Category Archives: Blog

Your blog category

ಹನಿಯೂರು ಚಂದ್ರೇಗೌಡ ಒಬ್ಬರಿಗೆ ನಟ, ಇನ್ನೊಬ್ಬರಿಗೆ ಪ್ರೊಫೆಸರ್: ತನಿಖೆ ವೇಳೆ ಸ್ಫೋಟಕ ಸತ್ಯ ಬಯಲು – Kannada News | RR Nagar Police Uncover Chandregowda’s physical Exploitation Ring, 20+ Women Victims

ಬೆಂಗಳೂರು, ಮೇ.3: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿ ಹನಿಯೂರು ಚಂದ್ರೇಗೌಡನ ಅಸಲಿ ಮುಖ ಈಗ ಬಯಲಾಗಿದೆ. ಆರ್.ಆರ್.ನಗರ ಪೊಲೀಸರ ತನಿಖೆಯ ವೇಳೆ ಈತನ ಕಾಮದಾಟದ ಸ್ಫೋಟಕ ಸತ್ಯಗಳು ಹೊರಬಂದಿವೆ. ಈ ಹಿಂದೆ ನಾನು ಬೆಂಗಳೂರಿನಲ್ಲಿ ರಾಮನಗರ ಮಕ್ಕಳ ಆಯೋಗದ ಸದಸ್ಯ ಎಂದು ಹೇಳಿಕೊಂಡು ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತನಾಗಿದ್ದ, ಇದೀಗ ತನಿಖೆಯ ವೇಳೆ ಹಲವು ಸ್ಫೋಟಕ ಸತ್ಯ ಬೆಳಕಿಗೆ ಬಂದಿದೆ.

ಆರೋಪಿ ಚಂದ್ರೇಗೌಡ ಒಂದೊಂದು ಮಹಿಳೆಗೆ ಒಂದೊಂದು ರೀತಿ ತನ್ನನ್ನು ಪರಿಚಯಿಸಿಕೊಳ್ಳುತ್ತಿದ್ದ. ಕೆಲವರಿಗೆ ತಾನು ಸೀರಿಯಲ್ ನಟ ಎಂದರೆ, ಇನ್ನು ಕೆಲವರಿಗೆ ಪ್ರೊಫೆಸರ್ ಎಂದು ಸುಳ್ಳು ಹೇಳಿ ನಂಬಿಸುತ್ತಿದ್ದ. 43 ವರ್ಷದ ಮಹಿಳೆಯೊಬ್ಬರ ಜೊತೆ ಸಂಬಂಧದಲ್ಲಿದ್ದ ಈತ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಈ ಮಹಿಳೆ ತನ್ನ ಪತಿಯಿಂದ ದೂರವಾಗಿದ್ದನ್ನು ಬಂಡವಾಳ ಮಾಡಿಕೊಂಡಿದ್ದ ಈತ, ಆಕೆಯ ಮೇಲೆ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.

ಪೊಲೀಸರು ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಬೆಚ್ಚಿ ಬೀಳುವ ವಿಷಯಗಳು ಬೆಳಕಿಗೆ ಬಂದಿವೆ. ಈತನ ಮೊಬೈಲ್‌ನಲ್ಲಿ ಹತ್ತಾರು ಮಹಿಳೆಯರ ಜೊತೆಗಿನ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳು ಪತ್ತೆಯಾಗಿವೆ. ಸದ್ಯ ಆರೋಪಿಯನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದು, ಈತನಿಂದ ಇನ್ನೂ ಎಷ್ಟು ಮಹಿಳೆಯರು ವಂಚನೆಗೊಳಗಾಗಿದ್ದಾರೆ ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ; ಯಾರಿಗಾದರೂ ಹೇಳಿದ್ರೆ ಗಂಡ-ಮಗ ರಕ್ತ ಕಾರಿ ಸಾಯ್ತಾರೆ: ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ!

