಿಶನ್ ತಂಡವನ್ನು ಶತಕದ ಗಡಿಯನ್ನು ದಾಟಿಸಿದರು. ಆದರೆ ಇವರಿಬ್ಬರ ವಿಕೆಟ್ ಪತನದ ಬಳಿಕ ಸನ್‌ರೈಸರ್ಸ್ ತಂಡದ ಇನ್ನಿಂಗ್ಸ್ ಕುಸಿಯಿತು. ಇದರ ಪರಿಣಾಮವಾಗಿ ತಂಡವು 19 ಓವರ್‌ಗಳಲ್ಲಿ 165 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಪರ ಅಭಿಷೇಕ್ ಶರ್ಮಾ ಕೇವಲ 15 ರನ್‌ಗಳಿಗೆ ಔಟಾದರೆ, ಟ್ರಾವಿಸ್ ಹೆಡ್ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿ 28 ಎಸೆತಗಳಲ್ಲಿ 61 ರನ್ ಗಳಿಸಿದರು.

ಕೈಕೊಟ್ಟ ಮಧ್ಯಮ ಕ್ರಮಾಂಕ

ಆದರೆ ಹೆಡ್ ವಿಕೆಟ್ ಪತನದ ಬಳಿಕ ಪೆವಿಲಿಯನ್ ಪರೇಡ್ ಶುರುವಾಯಿತು. ಹೀಗಾಗಿ ಸನ್‌ರೈಸರ್ಸ್ ತಂಡವು ತನ್ನ ಕೊನೆಯ ಒಂಬತ್ತು ವಿಕೆಟ್‌ಗಳನ್ನು ಕೇವಲ 60 ರನ್‌ಗಳಿಗೆ ಕಳೆದುಕೊಂಡಿತು. ಕೋಲ್ಕತ್ತಾ ನೈಟ್ ರೈಡರ್ಸ್ ಪರ ವರುಣ್ ಚಕ್ರವರ್ತಿ ಮೂರು ವಿಕೆಟ್‌ಗಳೊಂದಿಗೆ ಅತಿ ಹೆಚ್ಚು ವಿಕೆಟ್ ಪಡೆದರೆ, ಸುನಿಲ್ ನರೈನ್ ಮತ್ತು ಕಾರ್ತಿಕ್ ತ್ಯಾಗಿ ತಲಾ 2 ವಿಕೆಟ್ ಪಡೆದರು. ವೈಭವ್ ಅರೋರಾ, ಕ್ಯಾಮರೂನ್ ಗ್ರೀನ್ ಮತ್ತು ಅನುಕುಲ್ ರಾಯ್ ತಲಾ ಒಂದು ವಿಕೆಟ್ ಪಡೆದರು.

ಸುಲಭವಾಗಿ ಗೆದ್ದ ಕೆಕೆಆರ್

ಈ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಫಿನ್ ಅಲೆನ್ 13 ಎಸೆತಗಳಲ್ಲಿ 29 ರನ್ ಗಳಿಸಿದರು ಆದರೆ ಪ್ಯಾಟ್ ಕಮ್ಮಿನ್ಸ್ ಅವರನ್ನು ಔಟ್ ಮಾಡಿದರು. ನಂತರ ಅಜಿಂಕ್ಯ ರಹಾನೆ ಮತ್ತು ಅಂಗ್‌ಕ್ರಿಶ್ ರಘುವಂಶಿ ಎಚ್ಚರಿಕೆಯಿಂದ ಆಟವಾಡಿ ತಂಡವನ್ನು ಗೆಲುವಿನ ಹತ್ತಿರಕ್ಕೆ ತಂದರು. ರಹಾನೆ 36 ಎಸೆತಗಳಲ್ಲಿ 43 ರನ್ ಗಳಿಸಿದರೆ, ಅಂಗ್‌ಕ್ರಿಶ್ ರಘುವಂಶಿ 47 ಎಸೆತಗಳಲ್ಲಿ 59 ರನ್ ಗಳಿಸಿದರು. ರಿಂಕು ಸಿಂಗ್ ಕೂಡ 11 ಎಸೆತಗಳಲ್ಲಿ ಅಜೇಯ 22 ರನ್ ಗಳಿಸಿ ಕೆಕೆಆರ್ ತಂಡ 18.2 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ ಗುರಿ ತಲುಪಲು ಸಹಾಯ ಮಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:13 pm, Sun, 3 May 26

Source link

ಕರ್ನಾಟಕ ಹವಾಮಾನ ವರದಿ: ಇಂದಿನಿಂದ ಮೇ 9ರವರೆಗೆ ಬೆಂಗಳೂರು ಸೇರಿ ರಾಜ್ಯದಲ್ಲಿ ಮಳೆ – Kannada News | Karnataka Rain Alert: IMD Forecasts Thunderstorms in Bengaluru, South Interior from May 3–9

ಬೆಂಗಳೂರು, ಮೇ 03: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪದ ನಡುವೆಯೇ ಹವಾಮಾನ ಇಲಾಖೆ ಮಳೆ (Rain) ಮುನ್ಸೂಚನೆ ನೀಡಿದೆ. ಮೇ 3ರಿಂದ 09ರವಗರೆ ಬೆಂಗಳೂರು (bangaluru) ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಮತ್ತು ಬಿರುಗಾಳಿ ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಉಳಿದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಗುಡುಗು-ಮಿಂಚಿನ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆ!

ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ಇತ್ತ ಉತ್ತರ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಬೆಳಗಾವಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಅಬ್ಬರ ಇರುವುದಿಲ್ಲ. ಈ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಮೇ 5ರ ನಂತರ ಹವಾಮಾನದಲ್ಲಿ ಬದಲಾವಣೆ 

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸದ್ಯ ಒಣಹವೆ ಇದ್ದರೂ, ಮೇ 5ರಿಂದ ಪರಿಸ್ಥಿತಿಯಲ್ಲಿ ಬದಲಾವಣೆಯಾಗಲಿದೆ. ಕೊಪ್ಪಳ, ಯಾದಗಿರಿ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ!

