Category Archives: Blog

Your blog category

IPL 2026: 42 ಪಂದ್ಯಗಳ ನಂತರ ಸನ್‌ರೈಸರ್ಸ್ ತಂಡಕ್ಕೆ ಅಂಬ್ರಿಶ್ ಆಗಮನ

Source link

RR vs DC IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ – Kannada News | Rajasthan Royals vs Delhi Capitals IPL 2026 Live Cricket Score RR vs DC Match on 1st May latest news in Kannada

  • 01 May 2026 07:14 PM (IST)

    RR vs DC IPL 2026: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI

    ಕೆಎಲ್ ರಾಹುಲ್ (ವಾಕ್), ಪಾತುಮ್ ನಿಸ್ಸಾಂಕ, ನಿತೀಶ್ ರಾಣಾ, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ಕೈಲ್ ಜೇಮಿಸನ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಟಿ ನಟರಾಜನ್.

  • 01 May 2026 07:13 PM (IST)

    RR vs DC IPL 2026: ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI

    ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಶುಭಂ ದುಬೆ, ಜೋಫ್ರಾ ಆರ್ಚರ್, ರವಿ ಬಿಷ್ಣೋಯ್, ನಾಂದ್ರೆ ಬರ್ಗರ್, ಬ್ರಿಜೇಶ್ ಶರ್ಮಾ.

  • 01 May 2026 07:02 PM (IST)

    RR vs DC IPL 2026: ಟಾಸ್ ಗೆದ್ದ ರಾಜಸ್ಥಾನ್

    ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

  • Source link

    ‘ಕನಸಲ್ಲೂ ಊಹಿಸಿರಲಿಲ್ಲ’; ಸೂರ್ಯವಂಶಿಯನ್ನು ಹಾಡಿ ಹೊಗಳಿದ ಕೆಎಲ್ ರಾಹುಲ್ – Kannada News | KL Rahul Praises IPL Star Vaibhav Suryavanshi, Aims to Match MS Dhoni’s Trophies

    15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಕ್ರಿಕೆಟ್ ಲೋಕದಲ್ಲಿ ಎಬ್ಬಿಸಿರುವ ಸುನಾಮಿ ಭಾರತ ಕ್ರಿಕೆಟ್​ನ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಅಂಡರ್19 ತಂಡದಲ್ಲಿ ಅಬ್ಬರಿಸಿ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ವೈಭವ್ ಸೂರ್ಯವಂಶಿ ಇದೀಗ 2026 ರ ಐಪಿಎಲ್​ನಲ್ಲಿ (IPL 2026) ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಹೃದಯಗಳನ್ನು ಗೆದ್ದಿದ್ದಾರೆ. ತಮ್ಮ ಅಬ್ಬರದ ಬ್ಯಾಟಿಂಗ್‌ ಮೂಲಕ ಇಲ್ಲಿಯವರೆಗೆ 400 ರನ್ ಗಳಿಸಿದ್ದಾರೆ. ಇಲ್ಲಿಯವರೆಗೆ 37 ಸಿಕ್ಸರ್​ಗಳನ್ನು ಹೊಡೆದಿರುವ ಸೂರ್ಯವಂಶಿ ಇದೀಗ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಭಟಿಸಲು ಸಜ್ಜಾಗಿದ್ದಾರೆ. ವಾಸ್ತವವಾಗಿ ಐಪಿಎಲ್ 2026 ರ 43ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮೊದಲು ಸೂರ್ಯವಂಶಿ ಬಗ್ಗೆ ಮಹತ್ವದ ಸಂಗತಿಯನ್ನು ಹಂಚಿಕೊಂಡಿರುವ ದೆಹಲಿ ವಿಕೆಟ್ ಕೀಪರ್ ಕೆಎಲ್ ರಾಹುಲ್ (KL Rahul), ವೈಭವ್ ಐಪಿಎಲ್‌ನಲ್ಲಿ ಎರಡು ಶತಕಗಳನ್ನು ಗಳಿಸುವ ಮೂಲಕ ಇಂತಹ ಸಾಧನೆ ಮಾಡುತ್ತಾರೆ ಎಂದು ನಾನು ಕನಸಿನಲ್ಲಿಯೂ ಊಹಿಸಿರಲಿಲ್ಲ ಎಂದಿದ್ದಾರೆ.

