Headlines

ಜಾತ್ರೆಗೆ ಹಣ ಕೊಡದಿದ್ದಕ್ಕೆ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ: ಬಾಗಲಕೋಟೆಯಲ್ಲೊಂದು ಅಮಾನವೀಯ ಘಟನೆ – Kannada News | Bagalkote Social Boycott: 7 Families Ostracized Over Festival Fund Dispute

7 ಕುಟುಂಬಗಳಿಗೆ ಊರಿಂದ ಬಹಿಷ್ಕಾರImage Credit source: Tv9 Kannada ಬಾಗಲಕೋಟೆ, ಮೇ 01: ರಾಜ್ಯ ಸರ್ಕಾರ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಕೆಲ ಅನಿಷ್ಟ ಪದ್ಧತಿಗಳಿಗೆ ಮಾತ್ರ ಬ್ರೇಕ್​​ ಬೀಳುತ್ತಿಲ್ಲ. ಇದಕ್ಕೆ ತಾಜಾ ಉದಾಹರಣೆಯೆಂದರೆ ಬಾಗಲಕೋಟೆ ಜಿಲ್ಲೆಯಲ್ಲಿ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ ಹಾಕಿರೋದು. ಹೌದು, ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂಪಾಯಿ ಹಣ ನೀಡಿಲ್ಲ ಎಂಬ ಕಾರಣಕ್ಕೆ ಕುಟುಂಬಗಳಿಗೆ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಯಲಪ್ಪ…

Read More

ಜಬಲ್ಪುರ ದೋಣಿ ದುರಂತ, ಸಾವು ಬಂದ್ರೂ, ತಬ್ಬಿಕೊಂಡ ಮಗನನ್ನು ಬಿಡದ ತಾಯಿ – Kannada News | Jabalpur Boat Tragedy: Mother and Child Found Embraced After Bargi Dam Capsize

ಜಬಲ್ಪುರ, ಮೇ 1: ಮಧ್ಯಪ್ರದೇಶದ ಬಾರ್ಗಿ ಅಣೆಕಟ್ಟಿನಲ್ಲಿ ಕ್ರೂಸ್‌‍ ದೋಣಿ ಮುಳುಗಿ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನರ್ಮದಾ ನದಿಯ ಶಾಂತ ಅಲೆಗಳ ಮೇಲೆ ಸಾಗುತ್ತಿದ್ದ ಆ ಕ್ರೂಸ್ ದೋಣಿಯೇ ಅಲ್ಲಿದ್ದವರ ಪಾಲಿಗೆ ಯಮನಾಗಬಹುದು ಎನ್ನುವ ಕಲ್ಪನೆಯೂ ಇರಲಿಲ್ಲ. 30 ಜನರನ್ನು ಹೊತ್ತು ಹೊರಟಿದ್ದ ದೋಣಿ ಬಲವಾದ ಗಾಳಿ, ಅಲೆಯಿಂದಾಗಿ ಮಗುಚಿತ್ತು. ರಕ್ಷಣಾ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ನೀರಿನ ಆಳದಲ್ಲಿ ಮೃತದೇಹಗಳನ್ನು ಹುಡುಕುತ್ತಿದ್ದಾಗ ಕಂಡ ದೃಶ್ಯ ಅವರ ಕಣ್ಣಾಲಿಗಳನ್ನು ಒದ್ದೆ ಮಾಡಿತು. ನಾಲ್ಕು ವರ್ಷದ ಪುಟ್ಟ ಮಗುವನ್ನು…

Read More

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಮಾದಕವಸ್ತು ಸೇವನೆ ಕೇಸ್​​​ನಲ್ಲಿ ಫಿಟ್ ಮಾಡಿಸಿದ ಆರೋಪ – Kannada News | BSC Nursing Student Commits Suicide In BTL College Hostel at Bengaluru