ಒಟ್ಟಾರೆಯಾಗಿ, ರಾಜ್ಯದಲ್ಲಿ ಮಳೆ ಮತ್ತು ಒಣಹವೆಯ ಮಿಶ್ರ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜನರು ಗುಡುಗು-ಮಿಂಚಿನ ಬಗ್ಗೆ ಜಾಗರೂಕರಾಗಿರಲು ಹವಾಮಾನ ಇಲಾಖೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:18 pm, Sun, 3 May 26

Source link

ಪಶ್ಚಿಮ ಬಂಗಾಳದ ಈ ಒಂದು ಕ್ಷೇತ್ರಕ್ಕೆ ಮಾತ್ರ ಫಲಿತಾಂಶ ನಾಳೆ ಇಲ್ಲ; ಮೇ 21ಕ್ಕೆ ಮರುಮತದಾನ, ಮೇ 24ಕ್ಕೆ ಮತ ಎಣಿಕೆ – Kannada News | West Bengal Election Results: Falta Constituency Vote Count Delayed Due to Re polling

ಕೋಲ್ಕತಾ, ಮೇ 3: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಮ್ ಮತ್ತು ಪುದುಚೆರಿಯ ವಿಧಾನಸಭಾ ಚುನಾವಣೆಗಳ ಫಲಿತಾಂಶ ನಾಳೆ ಸೋಮವಾರ (ಮೇ 4) ಪ್ರಕಟವಾಗಲಿದೆ. ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಸಖತ್ ಜಿದ್ದಾಜಿದ್ದಿ ನಡೆಯಿತು. ಹಲವೆಡೆ ಹಿಂಸಾಚಾರಗಳಾದವು. ಹಲವು ಬೂತ್​ಗಳಲ್ಲಿ ಮರುಮತದಾನ ಕೂಡ ಮಾಡಲಾಗಿದೆ. ಆದರೂ ಕೂಡ ಮೇ 4ರಂದು ಪಶ್ಚಿಮ ಬಂಗಾಳದ ಎಲ್ಲಾ ಕ್ಷೇತ್ರಗಳಿಗೂ ಫಲಿತಾಂಶ ಪ್ರಕಟವಾಗುತ್ತಿಲ್ಲ. ಒಂದು ಕ್ಷೇತ್ರದ ಫಲಿತಾಂಶ ಬಾಕಿ ಉಳಿಯಲಿದೆ.

ಸೌತ್ 24 ಪರಗಣ ಜಿಲ್ಲೆಯಲ್ಲಿರುವ ಫಾಲ್ಟಾ ವಿಧಾನಸಭಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ. ಮೇ 21ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಮೇ 24ರಂದು ಫಲಿತಾಂಶ ಪ್ರಕಟವಾಗಲಿದೆ. ಬಂಗಾಳದ ಉಳಿದ 293 ಕ್ಷೇತ್ರಗಳಿಗೆ ಮೇ 4ರಂದು ಫಲಿತಾಂಶ ಪ್ರಕಟವಾಗಿ, ಮೂರು ವಾರಗಳ ನಂತರ ಫಾಲ್ಟಾದ ಫಲಿತಾಂಶ ಹೊರಬೀಳುತ್ತದೆ.

ಇದನ್ನೂ ಓದಿ: ಮಿಳುನಾಡು, ಬಂಗಾಳ ಸೇರಿ 5 ರಾಜ್ಯಗಳ ಚುನಾವಣೆ ಮತ ಎಣಿಕೆ ಯಾವಾಗ? ಫಲಿತಾಂಶ ನೋಡುವುದು ಹೇಗೆ?

ಫಾಲ್ಟಾ ಕ್ಷೇತ್ರದಲ್ಲಿ ಏಪ್ರಿಲ್ 29ರಂದು ಮತದಾನ ಆಗಿತ್ತು. ಅಂದು ಕ್ಷೇತ್ರದ ಹಲವೆಡೆ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ, ಹಿಂಸಾಚಾರಗಳಾದ ವರದಿಯಾಗಿತ್ತು. ಈ ಕ್ಷೇತ್ರದಲ್ಲಿ ಟಿಎಂಸಿಯಿಂದ ಜಹಾಂಗೀರ್ ಖಾನ್, ಬಿಜೆಪಿಯಿಂದ ದೇಬಂಗಶು ಪಾಂಡ, ಕಾಂಗ್ರೆಸ್​ನಿಂದ ಅಬ್ದುರ್ ರಜಾಕ್ ಮೊಲ್ಲಾ ಮತ್ತು ಸಿಪಿಐಎಂನಿಂದ ಸಂಭುನಾಥ್ ಕುರ್ಮಿ ಮೊದಲಾದವರು ಸ್ಪರ್ಧಿಸಿದ್ದಾರೆ. ಪರಸ್ಪರ ಆರೋಪ, ಪ್ರತ್ಯಾರೋಪಗಳು ಜೋರಾಗಿ ನಡೆದಿವೆ.

ಕ್ಷೇತ್ರದ ಕೆಲ ಮತಗಟ್ಟೆಗಳಲ್ಲಿ ಇವಿಎಂ ಮೆಷೀನ್​ಗಳಲ್ಲಿ ಬಿಜೆಪಿ ಪಕ್ಷದ ಚಿಹ್ನೆಯನ್ನು ಟೇಪ್​ನಿಂದ ಮುಚ್ಚಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಫಾಲ್ಟಾದ 144 ಮತ್ತು 189ನೇ ಮತಗಟ್ಟೆಯಲ್ಲಿ ಇದು ಆಗಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆಪಾದಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ನಡೆಯಲಿಲ್ಲ ಬಿಜೆಪಿ ಕಮಾಲ್; ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ 