    ಸೂರ್ಯವಂಶಿಯನ್ನು ಹೊಗಳಿದ ರಾಹುಲ್

    ವೈಭವ್ ಸೂರ್ಯವಂಶಿ ಹೊಸ ಯುಗದ ಕ್ರಿಕೆಟಿಗ ಮತ್ತು ಅವರು ಮಾಡುತ್ತಿರುವುದು ಅದ್ಭುತವಾಗಿದೆ ಎಂದಿರುವ ಕೆ.ಎಲ್. ರಾಹುಲ್, ‘ವೈಭವ್ ಸೂರ್ಯವಂಶಿ ವಿಶ್ವ ಕ್ರಿಕೆಟ್ ಅನ್ನು ಬಿರುಗಾಳಿಯಂತೆ ತೆಗೆದುಕೊಂಡಿದ್ದಾರೆ. 15 ನೇ ವಯಸ್ಸಿನಲ್ಲಿ ಎರಡು ಶತಕಗಳನ್ನು ಬಾರಿಸುವುದನ್ನು ನಾನು ಕನಸು ಕೂಡ ಕಂಡಿಲ್ಲ. ವೈಭವ್ ಜೊತೆ ಆಯುಷ್ ಮ್ಹಾತ್ರೆ ಕೂಡ ಉತ್ತಮ ಪ್ರದರ್ಶನ ನೀಡಿದ್ದಾರೆ ಮತ್ತು ಚೆನ್ನೈ ತಂಡವು ವೇಗವಾಗಿ ರನ್ ಗಳಿಸಲು ಸಹಾಯ ಮಾಡಿದ್ದಾರೆ. ಭಾರತದಲ್ಲಿ ಉದಯೋನ್ಮುಖ ಪ್ರತಿಭೆಗಳ ಸಂಖ್ಯೆ ಆಶ್ಚರ್ಯಕರವಾಗಿದೆ. ನಾಲ್ಕೈದು ವರ್ಷಗಳ ಹಿಂದೆ, ನಮಗೆ ಸಿಕ್ಸ್-ಹಿಟ್ಟಿಂಗ್ ಆಟಗಾರರ ಕೊರತೆಯಿದೆ ಎಂಬ ಕಳವಳವಿತ್ತು. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನ ಬ್ಯಾಟಿಂಗ್‌ನಿಂದ ಎಲ್ಲರೂ ಆಶ್ಚರ್ಯಚಕಿತರಾಗಿದ್ದರು, ಆದರೆ ಇಂದು ಭಾರತೀಯ ಆಟಗಾರರು ಮುಂಚೂಣಿಯಲ್ಲಿದ್ದಾರೆ. ಇದೆಲ್ಲವೂ ಐಪಿಎಲ್‌ನಿಂದಾಗಿ. ಈ ನಿರ್ಭೀತ ಆಟಗಾರರು ಟಿ20 ಆಡುವ ವಿಧಾನವನ್ನು ಬದಲಾಯಿಸುತ್ತಿದ್ದಾರೆ ಎಂದಿದ್ದಾರೆ.

    IPL 2026: ಒಂದು ಫೋಟೋಗೆ 100 ರೂ. ಕೇಳಿದ ವೈಭವ್; ವಿಡಿಯೋ ವೈರಲ್

    ಧೋನಿಗೆ ಸರಿಸಾಟಿಯಾಗಬೇಕು- ರಾಹುಲ್

    ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಕೆ.ಎಲ್. ರಾಹುಲ್, ‘ವೈಯಕ್ತಿಕ ಮೈಲಿಗಲ್ಲುಗಳಲ್ಲಿ ಅರ್ಥವಿಲ್ಲ. ಧೋನಿಯ ಐದು ಐಪಿಎಲ್ ಪ್ರಶಸ್ತಿಗಳನ್ನು ಸರಿಗಟ್ಟಲು ಬಯಸುತ್ತೇನೆ. ನಾನು ರನ್‌ಗಳ ಬದಲು, ಟ್ರೋಫಿಗಳನ್ನು ಗೆಲ್ಲುವುದರ ಬಗ್ಗೆ ಹೆಚ್ಚಿನ ಗಮನ ಹರಿಸುತ್ತೇನೆ. ಇದರ ಜೊತೆಗೆ ವೈಯಕ್ತಿಕ ಸಾಧನೆಗಳು ಕೂಡ ನಾನು ಸರಿಯಾದ ಹಾದಿಯಲ್ಲಿದ್ದೇನೆ ಎಂಬ ವಿಶ್ವಾಸವನ್ನು ನೀಡುತ್ತವೆ. ಆದರೆ ನನಗೆ ಸಂತೋಷವನ್ನುಂಟುಮಾಡುವುದು ಎಂ.ಎಸ್. ಧೋನಿ ಗೆದ್ದಷ್ಟು ಟ್ರೋಫಿಗಳನ್ನು ಗೆಲ್ಲುವುದು ಎಂದಿದ್ದಾರೆ.

    ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    ಜೂ.4ಕ್ಕೆ ‘ಪೆದ್ದಿ’ ರಿಲೀಸ್; ‘ಟಾಕ್ಸಿಕ್’ ಬಿಟ್ಟುಕೊಟ್ಟ ದಿನಾಂಕದಲ್ಲಿ ರಾಮ್ ಚರಣ್ ಸಿನಿಮಾ ತೆರೆಗೆ – Kannada News | Ram Charan Peddi movie new release date confirmed June 4 instead of Toxic

    ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪೆದ್ದಿ’ (Peddi) ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಈ ಹಿಂದೆ ಮೂರು ಬಾರಿ ಮುಂದೂಡಲ್ಪಟ್ಟಿದ್ದ ಈ ಸಿನಿಮಾ, ಕೊನೆಗೂ ಈ ವರ್ಷ ಜೂನ್ 4ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಐಪಿಎಲ್ ಪಂದ್ಯಗಳು ಮುಗಿದ ತಕ್ಷಣವೇ ಈ ಸಿನಿಮಾ ಬಿಡುಗಡೆ ಆಗುತ್ತಿರುವುದು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಮೊದಲು ಜೂನ್ 4ರಂದು ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆ ಆಗುವುದಾಗಿ ತಿಳಿಸಿತ್ತು. ಆದರೆ ಪ್ಲ್ಯಾನ್ ಬದಲಾಯಿತು.

    ಬುಚ್ಚಿ ಬಾಬು ಸನಾ ನಿರ್ದೇಶನದ ಈ ಚಿತ್ರದಲ್ಲಿ ರಾಮ್ ಚರಣ್‌ಗೆ ಜೋಡಿಯಾಗಿ ಬಾಲಿವುಡ್ ನಟಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ವಿಶೇಷವೆಂದರೆ, ಶಿವರಾಜ್‌ಕುಮಾರ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದು ಸ್ಯಾಂಡಲ್‌ವುಡ್ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಜಗಪತಿ ಬಾಬು ಮತ್ತು ದಿವ್ಯೇಂದು ಶರ್ಮಾ ಕೂಡ ಚಿತ್ರದ ತಾರಾಗಣದಲ್ಲಿದ್ದಾರೆ.

    ಈಗಾಗಲೇ ಈ ಚಿತ್ರದ ‘ಚಿಕಿರಿ ಚಿಕಿರಿ’ ಹಾಡು ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದೆ. ಎ.ಆರ್. ರೆಹಮಾನ್ ಸಂಗೀತ ನೀಡಿರುವ ಈ ಹಾಡು ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಸುಮಾರು 200 ಮಿಲಿಯನ್‌ಗಿಂತಲೂ ಅಧಿಕ ವೀಕ್ಷಣೆಗಳನ್ನು ಪಡೆದಿದೆ. ಇತ್ತೀಚೆಗೆ ಬಿಡುಗಡೆಯಾದ ಪೆದ್ದಿ ಪೆಹಲ್ವಾನ್ ಲುಕ್‌ನಲ್ಲಿ ರಾಮ್ ಚರಣ್ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

    ‘ಪೆದ್ದಿ’ ಸಿನಿಮಾ ಏಪ್ರಿಲ್ 30ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿ ಇದ್ದ ಕಾರಣ ಮತ್ತು ತಾಂತ್ರಿಕವಾಗಿ ಗುಣಮಟ್ಟವನ್ನು ಕಾಪಾಡುವ ಉದ್ದೇಶದಿಂದ ಚಿತ್ರತಂಡ ಬಿಡುಗಡೆಯನ್ನು ಜೂನ್ ತಿಂಗಳಿಗೆ ಮುಂದೂಡಿತ್ತು. ಈಗ ಜೂನ್ 4ಕ್ಕೆ ದಿನಾಂಕ ಅಂತಿಮಗೊಳಿಸುವ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.

    ಇದನ್ನೂ ಓದಿ: ರಾಮ್ ಚರಣ್ ಮತ್ತು ನಾನಿ ಸಿನಿಮಾಗಳಿಗೆ ಲೀಕ್ ಸಂಕಷ್ಟ: ಆತಂಕದಲ್ಲಿ ‘ಪೆದ್ದಿ’, ‘ದಿ ಪ್ಯಾರಡೈಸ್’

    ‘ವೃದ್ಧಿ ಸಿನಿಮಾಸ್’ ಮತ್ತು ‘ಮೈತ್ರಿ ಮೂವಿ ಮೇಕರ್ಸ್’ ಜಂಟಿಯಾಗಿ ಈ ಬಿಗ್ ಬಜೆಟ್ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಪೆದ್ದಿ’ ಅಬ್ಬರಿಸಲು ಸಜ್ಜಾಗಿದೆ. ರಾಮ್ ಚರಣ್ ಅಭಿಮಾನಿಗಳು ಈ ಸಿನಿಮಾಗಾಗಿ ಕಾದಿದ್ದಾರೆ.

    ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

    Source link

    ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ – Kannada News | Passenger and conductor assault ticket inspector with slippers know why

    ಹೈದರಾಬಾದ್‌, ಮೇ 1: ರಾಯಕೊಡೆಯಲ್ಲಿ ಜನರು ಟಿಕೆಟ್ ಇನ್ಸ್‌ಪೆಕ್ಟರ್‌ಗೆ ಚಪ್ಪಲಿಯಿಂದ ಹೊಡೆದ ನಂತರ ಉದ್ವಿಗ್ನತೆ ಉಂಟಾಗಿದೆ. ಹೈದರಾಬಾದ್‌ನಿಂದ (Hyderabad) ನಾರಾಯಣಖೇಡ್‌ಗೆ ಪ್ರಯಾಣಿಸುತ್ತಿದ್ದ ಆರ್‌ಟಿಸಿ ಬಸ್‌ ತುಂಬಿ ತುಳುಕುತ್ತಿತ್ತು. ತೆಲಂಗಾಣದ ರಾಯಕೊಡೆಯಲ್ಲಿ ಟಿಕೆಟ್ ಸ್ಕ್ವಾಡ್ ತಪಾಸಣೆಗಾಗಿ ಬಸ್ ಅನ್ನು ಮಧ್ಯದಲ್ಲಿ ನಿಲ್ಲಿಸಲಾಗಿತ್ತು. ತಪಾಸಣೆಯ ಸಮಯದಲ್ಲಿ ಒಬ್ಬ ಪ್ರಯಾಣಿಕನ ಬಳಿ ಟಿಕೆಟ್ ಇರಲಿಲ್ಲ. ಹೀಗಾಗಿ ಟಿಕೆಟ್ ಇನ್​ಸ್ಪೆಕ್ಟರ್ ಅವನಿಗೆ ದಂಡ ವಿಧಿಸಿ 20,000 ರೂಪಾಯಿ ಲಂಚಕ್ಕೆ ಒತ್ತಾಯಿಸಿದ್ದರು. ಸಾಮಾನ್ಯವಾಗಿ ವಿಧಿಸುವ 500 ರೂ. ಬದಲಾಗಿ 2,000 ರೂ. ನೀಡಲು ಅವರು ಒತ್ತಾಯಿಸಿದ್ದರು.

    ಈ ಘಟನೆಯಿಂದ ಆಕ್ರೋಶಗೊಂಡ ಪ್ರಯಾಣಿಕ ಟಿಕೆಟ್ ಇನ್ಸ್‌ಪೆಕ್ಟರ್‌ಗೆ ಚಪ್ಪಲಿಯಿಂದ ಹೊಡೆಯಲು ಪ್ರಾರಂಭಿಸಿದನು, ಮತ್ತು ಇದರ ನಂತರ, ಬಸ್ ಕಂಡಕ್ಟರ್ ಕೂಡ ಅವನೊಂದಿಗೆ ಸೇರಿಕೊಂಡರು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

    ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    ದೇಶದಲ್ಲೇ ಮೊದಲ ಬಾರಿಗೆ ‘ಧಾರ್ಮಿಕ ತ್ಯಾಜ್ಯ ವಿಲೇವಾರಿ’ ಅಭಿಯಾನಕ್ಕೆ ಸಾಕ್ಷಿಯಾದ ಮಂಗಳೂರು – Kannada News | Mangaluru Pioneers India’s First Religious Waste Management Drive: 12.5 Tons Respectfully Cleared

    ಧಾರ್ಮಿಕ ತ್ಯಾಜ್ಯ ವಿಲೇವಾರಿImage Credit source: tv9 kannada

    ಮಂಗಳೂರು, ಮೇ 01: ಕಡಲನಗರಿ ಮಂಗಳೂರಿನಲ್ಲಿ (Mangaluru) ದೇಶದಲ್ಲೇ ಮೊದಲ ಬಾರಿಗೆ ಧಾರ್ಮಿಕ ತ್ಯಾಜ್ಯ (Religious Waste) ವಿಲೇವಾರಿಯ ವಿಶಿಷ್ಟ ಅಭಿಯಾನವೊಂದು ಯಶಸ್ವಿಯಾಗಿ ನಡೆದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಗರದಲ್ಲಿ ಸುಮಾರು ಹನ್ನೆರಡೂವರೆ ಟನ್ ಧಾರ್ಮಿಕ ತ್ಯಾಜ್ಯಗಳನ್ನು ಸಂಗ್ರಹಿಸಲಾಗಿದೆ. ಈ ಅಭಿಯಾನದಡಿ ಕೇವಲ ತ್ಯಾಜ್ಯವನ್ನು ಸಂಗ್ರಹ ಮಾಡಿರುವುದು ಮಾತ್ರವಲ್ಲ ಅಲ್ಲದೆ, ದೇವರ ಫೋಟೋಗಳು, ವಿಗ್ರಹಗಳು, ಗಂಟೆಗಳು ಹಾಗೂ ದೀಪಗಳಂತಹ ಧಾರ್ಮಿಕ ವಸ್ತುಗಳಿಗೆ ಸಂಸ್ಕಾರಪೂರ್ವಕ ವಿದಾಯವನ್ನು ಸಹ ನೀಡಲಾಗಿದೆ.

