Headlines

ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಮಹಿಳೆಯ ಸಾವಿನ ರಹಸ್ಯ – Kannada News | Uttar Pradesh Woman’s digital arrest trail revealed after her phone rang during cremation

ನೊಯ್ಡಾ, ಮೇ 1: ಕಾನೂನು ಜಾರಿ ಅಧಿಕಾರಿಗಳಂತೆ ನಟಿಸಿ ಸೈಬರ್ ವಂಚಕರು ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ 28 ವರ್ಷದ ಮಹಿಳೆಯನ್ನು ಕಿರುಕುಳ, ಬ್ಲ್ಯಾಕ್‌ಮೇಲ್ ಮತ್ತು ಡಿಜಿಟಲ್ ಬಂಧನದ (digital arrest) ಬೆದರಿಕೆ ಹಾಕಿದ್ದರು. ಆಕೆ ಇದಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ ಅಂತ್ಯಕ್ರಿಯೆಯ ಸಿದ್ಧತೆಗಳ ಸಮಯದಲ್ಲಿ ಅವರ ಫೋನ್‌ಗೆ ಪದೇ ಪದೇ ವಾಟ್ಸಾಪ್ ಕರೆಗಳು ಬಂದಾಗ ಈ ವಂಚನೆ ಬೆಳಕಿಗೆ ಬಂದಿತು ಎಂದು ಪೊಲೀಸರು ತಿಳಿಸಿದ್ದಾರೆ. ಫರೀದ್‌ಪುರ ಭೋಗಿ ಗ್ರಾಮದ ನಿವಾಸಿ ಮೋನಿಕಾ ದೇವಿ ಸೋಮವಾರ ರಾತ್ರಿ…

Read More

ಸ್ಟಾರ್ ನಟಿಯರ ಜೊತೆ ‘ತುಂಬಾಡ್ 2’ ಚಿತ್ರತಂಡದ ಮಾತುಕಥೆ; ಹೆಚ್ಚಾಗಿದೆ ನಿರೀಕ್ಷೆ – Kannada News | Who is the lead actress in Tumbbad 2 Priyanka Chopra Katrina Kaif Alia Bhatt Nayanthara

2018ರಲ್ಲಿ ಬಿಡುಗಡೆಯಾದ ‘ತುಂಬಾಡ್’ (Tumbbad) ಸಿನಿಮಾ ಬಾಲಿವುಡ್ ಚಿತ್ರರಂಗದಲ್ಲೇ ಒಂದು ವಿಶಿಷ್ಟ ಪ್ರಯೋಗವಾಗಿತ್ತು. ರಾಹಿ ಅನಿಲ್ ಬಾರ್ವೆ ಮತ್ತು ಆನಂದ್ ಗಾಂಧಿ ನಿರ್ದೇಶನದ ಈ ಜಾನಪದ ಹಿನ್ನೆಲೆಯ ಹಾರರ್ ಥ್ರಿಲ್ಲರ್ ಸಿನಿಮಾ ಮೊದಲು ಬಿಡುಗಡೆಯಾದಾಗ ಬಾಕ್ಸ್ ಆಫೀಸ್‌ನಲ್ಲಿ ಅಷ್ಟಾಗಿ ಸದ್ದು ಮಾಡಿರಲಿಲ್ಲ. ಆದರೆ, 2024ರಲ್ಲಿ ಮರು ಬಿಡುಗಡೆ ಆದಾಗ ಈ ಸಿನಿಮಾ ದಾಖಲೆ ಮಟ್ಟದ ಕಲೆಕ್ಷನ್ ಮಾಡಿ ಎಲ್ಲರನ್ನೂ ಅಚ್ಚರಿಗೊಳಿಸಿತು. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಈಗ ಚಿತ್ರತಂಡ ಸೀಕ್ವೆಲ್ (Tumbbad 2) ತಯಾರಿಗೆ ಸಜ್ಜಾಗಿದೆ. ‘ತುಂಬಾಡ್’…

Read More

Career Horoscope: ನಿಮ್ಮ ರಾಶಿಗನುಗುಣವಾಗಿ ಮೇ 3ರಿಂದ 9ರ ವರೆಗಿನ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope: May 3 9 Navigate Job Challenges and Opportunities