ಮಹಿಳೆಯರ ವಿಡಿಯೋ, ಫೋಟೋ ಪತ್ತೆ:

ಪೊಲೀಸರು ಹನಿಯೂರು ಚಂದ್ರೇಗೌಡನ ಮೊಬೈಲ್​​​ ಪರಿಶೀಲನೆ ಮಾಡಿದಾಗ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ, ಫೋಟೋ ಪತ್ತೆಯಾಗಿವೆ. ಗಂಡನಿಂದ ದೂರವಾಗಿದ್ದ ಮಹಿಳೆ ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಗೆ ನಾನು ಲೆಕ್ಚರ್ ಎಂದು ಪರಿಚಯ ಮಾಡಿಕೊಂಡಿದ್ದ. ನನಗೆ ಡಿವೋರ್ಸ್ ಆಗಿದ್ದು, ನಿನ್ನನ್ನು ಮದುವೆ ಆಗುತ್ತೇನೆಂದು ನಂಬಿಸಿ ಆಕೆಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದ. ಖಾಸಗಿ ಕ್ಷಣವನ್ನು ವಿಡಿಯೋ ಮಾಡಿಕೊಂಡಿದ್ದ ಚಂದ್ರೇಗೌಡ ಅದನ್ನು ಇಟ್ಟುಕೊಂಡು ಮಹಿಳೆಗೆ ಹೆದರಿಸಿ ಆಕೆಯಿಂದ 5 ಲಕ್ಷ ಹಣ ಪಡೆದಿದ್ದ ಎಂದು ದೂರಲಾಗಿದೆ. ಈ ಬಗ್ಗೆ ಮಹಿಳೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಳು. ಇದೀಗ ಈ ಕುರಿತು ತನಿಖೆ ನಡೆಸುವಾಗ ಮಹತ್ವದ ಸುಳಿವು ಸಿಕ್ಕಿದೆ.

ರಾಜ್ಯದ ಸದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾವು ಬೇಕೇ ಮಾವು! ಒಂದೇ ಸೂರಿನಡಿ ಬಗೆಬಗೆಯ ಮಾವಿನ ಹಣ್ಣುಗಳ ಮಾರಾಟ ಹೇಗಿದೆ ನೋಡಿ – Kannada News | Dharwad Mango Mela: Farmers Direct Sale to End Broker Menace and Offer Chemical Free Mangoes

ಸಾಮಾನ್ಯವಾಗಿ ದಲ್ಲಾಳಿಗಳು ರೈತರಿಂದ ಕಡಿಮೆ ಬೆಲೆಗೆ ಹಣ್ಣುಗಳನ್ನು ಖರೀದಿಸಿ, ಗ್ರಾಹಕರಿಗೆ ದುಬಾರಿ ದರಕ್ಕೆ ಮಾರಾಟ ಮಾಡುತ್ತಾರೆ. ಇದರಿಂದ ರೈತರಿಗೆ ಲಾಭ ಸಿಗುತ್ತಿರಲಿಲ್ಲ. ಈಗ ಧಾರವಾಡದ ಮಾವು ಬೆಳೆಗಾರರ ಬಳಗವು ನೇರವಾಗಿ ಗ್ರಾಹಕರಿಗೆ ಹಣ್ಣು ತಲುಪಿಸುವ ಮೂಲಕ ಈ ಮಧ್ಯವರ್ತಿಗಳ ವ್ಯವಸ್ಥೆಯನ್ನು ತಪ್ಪಿಸಿದೆ. ಇದರಿಂದ ಲಾಭಾಂಶವು ನೇರವಾಗಿ ರೈತರ ಕೈ ಸೇರುತ್ತಿದೆ.

Source link

ಯಾರಿಗಾದರೂ ಹೇಳಿದ್ರೆ ಗಂಡ-ಮಗ ರಕ್ತ ಕಾರಿ ಸಾಯ್ತಾರೆ: ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ! – Kannada News | Bengaluru: ‘Pooja’ Pretext for Astrologer’s physical harassment, Beautician Victim Files Police Complaint

ಬೆಂಗಳೂರು, ಮೇ.3: ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಂಡ ಮತ್ತು ಮಗನ ಮೇಲೆ ವಾಮಾಚಾರ ಮಾಡಿಸಿ ಅವರು ರಕ್ತ ಕಾರಿ ಸಾಯುವಂತೆ ಮಾಡುವುದಾಗಿ ಬೆದರಿಸಿ ಆರೋಪಿ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಹಿಳೆ ದೂರು ಕೂಡ ನೀಡಿದ್ದಾರೆ. ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಮಹಿಳೆಗೆ, ತನ್ನ ಸಹೋದರಿಯ ಅಡ್ಮಿಷನ್ ನೆಪದಲ್ಲಿ ಆರೋಪಿ ಮೋಹನ್ ಕುಮಾರ್ ಎಂಬಾತ ಪರಿಚಯವಾಗಿದ್ದ.

