Category Archives: Blog

Your blog category

Career Horoscope: ನಿಮ್ಮ ರಾಶಿಗನುಗುಣವಾಗಿ ಮೇ 3ರಿಂದ 9ರ ವರೆಗಿನ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope: May 3 9 Navigate Job Challenges and Opportunities

ಮೇ 03ರಿಂದ ಮೇ 09ರವರೆಗಿನ ಮೊದಲ ವಾರವಾಗಿದ್ದು ಉದ್ಯೋಗರಂಗದಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ಆತಂಕ ಸೃಷ್ಟಿ ಆಗಬಹುದು. ಹಲವು ಆದಾಯ ಮೂಲಕ್ಕೆ ಹಿನ್ನಡೆ ಸಾಧ್ಯತೆ. ಕೆಲವರಿಗೆ ನಿರ್ವಹಣೆ ಕಷ್ಟ ಎನಿಸಬಹುದು.

​ಮೇಷ:

ಮೊದಲನೇ ವಾರದಲ್ಲಿ ನಿಮ್ಮ ರಾಶ್ಯಾಧಿಪತಿ ಕುಜನು ಸ್ವಕ್ಷೇತ್ರದಲ್ಲಿ ಬಲವಾಗಿದ್ದಾನೆ. ಉದ್ಯೋಗದಲ್ಲಿ ನಿಮ್ಮ ಶೌರ್ಯ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೆಚ್ಚಲಿದೆ. ಕಠಿಣ ಸವಾಲುಗಳನ್ನು ಸುಲಭವಾಗಿ ಗೆಲ್ಲುವಿರಿ.

​ವೃಷಭ:

ಈ ವಾರ ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ. ಗ್ರಹಗಳು ಶನಿಯ ಪ್ರಭಾವದಲ್ಲಿರುವುದರಿಂದ ಕೆಲಸ ವಿಳಂಬವಾಗಬಹುದು. ಮೇಲಾಧಿಕಾರಿಗಳ ಜೊತೆ ವಾಗ್ವಾದ ಬೇಡ, ಸಮಾಧಾನದಿಂದ ಕೆಲಸ ಮುಗಿಸುವುದು ಉತ್ತಮ.

ಮಿಥುನ:

ಬುಧ ಮತ್ತು ಗುರುವಿನ ಶುಭ ದೃಷ್ಟಿಯಿಂದ ವ್ಯಾಪಾರದಲ್ಲಿ ಲಾಭದಾಯಕ ಬದಲಾವಣೆ ಕಂಡುಬರಲಿದೆ. ಹೊಸ ಉದ್ಯೋಗದ ಹುಡುಕಾಟದಲ್ಲಿದ್ದವರಿಗೆ ಉತ್ತಮ ಅವಕಾಶಗಳು ಕೈಸೇರಲಿವೆ. ಚತುರತೆಯಿಂದ ಕಾರ್ಯಸಿದ್ಧಿ ಮಾಡಿಕೊಳ್ಳುವಿರಿ

​ಕರ್ಕಾಟಕ :

ಚಂದ್ರನು ನವಾಂಶದಲ್ಲಿ ಶುಕ್ರನ ಮನೆಯಲ್ಲಿರುವುದರಿಂದ ಕಲಾತ್ಮಕ ವೃತ್ತಿಯವರಿಗೆ ಸುಸಮಯ. ಕಚೇರಿಯಲ್ಲಿ ಸ್ತ್ರೀ ಸಹೋದ್ಯೋಗಿಗಳಿಂದ ಸಹಾಯ ದೊರೆಯಲಿದೆ. ಮಾನಸಿಕ ನೆಮ್ಮದಿಯೊಂದಿಗೆ ಕೆಲಸ ನಿರ್ವಹಿಸುವಿರಿ.

ಸಿಂಹ:

ರವಿಯು ಗುರುವಿನ ದ್ರೇಕ್ಕಾಣದಲ್ಲಿ ಇದ್ದುದರಿಂದ ವೃತ್ತಿಯಲ್ಲಿ ಅತ್ಯಂತ ಪ್ರಭಾವಶಾಲಿ ಸ್ಥಾನ ದೊರೆಯಲಿದೆ. ನಿಮ್ಮ ಮಾತಿಗೆ ಬೆಲೆ ಸಿಗಲಿದ್ದು, ಆಡಳಿತಾತ್ಮಕ ಕೆಲಸಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಗೌರವ ವೃದ್ಧಿಯಾಗಲಿದೆ.

​ಕನ್ಯಾ:

ಉದ್ಯೋಗದಲ್ಲಿ ಸ್ವಲ್ಪ ಗೊಂದಲಗಳು ಉಂಟಾಗಬಹುದು. ಶ್ರಮಕ್ಕೆ ತಕ್ಕ ಫಲ ತಕ್ಷಣ ಸಿಗದಿದ್ದರೂ ಧೃತಿಗೆಡಬೇಡಿ. ವ್ಯವಹಾರದಲ್ಲಿ ಲೆಕ್ಕಾಚಾರದ ಬಗ್ಗೆ ಹೆಚ್ಚಿನ ಗಮನವಿರಲಿ. ತಾಂತ್ರಿಕ ಕೆಲಸಗಾರರಿಗೆ ಶುಭಕರ.

ತುಲಾ:

ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಪ್ರಗತಿ ಕಾಣುವಿರಿ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಜನರೊಂದಿಗೆ ವ್ಯವಹರಿಸುವ ವೃತ್ತಿಯಲ್ಲಿದ್ದವರಿಗೆ ಈ ವಾರ ಅತ್ಯಂತ ಲಾಭದಾಯಕವಾಗಿರಲಿದೆ.

​ವೃಶ್ಚಿಕ:

ವೃತ್ತಿ ಜೀವನದಲ್ಲಿ ಎದುರಾಳಿಗಳ ಮೇಲೆ ಜಯ ಸಾಧಿಸುವಿರಿ. ಕುಜನ ಬಲದಿಂದ ಶಕ್ತಿಯುತವಾಗಿ ಕೆಲಸ ಮಾಡುವಿರಿ. ರಿಯಲ್ ಎಸ್ಟೇಟ್ ಅಥವಾ ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ಆದಾಯ ಹೆಚ್ಚಾಗುವ ಸಂಭವವಿದೆ.

ಧನುಸ್ಸು:

ಗುರುವಿನ ಸ್ಥಾನವು ಉದ್ಯೋಗದಲ್ಲಿ ಸ್ಥಿರತೆಯನ್ನು ನೀಡಲಿದೆ. ಬೋಧನೆ ಅಥವಾ ಸಲಹಾ ಕೇಂದ್ರಗಳಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗಲಿದೆ. ದೂರದ ಪ್ರಯಾಣದಿಂದ ವೃತ್ತಿಯಲ್ಲಿ ಅನುಕೂಲವಾಗಲಿದೆ.

​ಮಕರ:

ಶನಿಯ ಪ್ರಭಾವದಿಂದ ಕೆಲಸದ ಒತ್ತಡ ಹೆಚ್ಚಿರಲಿದೆ. ಹಿರಿಯ ಅಧಿಕಾರಿಗಳಿಂದ ಟೀಕೆಗಳು ಬರಬಹುದು, ಆದರೆ ನಿಮ್ಮ ಶ್ರಮಕ್ಕೆ ಕೊನೆಯಲ್ಲಿ ಜಯ ಸಿಗಲಿದೆ. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.

​ಕುಂಭ:

ಹೊಸ ಯೋಜನೆಗಳಿಗೆ ಚಾಲನೆ ನೀಡಲು ಈ ವಾರ ಪೂರಕವಾಗಿದೆ. ಸಮಾಜ ಸೇವೆಯಲ್ಲಿರುವವರಿಗೆ ಅಥವಾ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಸಾರ್ವಜನಿಕವಾಗಿ ಹೆಸರು ಮಾಡುವ ಅವಕಾಶ ದೊರೆಯಲಿದೆ.

​ಮೀನ:

ಹಣಕಾಸಿನ ವೃತ್ತಿಯಲ್ಲಿರುವವರಿಗೆ ಅಭಿವೃದ್ಧಿ ಕಂಡುಬರಲಿದೆ. ನಿಮ್ಮ ಕ್ರಿಯಾಶೀಲತೆಗೆ ತಕ್ಕ ಪುರಸ್ಕಾರ ಸಿಗಲಿದೆ. ಮನೆಯಿಂದಲೇ ಕೆಲಸ ಮಾಡುವವರಿಗೆ ಅಥವಾ ಫ್ರೀಲಾನ್ಸಿಂಗ್ ಮಾಡುವವರಿಗೆ ಹೆಚ್ಚಿನ ಆದಾಯ ಸಿಗಲಿದೆ.

