Headlines

ಕೋಲಾರದ ರೇಷ್ಮೆ ಬೆಳೆಗಾರರಿಗೆ ತಟ್ಟಿದ ಬಿಸಿಲ ಧಗೆ: ಗೂಡು ಕಟ್ಟದ ಹುಳುಗಳು; ತಾಪಮಾನ ನಿಯಂತ್ರಣಕ್ಕೆ ಹರಸಾಹಸ – Kannada News | Kolar Silk Farmers Battle Heatwave: Cocoon Production and Income Hit Hard

ಕೋಲಾರ, ಮೇ 03: ರಾಜ್ಯದಲ್ಲಿ ಈ ವರ್ಷ ಏರಿಕೆಯಾಗುತ್ತಿರುವ ಭೀಕರ ಬಿಸಿಲಿನ (Heatwave) ತಾಪಮಾನವು ಕೇವಲ ಜನಸಾಮಾನ್ಯರನ್ನಷ್ಟೇ ಅಲ್ಲ, ರೇಷ್ಮೆ (Silk) ಬೆಳೆಗಾರರ ಬದುಕಿನ ಮೇಲೂ ಬರೆ ಎಳೆದಿದೆ. ಹಗಲಿನಲ್ಲಿ 37 ರಿಂದ 38 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಿರುವ ತಾಪಮಾನ, ಸೂಕ್ಷ್ಮವಾದ ರೇಷ್ಮೆ ಹುಳುಗಳ ಪಾಲಿಗೆ ಮಾರಕವಾಗಿ ಪರಿಣಮಿಸಿದೆ. ರೇಷ್ಮೆ ಹುಳುಗಳು ಆರೋಗ್ಯವಾಗಿ ಬೆಳೆದು ಗೂಡು ಕಟ್ಟಲು ಕೊಠಡಿಯ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿರಬಾರದು. ಆದರೆ, ಹೊರಗಿನ ಉಷ್ಣಾಂಶ ಮಿತಿ ಮೀರುತ್ತಿರುವುದು ರೈತರನ್ನು ತೀವ್ರ ಆತಂಕಕ್ಕೆ…

Read More

Karnataka Power Tussle: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕದನಕ್ಕೆ ಮತ್ತೊಂದು ತಿರುವು – Kannada News | Karnataka Power Tussle: Siddaramaiah Team Hits back at DK Shivakumar Gang to CM Post

ಬೆಂಗಳೂರು (ಮೇ.3): ರಾಜ್ಯ ಕಾಂಗ್ರೆಸ್​ನಲ್ಲಿ ನಾಯಕತ್ವ ಬದಲಾವಣೆ (Karnataka Power Tussle) ವಿಚಾರ ಕೋಲಾಹಲವನ್ನೇ ಸೃಷ್ಟಿಸಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವೇಳೆ ಹೈಕಮಾಂಡ್ (High Command)​​ ಜೊತೆ ಪವರ್ ಶೇರಿಂಗ್ ಚರ್ಚೆ ನಡೆದಿತ್ತು ಎನ್ನಲಾಗ್ತಿದ್ದು, ಮೇ ತಿಂಗಳಲ್ಲೇ ಮುಖ್ಯಮಂತ್ರಿ ಬದಲಾವಣೆ ಎಂದು ಕಾಂಗ್ರೆಸ್​ ಒಂದು ಬಣದ ಟೀಮ್​ ಹೇಳ್ತಿದೆ. ಸಿಎಂ ಕುರ್ಚಿ ಕಚ್ಚಾಟದ ಗೊಂದಲನ ನಡುವೆ ಸಿಎಂ ಪಟ್ಟಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೆಸರು ತೇಲಿಬಂದಿದೆ. ಪಟ್ಟದಾಟದಲ್ಲಿ ಕಳೆದ ನಾಲ್ಕು ದಿನದಿಂದ…

Read More

ಕಲೆ, ಪಾಚಿ ಕಟ್ಟಿದ ಪ್ಲಾಸ್ಟಿಕ್‌ ಬಕೆಟ್‌ಗಳನ್ನು ನಿಮಿಷದಲ್ಲೇ ಕ್ಲೀನ್‌ ಮಾಡುತ್ತೆ ಈ ಮನೆಮದ್ದು – Kannada News | These home remedies can help you clean stains stuck on plastic buckets and mugs