ಬೆಂಗಳೂರು, (ಮೇ 01): ಹಾಸ್ಟೆಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ (Student) ಶವ ಪತ್ತೆಯಾಗಿದೆ. ಬೆಂಗಳೂರು (Bengaluru) ಹೊರವಲಯದ ಬೊಮ್ಮಸಂದ್ರದ ಬಿಟಿಎಲ್ ಕಾಲೇಜಿನ ಹಾಸ್ಟೆಲ್​ನಲ್ಲಿ ಎ.ಪಿ‌.ಆದಿತ್ಯ(19) ಶವ ಪತ್ತೆಯಾಗಿದ್ದು, ಈ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ. 2ನೇ ವರ್ಷದ ಬಿಎಸ್​ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆದಿತ್ಯ, ಏಪ್ರಿಲ್ 29ರಂದೇ ಹಾಸ್ಟೆಲ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಹಪಾಠಿಗಳು ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ. ಇನ್ನು  ಕಾಲೇಜು ಆಡಳಿತ ಮಂಡಳಿ ಕಿರುಕುಳದಿಂದ…

Read More

ಎಲ್ಲ ಶಾಸಕರಿಗೂ ಆಲ್ಕೋಹಾಲ್ ಪರೀಕ್ಷೆಯಾಗಲಿ; ಪಂಜಾಬ್ ಸಿಎಂ ಕುಡಿದಿದ್ದಾರೆ ಎಂದು ಆರೋಪಿಸಿ ಸದನದಿಂದ ಹೊರನಡೆದ ಕಾಂಗ್ರೆಸ್ – Kannada News | Get alcohol test done High drama in Punjab assembly Congress alleges CM Bhagwant Mann was drunk

ಪಂಜಾಬ್, ಮೇ 1: ಪಂಜಾಬ್ ವಿಧಾನಸಭೆಯಲ್ಲಿ ಇಂದು ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಮತ್ತು ಅಕಾಲಿ ದಳ ಪಂಜಾಬ್​ನ ಸಿಎಂ ಭಗವಂತ್ ಮಾನ್ ಸದನದ ಕಲಾಪಗಳ ಸಮಯದಲ್ಲಿ ಕುಡಿದಿದ್ದರು ಎಂದು ಆರೋಪಿಸಿದೆ. ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಇಂದು ಪಂಜಾಬ್​​ನಲ್ಲಿ ವಿಶೇಷ ಅಧಿವೇಶನ ಕರೆಯಲಾಗಿತ್ತು. ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ ಕುಡಿದ ಸ್ಥಿತಿಯಲ್ಲಿ ಸದನಕ್ಕೆ ಬಂದಿದ್ದಾರೆ. ಹೀಗಾಗಿ ಸದನದಲ್ಲಿರುವ ಎಲ್ಲಾ ಶಾಸಕರಿಗೆ ಮದ್ಯ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿತು. ಕಾರ್ಮಿಕ ದಿನದ ಸಂದರ್ಭದಲ್ಲಿ ನಿರ್ಣಯವನ್ನು…

Read More

IPL 2026: 30 ಅಥವಾ 40.. ಕೊಹ್ಲಿ ಪ್ರದರ್ಶನದ ಮೇಲೆ ನಿಂತಿದೆ ಆರ್​ಸಿಬಿ ಸೋಲು, ಗೆಲುವು – Kannada News | RCB’s Kohli Dependence: Stats Reveal Why rcb Loses When Virat Falls Early

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ (RCB vs GT) ವಿರುದ್ಧ 4 ವಿಕೆಟ್‌ಗಳ ಹೀನಾಯ ಸೋಲು ಕಂಡಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅನುಭವಿ ವಿರಾಟ್ ಕೊಹ್ಲಿ (Virat Kohli) 13 ಎಸೆತಗಳಲ್ಲಿ 28 ರನ್‌ಗಳಿಸಿ ಔಟಾದ ಬಳಿಕ ತಂಡದ ಬ್ಯಾಟಿಂಗ್ ಸಂಪೂರ್ಣವಾಗಿ ಕುಸಿಯಿತು….