– ಲೋಹಿತ ಹೆಬ್ಬಾರ್ – 8762924271

Source link

Personality Test: ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು? – Kannada News | S Letter Personality: Astrology’s Secrets and Traits Explained

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೆಸರಿನ ಮೊದಲ ಅಕ್ಷರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಅದರಲ್ಲೂ ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಬಹಳ ವಿಶೇಷವಾದ ಸ್ವಭಾವವನ್ನು ಹೊಂದಿರುತ್ತಾರೆ ಮತ್ತು ಇತರರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ.

ರಹಸ್ಯ ಕಾಪಾಡುವುದರಲ್ಲಿ ಇವರು ಎತ್ತಿದ ಕೈ:

‘S’ ಅಕ್ಷರದ ವ್ಯಕ್ತಿಗಳು ತಮ್ಮ ಜೀವನದ ಅನೇಕ ವಿಷಯಗಳನ್ನು ಗೌಪ್ಯವಾಗಿಡಲು ಇಷ್ಟಪಡುತ್ತಾರೆ. ವಿಶೇಷವಾಗಿ ಕುಟುಂಬದ ವಿಷಯಗಳು ಮತ್ತು ತಮ್ಮ ಯಶಸ್ಸಿನ ಹಿಂದಿನ ಗುಟ್ಟುಗಳನ್ನು ಅವರು ಯಾರೊಂದಿಗೂ ಅಷ್ಟು ಸುಲಭವಾಗಿ ಹಂಚಿಕೊಳ್ಳುವುದಿಲ್ಲ. ಈ ರಹಸ್ಯ ಪ್ರವೃತ್ತಿಯೇ ಅವರಿಗೆ ಒಂದು ರೀತಿಯ ವಿಶೇಷ ವ್ಯಕ್ತಿತ್ವವನ್ನು ನೀಡುತ್ತದೆ.

ಪರಿಶ್ರಮ ಮತ್ತು ಸ್ಪಷ್ಟತೆ:

ಇವರಲ್ಲಿ ಕೆಲಸದ ಬಗ್ಗೆ ಅಪಾರವಾದ ನಿಷ್ಠೆ ಇರುತ್ತದೆ. ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರೂ ಅದನ್ನು ಅತ್ಯಂತ ಪರಿಶ್ರಮದಿಂದ ಮಾಡುತ್ತಾರೆ. ಜೀವನದ ಬಗ್ಗೆ ಇವರಿಗೆ ಸ್ಪಷ್ಟವಾದ ಗುರಿ ಮತ್ತು ಜ್ಞಾನವಿರುತ್ತದೆ. ಎಂತಹ ಏರಿಳಿತಗಳು ಎದುರಾದರೂ ಎದೆಗುಂದದೆ, ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾ ಇವರು ಮುನ್ನುಗ್ಗುತ್ತಾರೆ. ಒಮ್ಮೆ ಪ್ರಾರಂಭಿಸಿದ ಕೆಲಸವನ್ನು ಅರ್ಧಕ್ಕೆ ಬಿಡುವುದು ಇವರ ಸ್ವಭಾವವಲ್ಲ.

ಬಹುಮುಖ ಪ್ರತಿಭೆ ಮತ್ತು ಬುದ್ಧಿವಂತಿಕೆ:

  • ಮಲ್ಟಿ-ಟಾಸ್ಕಿಂಗ್: ಇವರು ಕೇವಲ ಒಂದು ಕೆಲಸಕ್ಕೆ ಸೀಮಿತವಾಗದೆ, ಏಕಕಾಲದಲ್ಲಿ ನಾಲ್ಕೈದು ಕೆಲಸಗಳನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿರುತ್ತಾರೆ.
  • ವ್ಯಕ್ತಿತ್ವ: ಇತರರನ್ನು ಸುಲಭವಾಗಿ ಮೆಚ್ಚಿಸುವ ಮತ್ತು ಪ್ರಭಾವಿಸುವ ಕಲೆ ಇವರಿಗೆ ಸಿದ್ಧಿಸಿರುತ್ತದೆ.
  • ವೃತ್ತಿಜೀವನ: ತಮ್ಮ ಬುದ್ಧಿವಂತಿಕೆಯಿಂದಾಗಿ ಇವರು ರಾಜಕೀಯ ಮತ್ತು ವ್ಯವಹಾರ ರಂಗದಲ್ಲಿ ಉನ್ನತ ಸ್ಥಾನಕ್ಕೇರುತ್ತಾರೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಪರೋಪಕಾರಿ ಗುಣ:

‘S’ ಅಕ್ಷರದವರು ಸಹಾಯ ಹಸ್ತ ಚಾಚುವುದರಲ್ಲಿ ಯಾವಾಗಲೂ ಮೊದಲಿಗರು. ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ಇತರರಿಗೆ ಸಹಾಯ ಮಾಡಲು ಇವರು ಹಿಂದೆಮುಂದೆ ನೋಡುವುದಿಲ್ಲ. ಕಷ್ಟಗಳನ್ನು ಮೆಟ್ಟಿ ನಿಂತು ಸಾಧನೆ ಮಾಡುವ ಛಲ ಇವರಲ್ಲಿ ಮನೆಮಾಡಿರುತ್ತದೆ.

ಎಚ್ಚರಿಕೆ ವಹಿಸಬೇಕಾದ ಅಂಶ:

ಇವರು ಎಲ್ಲಾ ಪರಿಸ್ಥಿತಿಗಳಿಗೂ ಚೆನ್ನಾಗಿ ಹೊಂದಿಕೊಂಡರೂ, ಇವರಲ್ಲಿ ಒಂದು ಸಣ್ಣ ಮೈನಸ್ ಪಾಯಿಂಟ್ ಎಂದರೆ ಹಠಮಾರಿತನ. ಕೆಲವೊಮ್ಮೆ ಈ ಹಠವೇ ಇವರನ್ನು ಸಂಕಷ್ಟಕ್ಕೆ ಸಿಲುಕಿಸಬಹುದು. ಆದ್ದರಿಂದ, ಅತಿಯಾದ ಹಠದ ವಿಷಯದಲ್ಲಿ ಇವರು ಸ್ವಲ್ಪ ಜಾಗರೂಕರಾಗಿರುವುದು ತಮ್ಮ ಏಳಿಗೆಗೆ ಒಳ್ಳೆಯದು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಾತ್ರೆಗೆ ಹಣ ಕೊಡದಿದ್ದಕ್ಕೆ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ: ಬಾಗಲಕೋಟೆಯಲ್ಲೊಂದು ಅಮಾನವೀಯ ಘಟನೆ – Kannada News | Bagalkote Social Boycott: 7 Families Ostracized Over Festival Fund Dispute

7 ಕುಟುಂಬಗಳಿಗೆ ಊರಿಂದ ಬಹಿಷ್ಕಾರImage Credit source: Tv9 Kannada

ಬಾಗಲಕೋಟೆ, ಮೇ 01: ರಾಜ್ಯ ಸರ್ಕಾರ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಕೆಲ ಅನಿಷ್ಟ ಪದ್ಧತಿಗಳಿಗೆ ಮಾತ್ರ ಬ್ರೇಕ್​​ ಬೀಳುತ್ತಿಲ್ಲ. ಇದಕ್ಕೆ ತಾಜಾ ಉದಾಹರಣೆಯೆಂದರೆ ಬಾಗಲಕೋಟೆ ಜಿಲ್ಲೆಯಲ್ಲಿ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ ಹಾಕಿರೋದು. ಹೌದು, ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂಪಾಯಿ ಹಣ ನೀಡಿಲ್ಲ ಎಂಬ ಕಾರಣಕ್ಕೆ ಕುಟುಂಬಗಳಿಗೆ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಯಲಪ್ಪ ಛಗಣ್ಣವರ, ಅಣ್ಣಪ್ಪ ಕಡಪಟ್ಟಿ, ಸಿದ್ದಪ್ಪ ಎಣ್ಣಿ, ಕರೆಪ್ಪ ಎಣ್ಣಿ, ಯಲ್ಲಪ್ಪ, ಮಲ್ಲಪ್ಪ ಬಟಕುರ್ಕಿ, ರಾಮಪ್ಪ ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿದೆ. ಸಾಲದ್ದಕ್ಕೆ ಈ 7 ಕುಟುಂಬ ಹೊರಗೆ ಇಟ್ಟಿದ್ದೇವೆ ಎಂದು ಡಂಗುರ ಕೂಡ ಸಾರಲಾಗಿದೆ.