ಮೇ 03ರಿಂದ ಮೇ 09ರವರೆಗಿನ ಮೊದಲ ವಾರವಾಗಿದ್ದು ಉದ್ಯೋಗರಂಗದಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ಆತಂಕ ಸೃಷ್ಟಿ ಆಗಬಹುದು. ಹಲವು ಆದಾಯ ಮೂಲಕ್ಕೆ ಹಿನ್ನಡೆ ಸಾಧ್ಯತೆ. ಕೆಲವರಿಗೆ ನಿರ್ವಹಣೆ ಕಷ್ಟ ಎನಿಸಬಹುದು. ​ಮೇಷ: ಮೊದಲನೇ ವಾರದಲ್ಲಿ ನಿಮ್ಮ ರಾಶ್ಯಾಧಿಪತಿ ಕುಜನು ಸ್ವಕ್ಷೇತ್ರದಲ್ಲಿ ಬಲವಾಗಿದ್ದಾನೆ. ಉದ್ಯೋಗದಲ್ಲಿ ನಿಮ್ಮ ಶೌರ್ಯ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೆಚ್ಚಲಿದೆ. ಕಠಿಣ ಸವಾಲುಗಳನ್ನು ಸುಲಭವಾಗಿ ಗೆಲ್ಲುವಿರಿ. ​ವೃಷಭ: ಈ ವಾರ ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ. ಗ್ರಹಗಳು ಶನಿಯ ಪ್ರಭಾವದಲ್ಲಿರುವುದರಿಂದ ಕೆಲಸ ವಿಳಂಬವಾಗಬಹುದು. ಮೇಲಾಧಿಕಾರಿಗಳ ಜೊತೆ…

Read More

Personality Test: ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು? – Kannada News | S Letter Personality: Astrology’s Secrets and Traits Explained

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೆಸರಿನ ಮೊದಲ ಅಕ್ಷರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಅದರಲ್ಲೂ ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಬಹಳ ವಿಶೇಷವಾದ ಸ್ವಭಾವವನ್ನು ಹೊಂದಿರುತ್ತಾರೆ ಮತ್ತು ಇತರರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ರಹಸ್ಯ ಕಾಪಾಡುವುದರಲ್ಲಿ ಇವರು ಎತ್ತಿದ ಕೈ: ‘S’ ಅಕ್ಷರದ ವ್ಯಕ್ತಿಗಳು ತಮ್ಮ ಜೀವನದ ಅನೇಕ ವಿಷಯಗಳನ್ನು ಗೌಪ್ಯವಾಗಿಡಲು ಇಷ್ಟಪಡುತ್ತಾರೆ. ವಿಶೇಷವಾಗಿ ಕುಟುಂಬದ ವಿಷಯಗಳು ಮತ್ತು ತಮ್ಮ ಯಶಸ್ಸಿನ ಹಿಂದಿನ ಗುಟ್ಟುಗಳನ್ನು ಅವರು ಯಾರೊಂದಿಗೂ ಅಷ್ಟು ಸುಲಭವಾಗಿ ಹಂಚಿಕೊಳ್ಳುವುದಿಲ್ಲ. ಈ…

Read More

ಜಾತ್ರೆಗೆ ಹಣ ಕೊಡದಿದ್ದಕ್ಕೆ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ: ಬಾಗಲಕೋಟೆಯಲ್ಲೊಂದು ಅಮಾನವೀಯ ಘಟನೆ – Kannada News | Bagalkote Social Boycott: 7 Families Ostracized Over Festival Fund Dispute

7 ಕುಟುಂಬಗಳಿಗೆ ಊರಿಂದ ಬಹಿಷ್ಕಾರImage Credit source: Tv9 Kannada ಬಾಗಲಕೋಟೆ, ಮೇ 01: ರಾಜ್ಯ ಸರ್ಕಾರ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಕೆಲ ಅನಿಷ್ಟ ಪದ್ಧತಿಗಳಿಗೆ ಮಾತ್ರ ಬ್ರೇಕ್​​ ಬೀಳುತ್ತಿಲ್ಲ. ಇದಕ್ಕೆ ತಾಜಾ ಉದಾಹರಣೆಯೆಂದರೆ ಬಾಗಲಕೋಟೆ ಜಿಲ್ಲೆಯಲ್ಲಿ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ ಹಾಕಿರೋದು. ಹೌದು, ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂಪಾಯಿ ಹಣ ನೀಡಿಲ್ಲ ಎಂಬ ಕಾರಣಕ್ಕೆ ಕುಟುಂಬಗಳಿಗೆ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಯಲಪ್ಪ…