Read More

SSLC ಪರೀಕ್ಷೆ ವೇಳೆ ಕನ್ನಡದಲ್ಲಿಯೇ ವಿದ್ಯಾರ್ಥಿಗಳು ಫೇಲ್​​ ಆಗ್ತಿರೋದೇಕೆ?: ಅಚ್ಚರಿಯ ಮಾಹಿತಿ ಬಹಿರಂಗ – Kannada News | SSLC Kannada Failure: KDA Unveils Reasons, Recommends Reforms

ಬೆಂಗಳೂರು, ಮೇ 01: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ತೆಗೆದುಕೊಂಡಿದ್ದ ಸುಮಾರು 19,000 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಹೀಗಾಗಿ ಇದಕ್ಕೆ ಕಾರಣಗಳನ್ನು ಅಧ್ಯಯನ ಮಾಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದ ಸಮಿತಿ ಹಲವು ಮಹತ್ವದ ಶಿಫಾರಸುಗಳನ್ನು ಮಾಡಿದೆ. ಕನಿಷ್ಠ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರ್ಕಾರದ ಉದ್ಯೋಗಗಳಲ್ಲಿ ಶೇ. 25ರಷ್ಟು ಮೀಸಲಾತಿ ನೀಡಬೇಕು ಎಂದು ಸಮಿತಿ ಹೇಳಿದ್ದು, ಇದರಿಂದ ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳಿಗೆ ಉತ್ತೇಜನ ಸಿಗಲಿದೆ ಎಂದು ತಿಳಿಸಿದೆ. ವಿದ್ಯಾರ್ಥಿಗಳ…

Read More

ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಹೋಟೆಲ್ ಮಾಲೀಕರ ಸಂಘ: ಗ್ರಾಹಕರ ಸಂಖ್ಯೆ ಇಳಿಕೆ ಆತಂಕ – Kannada News | Hotel Owners’ Association spark on Commercial LPG Cylinder Price Hike, Fear of Declining Customer Numbers

ಬೆಂಗಳೂರು, ಮೇ 01: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊಂಡ ಬಳಿಕ 3ನೇ ಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ (Commercial LPG price hike) ಮಾಡಲಾಗಿದೆ. ಮಾರ್ಚ್‌ನಲ್ಲಿ 144 ರೂ, ಏಪ್ರಿಲ್‌ನಲ್ಲಿ 200 ರೂ ಹಾಗೂ ಇದೀಗ ಮೂರನೇ ಬಾರಿಗೆ 993 ರೂ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಎಲ್ಲೆಡೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ರಾಜ್ಯದಲ್ಲಿ ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯ ಎಫೆಕ್ಟ್ ತಟ್ಟಿದ್ದು, ಹೋಟೆಲ್ ಮಾಲೀಕರಿಂದ ವಿರೋಧ ವ್ಯಕ್ತವಾಗಿದ್ದು, ಮೊದಲಿನ ದರ…

Read More

CBSE Class 12 Results 2026: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ದಿನಾಂಕದ ಕುರಿತ ವದಂತಿಗಳಿಗೆ ಬ್ರೇಕ್ ಹಾಕಿದ ಮಂಡಳಿ! – Kannada News | CBSE Class 12 Results 2026: Official Date and Clarification on Rumors

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 12ನೇ ತರಗತಿಯ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಪರೀಕ್ಷಾ ನಿಯಂತ್ರಕರು ಸ್ಪಷ್ಟನೆ ನೀಡಿದ್ದಾರೆ. ಫಲಿತಾಂಶ ಪ್ರಕಟಣೆಯ ನಿಖರವಾದ ಸಮಯ ಮತ್ತು ನಿರೀಕ್ಷಿತ ದಿನಾಂಕದ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಪರೀಕ್ಷಾ ನಿಯಂತ್ರಕರ ಸ್ಪಷ್ಟನೆ ಏನು? ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ಫಲಿತಾಂಶದ ದಿನಾಂಕದ ಬಗ್ಗೆ ಅನೇಕ ಸುಳ್ಳು ಸುದ್ದಿಗಳು ಹರಡುತ್ತಿದ್ದವು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತವಲ್ಲದ ಮಾಹಿತಿಯನ್ನು ನಂಬಬಾರದು ಎಂದು ಮನವಿ…