ಏಪ್ರಿಲ್​​ 2ರಂದು ಹನುಮನ ಓಕುಳಿ ಜಾತ್ರೆ ಹಿನ್ನೆಲೆ ಹಣ ಸಂಗ್ರಹಕಾರ್ಯ ನಡೆದಿತ್ತು. ಆದರೆ ಈ 7 ಕುಟುಂಬಗಳು ದುಡ್ಡನ್ನು ನೀಡದ ಕಾರಣಕ್ಕೆ ಏಪ್ರಿಲ್​​ 5ರಂದು ಬಹಿಷ್ಕಾರದ ಬಗ್ಗೆ ಡಂಗುರ ಸಾರಲಾಗಿದೆ. ಇವರ ಮನೆಗೆ ಸ್ವಾಮಿಗಳು, ಪೂಜಾರಿಗಳು ಹೋಗುವ ಹಾಗಿಲ್ಲ. ಇವರ ಮನೆ ಕಾರ್ಯಗಳಿಗೆ ಯಾರೂ ಹೋಗಬಾರದು. ಕಿರಾಣಿ ಅಂಗಡಿಯವರು ಈ ಕುಟುಂಬಗಳಿಗೆ ಏನು ಕೊಡುವ ಹಾಗಿಲ್ಲ ಎಂದು ಡಂಗುರ ಸಾರಲಾಗಿದೆ.

ಇದನ್ನೂ ಓದಿ: ಬಾಗಲಕೋಟೆ ಕಾರ್ಮಿಕರ ಖಾತೆಗೆ ಕೋಟಿ ಕೋಟಿ ಹಣ; ಮುಂದಾಗಿದ್ದೇನು ಗೊತ್ತಾ?

ಬಹಿಷ್ಕಾರ ಹಾಕಿರೋದನ್ನು ಪ್ರಶ್ನಿಸಿದ ವ್ಯಕ್ತಿ

ಇನ್ನು ಬಹಿಷ್ಕಾರಕ್ಕೆ ಒಳಗಾಗಿರುವ 7 ಕುಟುಂಬಗಳ ಸದಸ್ಯರ ಪೈಕಿ ರೇಲ್ವೆ ಇಲಾಖೆಯ ನೌಕರರಾಗಿರುವ ಯಲ್ಲಪ್ಪ ಛಗಣ್ಣವರ ಈ ನಿರ್ಧಾರವನ್ನು ಪ್ರಶ್ನೆ ಮಾಡಿದ್ದಾರೆ. ಕುಟುಂಬಗಳಿಗೆ ಬಹಿಷ್ಕಾರ ಹಾಕಿರುವವರ ಮೇಲೆ ಕ್ರಮಕ್ಕೆ ಆಗ್ರಹಿಸಿರುವ ಅವರು, ಜಮಖಂಡಿ ತಹಶೀಲ್ದಾರ್​​, ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ನಮಗೆ ಊರಲ್ಲಿ ಬಹಿಷ್ಕಾರ ಹಾಕಿದ ಹಿನ್ನೆಲೆ ಅಪಮಾನವಾಗಿದೆ, ಗೌರವಕ್ಕೆ ಧಕ್ಕೆಯಾಗಿದೆ. ಹೀಗಾಗಿ ಡಂಗುರ ಸಾರಿದವರು ಮತ್ತು ಸಾರಿಸಿದವರ ಮೇಲೆ‌ ಕಾನೂನು ಕ್ರಮ ಆಗಬೇಕು. ಅವರಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ. ಊರಿಗೆ ಬಂದ ಅಧಿಕಾರಿಗಳು ಸಭೆ ನಡೆಸಿ ಎಲ್ಲರನ್ನೂ ಸಮಾಧಾನ ಮಾಡಿ ಹೋಗಿದ್ದಾರೆ. ಆದರೆ ನಮಗಾದ ಅಪಮಾನಕ್ಕೆ ಹೊಣೆ ಯಾರು ಎಂದು ಅವರು ಪ್ರಶ್ನಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜಬಲ್ಪುರ ದೋಣಿ ದುರಂತ, ಸಾವು ಬಂದ್ರೂ, ತಬ್ಬಿಕೊಂಡ ಮಗನನ್ನು ಬಿಡದ ತಾಯಿ – Kannada News | Jabalpur Boat Tragedy: Mother and Child Found Embraced After Bargi Dam Capsize

ಜಬಲ್ಪುರ, ಮೇ 1: ಮಧ್ಯಪ್ರದೇಶದ ಬಾರ್ಗಿ ಅಣೆಕಟ್ಟಿನಲ್ಲಿ ಕ್ರೂಸ್‌‍ ದೋಣಿ ಮುಳುಗಿ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನರ್ಮದಾ ನದಿಯ ಶಾಂತ ಅಲೆಗಳ ಮೇಲೆ ಸಾಗುತ್ತಿದ್ದ ಆ ಕ್ರೂಸ್ ದೋಣಿಯೇ ಅಲ್ಲಿದ್ದವರ ಪಾಲಿಗೆ ಯಮನಾಗಬಹುದು ಎನ್ನುವ ಕಲ್ಪನೆಯೂ ಇರಲಿಲ್ಲ. 30 ಜನರನ್ನು ಹೊತ್ತು ಹೊರಟಿದ್ದ ದೋಣಿ ಬಲವಾದ ಗಾಳಿ, ಅಲೆಯಿಂದಾಗಿ ಮಗುಚಿತ್ತು. ರಕ್ಷಣಾ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ನೀರಿನ ಆಳದಲ್ಲಿ ಮೃತದೇಹಗಳನ್ನು ಹುಡುಕುತ್ತಿದ್ದಾಗ ಕಂಡ ದೃಶ್ಯ ಅವರ ಕಣ್ಣಾಲಿಗಳನ್ನು ಒದ್ದೆ ಮಾಡಿತು.

ನಾಲ್ಕು ವರ್ಷದ ಪುಟ್ಟ ಮಗುವನ್ನು ಅವನ ತಾಯಿ ತನ್ನ ಎದೆಗೆ ಬಿಗಿಯಾಗಿ ಅಪ್ಪಿಕೊಂಡ ಸ್ಥಿತಿಯಲ್ಲೇ ಇಬ್ಬರೂ ಪ್ರಾಣಬಿಟ್ಟಿದ್ದರು. ಮಗುವನ್ನು ಸಾವಿನ ದವಡೆಯಿಂದ ಹೇಗಾದರೂ ಉಳಿಸಬೇಕೆಂಬ ಆ ತಾಯಿಯ ಹತಾಶ ಪ್ರಯತ್ನ ನೀರಿನ ಆಳದಲ್ಲೂ ಸ್ಥಿರವಾಗಿತ್ತು. ಇದೇ ಕುಟುಂಬದ ತಂದೆ ಮತ್ತು ಮಗಳು ಪಾರಾಗುವಲ್ಲಿ ಯಶಸ್ವಿಯಾಗಿದ್ದರೂ, ಪ್ರೀತಿಯ ತಾಯಿ ಮತ್ತು ಮಗನನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ್ದಾರೆ.

ದೋಣಿ ಅಸಮತೋಲನಗೊಳ್ಳುತ್ತಿತ್ತು ಮತ್ತು ನೀರಿನಿಂದ ತುಂಬಲು ಪ್ರಾರಂಭಿಸಿತು, ಕಣ್ಣು ಮಿಟುಕಿಸುವಷ್ಟರಲ್ಲಿ ಎಲ್ಲರೂ ಕಣ್ಮರೆಯಾದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಅಂದಿನ ಭೀಕರತೆಯನ್ನು ನೆನೆದಿದ್ದಾರೆ. ಏಕಾಏಕಿ ಹವಾಮಾನ ವೈಪರೀತ್ಯದಿಂದ ಎದ್ದ ಬಿರುಗಾಳಿ ಆಡುತ್ತಾ ನಲಿಯುತ್ತಿದ್ದ ಪ್ರವಾಸಿಗರ ಚೀರಾಟಕ್ಕೆ ಕಾರಣವಾಯಿತು. ಯಾರಿಗೂ ಏನಾಗುತ್ತಿದೆ ಎಂದು ತಿಳಿಯುವ ಮೊದಲೇ ದೋಣಿ ಜಲಸಮಾಧಿಯಾಗಿತ್ತು.