ಮಹಿಳೆಯ ಆರ್ಥಿಕ ಅಭಿವೃದ್ಧಿಗೆ ಪೂಜೆ ಮಾಡಿಸಬೇಕು ಎಂದು ನಂಬಿಸಿದ್ದ ಆರೋಪಿ, 2025ರ ಜನವರಿ 30ರಂದು ರಾಮನಗರದ ಪಿರಮಿಡ್ ವ್ಯಾಲಿಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದ. ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗೆಂದು ಕರೆದೊಯ್ದು ವಾಪಸ್ಸಾಗುವಾಗ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕುಟುಂಬದ ಮೇಲೆ ಮಾಟ-ಮಂತ್ರ ಮಾಡಿಸುವುದಾಗಿ ಹೆದರಿಸಿದ್ದ.

ಇದನ್ನೂ ಓದಿ: ಹೊಸ ಮನೆ ಕಟ್ಟುವ ಆಸೆ ಮಣ್ಣುಪಾಲು; ಗೋಡೆ ಕುಸಿದು ಮಾಲೀಕ ಸ್ಥಳದಲ್ಲೇ ಸಾವು!

ಫೆಬ್ರವರಿ 10ರಂದು ದೀಕ್ಷೆ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದಿದ್ದ ಜ್ಯೋತಿಷಿ, ಗಂಡ ಮತ್ತು ಮಗನನ್ನು ಮನೆಯಿಂದ ಹೊರಗೆ ಕಳುಹಿಸಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ತಾನು ಹೇಳಿದಂತೆ ಕೇಳದಿದ್ದರೆ ಕುಟುಂಬವನ್ನೇ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಆರೋಪಿ ಮೋಹನ್ ಕುಮಾರ್ ಕಾಟ ತಾಳಲಾರದೆ ಮಹಿಳೆ ಈಗ ಪೊಲೀಸರ ಮೊರೆ ಹೋಗಿದ್ದಾರೆ. ಸಿ.ಕೆ. ಅಚ್ಚುಕಟ್ಟು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

CSK vs MI: ಇದು ನಮ್ಮ ಸೀಸನ್ ಅಲ್ಲ: ಸಿಎಸ್​ಕೆ ವಿರುದ್ಧದ ಸೋಲಿನ ನಂತರ ದುಃಖಿತರಾದ ಹಾರ್ದಿಕ್ ಪಾಂಡ್ಯ – Kannada News | Hardik Pandya Post Match Statement after loss vs CSK He said This is not our season

ಬೆಂಗಳೂರು (ಮೇ. 03): ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಕಮ್​ಬ್ಯಾಕ್ ಮಾಡಿದಂತೆ ಕಾಣುತ್ತಿದೆ. ಶನಿವಾರ ನಡೆದ 44 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅನ್ನು 8 ವಿಕೆಟ್‌ಗಳಿಂದ ಸೋಲಿಸಿ ಸಿಎಸ್​ಕೆ ಮತ್ತೊಂದು ಗೆಲುವು ಕಂಡಿತು. ಈ ಋತುವಿನಲ್ಲಿ ಚೆನ್ನೈ ಮುಂಬೈಯನ್ನು ಸೋಲಿಸಿದ್ದು ಇದು ಎರಡನೇ ಬಾರಿ. 160 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ ಕೇವಲ 18.1 ಓವರ್‌ಗಳಲ್ಲಿ ಜಯಗಳಿಸಿತು. ಈ ಸೋಲಿನೊಂದಿಗೆ, ಮುಂಬೈಗೆ ಪ್ಲೇಆಫ್‌ನ ಬಾಗಿಲು ಬಹುತೇಕ ಮುಚ್ಚಿದಂತಾಗಿದೆ. ಪಂದ್ಯದ ನಂತರ, ನಾಯಕ ಹಾರ್ದಿಕ್ ಪಾಂಡ್ಯ ಅವರ ಮುಖದಲ್ಲಿ ನಿರಾಶೆ ಸ್ಪಷ್ಟವಾಗಿ ಗೋಚರಿಸಿತು, ಅವರು ತಂಡದ ಪ್ರದರ್ಶನದ ಬಗ್ಗೆ ಅಚ್ಚರಿ ಹೇಳಿಕೆ ನೀಡಿದರು.

ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ, ಹಾರ್ದಿಕ್ ಪಾಂಡ್ಯ ತಮ್ಮ ತಂಡವು ಆಟದ ಪ್ರತಿಯೊಂದು ಅಂಶದಲ್ಲೂ ಹಿಂದುಳಿದಿದೆ ಎಂದು ಒಪ್ಪಿಕೊಂಡರು. “ಇದು ನಮ್ಮ ಸೀಸನ್ ಅಲ್ಲ. ಅವರು ನಮಗಿಂತ ಉತ್ತಮವಾಗಿ ಆಡಿದರು. ಅವರು ಉತ್ತಮವಾಗಿ ಬೌಲಿಂಗ್ ಮಾಡಿದರು, ಉತ್ತಮವಾಗಿ ಫೀಲ್ಡಿಂಗ್ ಮಾಡಿದರು ಮತ್ತು ನಮಗಿಂತ ಉತ್ತಮವಾಗಿ ಬ್ಯಾಟಿಂಗ್ ಮಾಡಿದರು” ಎಂದು ಹಾರ್ದಿಕ್ ಹೇಳಿದರು.

ಬ್ಯಾಟಿಂಗ್ ಮತ್ತು ಬೌಲಿಂಗ್​ನಲ್ಲಿ ಕಳಪೆ

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 159 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಈ ಪಿಚ್‌ನಲ್ಲಿ ನಾವು ಗಳಿಸಿದ ರನ್‌ಗಳು ತುಂಬಾ ಕಡಿಮೆ ಎಂದು ನಾಯಕ ಹೇಳಿದರು. ಬ್ಯಾಟಿಂಗ್ ಘಟಕದ ವೈಫಲ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಈ ಪಿಚ್‌ನಲ್ಲಿ 180-190 ಸ್ಕೋರ್ ಉತ್ತಮ ಮೊತ್ತವಾಗುತ್ತಿತ್ತು, ಆದರೆ ನಾವು ಲಯವನ್ನು ಕಂಡುಕೊಳ್ಳಲಿಲ್ಲ. ನಾವು ಹೆಚ್ಚು ಲೆಕ್ಕಾಚಾರದ ಕ್ರಿಕೆಟ್ ಆಡಬೇಕಾಗಿತ್ತು. ಒಟ್ಟಾರೆಯಾಗಿ, ನಾವು ಬ್ಯಾಟಿಂಗ್ ಘಟಕವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ” ಎಂದು ಒಪ್ಪಿಕೊಂಡರು.

CSK vs DC: ಸಿಎಸ್​​ಕೆ ವಿರುದ್ಧ ಸೋತ ಮುಂಬೈ ಐಪಿಎಲ್​ನಿಂದ ಭಾಗಶಃ ಔಟ್

ಬೌಲಿಂಗ್ ಬಗ್ಗೆ ಹಾರ್ದಿಕ್ ಹೇಳಿದ್ದೇನು?

ಚೆನ್ನೈ ತಂಡದ ಬ್ಯಾಟ್ಸ್‌ಮನ್‌ಗಳ ವಿರುದ್ಧ ಮುಂಬೈ ತಂಡದ ಬೌಲರ್‌ಗಳು ನಿಷ್ಪರಿಣಾಮಕಾರಿ ಎಂದು ಸಾಬೀತಾಯಿತು. ಗುರಿಯನ್ನು ರಕ್ಷಿಸುವಾಗ, ಮುಂಬೈ ಇಂಡಿಯನ್ಸ್ ತಂಡವು ಈ ಹಿಂದೆ ಗುರುತಿಸಿಕೊಂಡಿರುವಷ್ಟು ಚುರುಕುತನ ಬೌಲರ್‌ಗಳಲ್ಲಿ ಇರಲಿಲ್ಲ. ಬೌಲಿಂಗ್ ಬಗ್ಗೆ ಮಾತನಾಡಿದ ಹಾರ್ದಿಕ್, “ಬೌಲಿಂಗ್ ಘಟಕವಾಗಿ, ಅವರು ನಮಗಿಂತ ಶ್ರೇಷ್ಠರಾಗಿದ್ದರು. ನಮಗೆ ಲಭ್ಯವಿರುವ ಬೌಲಿಂಗ್ ಆಯ್ಕೆಗಳೊಂದಿಗೆ ನಾವು ಮೈದಾನಕ್ಕೆ ಇಳಿದೆವು. ಆದರೆ, ಅದು ಯಶಸ್ಸು ತಂದುಕೊಡಲಿಲ್ಲ” ಎಂದು ಹೇಳಿದರು.