    ಮಂಗಳೂರಿನ ರಾಮಕೃಷ್ಣ ಮಠ, ರಾಮಕೃಷ್ಣ ಮಿಷನ್ ಮತ್ತು ಸ್ವಚ್ಛ ಮಂಗಳೂರು ಪ್ರತಿಷ್ಠಾನದ ಸಹಯೋಗದಲ್ಲಿ ಈ ಅಭಿಯಾನ ಮಾಡಲಾಗಿದೆ. ನಿರುಪಯುಕ್ತ ದೇವರ ಫೋಟೋಗಳು, ಗಂಟೆಗಳು ಹಾಗೂ ಮೂರ್ತಿಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಸಾರ್ವಜನಿಕರಿಗೆ ಕರೆ ನೀಡಲಾಗಿತ್ತು. ನಗರದ ಐದು ಪ್ರಮುಖ ಸ್ಥಳಗಳಲ್ಲಿ ಸಂಗ್ರಹಣಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಪಾಲ್ಗೊಂಡಿದ್ದರಿಂದ ನಿರೀಕ್ಷೆಗೂ ಮೀರಿ ಹನ್ನೆರಡೂವರೆ ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹವಾಗಿದೆ.

    ತ್ಯಾಜ್ಯ ವಿಲೇವಾರಿಯಲ್ಲಿ ಸಿಕ್ಕಿದ್ದೇನು?

    ಈ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸಂಗ್ರಹವಾದ ತ್ಯಾಜ್ಯದಲ್ಲಿ 15,000 ದೇವರ ಫೋಟೋ ಫ್ರೇಮ್‌ಗಳು, 2,500 ಕೆ.ಜಿ ಮೂರ್ತಿ ಮತ್ತು ಸ್ಮರಣಿಕೆಗಳು, 1,500 ಕೆ.ಜಿ ಕಾಗದ-ಪುಸ್ತಕಗಳು, 1,200 ಕೆ.ಜಿ ಮರುಬಳಕೆ ಅಸಾಧ್ಯವಾದ ವಸ್ತುಗಳು, 800 ಕೆ.ಜಿ ಕುಂಕುಮ-ಪ್ರಸಾದ, 700 ಕೆ.ಜಿ ಪ್ಲಾಸ್ಟಿಕ್, 500 ಕೆ.ಜಿ ಲೋಹದ ವಸ್ತುಗಳು ಹಾಗೂ 500 ಕೆ.ಜಿ ಮರದ ವಸ್ತುಗಳು ಸೇರಿವೆ.

     

    ಹತ್ತು ಸಂಘಟನೆಗಳ 150ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಯಕರ್ತರು ಈ ವಸ್ತುಗಳನ್ನು ವೈಜ್ಞಾನಿಕವಾಗಿ ವಿಂಗಡಿಸಿದರು. ವಿಂಗಡಣೆಯ ನಂತರ ಕಬ್ಬಿಣ, ಮರ, ಪ್ಲಾಸ್ಟಿಕ್, ಕಾರ್ಡ್‌ಬೋರ್ಡ್ ಮತ್ತು ಕಾಗದಗಳನ್ನು ಮರುಬಳಕೆಗೆ ಕಳುಹಿಸಿಕೊಡಲಾಯಿತು.

    ಇದನ್ನೂ ಓದಿ: ಸಮುದ್ರ ಇದ್ರೂ ಮಂಗಳೂರಿನಲ್ಲಿ ನೀರಿಗೆ ಬರ: ವಾಹನಗಳನ್ನ ತೊಳೆಯದಂತೆ ಸೂಚನೆ

    ಸಂಗ್ರಹವಾದ ಸಾಮಗ್ರಿಗಳಲ್ಲಿ ಬೆಳ್ಳಿ, ತಾಮ್ರ ಮತ್ತು ಹಿತ್ತಾಳೆಯಂತಹ ಬೆಲೆಬಾಳುವ ಲೋಹಗಳು ಪತ್ತೆಯಾಗಿದ್ದವು. ಪರಿಣಿತರ ನೆರವಿನಿಂದ ಈ ಲೋಹಗಳನ್ನು ಬೇರ್ಪಡಿಸಿ ಕರಗಿಸಿದಾಗ, ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ಲೋಹಗಳು ಲಭಿಸಿದೆ. ಈ ಮೊತ್ತವನ್ನು, ಅಭಿಯಾನದ ಸಂದರ್ಭದಲ್ಲಿ ಸ್ವಯಂಸೇವಕರಿಗೆ ಊಟ ಮತ್ತಿತರ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

     