ಮತ್ತಷ್ಟು ಓದಿ: Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ

ಸೈಯದ್ ರಿಯಾಜ್ ಹುಸೇನ್ ಎಂಬುವವರು ಬದುಕುಳಿದ ರೀತಿ ಒಂದು ಪವಾಡವೇ ಸರಿ. ನನ್ನ ತಲೆ ಮಾತ್ರ ನೀರಿನ ಮೇಲಿರುವ ಸ್ಥಳದಲ್ಲಿ ನಾನು ಸಿಲುಕಿಕೊಂಡಿದ್ದೆ. ನನ್ನ ಹಿಂದೆ ದೇಹಗಳು ತೇಲುತ್ತಿರುವುದು ಕಾಣಿಸುತ್ತಿತ್ತು ಎಂದು ಅವರು ವಿವರಿಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಸಾವಿನ ನೆರಳಿನಲ್ಲಿ ಸಿಲುಕಿದ್ದ ಅವರನ್ನು ಅದೃಷ್ಟವಶಾತ್ ರಕ್ಷಣಾ ಪಡೆಗಳು ಗುರುತಿಸಿ ಬದುಕಿಸಿದವು. ಆದರೆ, ಅವರ ಕುಟುಂಬದವರು ಇನ್ನೂ ಕಾಣೆಯಾಗಿದ್ದು, ಅವರ ಹುಡುಕಾಟ ಮುಂದುವರಿದಿದೆ. ಮಗುವನ್ನು ಉಳಿಸಲು ಪ್ರಾಣವನ್ನೇ ಪಣಕ್ಕಿಟ್ಟ ಆ ತಾಯಿಯ ತ್ಯಾಗ ಶಾಶ್ವತವಾಗಿ ಜನರ ಮನದಲ್ಲಿ ಉಳಿಯಲಿದೆ.

ಕಾಣೆಯಾದ ಪ್ರಯಾಣಿಕರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ರಾತ್ರಿಯಿಡೀ ಮುಂದುವರೆದಿದ್ದು, ಸೇನೆ, ಎನ್‌ಡಿಆರ್‌ಎಫ್‌‍ ಮತ್ತು ಎಸ್‌‍ಡಿಆರ್‌ಎಫ್‌‍ ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ರಾಕೇಶ್‌ ಸಿಂಗ್‌ ತಿಳಿಸಿದ್ದಾರೆ. ಕ್ರೂಸ್‌‍ ದೋಣಿಯನ್ನು ನೀರಿನ ಮೂಲದಿಂದ ಹೊರತೆಗೆಯಲು ಹೈಡ್ರಾಲಿಕ್‌ ಕ್ರೇನ್‌ಗಳನ್ನು ಬಳಸಲಾಗುತ್ತಿದೆ ಎಂದು ಅವರು ಹೇಳಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಲವಾದ ಗಾಳಿಯಿಂದಾಗಿ ನೀರು ಒಡೆದು ಹೋಯಿತು, ಇದರಿಂದಾಗಿ ಹಡಗಿನಲ್ಲಿದ್ದ ಅನೇಕರು ಎಚ್ಚರಿಕೆ ನೀಡಿ ದೋಣಿಯನ್ನು ದಡಕ್ಕೆ ಹಿಂತಿರುಗಿಸುವಂತೆ ಸಿಬ್ಬಂದಿಯನ್ನು ಕೇಳಿದರು.

ಆದಾಗ್ಯೂ, ಸಿಬ್ಬಂದಿಗೆ ಈ ಕೂಗುಗಳು ಕೇಳಿಸಲಿಲ್ಲ, ಮತ್ತು ದೋಣಿ ಅಲೆಯಿತು ಮತ್ತು ನಂತರ ಪಲ್ಟಿಯಾಯಿತು ಎಂದು ಅವರು ಹೇಳಿದರು, ಕೆಲವು ಸ್ಥಳೀಯರು ಹಗ್ಗದ ಸಹಾಯದಿಂದ ಲೈಫ್‌ ಜಾಕೆಟ್‌ ಧರಿಸಿದ ಕೆಲವು ಪ್ರಯಾಣಿಕರನ್ನು ರಕ್ಷಿಸಿದರು. ಪಿಟಿಐ ವೀಡಿಯೊಗಳೊಂದಿಗೆ ಮಾತನಾಡಿದ ಮಧ್ಯಪ್ರದೇಶ ಪ್ರವಾಸೋದ್ಯಮ ಸಚಿವ ಧರ್ಮೇಂದ್ರ ಭಾವ್‌ ಸಿಂಗ್‌ ಲೋಧಿ, ಕೆಲವು ಪ್ರವಾಸಿಗರು ಇನ್ನೂ ಕಾಣೆಯಾಗಿದ್ದಾರೆ ಮತ್ತು ಅವರನ್ನು ಪತ್ತೆಹಚ್ಚಲು ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಹೇಳಿದರು.

ಜಬಲ್ಪುರದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ನರ್ಮದಾ ನದಿಯ ದಂಡೆಯಲ್ಲಿರುವ ಬರಗಿ ಅಣೆಕಟ್ಟೆಯಲ್ಲಿ ಮಧ್ಯಪ್ರದೇಶ ಪ್ರವಾಸೋದ್ಯಮ ನಿರ್ವಹಿಸುವ ರೆಸಾರ್ಟ್ ಹಲವಾರು ಜಲ ಕ್ರೀಡಾ ಚಟುವಟಿಕೆಗಳನ್ನು ನಿರ್ವಹಿಸುತ್ತದೆ.

ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಯಾದವ್ ಅವರು ಆರ್ಥಿಕ ನೆರವು ಘೋಷಿಸಿದ್ದಾರೆ. ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡಲು ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಮಾದಕವಸ್ತು ಸೇವನೆ ಕೇಸ್​​​ನಲ್ಲಿ ಫಿಟ್ ಮಾಡಿಸಿದ ಆರೋಪ – Kannada News | BSC Nursing Student Commits Suicide In BTL College Hostel at Bengaluru

ಬೆಂಗಳೂರು, (ಮೇ 01): ಹಾಸ್ಟೆಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ (Student) ಶವ ಪತ್ತೆಯಾಗಿದೆ. ಬೆಂಗಳೂರು (Bengaluru) ಹೊರವಲಯದ ಬೊಮ್ಮಸಂದ್ರದ ಬಿಟಿಎಲ್ ಕಾಲೇಜಿನ ಹಾಸ್ಟೆಲ್​ನಲ್ಲಿ ಎ.ಪಿ‌.ಆದಿತ್ಯ(19) ಶವ ಪತ್ತೆಯಾಗಿದ್ದು, ಈ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ. 2ನೇ ವರ್ಷದ ಬಿಎಸ್​ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆದಿತ್ಯ, ಏಪ್ರಿಲ್ 29ರಂದೇ ಹಾಸ್ಟೆಲ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಹಪಾಠಿಗಳು ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ. ಇನ್ನು  ಕಾಲೇಜು ಆಡಳಿತ ಮಂಡಳಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತ ಆದಿತ್ಯ ತಂದೆ ಪ್ರದೀಪ್ ಆರೋಪಿಸಿದ್ದಾರೆ.