ಈ ಸೋಲಿನ ನಂತರ ಮುಂಬೈನ ಪರಿಸ್ಥಿತಿ ಈಗ ಅನಿಶ್ಚಿತವಾಗಿದೆ. ಇದು 9 ಪಂದ್ಯಗಳಲ್ಲಿ ಮುಂಬೈನ 7 ನೇ ಸೋಲು, ಹಾರ್ದಿಕ್ ಪಡೆ ಕೇವಲ 4 ಅಂಕಗಳನ್ನು ಹೊಂದಿದ್ದಾರೆ. ಅವರು ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿದ್ದಾರೆ. ಇಲ್ಲಿಂದ ಅಂತಿಮ ನಾಲ್ಕರಲ್ಲಿ ಸ್ಥಾನ ಪಡೆಯಲು ಮುಂಬೈ ತಂಡದಲ್ಲಿ ಪವಾಡ ನಡೆಯಬೇಕಷ್ಟೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:03 am, Sun, 3 May 26

Source link

ಬೆಂಕಿಯ ಉಂಡೆಗಳನ್ನೇ ಎಸೆಯಬೇಕಿತ್ತೇನೋ… ಪಾಂಡ್ಯ ಅಸಹಾಯಕತೆ! – Kannada News | Hardik pandya Post Match interview after CSK vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ (MI) ಇದೀಗ ಮತ್ತೊಂದು ಸೋಲನುಭವಿಸಿದೆ. ಈ ಸೋಲಿನೊಂದಿಗೆ ಮುಂಬೈ ತಂಡದ ಪರಾಜಯದ ಸಂಖ್ಯೆ 7 ಕ್ಕೇರಿದೆ. ಚೆನ್ನೈನಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 159 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 8 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯನ ಹಾರ್ದಿಕ್ ಪಾಂಡ್ಯ, ತಂಡದ ಕಳಪೆ ಪ್ರದರ್ಶನವನ್ನು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ಇದು ಕೇವಲ ಒಂದು ರಾತ್ರಿಯ ಸೋಲಲ್ಲ, ಇಡೀ ಸೀಸನ್ ನಮಗೆ ಕಠಿಣವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಎದುರಾಳಿ ತಂಡದವರು ನಮಗಿಂತ ಉತ್ತಮವಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿದರು. ಫೀಲ್ಡಿಂಗ್‌ನಲ್ಲೂ ಮಿಂಚಿದರು. ಸೋಲಿಗೆ ಯಾವುದೇ ನೆಪ ಹೇಳಲು ಸಾಧ್ಯವಿಲ್ಲ. ಸಿಎಸ್​ಕೆ ನಮಗಿಂತ ಉತ್ತಮವಾಗಿ ಆಡಿದ್ದಾರೆ. ಅದಕ್ಕೆ ಅವರು ಗೆದ್ದಿದ್ದಾರೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಇದೇ ವೇಳೆ ತಂಡದ ಬ್ಯಾಟಿಂಗ್ ಬಗ್ಗೆ ವಿಶ್ಲೇಷಿಸಿದ ಪಾಂಡ್ಯ, ಒಂದು ಹಂತದಲ್ಲಿ ನಾವು 180 ರಿಂದ 190 ರನ್ ಗಳಿಸುವ ನಿರೀಕ್ಷೆಯಲ್ಲಿದ್ದೆವು. ಆದರೆ 10 ಓವರ್‌ಗಳ ನಂತರ ನಾವು ಲಯವನ್ನು ಕಳೆದುಕೊಂಡೆವು. ಸರಿಯಾದ ಫಿನಿಶಿಂಗ್ ನೀಡಲು ನಮ್ಮಿಂದ ಸಾಧ್ಯವಾಗಲಿಲ್ಲ. ಕ್ರೀಸ್‌ಗೆ ಬಂದ ತಕ್ಷಣ ದೊಡ್ಡ ಹೊಡೆತಗಳನ್ನು ಆಡುವುದು ಸುಲಭವಾಗಿರಲಿಲ್ಲ ಎಂದಿದ್ದಾರೆ.