ಬಹಳ ಸೂಕ್ಷ್ಮವೆಂದು ಪರಿಗಣಿಸಲಾಗಿರುವ ಫಾಲ್ಟ ಕ್ಷೇತ್ರದಲ್ಲಿ ಮರುಮತದಾನಕ್ಕಾಗಿ ಎಲ್ಲಾ ರೀತಿಯಲ್ಲೂ ಸಜ್ಜಾಗಿರುವಂತೆ ಮತ್ತು ಅಗತ್ಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಚುನಾವಣಾ ಆಯೋಗ ಆದೇಶಿಸಿದೆ. ಬಂಗಾಳದ ಇನ್ನೂ ಕೆಲ ಕ್ಷೇತ್ರಗಳ ಕೆಲ ಬೂತ್​ಗಳಲ್ಲಿ ಮರುಮತದಾನಗಳಾಗಿವೆ. ಫಾಲ್ಟಾ ಹೊರತುಪಡಿಸಿ ಉಳಿದ 293 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ನಾಳೆ ಪ್ರಕಟವಾಗುತ್ತದೆ. ಅಸ್ಸಾಂ, ತಮಿಳುನಾಡು, ಕೇರಳ, ಪುದುಚೆರಿಯ ಎಲ್ಲಾ ಕ್ಷೇತ್ರಗಳಿಗೂ ನಾಳೆಯೇ ಫಲಿತಾಂಶ ಪ್ರಕಟವಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

GT vs PBKS IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ

ಐಪಿಎಲ್ 19 ನೇ ಸೀಸನ್‌ನ ಡಬಲ್ ಹೆಡರ್‌ನ ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಪಂಜಾಬ್‌ಗೆ ಇದು ಒಂಬತ್ತನೇ ಪಂದ್ಯ ಮತ್ತು ಗುಜರಾತ್‌ಗೆ ಹತ್ತನೇ ಪಂದ್ಯವಾಗಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ ಪಂದ್ಯದಲ್ಲಿ ಪಂಜಾಬ್, ಗುಜರಾತ್ ತಂಡವನ್ನು ಸೋಲಿಸಿತ್ತು. ಆದ್ದರಿಂದ, ಗುಜರಾತ್ ತಮ್ಮ ಕೊನೆಯ ಸೋಲಿಗೆ ಸೇಡು ತೀರಿಸಿಕೊಳ್ಳುತ್ತದೆಯೇ ಎಂದು ನೋಡುವುದು ಮುಖ್ಯವಾಗಿರುತ್ತದೆ.

Source link

ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ: ತಕ್ಷಣ ಫಲಿತಾಂಶ ಘೋಷಣೆ ಕೋರಿ ಲೀಗಲ್​ ನೋಟಿಸ್​​ – Kannada News | BJP Candidate Jeevaraj advocate Sends Legal Notice to Election Officer Over Announce Sringeri assembly Re courting Result

ಬೆಂಗಳೂರು/ಚಿಕ್ಕಮಗಳೂರು) ಮೇ 03): ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ (Sringeri assembly Re courting) ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ. ಹೌದು.. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಜೀವರಾಜ್ ಅವರು ಮುನ್ನಡೆ ಸಾಧಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಮೂಲಗಳ ಮಾಹಿತಿ ಪ್ರಕಾರ, ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ 201 ಮತಗಳ ಅಂತರದಲ್ಲಿ ಸೋತಿದ್ದ ಬಿಜೆಪಿಯ ಜೀವರಾಜ್‌ಗೆ 52 ಮುನ್ನಡೆ ಸಿಕ್ಕಿದೆ. ಆದ್ರೆ, ಚುನಾವಣಾಧಿಕಾರಿ, ಫಲಿತಾಂಶವನ್ನು ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ತಕ್ಷಣ ಫಲಿತಾಂಶ ಘೋಷಣೆ ಕೋರಿ ಚುನಾವಣಾಧಿಕಾರಿಗೆ ಜೀವರಾಜ್ ಪರ ವಕೀಲೆ ಡಾ.ವಂದನಾ.ಪಿ.ಎಲ್‌ ಅವರು ಲೀಗಲ್​ ನೋಟಿಸ್ ನೀಡಿದ್ದಾರೆ.

ನ್ಯಾಯಾಂಗ ನಿಂದನೆ ಕೇಸ್ ಎಚ್ಚರಿಕೆ

ಕರ್ನಾಟಕ ಹೈಕೋರ್ಟ್ ಆದೇಶದಂತೆ ನಿನ್ನೆ (ಮೇ 02) ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳನ್ನು ಮತ್ತೊಮ್ಮೆ ಎಣಿಕೆ ಮಾಡಲಾಗಿದೆ. ಆದ್ರೆ, ಫಲಿತಾಂಶ ಮಾತ್ರ ಪ್ರಕಟಿಸಿಲ್ಲ. ಇದರಿಂದ ತಕ್ಷಣ ಫಲಿತಾಂಶ ಘೋಷಣೆ ಕೋರಿ ಜೀವರಾಜ್ ಪರ ವಕೀಲೆ ಡಾ.ವಂದನಾ.ಪಿ.ಎಲ್‌ ಅವರು ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.​​ ಹೈಕೋರ್ಟ್ ಅಂಚೆ‌ ಮತಪತ್ರಗಳ ಎಣಿಕೆ ನಂತರ ಫಲಿತಾಂಶ ಘೋಷಿಸುವಂತೆ ಆದೇಶಿಸಿದೆ. ಆದರೆ ಫಲಿತಾಂಶ ಘೋಷಣೆ ವಿಳಂಬ ಮಾಡಲಾಗುತ್ತಿದೆ. ವಿಳಂಬ ಮಾಡಿದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಲೀಗಲ್ ನೋಟಿಸ್​​ ನಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ನೋಡಿ: ಶೃಂಗೇರಿ ಅಂಚೆ ಮತಗಳ ಮರು ಎಣಿಕೆ : ಬಿಜೆಪಿ, ಕಾಂಗ್ರೆಸ್​​​ಗೆ ಸಿಕ್ಕ ವೋಟ್​ ಎಷ್ಟು? ಫಲಿತಾಂಶ ಯಾವಾಗ ಘೋಷಣೆ; ಚುನಾವಣಾಧಿಕಾರಿ ಮಹತ್ವದ ಹೇಳಿಕೆ