ಮಾದಕವಸ್ತು ಸೇವನೆ ಕೇಸ್​​​ನಲ್ಲಿ ಮಗನನ್ನು ಸಿಲುಕಿಸಿ ವಿದ್ಯಾರ್ಥಿಗಳ ಮುಂದೆ ಅವಮಾನಿಸಿ ಮಾನಸಿಕ ಹಿಂಸೆ ನೀಡಲಾಗಿದೆ. ಇದರಿಂದ ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆದಿತ್ಯ ತಂದೆ ಪ್ರದೀಪ್ ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಸಾವು

ಇನ್ನೊಂದೆಡೆ ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. 9ನೇ ತರಗತಿ ಪಾಸ್ ಆಗಿದ್ದ ವರುಣ್(15) ಮೃತ ಬಾಲಕ.ಮನೆಯಿಂದ ಅಂಗಡಿಗೆ ವಾಪಸ್ ಬರುಗುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಹೆಣ್ಣೂರು ಸಂಚಾರಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Source link

ಎಲ್ಲ ಶಾಸಕರಿಗೂ ಆಲ್ಕೋಹಾಲ್ ಪರೀಕ್ಷೆಯಾಗಲಿ; ಪಂಜಾಬ್ ಸಿಎಂ ಕುಡಿದಿದ್ದಾರೆ ಎಂದು ಆರೋಪಿಸಿ ಸದನದಿಂದ ಹೊರನಡೆದ ಕಾಂಗ್ರೆಸ್ – Kannada News | Get alcohol test done High drama in Punjab assembly Congress alleges CM Bhagwant Mann was drunk

ಪಂಜಾಬ್, ಮೇ 1: ಪಂಜಾಬ್ ವಿಧಾನಸಭೆಯಲ್ಲಿ ಇಂದು ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಮತ್ತು ಅಕಾಲಿ ದಳ ಪಂಜಾಬ್​ನ ಸಿಎಂ ಭಗವಂತ್ ಮಾನ್ ಸದನದ ಕಲಾಪಗಳ ಸಮಯದಲ್ಲಿ ಕುಡಿದಿದ್ದರು ಎಂದು ಆರೋಪಿಸಿದೆ. ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಇಂದು ಪಂಜಾಬ್​​ನಲ್ಲಿ ವಿಶೇಷ ಅಧಿವೇಶನ ಕರೆಯಲಾಗಿತ್ತು. ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ ಕುಡಿದ ಸ್ಥಿತಿಯಲ್ಲಿ ಸದನಕ್ಕೆ ಬಂದಿದ್ದಾರೆ. ಹೀಗಾಗಿ ಸದನದಲ್ಲಿರುವ ಎಲ್ಲಾ ಶಾಸಕರಿಗೆ ಮದ್ಯ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿತು.

ಕಾರ್ಮಿಕ ದಿನದ ಸಂದರ್ಭದಲ್ಲಿ ನಿರ್ಣಯವನ್ನು ಅಂಗೀಕರಿಸಲು ಕರೆಯಲಾದ ದಿನವಿಡೀ ವಿಶೇಷ ಅಧಿವೇಶನವು ಸೌಹಾರ್ದಯುತ ರೀತಿಯಲ್ಲೇ ಪ್ರಾರಂಭವಾಯಿತು. ಆದರೆ ಸದನ ನಡೆಯುತ್ತಿರುವಾಗ ಕಾಂಗ್ರೆಸ್ ಶಾಸಕ ಸುಖ್‌ಪಾಲ್ ಸಿಂಗ್ ಖೈರಾ ಮೊಬೈಲ್ ಫೋನ್ ಬಳಸುವುದಕ್ಕೆ ಸಿಎಂ ಭಗವಂತ್ ಮಾನ್ ಆಕ್ಷೇಪಿಸಿದಾಗ ಚರ್ಚೆಗಳು ಬೇರೆ ದಿಕ್ಕಿನೆಡೆ ಸಾಗಿದವು.

ಇದನ್ನೂ ಓದಿ: Video:ಪಂಜಾಬ್​ನಲ್ಲಿ ಬಸ್ ಪಲ್ಟಿ, ಐವರು ಸಾವು, 15 ಮಂದಿಗೆ ಗಾಯ

ಸದನದಲ್ಲಿ ಅನುಸರಿಸಬೇಕಾದ ಒಂದು ಶಿಷ್ಟಾಚಾರವಿದೆ. ಅಲ್ಲಿ ಯಾರೂ ಕಾಲುಗಳನ್ನು ಚಾಚಿ ಕುಳಿತುಕೊಳ್ಳಬಾರದು ಎಂದು ಸಿಎಂ ಭಗವಂತ್ ಮಾನ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಖೈರಾ, ಹಿಂದಿನ ಅಧಿವೇಶನದಲ್ಲಿ ಸಂದರ್ಶಕರ ಗ್ಯಾಲರಿಯಲ್ಲಿ ಭಗವಂತ್ ಮಾನ್ ಅವರ ಪತ್ನಿ ಕಾಲಿನ ಮೇಲೆ ಕಾಲು ಹಾಕಿಕೊಂಡು ಕುಳಿತಿದ್ದರು ಎಂದು ಹೇಳಿದರು.

ಅದಕ್ಕೆ ಉತ್ತರಿಸಿದ ಸಿಎಂ, “ಅವರು ಕೂಡಲೆ ತಮ್ಮನ್ನು ತಾವು ಸರಿಪಡಿಸಿಕೊಂಡರು. ಅವರು ಸದನದ ಸದಸ್ಯರಲ್ಲ. ನೀವು ನನ್ನ ಮಗಳನ್ನು ಸಹ ಟಾರ್ಗೆಟ್ ಮಾಡಿದ್ದೀರಿ. ಇವರೆಲ್ಲ ಮನಸಿಗೆ ಬಂದಂತೆ ಮಾತಾಡುತ್ತಿದ್ದಾರೆ ಸ್ಪೀಕರ್ ಸಆಹೇಬ್. ವಿಧಾನಸಭೆಯ ಖರ್ಚಿನಲ್ಲಿ ಇವರಿಗೆ ವೈದ್ಯಕೀಯ ಚಿಕಿತ್ಸೆ ನೀಡಬೇಕು” ಎಂದು ಟೀಕಿಸಿದರು.

ಇದಾದ ಸ್ವಲ್ಪ ಸಮಯದ ನಂತರ, ಅಧಿಕೃತ ನಿರ್ಣಯದ ಮೇಲಿನ ಚರ್ಚೆ ಇನ್ನೂ ನಡೆಯುತ್ತಿರುವಾಗ, ಸಿಎಂ ಭಗವಂತ್ ಮಾನ್ ಸದನದಕ್ಕೆ ಕುಡಿದು ಬಂದಿದ್ದಾರೆ ಎಂದು ಖೈರಾ ಆರೋಪಿಸಿದರು. ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ ಅವರು ಈ ಆರೋಪವನ್ನು ಬೆಂಬಲಿಸಿದರು. ಅಲ್ಲದೆ ಸದನದಲ್ಲಿ ಹಾಜರಿದ್ದ ಎಲ್ಲಾ ಸದಸ್ಯರ ಮೇಲೆ ಮದ್ಯ ಪರೀಕ್ಷೆಯನ್ನು ನಡೆಸಬೇಕೆಂದು ಒತ್ತಾಯಿಸಿದರು, ಇದು ಭಾರೀ ವಾದ-ವಿವಾದಕ್ಕೆ ಕಾರಣವಾಯಿತು.

ಇದನ್ನೂ ಓದಿ: ನಾಚಿಕೆಗೇಡಿನ ಸಂಗತಿ; ಆಪರೇಷನ್ ಸಿಂಧೂರ್ ಕುರಿತ ಹೇಳಿಕೆಗೆ ಭಗವಂತ್ ಮಾನ್​ ವಿರುದ್ಧ ಬಿಜೆಪಿ ಟೀಕೆ

ಕಾಂಗ್ರೆಸ್ ಶಾಸಕರು ಸಭಾತ್ಯಾಗ ಮಾಡಿ ಸ್ಪೀಕರ್ ಅವರಲ್ಲಿ ಈ ಭಗವಂತ್ ಮಾನ್ ವಿರುದ್ದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಕಾಂಗ್ರೆಸ್ ನಾಯಕ ಸುಖ್‌ಪಾಲ್ ಸಿಂಗ್ ಖೈರಾ ಮದ್ಯ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಪ್ರತಾಪ್ ಸಿಂಗ್ ಬಜ್ವಾ, “ಮುಖ್ಯಮಂತ್ರಿಗಳೇ ಕುಡಿದ ಮತ್ತಿನಲ್ಲಿ ಇರುವ ವಿಧಾನಸಭೆಗೆ ಬಂದು ನಾವು ಏನು ಮಾಡಬೇಕು? ರಾಜ್ಯದ ಮುಖ್ಯಸ್ಥರೇ ಸಂಪೂರ್ಣವಾಗಿ ನಿದ್ದೆಗೆಟ್ಟಿರುವಾಗ ಅಧಿವೇಶನ ನಡೆಸುವ ಉದ್ದೇಶವೇನು? ಎಲ್ಲರ ಆಲ್ಕೋಹಾಲ್ ಪರೀಕ್ಷೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

IPL 2026: 30 ಅಥವಾ 40.. ಕೊಹ್ಲಿ ಪ್ರದರ್ಶನದ ಮೇಲೆ ನಿಂತಿದೆ ಆರ್​ಸಿಬಿ ಸೋಲು, ಗೆಲುವು – Kannada News | RCB’s Kohli Dependence: Stats Reveal Why rcb Loses When Virat Falls Early