    ಪ್ರಾಯೋಗಿಕವಾಗಿ ಹಮ್ಮಿಕೊಂಡಿದ್ದ ಈ ಧಾರ್ಮಿಕ ತ್ಯಾಜ್ಯ ಸಂಗ್ರಹ ಅಭಿಯಾನವು ಸಂಪೂರ್ಣ ಯಶಸ್ವಿಯಾಗಿದೆ. ನಗರದ ಅಶ್ವಥ ಕಟ್ಟೆಗಳ ಬುಡದಲ್ಲಿ ಅಥವಾ ಮನೆಯ ಮೂಲೆಗಳಲ್ಲಿ ಅನಾಥವಾಗಿ ಬಿಸಾಡಲಾಗಿದ್ದ ಧಾರ್ಮಿಕ ವಸ್ತುಗಳಿಗೆ ಗೌರವಯುತ ವಿದಾಯ ಸಿಕ್ಕಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಈ ಅಭಿಯಾನವನ್ನು ಇನ್ನಷ್ಟು ವಿಸ್ತಾರವಾಗಿ ಮುಂದುವರಿಸಲು ಆಯೋಜಕರು ಯೋಜನೆ ಹಾಕಿಕೊಂಡಿದ್ದಾರೆ.

    ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

    Source link

    ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು – Kannada News | Dk shivakumar daughter aishwarya dks hegde gives birth baby girl In hospital at Bengaluru

    ಬೆಂಗಳೂರು, (ಮೇ 01): ಖಾಸಗಿ ಜೀವನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ (D.K.Shivakumar) ತಾತನ ಪ್ರಮೋಷನ್ ಸಿಕ್ಕಿದೆ. ಹೌದು…ಡಿಸಿಎಂ ಡಿ.ಕೆ.ಶಿವಕುಮಾರ್‌ಅವರ ಪುತ್ರಿ ಐಶ್ವರ್ಯ ಹೆಗ್ಡೆ (Aisshwarya Dks Hegde ) ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ವಿಷಯ ತಿಳಿಯುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಅವರು ಖುಷಿಯಲ್ಲಿ ಮಗಳು ಹಾಗೂ ಮೊಮ್ಮಳನ್ನ ನೋಡಲು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

    Source link

    ಮಳೆಗೆ ಮುಳುಗಿದ ಬೆಂಗಳೂರು: ನಗರದ ಮೂಲಸೌಕರ್ಯದ ಬಗ್ಗೆ ಪ್ರಶ್ನಿಸಿದ ಅಸ್ಸಾಂ ಯುವತಿ – Kannada News | Bengaluru Rain Floods: Assam Based Woman Questions City Infrastructure and Civic Woes

    ಬೆಂಗಳೂರಿನ ಮೂಲಸೌಕರ್ಯದ ಬಗ್ಗೆ ಪ್ರಶ್ನಿಸಿದ ಅಸ್ಸಾಂ ಯುವತಿ
    Image Credit source: Hindustan Times

    ಬೆಂಗಳೂರು, ಮೇ 01: ಮೊನ್ನೆ ನಗರದಲ್ಲಿ ಸುರಿದ ಮಳೆಯಿಂದಾದ ಅನಾಹುತಗಳಿಂದ ಸರಿಯಾಗಿ ಸುಧಾರಿಸಿಕೊಳ್ಳಲು ಬೆಂಗಳೂರಿನ ಜನರಿಗೆ ಇನ್ನೂ ಆಗಿಲ್ಲ. ಈ ನಡುವೆ ಮಳೆ ಮುಂದುವರಿದಿದ್ದು, ಮಳೆಯ ನಂತರ ನಗರದ ದುಸ್ಥಿತಿಯ ಬಗ್ಗೆ ಅಸ್ಸಾಂ ಮೂಲದ ಮತ್ತು ಹಾಲಿ ಬೆಂಗಳೂರಿನ ನಿವಾಸಿ ಅಸ್ಮಿತಾ ಗುಪ್ತಾ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಪ್ರದೇಶದಲ್ಲಿ ಮಾತ್ರ ಮಳೆಯಾದರೂ ರಸ್ತೆ ನೀರಿನಿಂದ ತುಂಬುವ ಜೊತೆಗೆ ಕಸದ ರಾಶಿಯೇ ತೇಲಿಬರುವ ಕಾರಣ ಸಂಚಾರವೇ ಕಷ್ಟಕರವಾಗಿದೆ ಎಂದು ಅವರು ಹೇಳಿದ್ದಾರೆ.