ಸಾಕಷ್ಟು ಗೊಂದಲ ಹಾಗೂ ಹೈಡ್ರಾಮಾ

ಫಲಿತಾಂಶವೇ ಈಗ ಅದಲುಬದಲಾಗೋ ಲಕ್ಷಣ ಕಾಣಿಸುತ್ತಿಲ್ಲ. ಯಾಕಂದ್ರೆ, ಕಳೆದ ಬಾರಿಯ ಎಲೆಕ್ಷನ್​ನಲ್ಲಿ ಕಾಂಗ್ರೆಸ್​ನ ರಾಜೇಗೌಡ 201 ಮತಗಳ ಅಂತರದಿಂದ ಗೆದ್ದುಬಿಗಿದ್ದರು. ಸ್ವಲ್ಪ ಮತಗಳ ಅಂತರದಿಂದ ಬಿಜೆಪಿಯ ಜೀವರಾಜ್ ಸೋತಿದ್ದರು. ಆದ್ರೆ ಅಂಚೆ ಮತಗಳಲ್ಲಿ ಹೆಚ್ಚು ಮತ ಪಡೆದಿದ್ದ ಜೀವರಾಜ್ ಅಸಿಂಧು ಆಗಿದ್ದ 279 ಮತಗಳನ್ನ ಮರು ಎಣಿಕೆ ಮಾಡುವಂತೆ ಪಟ್ಟು ಹಿಡಿದಿದ್ದರು. ಮನವಿಗೆ ಸ್ಪಂದಿಸದ ಅಂದಿನ ಚುನಾವಣಾಧಿಕಾರಿ ಫಲಿತಾಂಶ ಘೋಷಣೆ ಮಾಡಿದ್ರು. ಹೀಗಾಗಿ ಜೀವರಾಜ್ ಬೇರೆ ದಾರಿಯಿಲ್ಲದೆ ಕಾನೂನು ಹೋರಾಟ ನಡೆಸಿದ್ರು. ಸತತ ಮೂರು ವರ್ಷಗಳ ಕಾನೂನು ಹೋರಾಟದ ಬಳಿಕ ಹೈ ಕೋರ್ಟ್ ಸೂಚನೆಯಂತೆ ನಿನ್ನೆ (ಮೇ 02) ಅಂಚೆ ಮತಗಳ ಮರು ಎಣಿಕೆ ಮಾಡಲಾಗಿದ್ದು. ಮತ ಎಣಿಕೆ ಆರಂಭವಾದಾಗಿನಿಂದ ಮುಗಿಯುವವರೆಗೂ ಸಾಕಷ್ಟು ಗೊಂದಲ ಹಾಗೂ ಹೈಡ್ರಾಮಾಗೆ ಎಡೆಮಾಡಿಕೊಟ್ಟಿತ್ತು. ಎರಡು ಪಕ್ಷಗಳ ನಾಯಕರು ತಾವೇ ಗೆದ್ದಿರೋದಾಗಿ ಘೋಷಿಸಿಕೊಂಡ್ರು.

ಆದ್ರೆ, ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ 201 ಮತಗಳ ಅಂತರದಲ್ಲಿ ಸೋತಿದ್ದ ಜೀವರಾಜ್‌ಗೆ 52 ಮುನ್ನಡೆ ಸಿಕ್ಕಿದೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಈ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮತಚೋರಿಯ ತಿರುಗುಬಾಣ ಬಿಟ್ಟಿದ್ದಾರೆ. ಮತಚೋರಿ ಅಂತಿದ್ದವರಿಂದ್ಲೇ ಮತಗಳ್ಳತನ ನಡೆದಿದೆ ಎಂದು ಕೇಸರಿ ಪಡೆ ಆರೋಪ ಮಾಡ್ತಿದೆ. ಜೊತೆಜೊತೆಗೆ ಶೃಂಗೇರಿಯ ಫಲಿತಾಂಶವನ್ನ ಪ್ರಕಟಿಸದಂತೆ ತಡೆಯಲಾಗ್ತಿದೆ ಎಂದು ಆರೋಪಿಸಿದೆ.

ಆದ್ರೆ ಕಾಂಗ್ರೆಸ್ ನಾಯಕರು, ಬಿಜೆಪಿ ವಿರುದ್ಧ ಪ್ರತ್ಯಾರೋಪ ಮಾಡಿದ್ದು, ಅಧಿಕಾರಿಗಳನ್ನ ದುರ್ಬಳಕೆ ಮಾಡಿಕೊಂಡು, ಅಪರಾಧ ಎಸಗಿದೆ. ಮತಗಳ ಟ್ಯಾಂಪರಿಂಗ್ ಆಗಿದೆ ಎಂದು ತಿರುಗೇಟು ನೀಡಿದ್ದಾರೆ. ಇನ್ನು ಫಲಿತಾಂಶ ಘೋಷಣೆ ಮಾಡದ ಸಂಬಂಧ ಪ್ರತಿಕ್ರಿಯಿಸಿರುವ ಚುನಾವಣಾಧಿಕಾರಿ, ಹೈಕೋರ್ಟ್ ಆದೇಶದಂತೆ ಮರು ಎಣಿಕೆ ಮಾಡಲಾಗಿದೆ. ಆದ್ರೆ, ಫಲಿತಾಂಶ ಘೋಷಿಸುವಂತೆ ಆದೇಶದಲ್ಲಿ ಇಲ್ಲ. ಹೀಗಾಗಿ ಮರು ಮತ ಎಣಿಕೆ ವಿವರವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ ಎಂದು ಸಮಾಜಾಷಿಯಿ ನೀಡಿದ್ದಾರೆ.

ಇನ್ನು ಅಂಚೆ ಮತಪತ್ರಗಳ ಮರುಎಣಿಕೆ ನಂತರ ಫಲಿತಾಂಶ ಘೋಷಿಸದ್ದಕ್ಕೆ ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ನೀಡಲಾಗಿದ್ದು, ಮುಂದೆ ಏನಾಗಿದೆ ಎನ್ನುವುದ್ನು ಕಾದುನೋಡಬೇಕಿದೆ.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ 3ನೇ ಆಟಗಾರ ಮನೀಷ್ ಪಾಂಡೆ

Source link

ಎಐ ಹೆಸರಲ್ಲಿ ಲೇ ಆಫ್; ಉದ್ಯೋಗಿಗಳಿಗೆ ಆಶಾಕಿರಣವಾದ ಚೀನೀ ಕೋರ್ಟ್ ತೀರ್ಪು

ಬೀಜಿಂಗ್, ಮೇ 3: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ತೆಗೆದುಹಾಕಿ ಅವರ ಜಾಗಕ್ಕೆ AI ಅಳವಡಿಸಿಕೊಳ್ಳುತ್ತಿವೆ. ಆದರೆ ಚೀನಾದ ನ್ಯಾಯಾಲಯವೊಂದು ಈ ಬಗ್ಗೆ ಐತಿಹಾಸಿಕ ತೀರ್ಪು ನೀಡಿದ್ದು, “ಕಂಪನಿಗಳು ಲಾಭಕ್ಕಾಗಿ ಅಥವಾ ಕೆಲಸದ ವೇಗಕ್ಕಾಗಿ AI ಬಳಸಿಕೊಳ್ಳುವುದು ಅವರ ವೈಯಕ್ತಿಕ ನಿರ್ಧಾರ. ಆದರೆ ಈ ನಿರ್ಧಾರದ ನೆಪದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದು ಅಥವಾ ಅವರ ಸಂಬಳ ಕಡಿತಗೊಳಿಸುವುದು ಕಾನೂನುಬಾಹಿರ” ಎಂದು ಹೇಳಿದೆ.