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ (RCB vs GT) ವಿರುದ್ಧ 4 ವಿಕೆಟ್‌ಗಳ ಹೀನಾಯ ಸೋಲು ಕಂಡಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅನುಭವಿ ವಿರಾಟ್ ಕೊಹ್ಲಿ (Virat Kohli) 13 ಎಸೆತಗಳಲ್ಲಿ 28 ರನ್‌ಗಳಿಸಿ ಔಟಾದ ಬಳಿಕ ತಂಡದ ಬ್ಯಾಟಿಂಗ್ ಸಂಪೂರ್ಣವಾಗಿ ಕುಸಿಯಿತು. ಇದರ ಪರಿಣಾಮವಾಗಿ ತಂಡವು 19.2 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ಸುಲಭವಾಗಿ ಜಯ ಸಾಧಿಸಿತು. ವಿರಾಟ್ ಕೊಹ್ಲಿ ಬೇಗನೇ ಔಟಾದಗಲೇ ಆರ್​ಸಿಬಿ ಸೋಲು ಖಚಿತವಾಗಿತ್ತು. ಏಕೆಂದರೆ ಅಂಕಿ ಅಂಶಗಳು ಕೂಡ ಇದನ್ನೇ ಹೇಳಿದ್ದವು.

ಕೊಹ್ಲಿ ಪ್ರದರ್ಶನವೇ ಮುಖ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರಂಭದಿಂದಲೂ ವಿರಾಟ್ ಕೊಹ್ಲಿಯ ಮೇಲೆ ಅವಲಂಬಿತವಾಗಿದೆ. ಆದರೆ ಕಳೆದ ಎರಡು ಆವೃತ್ತಿಗಳಿಂದ ತಂಡದ ಸೋಲು, ಗೆಲುವು ನಿಶ್ಚಯವಾಗುವುದು ಕೊಹ್ಲಿಯ ಪ್ರದರ್ಶನದ ಮೇಲೆ ಎಂಬಂತ್ತಾಗಿದೆ. ಅಂಕಿ ಅಂಶಗಳು ಕೂಡ ಇದನ್ನೇ ಹೇಳುತ್ತಿದ್ದು, ಕೊಹ್ಲಿ ಕ್ರೀಸ್‌ನಲ್ಲಿ ಉಳಿದು ದೀರ್ಘ ಇನ್ನಿಂಗ್ಸ್ ಆಡಿದಾಗ, ತಂಡವು ಹೆಚ್ಚಿನ ಪಂದ್ಯಗಳನ್ನು ಗೆದ್ದಿದೆ. ಆದರೆ ಕೊಹ್ಲಿ ಬೇಗನೆ ಔಟಾದಾಗ, ಆರ್‌ಸಿಬಿ ಹೆಚ್ಚು ಪಂದ್ಯಗಳನ್ನು ಸೋತಿದೆ.

30 ಎಸೆತ ಅಥವಾ 40 ಕ್ಕೂ ಹೆಚ್ಚು ರನ್

ಕಳೆದ ಆವೃತ್ತಿಯಿಂದ ವಿರಾಟ್ ಕೊಹ್ಲಿ 40 ರನ್‌ಗಳಿಗಿಂತ ಕಡಿಮೆ ರನ್‌ಗಳಿಗೆ ಔಟಾದಾಗಲೆಲ್ಲಾ, ಆರ್‌ಸಿಬಿಯ ಗೆಲುವಿನ ಶೇಕಡಾವಾರು ಕೇವಲ 33.33% ರಷ್ಟಿದೆ. ಆದಾಗ್ಯೂ, ಕೊಹ್ಲಿ 40 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು ಗಳಿಸಿದಾಗ, ತಂಡದ ಗೆಲುವಿನ ಶೇಕಡಾವಾರು 92.85% ಕ್ಕೆ ಏರುತ್ತದೆ. ಅದೇ ರೀತಿ, ಕೊಹ್ಲಿ 30 ಅಥವಾ ಅದಕ್ಕಿಂತ ಹೆಚ್ಚು ಎಸೆತಗಳನ್ನು ಎದುರಿಸಿದಾಗ, ಆರ್‌ಸಿಬಿಯ ಗೆಲುವಿನ ಶೇಕಡಾವಾರು 100% ರಷ್ಟಿದೆ. ಆದಾಗ್ಯೂ, ಕೊಹ್ಲಿ 30 ಕ್ಕಿಂತ ಕಡಿಮೆ ಎಸೆತಗಳಿಗೆ ಔಟಾದಾಗ, ತಂಡದ ಗೆಲುವಿನ ಶೇಕಡಾವಾರು ಕೇವಲ 30% ಕ್ಕೆ ಇಳಿಯುತ್ತದೆ. ಇದಕ್ಕೆ ಉದಾಹರಣೆ ಎಂಬಂತೆ ಗುಜರಾತ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 30 ಎಸೆತಗಳನ್ನು ಅಥವಾ 40 ಕ್ಕಿಂತ ಹೆಚ್ಚು ರನ್‌ಗಳನ್ನು ಗಳಿಸಲು ಸಾಧ್ಯವಾಗಲಿಲ್ಲ, ಇದರ ಪರಿಣಾಮವಾಗಿ ಆರ್‌ಸಿಬಿ ಹೀನಾಯ ಸೋಲಿಗೆ ಕೊರಳೊಡ್ಡಬೇಕಾಯಿತು.

ಆರ್‌ಸಿಬಿಗೆ ಈಗ ಆತಂಕಕಾರಿ ಅಂಶವೆಂದರೆ ತಂಡದ ಯಶಸ್ಸು ವಿರಾಟ್ ಕೊಹ್ಲಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದು. ಕೊಹ್ಲಿ ದೊಡ್ಡ ಇನ್ನಿಂಗ್ಸ್ ಆಡಿದಾಗ ಅಥವಾ ದೀರ್ಘಕಾಲದವರೆಗೆ ಕ್ರೀಸ್‌ನಲ್ಲಿದ್ದಾಗ, ಇತರ ಬ್ಯಾಟ್ಸ್‌ಮನ್‌ಗಳು ಆತ್ಮವಿಶ್ವಾಸವನ್ನು ಗಳಿಸುತ್ತಾರೆ, ಇದು ಸ್ಕೋರಿಂಗ್ ಸುಲಭಗೊಳಿಸುತ್ತದೆ. ಆದರೆ ಅವರು ಬೇಗನೆ ಔಟಾದರೆ, ಇಡೀ ಬ್ಯಾಟಿಂಗ್ ಘಟಕವು ಒತ್ತಡಕ್ಕೆ ಒಳಗಾಗುತ್ತದೆ. ಹೀಗಾಗಿ ತಂಡವು ಶೀಘ್ರದಲ್ಲೇ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಾಗುತ್ತದೆ, ಮತ್ತು ಇತರ ಆಟಗಾರರು ಜವಾಬ್ದಾರಿಯನ್ನು ಹೊರಬೇಕಾಗುತ್ತದೆ, ಇಲ್ಲದಿದ್ದರೆ ಮುಂಬರುವ ಪಂದ್ಯಗಳಲ್ಲಿ ತಂಡವು ಮತ್ತಷ್ಟು ನಷ್ಟಗಳನ್ನು ಎದುರಿಸಬೇಕಾಗುತ್ತದೆ.