Read More

ಜಬಲ್ಪುರ ದೋಣಿ ದುರಂತ, ಸಾವು ಬಂದ್ರೂ, ತಬ್ಬಿಕೊಂಡ ಮಗನನ್ನು ಬಿಡದ ತಾಯಿ – Kannada News | Jabalpur Boat Tragedy: Mother and Child Found Embraced After Bargi Dam Capsize

ಜಬಲ್ಪುರ, ಮೇ 1: ಮಧ್ಯಪ್ರದೇಶದ ಬಾರ್ಗಿ ಅಣೆಕಟ್ಟಿನಲ್ಲಿ ಕ್ರೂಸ್‌‍ ದೋಣಿ ಮುಳುಗಿ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನರ್ಮದಾ ನದಿಯ ಶಾಂತ ಅಲೆಗಳ ಮೇಲೆ ಸಾಗುತ್ತಿದ್ದ ಆ ಕ್ರೂಸ್ ದೋಣಿಯೇ ಅಲ್ಲಿದ್ದವರ ಪಾಲಿಗೆ ಯಮನಾಗಬಹುದು ಎನ್ನುವ ಕಲ್ಪನೆಯೂ ಇರಲಿಲ್ಲ. 30 ಜನರನ್ನು ಹೊತ್ತು ಹೊರಟಿದ್ದ ದೋಣಿ ಬಲವಾದ ಗಾಳಿ, ಅಲೆಯಿಂದಾಗಿ ಮಗುಚಿತ್ತು. ರಕ್ಷಣಾ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ನೀರಿನ ಆಳದಲ್ಲಿ ಮೃತದೇಹಗಳನ್ನು ಹುಡುಕುತ್ತಿದ್ದಾಗ ಕಂಡ ದೃಶ್ಯ ಅವರ ಕಣ್ಣಾಲಿಗಳನ್ನು ಒದ್ದೆ ಮಾಡಿತು. ನಾಲ್ಕು ವರ್ಷದ ಪುಟ್ಟ ಮಗುವನ್ನು…

Read More

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಮಾದಕವಸ್ತು ಸೇವನೆ ಕೇಸ್​​​ನಲ್ಲಿ ಫಿಟ್ ಮಾಡಿಸಿದ ಆರೋಪ – Kannada News | BSC Nursing Student Commits Suicide In BTL College Hostel at Bengaluru

ಬೆಂಗಳೂರು, (ಮೇ 01): ಹಾಸ್ಟೆಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ (Student) ಶವ ಪತ್ತೆಯಾಗಿದೆ. ಬೆಂಗಳೂರು (Bengaluru) ಹೊರವಲಯದ ಬೊಮ್ಮಸಂದ್ರದ ಬಿಟಿಎಲ್ ಕಾಲೇಜಿನ ಹಾಸ್ಟೆಲ್​ನಲ್ಲಿ ಎ.ಪಿ‌.ಆದಿತ್ಯ(19) ಶವ ಪತ್ತೆಯಾಗಿದ್ದು, ಈ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ. 2ನೇ ವರ್ಷದ ಬಿಎಸ್​ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆದಿತ್ಯ, ಏಪ್ರಿಲ್ 29ರಂದೇ ಹಾಸ್ಟೆಲ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಹಪಾಠಿಗಳು ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ. ಇನ್ನು  ಕಾಲೇಜು ಆಡಳಿತ ಮಂಡಳಿ ಕಿರುಕುಳದಿಂದ…

Read More

ಎಲ್ಲ ಶಾಸಕರಿಗೂ ಆಲ್ಕೋಹಾಲ್ ಪರೀಕ್ಷೆಯಾಗಲಿ; ಪಂಜಾಬ್ ಸಿಎಂ ಕುಡಿದಿದ್ದಾರೆ ಎಂದು ಆರೋಪಿಸಿ ಸದನದಿಂದ ಹೊರನಡೆದ ಕಾಂಗ್ರೆಸ್ – Kannada News | Get alcohol test done High drama in Punjab assembly Congress alleges CM Bhagwant Mann was drunk