ಚೀನಾದ ಹ್ಯಾಂಗ್‌ಝೌ (Hangzhou) ನ್ಯಾಯಾಲಯದಿಂದ ಈ ತೀರ್ಪು ಬಂದಿದೆ. ವರದಿ ಪ್ರಕಾರ, ತಂತ್ರಜ್ಞಾನ ಕಂಪನಿಯೊಂದು ತನ್ನ ಹಿರಿಯ ಉದ್ಯೋಗಿಯೊಬ್ಬರ ಕೆಲಸವನ್ನು AI ಮೂಲಕ ಮಾಡಿಸಲು ಮುಂದಾಯಿತು. ಆ ಉದ್ಯೋಗಿಗೆ ನೀಡುತ್ತಿದ್ದ ಕೆಲಸವನ್ನು AI ಮಾಡಬಲ್ಲದು ಎಂಬ ಕಾರಣ ನೀಡಿ, ಕಂಪನಿಯು ಅವರ ಸಂಬಳವನ್ನು ಶೇ. 40 ರಷ್ಟು ಕಡಿತಗೊಳಿಸಿ ಕೆಳಮಟ್ಟದ ಹುದ್ದೆಗೆ ವರ್ಗಾಯಿಸಿತು. ಉದ್ಯೋಗಿ ಇದಕ್ಕೆ ಒಪ್ಪದಿದ್ದಾಗ ಅವರನ್ನು ಕೆಲಸದಿಂದಲೇ ತೆಗೆದುಹಾಕಲಾಯಿತು.

ಇದನ್ನೂ ಓದಿ: ದೆಹಲಿಯಲ್ಲಿ 9 ಮಂದಿ ಬಲಿತೆಗೆದ ಎಸಿ ಸ್ಫೋಟ; ಏರ್ ಕಂಡೀಷನರ್ ಸ್ಫೋಟಕ್ಕೆ ಕಾರಣವೇನು, ನಿಯಂತ್ರಣ ಹೇಗೆ?

ಕಂಪನಿಯ ನಿರ್ಧಾರಕ್ಕೆ ನೌಕರರು ಬಲಿಪಶುವಾಗಬಾರದು

ಕಂಪನಿಯು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಉದ್ಯಮದ ಲಾಭಕ್ಕಾಗಿ ಮಾಡುವ ನಿರ್ಧಾರವೇ ಹೊರತು, ಅದು ಅನಿವಾರ್ಯ ಪರಿಸ್ಥಿತಿಯಲ್ಲ. ಇಂತಹ ಸಂದರ್ಭದಲ್ಲಿ ಉದ್ಯೋಗಿಯ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಚೀನಾದ ಕಾರ್ಮಿಕ ಕಾನೂನಿನ ಪ್ರಕಾರ, ಕಂಪನಿಯು ನಷ್ಟದಲ್ಲಿದ್ದಾಗ ಅಥವಾ ಸಂಪೂರ್ಣವಾಗಿ ಮುಚ್ಚುವ ಹಂತದಲ್ಲಿದ್ದಾಗ ಮಾತ್ರ ಉದ್ಯೋಗಿಗಳನ್ನು ತೆಗೆಯಬಹುದು. AI ಬಂದಿದೆ ಎಂಬುದು ಉದ್ಯೋಗಿಗಳನ್ನು ತೆಗೆಯಲು ಕಾನೂನುಬದ್ಧ ಕಾರಣವಾಗುವುದಿಲ್ಲ. AI ಬಳಕೆ ಮಾಡುವುದರಿಂದ ಉದ್ಯೋಗಿಯ ಜವಾಬ್ದಾರಿ ಕಡಿಮೆಯಾದರೂ, ಅವರ ಸಂಬಳವನ್ನು ಅಸಮಂಜಸವಾಗಿ ಕಡಿತಗೊಳಿಸುವುದು ತಪ್ಪು ಎಂದು ನ್ಯಾಯಾಲಯ ಹೇಳಿದೆ.

ಜಾಗತಿಕ ಮಟ್ಟದಲ್ಲಿ ಇದರ ಮಹತ್ವ

ಪ್ರಪಂಚದಾದ್ಯಂತ AI ಕಾರಣದಿಂದ ಉದ್ಯೋಗ ನಷ್ಟವಾಗುವ ಭೀತಿ ಎದುರಾಗಿರುವ ಸಮಯದಲ್ಲಿ, ಚೀನಾ ನ್ಯಾಯಾಲಯದ ಈ ತೀರ್ಪು ಉದ್ಯೋಗಿಗಳ ಪರವಾಗಿ ದೊಡ್ಡ ಶಕ್ತಿಯಾಗಿ ನಿಂತಿದೆ. ಕಂಪನಿಗಳು ಕೇವಲ ತಂತ್ರಜ್ಞಾನದ ಹಿಂದೆ ಓಡದೆ, ತಮ್ಮ ಕೆಳಗೆ ಕೆಲಸ ಮಾಡುವ ಮನುಷ್ಯರ ಸಾಮಾಜಿಕ ಮತ್ತು ಆರ್ಥಿಕ ಸುರಕ್ಷತೆಯ ಜವಾಬ್ದಾರಿಯನ್ನೂ ಹೊರಬೇಕು ಎಂಬ ಸಂದೇಶವನ್ನು ಈ ತೀರ್ಪು ನೀಡಿದೆ.