GT vs RCB: ಏಷ್ಯಾದಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ವಿರಾಟ್ ಕೊಹ್ಲಿ

9 ಪಂದ್ಯಗಳಲ್ಲಿ 379 ರನ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಸ್ತುತ ಒಂಬತ್ತು ಪಂದ್ಯಗಳಲ್ಲಿ ಆರರಲ್ಲಿ ಜಯ ಸಾಧಿಸಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದಕ್ಕೆ ವಿರಾಟ್ ಕೊಹ್ಲಿ ಅವರ ಫಾರ್ಮ್ ಪ್ರಮುಖ ಕಾರಣ. ಅವರು ಒಂಬತ್ತು ಪಂದ್ಯಗಳಲ್ಲಿ 54.14 ರ ಸರಾಸರಿಯಲ್ಲಿ 379 ರನ್ ಗಳಿಸಿದ್ದಾರೆ, ಇದರಲ್ಲಿ ಮೂರು ಅರ್ಧಶತಕಗಳು ಸೇರಿವೆ. ಈ ಆವೃತ್ತಿಯಲ್ಲಿ ಆರ್‌ಸಿಬಿ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ವಿರಾಟ್. ಕೊಹ್ಲಿ ಹೊರತುಪಡಿಸಿ ಆರ್‌ಸಿಬಿಯ ಬೇರೆ ಯಾವುದೇ ಆಟಗಾರ 300 ರನ್‌ಗಳ ಗಡಿಯನ್ನು ತಲುಪಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:30 pm, Fri, 1 May 26

Source link

SSLC ಪರೀಕ್ಷೆ ವೇಳೆ ಕನ್ನಡದಲ್ಲಿಯೇ ವಿದ್ಯಾರ್ಥಿಗಳು ಫೇಲ್​​ ಆಗ್ತಿರೋದೇಕೆ?: ಅಚ್ಚರಿಯ ಮಾಹಿತಿ ಬಹಿರಂಗ – Kannada News | SSLC Kannada Failure: KDA Unveils Reasons, Recommends Reforms

ಬೆಂಗಳೂರು, ಮೇ 01: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ತೆಗೆದುಕೊಂಡಿದ್ದ ಸುಮಾರು 19,000 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಹೀಗಾಗಿ ಇದಕ್ಕೆ ಕಾರಣಗಳನ್ನು ಅಧ್ಯಯನ ಮಾಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದ ಸಮಿತಿ ಹಲವು ಮಹತ್ವದ ಶಿಫಾರಸುಗಳನ್ನು ಮಾಡಿದೆ. ಕನಿಷ್ಠ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರ್ಕಾರದ ಉದ್ಯೋಗಗಳಲ್ಲಿ ಶೇ. 25ರಷ್ಟು ಮೀಸಲಾತಿ ನೀಡಬೇಕು ಎಂದು ಸಮಿತಿ ಹೇಳಿದ್ದು, ಇದರಿಂದ ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳಿಗೆ ಉತ್ತೇಜನ ಸಿಗಲಿದೆ ಎಂದು ತಿಳಿಸಿದೆ.

ವಿದ್ಯಾರ್ಥಿಗಳ ಅನುತ್ತೀರ್ಣಕ್ಕೆ ಕಾರಣವೇನು?

ರಾಜ್ಯ ಮತ್ತು ಕೇಂದ್ರ ಪಠ್ಯಕ್ರಮಗಳ ನಡುವಿನ ಏಕರೂಪತೆಯ ಕೊರತೆ, ಶಿಕ್ಷಣದ ವಿವಿಧ ಹಂತಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸದಿರುವುದು, ಪ್ರಾಥಮಿಕ ಹಂತದಿಂದಲೇ ಕಲಿಕೆ ಫಲಿತಾಂಶ ಅಳೆಯುವ ಪರೀಕ್ಷೆಗಳ ಕೊರತೆ, ಕನ್ನಡದಲ್ಲಿ ಸಾಧನೆ ಮಾಡುವವರಿಗೆ ಪ್ರೋತ್ಸಾಹ ಸಿಗದಿರುವುದು, ಭಾಷಾ ಕಲಿಕೆಗೆ ಅನುಕೂಲಕರವಲ್ಲದ ಪಠ್ಯಪುಸ್ತಕಗಳೇ ವಿದ್ಯಾರ್ಥಿಗಳ ಅನುತ್ತೀರ್ಣತೆಗೆ ಪ್ರಮುಖ ಕಾರಣಗಳೆಂದು ವರದಿ ಹೇಳಿದೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ರಾಜ್ಯ ಸರ್ಕಾರದ ‘ಶಿಕ್ಷಣ ಗ್ಯಾರಂಟಿ’ ಅಸ್ತ್ರ!

ಸಮಿತಿಯ ಶಿಫಾರಸುಗಳೇನು?

  • ತ್ರಿ ಭಾಷಾ ನೀತಿ ರದ್ದುಗೊಳಿಸಿ ದ್ವಿಭಾಷಾ ನೀತಿ ಅನುಸರಿಸುವುದು
  • ಪ್ರಾಥಮಿಕ ಹಂತದಿಂದಲೇ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪಾರಂಗತತೆ ಕಲ್ಪಿಸುವುದು
  • ಭಾಷಾ ಪರಿಣತಿ, ತರಬೇತಿ ಹೊಂದಿದ ಶಿಕ್ಷಕರ ನೇಮಕ
  • ಕನ್ನಡದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಉನ್ನತ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಆದ್ಯತೆ
  • ವಿಷಯಾಧಾರಿತ ಪಠ್ಯಗಳ ಬದಲು ಭಾಷಾ ಕಲಿಕೆಗೆ ಒತ್ತು ನೀಡುವ ಪಠ್ಯಪುಸ್ತಕ ರಚನೆ

ಡಾ. ನಿರಂಜನಾರಾಧ್ಯ ವಿ.ಪಿ ನೇತೃತ್ವದ ಸಮಿತಿ ಕಳೆದ 10 ವರ್ಷಗಳ ಅಂಕಿ-ಅಂಶಗಳನ್ನು ಪರಿಶೀಲಿಸಿ, ರಾಜ್ಯದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸ್ಥಿತಿಯನ್ನು ಅಧ್ಯಯನ ಮಾಡಿ ಈ ಶಿಫಾರಸುಗಳನ್ನು ನೀಡಿದೆ. ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಅವರು ‘ಕನ್ನಡದಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿರುವ ಕಾರಣಗಳು ಮತ್ತು ಅಗತ್ಯ ಸುಧಾರಣೆಗಳು’ ಕುರಿತ ವರದಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಸಲ್ಲಿಕೆ ಮಾಡಿದ್ದಾರೆ ಎಂದು ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಹೋಟೆಲ್ ಮಾಲೀಕರ ಸಂಘ: ಗ್ರಾಹಕರ ಸಂಖ್ಯೆ ಇಳಿಕೆ ಆತಂಕ – Kannada News | Hotel Owners’ Association spark on Commercial LPG Cylinder Price Hike, Fear of Declining Customer Numbers

ಬೆಂಗಳೂರು, ಮೇ 01: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊಂಡ ಬಳಿಕ 3ನೇ ಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ (Commercial LPG price hike) ಮಾಡಲಾಗಿದೆ. ಮಾರ್ಚ್‌ನಲ್ಲಿ 144 ರೂ, ಏಪ್ರಿಲ್‌ನಲ್ಲಿ 200 ರೂ ಹಾಗೂ ಇದೀಗ ಮೂರನೇ ಬಾರಿಗೆ 993 ರೂ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಎಲ್ಲೆಡೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ರಾಜ್ಯದಲ್ಲಿ ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯ ಎಫೆಕ್ಟ್ ತಟ್ಟಿದ್ದು, ಹೋಟೆಲ್ ಮಾಲೀಕರಿಂದ ವಿರೋಧ ವ್ಯಕ್ತವಾಗಿದ್ದು, ಮೊದಲಿನ ದರ ಮುಂದುವರೆಸುವಂತೆ ಕೇಂದ್ರಕ್ಕೆ ಆಗ್ರಹಿಸಿದ್ದಾರೆ.

ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಗೆ ಬೆಂಗಳೂರಿನಲ್ಲಿ ಹೋಟೆಲ್ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಮತ್ತೆ ಈ ರೀತಿ ಬೆಲೆ ಏರಿಕೆ ಮಾಡುತ್ತಿರುವುದು ತಪ್ಪು. ಬ್ಲಾಕ್ ಮಾರ್ಕೆಟ್​ನಲ್ಲಿ ಆಗುತ್ತಿರುವ ಮಾರಾಟಕ್ಕೆ ಮೊದಲು ಬ್ರೇಕ್ ಹಾಕಬೇಕು ಎಂದು ಈಶಾ ದೋಸೆ ಪಾಯಿಂಟ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಹಕರ ಮೇಲೆ ಹೊರೆ ಹಾಕಬೇಕಾದ ಅನಿವಾರ್ಯತೆ

ಭರಣಿ ಕೆಫೆ ಹೋಟೆಲ್ ಮಾಲೀಕರು ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.​​ ಸಿಲಿಂಡರ್ ಅಭಾವ ಇನ್ನು ಕೂಡ ಸರಿಯಾಗಿಲ್ಲ. ಇದರ ಮಧ್ಯೆ ಏಕಾಏಕಿ ಈ ರೀತಿ ದರ ಏರಿಕೆ ಮಾಡಿದ್ದು ಸರಿಯಲ್ಲ. ಮತ್ತೆ ಗ್ರಾಹಕರ ಮೇಲೆ ಹೊರೆ ಹಾಕಬೇಕಾದ ಅನಿವಾರ್ಯತೆ ಬರುತ್ತೆ ಎಂದಿದ್ದಾರೆ.