ಸಾಮಾನ್ಯವಾಗಿ ಪ್ರತಿ ಮನೆಗಳಲ್ಲೂ ಬಾತ್‌ರೂಮ್‌ಗಳಲ್ಲಿ ಪ್ಲಾಸ್ಟಿಕ್‌ ಬಕೆಟ್‌ (plastic buckets), ಮಗ್‌ಗಳನ್ನೇ ಬಳಸುವುದು. ಇವುಗಳ ನಿರಂತರ ಬಳಕೆಯಿಂದಾಗಿ, ಬಕೆಟ್‌ಗಳ ಹೊಳಪು ಕಳೆದುಹೋಗುತ್ತದೆ ಮತ್ತು ಅದರ ಮೇಲೆ ಹಳದಿ ಬಣ್ಣದ ಕೊಳೆ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ, ಬಕೆಟ್ ತುಂಬಾ ಕೊಳಕಾಗಿ ಕಾಣುತ್ತದೆ. ಹಾಗಾಗಿ ಇವುಗಳನ್ನು ಸ್ವಚ್ಛಗೊಳಿಸಲು ಹೆಚ್ಚಿನವರು ದುಬಾರಿ ಕ್ಲೀನರ್‌ಗಳ ಮೊರೆ ಹೋಗುತ್ತಾರೆ. ಆದರೆ ಇವುಗಳು ಅಷ್ಟು ಪರಿಣಾಮಕಾರಿಯಾಗಿ ಬಕೆಟ್‌ಗಳ ಕೊಳೆಗಳನ್ನು ತೆಗೆದುಹಾಕುವುದಿಲ್ಲ. ಬಕೆಟ್‌ನ ಮೂಲ ಹೊಳಪು ಹೆಚ್ಚಾಗಿ ಹಿಂತಿರುಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಈ ಕೆಲವು ಸರಳ ಮನೆಮದ್ದುಗಳನ್ನು ಬಳಸಿಕೊಂಡು…

Read More

GT vs PBKS: ಮೊದಲ ಓವರ್​ನಲ್ಲೇ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಿತ್ತ ಸಿರಾಜ್ – Kannada News | IPL 2026: Mohammed Siraj’s Explosive Start Rocks Punjab Kings with 2 Wickets in 3 Balls

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 46ನೇ ಪಂದ್ಯದಲ್ಲಿ ಗುಜರಾತ್ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ತಂಡಕ್ಕೆ ಗುಜರಾತ್ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಓವರ್​ನಲ್ಲೇ ಎರಡೆರಡು ಆಘಾತ ನೀಡಿದರು. ಸಿರಾಜ್ ತಮ್ಮ ಓವರ್​ನ ಮೊದಲ ಮೂರು ಎಸೆತಗಳಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸಿದರು. ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಸಿರಾಜ್ ವಿಕೆಟ್ ಪಡೆಯಬಹುದಿತ್ತು, ಆದರೆ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಅನ್ನು ಹಿಡಿಯುವಲ್ಲಿ…

Read More

ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ; ಸಚಿವ ಪ್ರಲ್ಹಾದ ಜೋಶಿ – Kannada News | BJP Candidate Jeevaraj Win In Sringeri Postal Ballots Recount Says pralhad joshi

ನವದೆಹಲಿ, (ಮೇ 03): ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮರು ಮತ ಎಣಿಕೆಯಲ್ಲಿ (Sringeri Postal Ballots Recount) ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು ಸಾಧಿಸಿರುವ ಸಾಧ್ಯತೆ ಸ್ಪಷ್ಟವಾಗಿದೆ. ಕೂಡಲೇ ಫಲಿತಾಂಶ ಘೋಷಣೆ ಆಗಬೇಕು.ತಕ್ಷಣ ಫಲಿತಾಂಶ ಘೋಷಿಸದಿದ್ದರೆ ಅವಾಂತರಗಳಿಗೆ ಚುನಾವಣಾಧಿಕಾರಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಎಂದು ಎಚ್ಚರಿಸಿದ್ದಾರೆ. ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಅಂಚೆ ಮತ ಎಣಿಕೆ ಎಡವಟ್ಟಿನಿಂದ ಈಗಾಗಲೇ…

Read More

ಟಿ20 ವೃತ್ತಿಜೀವನದಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ಪ್ಯಾಟ್ ಕಮ್ಮಿನ್ಸ್ – Kannada News | Pat Cummins’ Costliest T20 Over: Finn Allen’s 27 Run Assault in KKR vs SRH IPL 2026

ಹೈದರಾಬಾದ್‌ನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧದ ಐಪಿಎಲ್ 2026 ರ 45 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ 166 ರನ್‌ಗಳ ಗುರಿಯನ್ನು ಬೆನ್ನಟ್ಟಿ ಸುಲಭ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಕೆಕೆಆರ್ ಆರಂಭಿಕ ಆಟಗಾರ ಫಿನ್ ಅಲೆನ್, ಸನ್‌ರೈಸರ್ಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲ್ ಮಾಡಿದ ನಾಲ್ಕನೇ ಓವರ್‌ನಲ್ಲಿ ಬರೋಬ್ಬರಿ 27 ರನ್ ಕಲೆಹಾಕಿದರು. ಕಮ್ಮಿನ್ಸ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ ಆರು ರನ್‌ಗಳನ್ನು ಬಿಟ್ಟುಕೊಟ್ಟರು, ಆದರೆ ಎರಡನೇ ಓವರ್‌ನಲ್ಲಿ ದುಬಾರಿಯಾದರು. ಆ ಓವರ್ ವೈಡ್‌ನೊಂದಿಗೆ…