ಇಲ್ಲಿ ವಿಕೆಟ್‌ಗಳನ್ನು ಕೈಯಲ್ಲಿಟ್ಟುಕೊಂಡು ಲೆಕ್ಕಾಚಾರದ ಆಟವಾಡುವುದು ಮುಖ್ಯವಾಗಿತ್ತು. ಆದರೆ ನಮ್ಮ ಬ್ಯಾಟರ್‌ಗಳಿಗೆ ಚೆಂಡನ್ನು ಸರಿಯಾಗಿ ಬೌಂಡರಿ ದಾಟಿಸಲು ಸಾಧ್ಯವಾಗಲಿಲ್ಲ. ಎದುರಾಳಿ ಬೌಲರ್‌ಗಳು ಅತ್ಯಂತ ಶಿಸ್ತುಬದ್ಧವಾಗಿ ಬೌಲಿಂಗ್ ಮಾಡಿದರು ಎಂದು ಹಾರ್ದಿಕ್ ಪಾಂಡ್ಯ ಎದುರಾಳಿ ತಂಡದ ಕಾರ್ಯತಂತ್ರವನ್ನು ಶ್ಲಾಘಿಸಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿನ ಹಿನ್ನಡೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಹಾರ್ದಿಕ್, ನಾವು ಇನ್ನೂ ಎಷ್ಟು ಆಕ್ರಮಣಕಾರಿಯಾಗಿ ಬೌಲಿಂಗ್ ಮಾಡಲು ಸಾಧ್ಯವಿತ್ತು ಎಂದು ನನಗೆ ತಿಳಿದಿಲ್ಲ. ಅವರ ವಿಕೆಟ್ ಪಡೆಯಲು ಬಹುಶಃ ನಾವು ಬೆಂಕಿಯ ಉಂಡೆಗಳನ್ನೇ ಎಸೆಯಬೇಕಿತ್ತೇನೋ!

ನಮ್ಮಲ್ಲಿ ಲಭ್ಯವಿದ್ದ ಅತ್ಯುತ್ತಮ ಬೌಲಿಂಗ್ ಆಯ್ಕೆಗಳನ್ನೇ ನಾವು ಬಳಸಿದೆವು. ಆದರೆ ಎದುರಾಳಿ ಬ್ಯಾಟರ್‌ಗಳು ಹೆಚ್ಚು ಬುದ್ಧಿವಂತಿಕೆಯಿಂದ ಆಡಿದರು ಎಂದು ಹಾರ್ದಿಕ್ ಪಾಂಡ್ಯ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: IPL 2026: ಹೀಗಾದ್ರೆ ಮಾತ್ರ ಮುಂಬೈ ಇಂಡಿಯನ್ಸ್​ ಪ್ಲೇಆಫ್ ಪ್ರವೇಶಿಸುತ್ತೆ!

ಒಟ್ಟಾರೆಯಾಗಿ, ಮುಂಬೈ ಇಂಡಿಯನ್ಸ್ ತಂಡವು ಈ ಸೀಸನ್‌ನಲ್ಲಿ ತನ್ನ ಹಳೆಯ ಲಯಕ್ಕೆ ಮರಳಲು ಕಷ್ಟಪಡುತ್ತಿರುವುದು ನಾಯಕನ ಮಾತುಗಳಲ್ಲಿ ಸ್ಪಷ್ಟವಾಗಿ ಎದ್ದು ಕಾಣುತ್ತಿತ್ತು. ಇದಾಗ್ಯೂ ಮುಂದಿನ 5 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ ಪ್ಲೇಆಫ್​ಗೆ ಪ್ರವೇಶಿಸಬಹುದು. ಆದರೆ ಇಲ್ಲಿ ಇತರೆ ತಂಡಗಳ ಫಲಿತಾಂಶ ಕೂಡ ಗಣನೆಗೆ ಬರಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಪಾಲಿಗೆ ತನ್ನ ಪಂದ್ಯಗಳು ಮತ್ತು ಇತರೆ ತಂಡಗಳ ಫಲಿತಾಂಶಗಳು ತುಂಬಾ ಮುಖ್ಯ.