Read More

‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ – Kannada News | Vasudeva Kutumba serial actress Chaithra allegations against production house

‘ವಸುದೇವ ಕುಟುಂಬ’ ಧಾರಾವಾಹಿ (Serial) ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಆಗುತ್ತಿದ್ದು, ಇದೀಗ ಧಾರಾವಾಹಿ ನಿರ್ಮಾಪಕರ ವಿರುದ್ಧ ಕಲಾವಿದರು ತಿರುಗಿ ಬಿದ್ದಿದ್ದಾರೆ. ಕೋರಮಂಗಲ ಟಾಕೀಸ್ ನಿರ್ಮಾಣ ಸಂಸ್ಥೆಯು ‘ವಸುದೇವ ಕುಟುಂಬ’ ಧಾರಾವಾಹಿಯನ್ನು ನಿರ್ಮಾಣ ಮಾಡಿದ್ದು, ಕಲಾವಿದರಿಗೆ ಸಂಭಾವನೆ ಕೊಟ್ಟಿಲ್ಲ ಎಂದು ಧಾರಾವಾಹಿ ನಟ-ನಟಿಯರು, ತಂತ್ರಜ್ಞರು ಆಕ್ರೋಶ ಹೊರಹಾಕಿದ್ದಾರೆ. ನಿರ್ಮಾಪಕರನ್ನು ಪ್ರಶ್ನೆ ಮಾಡಿರುವ ಕಲಾವಿದರು ನಿರ್ಮಾಣ ಸಂಸ್ಥೆಯ ವಿರುದ್ಧ ದೂರು ನೀಡಿದ್ದಾರೆ. ‘ವಸುದೇವ ಕುಟುಂಬ’ ಧಾರಾವಾಹಿಯ ಪ್ರಮುಖ ನಟಿಯರಲ್ಲಿ ಒಬ್ಬರಾದ ಚೈತ್ರಾ, ನಿರ್ಮಾಣ ಸಂಸ್ಥೆ ವಿರುದ್ಧ ಸರಣಿ ಆರೋಪಗಳನ್ನು…

Read More

ಅನಾವಶ್ಯಕ ಕೊಂಕು ತೆಗೆಯುವವರ ಬಾಯಿ ಮುಚ್ಚಿಸಿದ ‘ಕೆಡಿ’ ಟೀಂ; ‘ಡೆವಿಲ್’ ಹಾದಿಯಲ್ಲಿ ಧ್ರುವ ಸಿನಿಮಾ – Kannada News | KD Teams Silence Negative Reviews: How Kannada Films Disable BookMyShow Ratings

ಯಾವುದೇ ಬಿಗ್ ಬಜೆಟ್ ಚಿತ್ರ ರಿಲೀಸ್ ಆಗುತ್ತದೆ ಎಂದರೆ ಅದಕ್ಕೆ ಕೊಂಕು ತೆಗೆಯುವವರು ಸಂಖ್ಯೆ ದೊಡ್ಡದಿರುತ್ತದೆ. ಈಗಿನ ಸೋಶಿಯಲ್ ಮೀಡಿಯಾ ಯುಗದಲ್ಲಿ ಇದನ್ನು ತಡೆಯುವುದು ಅಸಾಧ್ಯ. ನಾನಾ ರೀತಿಯ ಪ್ರಯತ್ನಗಳು ನಡೆದು ಕೊನೆಗೆ ಅದು ಸಾಧ್ಯವಾಗದೆ ಕೈ ಬಿಟ್ಟ ಅನೇಕ ಸಿನಿಮಾಗಳಿವೆ. ಆದರೆ, ‘ಡೆವಿಲ್’ ಸಿನಿಮಾ ಈ ಪ್ರಕ್ರಿಯೆಯಲ್ಲಿ ಯಶಸ್ಸು ಕಂಡಿತು. ಈಗ ‘ಕೆಡಿ’ ಸಿನಿಮಾ ಕೂಡ ಇದೇ ಮಾರ್ಗ ಅನುಸರಿಸಿದೆ. ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಯಿತು. ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪಾಸಿಟಿವ್…

Read More