ದರ ಏರಿಕೆ ಮಾಡಿದರೆ ಜನ ಪ್ರಶ್ನಿಸುತ್ತಾರೆ: ಪ್ರಸಾದಂ ಹೋಟೆಲ್ ಮಾಲೀಕ ದೀಪು

ಇನ್ನು ಈ ಬಗ್ಗೆ ಚಿತ್ರದುರ್ಗ ಪ್ರಸಾದಂ ಹೋಟೆಲ್ ಮಾಲೀಕ ದೀಪು ಅವರು ಕಿಡಿಕಾರಿದ್ದಾರೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ ತಿಳಿದು ಆಘಾತ ಆಗಿದೆ. ಏಕಾಏಕಿ ಶೇ.45-50ರಷ್ಟು ದರ ಏರಿಕೆ ಮಾಡಲಾಗಿದೆ. ನಾವು ಉಪಹಾರದ ದರ ಏರಿಸಿದರೆ ಜನ ಪ್ರಶ್ನಿಸುತ್ತಾರೆ. ಹೋಟೆಲ್​ಗೆ ಬರುವ ಗ್ರಾಹಕರ ಸಂಖ್ಯೆ ಕ್ಷೀಣಿಸುತ್ತದೆ. ರಾಜ್ಯಮಟ್ಟದಲ್ಲಿ ಹೋಟೆಲ್ ಮಾಲೀಕರು ಸೇರಿ ಈ ಬಗ್ಗೆ ಚರ್ಚಿಸುತ್ತೇವೆ. ಈ ಮೊದಲಿನ ದರ ಮುಂದುವರೆಸಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸುತ್ತೇವೆ ಎಂದಿದ್ದಾರೆ.

ರಾಜ್ಯ ಹೋಟೆಲ್ ಮಾಲೀಕರ ಸಂಘದ ಉಪಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಿಷ್ಟು 

ರಾಜ್ಯ ಹೋಟೆಲ್ ಮಾಲೀಕರ ಸಂಘದ ಉಪಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಪ್ರತಿಕ್ರಿಯಿಸಿದ್ದು, ಸಿಲಿಂಡರ್ ಬೆಲೆ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್ ಉದ್ಯಮಿಗಳಿಗೆ ಆರ್ಥಿಕ ಹೊರೆಯಾಗಲಿದೆ. ಬೆಲೆ ಏರಿಕೆಯಿಂದ ಆಹಾರ ಬೆಲೆಗಳ ಏರಿಕೆ ಮಾಡಬೇಕಾದ ಭೀತಿ ಶುರುವಾಗಿದೆ. ಈಗಾಗಲೇ ಹೋಟೆಲ್ ಉದ್ಯಮಿಗಳು ಸಂಕಷ್ಟದಲ್ಲಿದ್ದಾರೆ. ಬೆಲೆ ಏರಿಕೆಯಿಂದ ಮತ್ತಷ್ಟು ಸಮಸ್ಯೆ ಶುರುವಾಗಿದೆ. ಒಮ್ಮೆಲೆ ಈ ರೀತಿಯಾಗಿ ಬೆಲೆ ಏರಿಕೆ ಮಾಡಿದರೆ ಗ್ರಾಹಕರಿಗೂ ಹೊರೆಯಾಗುತ್ತದೆ. ಗ್ಯಾಸ್ ಲಭ್ಯತೆಯೇ ಸಮರ್ಪಕವಾಗಿ ಇಲ್ಲ, ಈಗ ಬೆಲೆ ಏರಿಕೆ ಮಾಡಿರುವುದು ಉದ್ಯಮಿಗಳು ಮತ್ತಷ್ಟು ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

CBSE Class 12 Results 2026: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ದಿನಾಂಕದ ಕುರಿತ ವದಂತಿಗಳಿಗೆ ಬ್ರೇಕ್ ಹಾಕಿದ ಮಂಡಳಿ! – Kannada News | CBSE Class 12 Results 2026: Official Date and Clarification on Rumors

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 12ನೇ ತರಗತಿಯ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಪರೀಕ್ಷಾ ನಿಯಂತ್ರಕರು ಸ್ಪಷ್ಟನೆ ನೀಡಿದ್ದಾರೆ. ಫಲಿತಾಂಶ ಪ್ರಕಟಣೆಯ ನಿಖರವಾದ ಸಮಯ ಮತ್ತು ನಿರೀಕ್ಷಿತ ದಿನಾಂಕದ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.

ಪರೀಕ್ಷಾ ನಿಯಂತ್ರಕರ ಸ್ಪಷ್ಟನೆ ಏನು?

ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ಫಲಿತಾಂಶದ ದಿನಾಂಕದ ಬಗ್ಗೆ ಅನೇಕ ಸುಳ್ಳು ಸುದ್ದಿಗಳು ಹರಡುತ್ತಿದ್ದವು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತವಲ್ಲದ ಮಾಹಿತಿಯನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ. ಪ್ರಸ್ತುತ ಮೌಲ್ಯಮಾಪನ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಮಂಡಳಿಯು ನಿಗದಿತ ವೇಳಾಪಟ್ಟಿಯ ಪ್ರಕಾರವೇ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

ಫಲಿತಾಂಶ ಯಾವಾಗ ಪ್ರಕಟವಾಗಬಹುದು?

  • ನಿರೀಕ್ಷಿತ ಸಮಯ: ಪರೀಕ್ಷಾ ನಿಯಂತ್ರಕರ ಪ್ರಕಾರ, ಮೇ ತಿಂಗಳ ಮಧ್ಯಭಾಗದಲ್ಲಿ ಅಥವಾ ಮೂರನೇ ವಾರದಲ್ಲಿ ಫಲಿತಾಂಶ ಹೊರಬರುವ ಸಾಧ್ಯತೆಯಿದೆ.
  • ಅಧಿಕೃತ ಘೋಷಣೆ: ಫಲಿತಾಂಶದ ದಿನಾಂಕವನ್ನು ಘೋಷಿಸುವ ಮುನ್ನ ಮಂಡಳಿಯು ತನ್ನ ಅಧಿಕೃತ ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಮುನ್ಸೂಚನೆ ನೀಡಲಿದೆ.

ಇದನ್ನೂ ಓದಿ: ಎಸ್​ಎಸ್​ಎಲ್​ಸಿ ನಂತರ AI ಲೋಕಕ್ಕೆ ಎಂಟ್ರಿ ಕೊಡಬೇಕೇ? ಟಾಪ್ ಕೋರ್ಸ್‌ಗಳ ವಿವರ ಇಲ್ಲಿವೆ

ಫಲಿತಾಂಶ ವೀಕ್ಷಿಸುವುದು ಹೇಗೆ?

ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಈ ಕೆಳಗಿನ ವೇದಿಕೆಗಳಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದು:

  • ಅಧಿಕೃತ ವೆಬ್‌ಸೈಟ್‌ಗಳು: results.cbse.nic.in ಮತ್ತು cbse.gov.in
  • ಡಿಜಿಲಾಕರ್ (DigiLocker): ವಿದ್ಯಾರ್ಥಿಗಳು ತಮ್ಮ ಡಿಜಿಟಲ್ ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳನ್ನು ಡಿಜಿಲಾಕರ್ ಮೂಲಕವೂ ಪಡೆಯಬಹುದು.
  • ಉಮಾಂಗ್ ಆ್ಯಪ್ (UMANG): ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಸೂಚನೆ:

ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಲಾಗಿನ್ ವಿವರಗಳಾದ ರೋಲ್ ನಂಬರ್, ಸ್ಕೂಲ್ ನಂಬರ್ ಮತ್ತು ಅಡ್ಮಿಟ್ ಕಾರ್ಡ್ ಐಡಿಯನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ಯಾವುದೇ ಗೊಂದಲಗಳಿದ್ದಲ್ಲಿ ಅಧಿಕೃತ ವೆಬ್‌ಸೈಟ್ ಮಾತ್ರ ಗಮನಿಸಲು ಮಂಡಳಿ ತಿಳಿಸಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link