ಇದನ್ನೂ ಓದಿ: ಭಾರತದ ವಿದೇಶ ವಿನಿಮಯ ಮೀಸಲು ನಿಧಿಯಲ್ಲಿ ಚಿನ್ನದ ಪಾಲು ಗಣನೀಯ ಏರಿಕೆ

ಸಂಕ್ಷಿಪ್ತವಾಗಿ ಹೇಳುವುದಾದರೆ, “ನೀವು AI ಬಳಸುವುದಾದರೆ ಬಳಸಿ, ಆದರೆ ಅದರ ಹೆಸರಿನಲ್ಲಿ ನೌಕರರ ಜೀವನದ ಜೊತೆ ಆಟವಾಡಬೇಡಿ” ಎಂದು ಚೀನಾ ಕಂಪನಿಗಳಿಗೆ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸುಡು ಬಿಸಿಲಿನಲ್ಲಿ ದ್ವಿಚಕ್ರ ವಾಹನ ಚಲಾಯಿಸುವಾಗ ಈ ವಿಚಾರಗಳನ್ನು ನೆನಪಿನಲ್ಲಿಡಿ – Kannada News | It is essential to take care of these things while riding two wheeler in the summer

ಈ ಸುಡು ಬೇಸಿಗೆಯಲ್ಲಿ (summer) ಮನೆಯಿಂದ ಹೊರಗಡೆ ಕಾಲಿಡಲು ಸಹ ಸಾಧ್ಯವಾಗುವುದಿಲ್ಲ. ಅದರಲ್ಲೂ ಸೂರ್ಯನ ಪ್ರಕರ ಶಾಖದ ನಡುವೆ ದ್ವಿಚಕ್ರ ವಾಹನ ಸವಾರಿ ಮಾಡುವುದು ಸವಾಲಿನ ಕೆಲಸವೇ ಸರಿ. ಹೌದು ತೀವ್ರವಾದ ಬಿಸಿಲು ಮತ್ತು ಬಿಸಿ ಗಾಳಿಯು ದೇಹವನ್ನು ಆಯಾಸಗೊಳಿಸುತ್ತದೆ. ದೇಹವು ಬೇಗನೆ ದಣಿದಿದೆ, ಗಮನವು ವಿಚಲಿತವಾಗುತ್ತದೆ ಮತ್ತು ಸಣ್ಣದೊಂದು ಅಜಾಗರೂಕತೆಯು ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಆದ್ದರಿಂದ ಈ ಶಾಖದ ಸಮಯದಲ್ಲಿ ಬೈಕ್‌, ಸ್ಕೂಟರ್‌ ಓಡಿಸುವಾಗ ನಿಮ್ಮ ಆರೋಗ್ಯದ ಜೊತೆಗೆ ಸುರಕ್ಷತೆಯನ್ನು ನೋಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿ ಈ ವಾಹನ ಚಲಾಯಿಸುವಾಗ ಈ ಕೆಲವು ಪ್ರಮುಖ ವಿಚಾರಗಳನ್ನು ಗನಮನದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ.

ತೀವ್ರ ಬಿಸಿಲಿನಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಈ ವಿಚಾರಗಳನ್ನು ಗಮನದಲ್ಲಿಡಿ:

ತೀವ್ರ ಬಿಸಿಲಿನ ಶಾಖದಲ್ಲಿ ಬೈಕ್ ಸವಾರಿ ಮಾಡುವುದರಿಂದ ಆಯಾಸವಾಗುವುದಲ್ಲದೆ, ಆರೋಗ್ಯಕ್ಕೂ ಹಾನಿಯಾಗುತ್ತದೆ. ಸ್ವಲ್ಪ ಕಾಳಜಿ ವಹಿಸಿದರೆ, ಸುರಕ್ಷಿತವಾಗಿ ಚಾಲನೆ ಮಾಡಬಹುದು.