Source link

Video: ಹಾವನ್ನು ಹಿಡಿದು ಚೀಲ ತುಂಬುವ ಬದಲು ಅದರೊಂದಿಗೆ ಆಟವಾಡಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ – Kannada News | Snake Handler Dies After King Cobra Bite During Handling

ಹಾವು ಹಿಡಿಯಲು ಬಂದವರು ಹಾವನ್ನು ಸುರಕ್ಷಿತವಾಗಿ ಚೀಲಕ್ಕೆ ತುಂಬುವ ಬದಲು ಅದನ್ನು ಕೆರಳಿಸಲು ಹೋಗಿ ಸಾವನ್ನಪ್ಪಿರುವ ವಿಡಿಯೋ ವೈರಲ್ ಆಗಿದೆ. ಸರ್ಪವನ್ನು ಹಿಡಿಯಲು ಬಂದ ವ್ಯಕ್ತಿ ಹಾವಿನ ತಲೆಗೆ ಲಘುವಾಗಿ ಹೊಡೆಯುತ್ತಾ ಅದನ್ನು ಕೆರಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಕಟ್ಟಡವೊಂದಕ್ಕೆ ನುಗ್ಗಿದ್ದ ಬೃಹತ್  ಸರ್ಪವನ್ನು ಹಿಡಿಯಲು ಸ್ಥಳೀಯ ಹಾವು ಹಿಡಿಯುವವನೊಬ್ಬ ಆಗಮಿಸುತ್ತಾನೆ. ಹಾವನ್ನು ಯಶಸ್ವಿಯಾಗಿ ಹಿಡಿದು ಬಯಲಿಗೆ ತಂದ ನಂತರ, ಆತ ಅದನ್ನು ಸುರಕ್ಷಿತವಾಗಿ ಚೀಲಕ್ಕೆ ತುಂಬುವ ಬದಲು ಹಾವಿನೊಂದಿಗೆ ಆಟವಾಡಲು ಶುರುಮಾಡುತ್ತಾರೆ.

ತನ್ನ ರಕ್ಷಣೆಗಾಗಿ ಹೋರಾಡಿದ ಹಾವು ಕ್ಷಣಮಾತ್ರದಲ್ಲಿ ಆ ವ್ಯಕ್ತಿಯ ಕಾಲಿಗೆ ಬಲವಾಗಿ ಕಚ್ಚುತ್ತದೆ. ವಿಷದ ತೀವ್ರತೆ ತಿಳಿದಿದ್ದರೂ, ಆತ ಆರಂಭದಲ್ಲಿ ವಿಚಿತ್ರವಾಗಿ ಹಾವು ಕಚ್ಚಿತಯ ಎಂದು ಹೇಳುತ್ತಾ ಮತ್ತೆ ಹಾವನ್ನು ಕೆಣಕುತ್ತಾನೆ. ಆದರೆ, ಕೆಲವೇ ನಿಮಿಷಗಳಲ್ಲಿ ವಿಷವು ದೇಹವಿಡೀ ಹರಡಿ ಆತ ಪ್ರಾಣ ಕಳೆದುಕೊಳ್ಳುತ್ತಾನೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Horoscope Today: ಇಂದು ಈ ರಾಶಿಯವರಿಗೆ ಇಂದು ಆರ್ಥಿಕ ಸಮಸ್ಯೆ! – Kannada News | Horoscope Today 03 May​ 2026: Dr. Basavaraj Gurujis Predictions for Zodiac Signs

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 3, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿ, ವರಿಯನ್ ಯೋಗ, ತೈತಲ ಕರಣ ಮತ್ತು ಅನುರಾಧ ನಕ್ಷತ್ರವಿರುವ ಈ ದಿನದ ವಿಶೇಷಗಳನ್ನು ಗುರೂಜಿ ವಿವರಿಸಿದ್ದಾರೆ. ಈ ದಿನ ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಪ್ರತಿಯೊಂದು ರಾಶಿಯವರಿಗೆ ಆರ್ಥಿಕ ಪ್ರಗತಿ, ಆರೋಗ್ಯ, ಉದ್ಯೋಗ, ವೈಯಕ್ತಿಕ ಸಂಬಂಧಗಳು, ಮತ್ತು ಇತರ ಜೀವನದ ವಿವಿಧ ಕ್ಷೇತ್ರಗಳ ಮೇಲೆ ಆಗುವ ಪರಿಣಾಮಗಳನ್ನು ವಿಶ್ಲೇಷಿಸಲಾಗಿದೆ.