ಪಂಜಾಬ್, ಮೇ 1: ಪಂಜಾಬ್ ವಿಧಾನಸಭೆಯಲ್ಲಿ ಇಂದು ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಮತ್ತು ಅಕಾಲಿ ದಳ ಪಂಜಾಬ್​ನ ಸಿಎಂ ಭಗವಂತ್ ಮಾನ್ ಸದನದ ಕಲಾಪಗಳ ಸಮಯದಲ್ಲಿ ಕುಡಿದಿದ್ದರು ಎಂದು ಆರೋಪಿಸಿದೆ. ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಇಂದು ಪಂಜಾಬ್​​ನಲ್ಲಿ ವಿಶೇಷ ಅಧಿವೇಶನ ಕರೆಯಲಾಗಿತ್ತು. ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ ಕುಡಿದ ಸ್ಥಿತಿಯಲ್ಲಿ ಸದನಕ್ಕೆ ಬಂದಿದ್ದಾರೆ. ಹೀಗಾಗಿ ಸದನದಲ್ಲಿರುವ ಎಲ್ಲಾ ಶಾಸಕರಿಗೆ ಮದ್ಯ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿತು. ಕಾರ್ಮಿಕ ದಿನದ ಸಂದರ್ಭದಲ್ಲಿ ನಿರ್ಣಯವನ್ನು…

Read More

IPL 2026: 30 ಅಥವಾ 40.. ಕೊಹ್ಲಿ ಪ್ರದರ್ಶನದ ಮೇಲೆ ನಿಂತಿದೆ ಆರ್​ಸಿಬಿ ಸೋಲು, ಗೆಲುವು – Kannada News | RCB’s Kohli Dependence: Stats Reveal Why rcb Loses When Virat Falls Early

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ (RCB vs GT) ವಿರುದ್ಧ 4 ವಿಕೆಟ್‌ಗಳ ಹೀನಾಯ ಸೋಲು ಕಂಡಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅನುಭವಿ ವಿರಾಟ್ ಕೊಹ್ಲಿ (Virat Kohli) 13 ಎಸೆತಗಳಲ್ಲಿ 28 ರನ್‌ಗಳಿಸಿ ಔಟಾದ ಬಳಿಕ ತಂಡದ ಬ್ಯಾಟಿಂಗ್ ಸಂಪೂರ್ಣವಾಗಿ ಕುಸಿಯಿತು….

Read More

SSLC ಪರೀಕ್ಷೆ ವೇಳೆ ಕನ್ನಡದಲ್ಲಿಯೇ ವಿದ್ಯಾರ್ಥಿಗಳು ಫೇಲ್​​ ಆಗ್ತಿರೋದೇಕೆ?: ಅಚ್ಚರಿಯ ಮಾಹಿತಿ ಬಹಿರಂಗ – Kannada News | SSLC Kannada Failure: KDA Unveils Reasons, Recommends Reforms

ಬೆಂಗಳೂರು, ಮೇ 01: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ತೆಗೆದುಕೊಂಡಿದ್ದ ಸುಮಾರು 19,000 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಹೀಗಾಗಿ ಇದಕ್ಕೆ ಕಾರಣಗಳನ್ನು ಅಧ್ಯಯನ ಮಾಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದ ಸಮಿತಿ ಹಲವು ಮಹತ್ವದ ಶಿಫಾರಸುಗಳನ್ನು ಮಾಡಿದೆ. ಕನಿಷ್ಠ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರ್ಕಾರದ ಉದ್ಯೋಗಗಳಲ್ಲಿ ಶೇ. 25ರಷ್ಟು ಮೀಸಲಾತಿ ನೀಡಬೇಕು ಎಂದು ಸಮಿತಿ ಹೇಳಿದ್ದು, ಇದರಿಂದ ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳಿಗೆ ಉತ್ತೇಜನ ಸಿಗಲಿದೆ ಎಂದು ತಿಳಿಸಿದೆ. ವಿದ್ಯಾರ್ಥಿಗಳ…

Read More