  • ಮಧ್ಯಾಹ್ನ 12:00 ರಿಂದ ಸಂಜೆ 4:00 ರವರೆಗೆ ಬಿಸಿಲು ಜಾಸ್ತಿ ಇರುವಂತಹ ಸಂದರ್ಭದಲ್ಲಿ ದ್ವಿಚಕ್ರ ವಾಹನ ಓಡಿಸುವುದನ್ನು ತಪ್ಪಿಸಿ. ತೀರಾ ಅಗತ್ಯವಿದ್ದರೆ ಮಾತ್ರ ಆ ಸಮಯದಲ್ಲಿ ಪ್ರಯಾಣಿಸಿ.
  • ಬಿಸಿ ಗಾಳಿಯಿಂದಾಗಿ ಶುಷ್ಕತೆ ಹೆಚ್ಚಾಗುತ್ತದೆ. ಬಿಸಿ ಗಾಳಿಯೊಂದಿಗೆ ಧೂಳು ಕೂಡ ಹಾರುತ್ತಿರುತ್ತವೆ. ಇದರಿಂದಾಗಿ ಕಣ್ಣುಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ, ಈ ಶಾಖದಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಯಾವಾಗಲೂ ಹೆಲ್ಮೆಟ್ ಧರಿಸಿ. ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸುವುದರಿಂದ, ಶಾಖದ ಹೊಡೆತದಿಂದ ಪಾರಾಗಬಹುದು. ಧೂಳಿನಿಂದ ಕಣ್ಣಿಗೆ ಹಾನಿಯಾಗದಂತೆ ನೋಡಿಕೊಳ್ಳಬಹುದು.
  • ದೀರ್ಘ ಪ್ರಯಾಣಗಳಲ್ಲಿ ಯಾವಾಗಲೂ ನಿಮ್ಮೊಂದಿಗೆ ನೀರಿನ ಬಾಟಲಿಯನ್ನು ಕೊಂಡೊಯ್ಯಿರಿ ಮತ್ತು ಆಗಾಗ್ಗೆ ಸಣ್ಣ ವಿರಾಮಗಳನ್ನು ತೆಗೆದುಕೊಳ್ಳಿ. ಬಾಯಾರಿಕೆಯಾಗುವವರೆಗೂ ಕಾಯುವ ಬದಲು ಆಗಾಗ್ಗೆ ನೀರು ಕುಡಿಯಿರಿ. ಹೆಚ್ಚುವರಿಯಾಗಿ, ಶಕ್ತಿಯನ್ನು ಕಾಪಾಡಿಕೊಳ್ಳಲು ORS ಅಥವಾ ಎಳನೀರನ್ನು ಸಹ ಕುಡಿಯಬಹುದು.
  • ಬಿಸಿಲಿನ ಶಾಖದಲ್ಲಿ ದ್ವಿಚಕ್ರ ವಾಹನ ಚಲಾಯಿಸುವಾಗ ತಲೆತಿರುಗುವಿಕೆ, ಅತಿಯಾದ ಬೆವರುವಿಕೆ, ತಲೆನೋವು ಅಥವಾ ಹಠಾತ್ ಆಯಾಸ ಕಂಡುಬಂದರೆ, ಅವುಗಳನ್ನು ನಿರ್ಲಕ್ಷಿಸಬೇಡಿ. ಇವು ಶಾಖದ ಹೊಡೆತದ ಆರಂಭಿಕ ಲಕ್ಷಣಗಳಾಗಿರಬಹುದು. ಈ ಲಕ್ಷಣಗಳು ಕಂಡುಬಂದರೆ, ತಕ್ಷಣ ನಿಲ್ಲಿಸಿ ನೆರಳಿನ ಅಥವಾ ತಂಪಾದ ಸ್ಥಳದಲ್ಲಿ ವಿಶ್ರಾಂತಿ ಪಡೆಯಿರಿ.
  • ಬೇಸಿಗೆಯಲ್ಲಿ ಸರಿಯಾದ ಬಟ್ಟೆಗಳನ್ನು ಆಯ್ಕೆ ಮಾಡುವುದು ಬಹಳ ಮುಖ್ಯ.  ದಪ್ಪ ಚರ್ಮ ಅಥವಾ ಭಾರವಾದ ಬಟ್ಟೆಯ ಜಾಕೆಟ್‌ಗಳ ಬದಲಿಗೆ, ಮೆಶ್ ರೈಡಿಂಗ್ ಜಾಕೆಟ್‌ಗಳನ್ನು ಧರಿಸಿ. ಇವು ಗಾಳಿಯನ್ನು ಪ್ರಸಾರ ಮಾಡಲು ಅನುಮತಿಸುವ ಸಣ್ಣ ರಂಧ್ರಗಳನ್ನು ಹೊಂದಿರುತ್ತವೆ ಮತ್ತು ಸುರಕ್ಷತಾ ರಕ್ಷಾಕವಚವನ್ನು ಸಹ ಹೊಂದಿವೆ.
  • ಗಾಢ ಬಣ್ಣಗಳು ಸೂರ್ಯನ ಬೆಳಕನ್ನು ಆಕರ್ಷಿಸುತ್ತವೆ, ಆದ್ದರಿಂದ ಯಾವಾಗಲೂ ಸೂರ್ಯನ ಬೆಳಕನ್ನು ಪ್ರತಿಬಿಂಬಿಸುವ ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಿ. ಯಾವಾಗಲೂ ಪೂರ್ಣ ತೋಳಿನ ಟಿ-ಶರ್ಟ್ ಧರಿಸಿ. ಹೆಚ್ಚು ಬಿಸಿಯಾಗದ ಮತ್ತು ಆರಾಮದಾಯಕವಾದ ಬೂಟುಗಳನ್ನು ಧರಿಸಿ.
  • ಬಿಸಿಲಿನಲ್ಲಿ ದೀರ್ಘಕಾಲ ಬೈಕ್ ಓಡಿಸುವುದರಿಂದ ಚರ್ಮಕ್ಕೆ ಹಾನಿಯಾಗುತ್ತದೆ. ವಿಶೇಷವಾಗಿ ಕೈಗಳು ಕಂದು ಬಣ್ಣಕ್ಕೆ ತಿರುಗುತ್ತವೆ. ಆದ್ದರಿಂದ, ಬೈಕ್ ಸವಾರಿ ಮಾಡುವಾಗ, ಹತ್ತಿ ಅಥವಾ ತಿಳಿ ಬಟ್ಟೆಯ ಕೈಗವಸುಗಳನ್ನು ಧರಿಸಿ ಮತ್ತು ಕೈಗಳಿಗೆ ಸನ್‌ಸ್ಕ್ರೀನ್ ಹಚ್ಚಿಕೊಳ್ಳಿ.
  • ಪ್ರಕಾಶಮಾನವಾದ ಸೂರ್ಯನ ಬೆಳಕು ಮತ್ತು UV ಕಿರಣಗಳಿಂದ ನಿಮ್ಮ ಕಣ್ಣುಗಳನ್ನು ರಕ್ಷಿಸಲು, ಉತ್ತಮ ಗುಣಮಟ್ಟದ ಸನ್ಗ್ಲಾಸ್ ಧರಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:02 pm, Sun, 3 May 26

Source link

ನಟ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು? – Kannada News | Actor sudeep helicopter Landing in DCM DK Shivakumar helipad In Sindhanur

ರಾಯಚೂರು, (ಮೇ 03): ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್(actor sudeep) , ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಇತರೆ ನಾಯಕರು ಭಾಗವಹಿಸಿದ್ದು, ನವದಂಪತಿಗಳಿಗೆ ಶುಭ ಹಾರೈಸಿದರು. ಆದ್ರೆ, ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹೆಲಿಕಾಪ್ಟರ್​​ ಲ್ಯಾಂಡಿಂಗ್​​ಗೆ ನಿಗದಿಯಾಗಿದ್ದ ಹೆಲಿಪ್ಯಾಡ್​​ ನಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡ್ ಆಗಿರುವ ಘಟನೆ ನಡೆದಿದೆ.