 

 

 

Source link

Daily Devotional: ಮನೆಯಲ್ಲಿ ಶಾಶ್ವತವಾಗಿ ಹಣ ನಿಲ್ಲಲು ಇದನ್ನು ಮಾಡಿ! – Kannada News | Attract Money Permanently: Traditional Vastu Tips for Lasting Financial Flow

ಮನೆಯಲ್ಲಿ ಶಾಶ್ವತವಾಗಿ ಹಣ ನಿಲ್ಲಲು ಏನು ಮಾಡಬೇಕು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಣವು ಪ್ರತಿಯೊಬ್ಬರ ಜೀವನಕ್ಕೂ ಅವಶ್ಯಕ. ಕೆಲವರಿಗೆ ಹಣ ಸುಲಭವಾಗಿ ಬಂದರೆ, ಮತ್ತೆ ಕೆಲವರಿಗೆ ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಮನೆಯಲ್ಲಿ ಶಾಶ್ವತವಾಗಿ ಹಣವನ್ನು ಆಕರ್ಷಿಸಲು ಒಂದು ಸರಳ ತಂತ್ರವಿದೆ. ಇದು ಮಧ್ಯಮ ವರ್ಗದವರು, ಶ್ರೀಮಂತರು, ದಿನಗೂಲಿಗಳು ಸೇರಿದಂತೆ ಎಲ್ಲರಿಗೂ ಅನ್ವಯಿಸುತ್ತದೆ.

ಈ ತಂತ್ರವು ಮಣ್ಣಿನಿಂದ ಮಾಡಿದ ಒಂದು ಹುಂಡಿಯನ್ನು (ಮಣ್ಣಿನ ಕುಡಿಕೆ) ಒಳಗೊಂಡಿದೆ. ಈ ಹುಂಡಿಯನ್ನು ಮನೆಯ ನೈರುತ್ಯ ದಿಕ್ಕಿನಲ್ಲಿ ಇಡಬೇಕು. ಅದಕ್ಕೆ ಅರಿಶಿನ ಮತ್ತು ಕುಂಕುಮವನ್ನು ಹಚ್ಚಿ, ಅದರ ಮೇಲೆ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು. ನಂತರ ಅದರಲ್ಲಿ ಒಂದು ತಾಮ್ರದ ನಾಣ್ಯವನ್ನು ಹಾಕಿ, ಜೊತೆಗೆ ಇತರ ನಾಣ್ಯಗಳನ್ನು ಸೇರಿಸಬಹುದು. ಬಾಡಿಗೆ ಮನೆಯಾದರೂ, ಸ್ವಂತ ಮನೆಯಾದರೂ ಈ ನಿಯಮ ಪಾಲಿಸಬಹುದು ಎಂದು ಗುರೂಜಿ ವಿವರಿಸಿದ್ದಾರೆ.

 

 

 

Source link

IPL 2026: ಹೀಗಾದ್ರೆ ಮಾತ್ರ ಮುಂಬೈ ಇಂಡಿಯನ್ಸ್​ ಪ್ಲೇಆಫ್ ಪ್ರವೇಶಿಸುತ್ತೆ!

Source link

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! – Kannada News | Bangalore Air Pollution Crisis: Bengaluru Air quality gets better along with all places

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ!

ಬೆಂಗಳೂರು, ಮೇ 03: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ  (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಹುಬ್ಬಳ್ಳಿಯ ಏರ್ ಕ್ವಾಲಿಟಿ ಇಂದು ಕೇವಲ 73ರಷ್ಟಿದ್ದು, ಅತ್ಯಂತ ಒಳ್ಳೆಯ ಗುಣಮಟ್ಟದಲ್ಲಿದೆ. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ವಾಯು ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿತ್ತು. ಹಲವು ಬಾರಿ 200ರ ಗಡಿ ತಲುಪಿತ್ತು. ಆದರೆ ಇತ್ತೀಚೆಗೆ AQI ಸುಧಾರಣೆ ಕಂಡುಬಂದಿತ್ತು. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 110ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 110
  • ಮಂಗಳೂರು-109
  • ಮೈಸೂರು – 103
  • ಬೆಳಗಾವಿ – 68
  • ಕಲಬುರ್ಗಿ-73
  • ಶಿವಮೊಗ್ಗ –92
  • ಬಳ್ಳಾರಿ – 112
  • ಹುಬ್ಬಳ್ಳಿ- 73
  • ಉಡುಪಿ –132
  • ವಿಜಯಪುರ – 84

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link