Read More

ರಣಬಿಸಿಲಲ್ಲೂ ನಳನಳಿಸಿದ ‘ದಿಲ್ ಖುಷ್’: ವಿಶಿಷ್ಟ ತಳಿಯ ದ್ರಾಕ್ಷಿಗೆ ಭಾರೀ ಡಿಮ್ಯಾಂಡ್; ರೈತರು ಖುಷಿಯೋ ಖುಷಿ – Kannada News | Chikkaballapur Grapes: Dil Khush Variety Boosts Farmer Profits with High Demand

ಚಿಕ್ಕಬಳ್ಳಾಪುರ ಜಿಲ್ಲೆಯೂ ಹಣ್ಣು, ತರಕಾರಿ ಮತ್ತು ದ್ರಾಕ್ಷಿ ಬೆಳೆಗೆ ರಾಜ್ಯದಲ್ಲೇ ಹೆಸರುವಾಸಿಯಾಗಿದೆ. ಈ ಬಾರಿ ಜಿಲ್ಲೆಯಾದ್ಯಂತ ಬರೋಬ್ಬರಿ 5,000 ಹೆಕ್ಟೇರ್ ಪ್ರದೇಶದಲ್ಲಿ ವೈವಿಧ್ಯಮಯ ದ್ರಾಕ್ಷಿ ಬೆಳೆಯಲಾಗುತ್ತಿದೆ. ದಿಲ್ ಖುಷ್​ ಎಂಬ ವಿಶೇಷ ತಳಿಗೆ ಸದ್ಯ ಭಾರೀ ಬೇಡಿಕೆ ಬಂದಿದೆ. ಹಾಗಾಗಿ ರೈತರು ಮಂದಹಾಸ ಬೀರಿದ್ದಾರೆ. ರಣ ಬಿಸಿಲಿನ ನಡುವೆಯೂ, ವಿಶೇಷವಾಗಿ ‘ದಿಲ್ ಖುಷ್’ ತಳಿಯ ದ್ರಾಕ್ಷಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಬಂದಿದೆ. ಸದ್ಯ ಈ ವಿಶಿಷ್ಟ ತಳಿಯ ದ್ರಾಕ್ಷಿಯು ಮಾರುಕಟ್ಟೆಯಲ್ಲಿ ಹೆಚ್ಚು ಆಕರ್ಷಣೆ ಪಡೆದುಕೊಂಡಿದೆ. ದ್ರಾಕ್ಷಿ ಬೆಳೆಗಾರರಿಗೆ…

Read More

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ – Kannada News | Delhi Fire Tragedy: PM Modi Announces Rs 2 Lakh Compensation for Vivek Vihar Victims

ನವದೆಹಲಿ, ಮೇ 3: ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಬಹುಮಹಡಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire accident) ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ. ಭಾನುವಾರ ಬೆಳಗಿನ ಜಾವ ನಡೆದ ಈ ದಾರುಣ ಘಟನೆಯಲ್ಲಿ ಒಟ್ಟು 9 ಮಂದಿ ಸಾವನ್ನಪ್ಪಿದ್ದು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಈ ಧನಸಹಾಯವನ್ನು ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000…

Read More

SRH vs KKR: ಬಲಿಷ್ಠ ಸನ್‌ರೈಸರ್ಸ್​ಗೆ ಸೋಲುಣಿಸಿದ ಕೆಕೆಆರ್ – Kannada News | IPL 2026 Match 45: KKR Dominates SRH at Home, Secures Third Victory

ಐಪಿಎಲ್ 2026 (IPL 2026) ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (SRH vs KKR)​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಅವರ ನೆಲದಲ್ಲೇ ಮಣಿಸಿದ ಕೆಕೆಆರ್ ಈ ಆವೃತ್ತಿಯಲ್ಲಿ ಮೂರನೇ ಗೆಲುವು ದಾಖಲಿಸಿತು. ಇತ್ತ ಸತತ ಗೆಲುವುಗಳಿಂದ ಬೀಗುತ್ತಿದ್ದ ಸನ್‌ರೈಸರ್ಸ್ ಲೀಗ್​ನಲ್ಲಿ 4ನೇ ಸೋಲು ಎದುರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ 165 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ…

Read More

ಕರ್ನಾಟಕ ಹವಾಮಾನ ವರದಿ: ಇಂದಿನಿಂದ ಮೇ 9ರವರೆಗೆ ಬೆಂಗಳೂರು ಸೇರಿ ರಾಜ್ಯದಲ್ಲಿ ಮಳೆ – Kannada News | Karnataka Rain Alert: IMD Forecasts Thunderstorms in Bengaluru, South Interior from May 3–9

ಬೆಂಗಳೂರು, ಮೇ 03: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪದ ನಡುವೆಯೇ ಹವಾಮಾನ ಇಲಾಖೆ ಮಳೆ (Rain) ಮುನ್ಸೂಚನೆ ನೀಡಿದೆ. ಮೇ 3ರಿಂದ 09ರವಗರೆ ಬೆಂಗಳೂರು (bangaluru) ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಮತ್ತು ಬಿರುಗಾಳಿ ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಉಳಿದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ…

Read More