ಸಿಂಧನೂರು ನಗರದ ಸರ್ಕಾರಿ ಕಾಲೇಜಿನಲ್ಲಿ ಡಿಸಿಎಂ, ನಟ ಸುದೀಪ್ ಸೇರಿ 3 ಪ್ರತ್ಯೇಕ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಆದ್ರೆ, ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮೊದಲು ಬಂದ ನಟ ಸುದೀಪ್ ಇದ್ದ ಹೆಲಿಕಾಪ್ಟರ್, ಡಿಸಿಎಂಗೆ ನಿಗದಿಯಾಗಿದ್ದ ಸ್ಥಳದಲ್ಲಿ ಲ್ಯಾಂಡ್ ಆಗಿದೆ. ಬಳಿಕ ಎಚ್ಚೆತ್ತ ಪೊಲೀಸರು, ಹೆಲಿಕಾಪ್ಟರ್ ರೀ ಲ್ಯಾಂಡಿಂಗ್‌ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ತಮಗೆ ನಿಗದಿಪಡಿಸಿದ್ದ ಹೆಲಿಪ್ಯಾಡ್​​ನಲ್ಲಿ ಸುದೀಪ್ ಹೆಲಿಕಾಪ್ಟರ್ ರೀ ಲ್ಯಾಂಡಿಂಗ್‌ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

UPSSSC Recruitment: 708 ಅರಣ್ಯ ಮತ್ತು ವನ್ಯಜೀವಿ ರಕ್ಷಕ ಹುದ್ದೆಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು! – Kannada News | UPSSSC Forest and Wildlife Guard Recruitment 2026: 708 Vacancies, Apply Now!

ವನ್ಯಜೀವಿ ರಕ್ಷಕ ಹುದ್ದೆImage Credit source: Naturesafariindia

ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಉತ್ತರ ಪ್ರದೇಶ ಅಧೀನ ಸೇವೆಗಳ ಆಯ್ಕೆ ಆಯೋಗವು (UPSSSC) ಅರಣ್ಯ ರಕ್ಷಕ ಮತ್ತು ವನ್ಯಜೀವಿ ರಕ್ಷಕ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 708 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಿದೆ.

ಹುದ್ದೆಗಳ ವರ್ಗೀಕರಣ:

ಈ ನೇಮಕಾತಿಯಲ್ಲಿ ಅರಣ್ಯ ರಕ್ಷಕ ಮತ್ತು ವನ್ಯಜೀವಿ ರಕ್ಷಕ ಎಂಬ ಎರಡು ಪ್ರಮುಖ ವಿಭಾಗಗಳಿವೆ. ಅರಣ್ಯ ರಕ್ಷಕ ವಿಭಾಗದಲ್ಲಿ ಸಾಮಾನ್ಯ ಆಯ್ಕೆಗೆ 318 ಮತ್ತು ವಿಶೇಷ ಆಯ್ಕೆಗೆ 329 ಹುದ್ದೆಗಳನ್ನು ಮೀಸಲಿಡಲಾಗಿದೆ. ಅದೇ ರೀತಿ ವನ್ಯಜೀವಿ ರಕ್ಷಕ ವಿಭಾಗದಲ್ಲಿ ಸಾಮಾನ್ಯ ವರ್ಗಕ್ಕೆ 10 ಮತ್ತು ವಿಶೇಷ ವರ್ಗಕ್ಕೆ 51 ಹುದ್ದೆಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಆಸಕ್ತಿಯ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಭಾರತೀಯ ನಾಗರಿಕರಾಗಿರಬೇಕು ಮತ್ತು ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ PET-2025 ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮಾತ್ರ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಯೋಮಿತಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳು 18 ರಿಂದ 40 ವರ್ಷದೊಳಗಿರಬೇಕು. ಸರ್ಕಾರದ ನಿಯಮದಂತೆ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಆಯ್ಕೆ ಪ್ರಕ್ರಿಯೆಯ ಹಂತಗಳು:

ಆಯ್ಕೆ ಪ್ರಕ್ರಿಯೆಯು ಬಹಳ ವ್ಯವಸ್ಥಿತವಾಗಿದ್ದು, ಅಭ್ಯರ್ಥಿಗಳನ್ನು ಮೊದಲು ಅವರ PET-2025 ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ 100 ಅಂಕಗಳ ಲಿಖಿತ ಪರೀಕ್ಷೆ ನಡೆಯಲಿದ್ದು, ಇದರಲ್ಲಿ ನಕಾರಾತ್ಮಕ ಅಂಕಗಳ (Negative Marking) ವ್ಯವಸ್ಥೆ ಇರುತ್ತದೆ. ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ದೈಹಿಕ ಪರೀಕ್ಷೆ ನಡೆಸಲಾಗುವುದು. ಇದರಲ್ಲಿ ಪುರುಷರು 25 ಕಿ.ಮೀ ಮತ್ತು ಮಹಿಳೆಯರು 14 ಕಿ.ಮೀ ದೂರವನ್ನು ಕ್ರಮಿಸುವ ಸಾಮರ್ಥ್ಯ ಹೊಂದಿರಬೇಕು. ಅಂತಿಮವಾಗಿ ವೈದ್ಯಕೀಯ ಪರೀಕ್ಷೆಯ ನಂತರ ನೇಮಕಾತಿ ಪೂರ್ಣಗೊಳ್ಳುತ್ತದೆ.

ಅರ್ಜಿ ಸಲ್ಲಿಕೆ ಮತ್ತು ಶುಲ್ಕ:

ಆಸಕ್ತ ಅಭ್ಯರ್ಥಿಗಳು UPSSSC ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಬೇಕು. ವಿಶೇಷವೆಂದರೆ ಈ ನೇಮಕಾತಿಗೆ ಯಾವುದೇ ಭಾರಿ ಮೊತ್ತದ ಅರ್ಜಿ ಶುಲ್ಕವಿಲ್ಲ, ಕೇವಲ  25ರೂ. ಸಂಸ್ಕರಣಾ ಶುಲ್ಕವನ್ನು ಪಾವತಿಸಿದರೆ ಸಾಕಾಗುತ್ತದೆ. ಅಭ್ಯರ್ಥಿಗಳು ತಮ್ಮ PET-2025 ನೋಂದಣಿ ಸಂಖ್ಯೆಯನ್ನು ಬಳಸಿ ಲಾಗಿನ್ ಆಗುವ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಿ, ಮುಂದಿನ ಉಲ್ಲೇಖಕ್ಕಾಗಿ ಪ್ರತಿಯನ್ನು ಮುದ್ರಿಸಿಕೊಳ್ಳಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:45 pm, Sun, 3 May 26

Source link