    ಹೆಚ್ಚಿನ ಮಟ್ಟದ ತೆರಿಗೆಗಳನ್ನು ಪಾವತಿಸುವ ಬೆಂಗಳೂರಿಗರು ಕಳಪೆ ಗುಣಮಟ್ಟದ ರಸ್ತೆಗಳ ಮೇಲೆ ಸಂಚರಿಸುತ್ತಿದ್ದಾರೆ. ಒಂದು ಮಳೆ ಬಂದರೆ ಸಾಕು, ಗುಂಡಿಗಳು, ಟ್ರಾಫಿಕ್ ಜಾಮ್ ಮತ್ತು ಅವ್ಯವಸ್ಥೆ ಮತ್ತೆ ಮರುಕಳಿಸುತ್ತವೆ. ಆರ್ಥಿಕತೆಗೆ ಬೆನ್ನೆಲುಬಾದ ನಗರಕ್ಕೆ ಮೂಲಸೌಕರ್ಯ ಒದಗಿಸುವುದು ಅಷ್ಟು ಕಷ್ಟವೇ? ಎಂದು ಅಸ್ಮಿತಾ ಪ್ರಶ್ನಿಸಿದ್ದಾರೆ. ಸಾಲದ್ದಕ್ಕೆ ಮಳೆಯ ಸಮಯದಲ್ಲಿ ಕ್ಯಾಬ್‌ಗಳ ಡೈನಾಮಿಕ್ ಪ್ರೈಸಿಂಗ್‌ ಬಗ್ಗೆ ಕೂಡ ಅವರು ಆಕ್ರೋಶ ವ್ಯಕ್ತಪಡಿಸಿದ್ದು, 500-600 ಮೀಟರ್ ದೂರಕ್ಕೆ 240-250 ರೂಪಾಯಿಗಳ ವರೆಗೆ ದರ ಕೇಳುವುದು ಮಾನವೀಯತೆಯಲ್ಲ. ಕ್ಯಾಬ್​​ನಲ್ಲಿ 500 ಮೀಟರ್ ದೂರ ಹೋಗಲು ನನಗೆ 240 ರೂಪಾಯಿಗಳ ದರ ತೋರಿಸುತ್ತಿತ್ತು ಎಂದವರು ದೂರಿದ್ದಾರೆ.

    ಇದನ್ನೂ ಓದಿ: ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ

    ಅವರ ಈ ಪೋಸ್ಟ್​​ಗೆ ಪ್ರತಿಕ್ರಿಯಿಸಿದ ಹಲವರು ನಡೆದು ಹೋಗಲಿಲ್ಲವೇ ಎಂದು ಪ್ರಶ್ನಿಸಿದ್ದು, ಇದಕ್ಕೆ ಉತ್ತರಿಸಿರುವ ಅಸ್ಮಿತಾ ರಸ್ತೆಯೇ ಇಲ್ಲದಿದ್ದಾಗ ಹೇಗೆ ನಡೆದು ಹೋಗುವುದು? ನೀರು ತುಂಬಿ ಗುಂಡಿಗಳು ಕಾಣಿಸದ ಸ್ಥಿತಿ ಉದ್ಭವವಾಗಿತ್ತು. ವಿದ್ಯುತ್ ಶಾಕ್ ಅಪಾಯವೂ ಇತ್ತು. ಅಲ್ಲದೆ ಇಂತಹ ಅಶುದ್ಧ ನೀರಿನಲ್ಲಿ ನಡೆಯುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದಿದ್ದಾರೆ.

    ಅಲ್ಲದೆ, ಇಂತಹ ಸಮಸ್ಯೆಗಳ ಬಗ್ಗೆ ಮಾತನಾಡಿದಾಗ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಉತ್ತರ-ದಕ್ಷಿಣ ವಿವಾದಕ್ಕೆ ತಿರುಗಿಸಲಾಗುತ್ತಿದೆ. ನಾವು ಪ್ರಶ್ನೆ ಕೇಳಿದರೆ ನಿಮ್ಮ ಊರಿಗೆ ಹಿಂತಿರುಗಿ ಎಂದು ಹೇಳುತ್ತಾರೆ. ನಾವು ಈ ನಗರಕ್ಕೆ ಕೆಲಸಕ್ಕಾಗಿ ಬಂದಿದ್ದರೂ, ಇಲ್ಲಿ ವಾಸಿಸುವವರೇ. ಮೂಲಸೌಕರ್ಯ ಸುಧಾರಣೆಗಾಗಿ ಕೇಳುವುದು ತಪ್ಪಲ್ಲ ಎಂದು ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ಟಯರ್​​ 1 ನಗರವಾಗಿರುವ ಬೆಂಗಳೂರಲ್ಲಿ ಜನರಿಗೆ ಅಷ್ಟು ಮಟ್ಟದ ಮೂಲಸೌಕರ್ಯ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಅವರು ತಿಳಿಸಿರೋದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

    ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

    Source link

    Bangalore Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ – Kannada News | Bengaluru Rain News: Heavy Showers Hit City, Check Latest Weather Updates

    ಬೆಂಗಳೂರು, ಮೇ 01: ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಾದ್ಯಂತ ವರುಣನ ಆರ್ಭಟ ಜೋರಾಗಿದೆ. ಎಂ.ಜಿ. ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಟ್ರಿನಿಟಿ ವೃತ್ತ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ ಮತ್ತು ರಿಚ್ಮಂಡ್ ಟೌನ್ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕೆಲಸ ಮುಗಿಸಿ ಮನೆಗೆ ಮರಳುವ ಹೊತ್ತಿನಲ್ಲೇ ಸುರಿದ ಮಳೆಗೆ ಸಿಟಿ ಮಂದಿ ಶಾಪ ಹಾಕುವಂತಾಗಿದೆ.

    ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

    Source link

    ಭಾರತ ಸರ್ಕಾರದ ವಿರುದ್ಧ ಹೋರಾಡುತ್ತೇವೆ ಎಂದಿದ್ದ ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್​ನಿಂದ ಬಿಗ್ ರಿಲೀಫ್ – Kannada News | Big relief for rahul gandhi allahabad high court dismisses plea seeking fir against him over 2025 remark

    ಲಕ್ನೋ, ಮೇ 1: ಮಾಜಿ ಕಾಂಗ್ರೆಸ್ ಅಧ್ಯಕ್ಷ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ವಿವಾದಾತ್ಮಕ ‘ಭಾರತದ ವಿರುದ್ಧ ಹೋರಾಡುತ್ತೇವೆ’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ಡಿ. ಚೌಹಾಣ್ ಅವರನ್ನೊಳಗೊಂಡ ಏಕ ಸದಸ್ಯ ಪೀಠವು ಮುಕ್ತ ನ್ಯಾಯಾಲಯದಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿತು. ಅಲ್ಲದೆ, ರಾಹುಲ್ ಗಾಂಧಿಯವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.

    2025ರಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಅರ್ಜಿದಾರರು ಮಂಡಿಸಿದ ವಾದಗಳನ್ನು ಪರಿಶೀಲಿಸಿದ ನಂತರ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಲಾದ ದೂರಿಗೆ ಸಂಬಂಧಿಸಿದ ಹಿಂದಿನ ಆದೇಶಗಳನ್ನು ಪ್ರಶ್ನಿಸಿದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಕೋರ್ಟ್ ನಿರಾಕರಿಸಿತು.

    ಇದನ್ನೂ ಓದಿ: ದ್ವಿಪೌರತ್ವ ಪ್ರಕರಣ; ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

    ಜನವರಿ 15, 2025ರಂದು ರಾಹುಲ್ ಗಾಂಧಿ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಹೇಳಿಕೆಯ ಕುರಿತು ಎಫ್‌ಐಆರ್ ದಾಖಲಿಸಬೇಕೆಂದು ಅರ್ಜಿದಾರರು ವಾದಿಸಿದ್ದರು. ಆದರೆ, ಕೆಳ ನ್ಯಾಯಾಲಯವು ಈ ಬೇಡಿಕೆಯನ್ನು ತಿರಸ್ಕರಿಸಿದ ನಂತರ ಈ ವಿಷಯವು ಹೈಕೋರ್ಟ್‌ಗೆ ತಲುಪಿತ್ತು. ಏಪ್ರಿಲ್ 8ರಂದು ಹೈಕೋರ್ಟ್ ವಿಚಾರಣೆಯನ್ನು ಪೂರ್ಣಗೊಳಿಸಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಈಗ ಆದೇಶ ನೀಡಿದೆ.

    ಇದನ್ನೂ ಓದಿ: ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ

    ಏನಿದು ಪ್ರಕರಣ?:

    2025ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ರಾಹುಲ್ ಗಾಂಧಿ ಮಾತನಾಡುವಾಗ “ನಾವು ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇವೆ” ಎಂದು ಹೇಳಿದ್ದರು. ಅರ್ಜಿದಾರರ ಪ್ರಕಾರ, ಈ ಹೇಳಿಕೆಯು ದೇಶಾದ್ಯಂತ ಸಾರ್ವಜನಿಕ ಭಾವನೆಗಳಿಗೆ ನೋವುಂಟು ಮಾಡಿದೆ ಮತ್ತು ಇದು ದೇಶದ್ರೋಹಕ್ಕೆ ಸಮಾನವಾಗಿದೆ. ಈ ಪದಗಳು ದೇಶವನ್ನು ಅಸ್ಥಿರಗೊಳಿಸುವ ಉದ್ದೇಶವನ್ನು ಹೊಂದಿವೆ. ಆದ್ದರಿಂದ ರಾಹುಲ್ ಗಾಂಧಿ ವಿರುದ್ಧ ತಕ್ಷಣ ಕ್ರಿಮಿನಲ್ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಅವರು ವಾದಿಸಿದ್ದರು. ಆದರೆ, ಇಂದು ಹೈಕೋರ್ಟ್ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಿತು.

    ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link