Category Archives: Blog

Your blog category

BESCOM Electricity Price Hike: ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್ – Kannada News | BESCOM Electricity Price Hike: Power Tariff Increased by 56 Paise per Unit in Bengaluru and 7 Other Districts from Today

ಬೆಂಗಳೂರು, ಮೇ 1: ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳ ಗ್ರಾಹಕರಿಗೆ ಇಂದಿನಿಂದ (ಮೇ 1) ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಲಿದೆ. ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲಾಗಿದ್ದು, ಇದು ಗ್ರಾಹಕರಿಗೆ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಉಂಟುಮಾಡಲಿದೆ. ಈಗಾಗಲೇ ಗ್ಯಾಸ್ ಬೆಲೆ ಏರಿಕೆಯ ಬಿಸಿ ಅನುಭವಿಸುತ್ತಿರುವ ನಾಗರಿಕರಿಗೆ ಈ ವಿದ್ಯುತ್ ದರ ಏರಿಕೆ ಮತ್ತೊಂದು ಹೊಡೆತವಾಗಿದೆ. ಬೆಸ್ಕಾಂ ಸಂಸ್ಥೆಯು ಸುಮಾರು 2000 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದು, ಇದನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ (KERC) ಅಸ್ತು ಎಂದಿದೆ. ಇಂದಿನಿಂದ ಅನ್ವಯವಾಗುವಂತೆ ಮೀಟರ್ ರೀಡಿಂಗ್‌ಗೆ ಹೊಸ ದರಗಳು ಜಾರಿಗೆ ಬರಲಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಓರ್ವಳ ನಂಬಿಸಿ ದೈಹಿಕ ಸಂಪರ್ಕ, ಈಗ ಮತ್ತೊಬ್ಬಳ ಜೊತೆ ನಿಶ್ಚಿರ್ತಾರ್ಥ: ಯುವತಿ ಬಾಳಲ್ಲಿ ಕಾಂಗ್ರೆಸ್​​ ನಾಯಕನ ಚೆಲ್ಲಾಟ? – Kannada News | Former T. Narasipura Municipal President Accused of Love, Physical Relationship and Dhoka

ಮೈಸೂರು, ಮೇ 1: ಟಿ. ನರಸೀಪುರ ಪುರಸಭೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್​​ ನಾಯಕ ಮದನ್ ರಾಜ್ ವಿರುದ್ಧ ಲವ್ ಸೆಕ್ಸ್ ದೋಖಾ ಆರೋಪದಡಿ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳು ಹಲವು ವರ್ಷಗಳಿಂದ ತನ್ನನ್ನು ಪ್ರೀತಿಸುತ್ತಿದ್ದ ಮದನ್ ರಾಜ್ ದೈಹಿಕ ಸಂಬಂಧ ಬೆಳೆಸಿ, ಮದುವೆಯಾಗುವುದಾಗಿ ನಂಬಿಸಿ ವಂಚಿಸಿರೋದಾಗಿ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಮದನ್​​ ರಾಜ್​​ ಈಗ ಮತ್ತೋರ್ವ ಯುವತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಒಪ್ಪುತ್ತಿಲ್ಲ ಎಂದು ನೆಪ ಹೇಳಿ, ಇಬ್ಬರು ಜೊತೆಯಾಗಿ ವಿಷ ಕುಡಿಯೋಣ ಎಂದು ಹೇಳಿ ಯುವತಿಗೆ ವಿಷ ಕುಡಿಸಿದ್ದ ಆರೋಪವೂ ಕೇಳಿಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಂಗಾಳ ಸಮೀಕ್ಷೆಯಿಂದ ಆಕ್ಸಿಸ್ ಮೈ ಇಂಡಿಯಾ ದಿಢೀರ್ ಔಟ್, ಪ್ರದೀಪ್ ಗುಪ್ತಾ ನಿರ್ಧಾರದ ಹಿಂದೆ ಅಡಗಿದೆಯೇ ಸ್ಫೋಟಕ ಸತ್ಯ? – Kannada News | Mystery Behind Bengal Exit Poll Delay: Violence and Survey Challenges Revealed

ಮಮತಾ ಪ್ರಧಾನಿ ಮೋದಿImage Credit source: Awaz The Voice

ಕೋಲ್ಕತ್ತಾ, ಮೇ 1: ಅಚ್ಚರಿಯ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ(West Bengal)ದ ಚುನಾವಣೋತ್ತರ ಸಮೀಕ್ಷೆಯಿಂದ ಆಕ್ಸಿಸ್ ಮೈ ಇಂಡಿಯಾ ಸಂಸ್ಥೆಯು ಹಿಂದೆ ಸರಿದಿದೆ. ತಮಿಳುನಾಡು, ಆಸ್ಸಾಂ, ಪುದುಚೇರಿ ಹಾಗೂ ಕೇರಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಇದೇ ಸಂಸ್ಥೆಯು ತನ್ನ ಸಮೀಕ್ಷಾ ವರದಿಯನ್ನು ನೀಡಿದೆ. ಆದರೆ ಪಶ್ಚಿಮ ಬಂಗಾಳಕ್ಕೆ ಸಂಬಂಧಿಸಿ ತೆಗೆದುಕೊಂಡ ತೀರ್ಮಾನವು ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ.

ಆಕ್ಸಿಸ್‌ ಮೈ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಪ್ರದೀಪ್‌ ಗುಪ್ತಾ ಅವರು ತಮ್ಮ ಸಮೀಕ್ಷಾ ವರದಿಯನ್ನು ತಡೆಹಿಡಿಯುವ ನಿರ್ಧಾರ ಮಾಡುವ ಮುನ್ನ ಎರಡು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಇದು ಹಲವು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಚುನಾವಣೆ ನಡೆಯುವ ನಾಲ್ಕು ತಿಂಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ರಾಜಕಿಯೇತರ ಸಮೀಕ್ಷೆಯೊಂದನ್ನು ಮಾಡುವಾಗ ತನ್ನ ಸಿಬ್ಬಂದಿಯನ್ನು ಜೈಲಿಗೆ ಹಾಕಲಾಗಿತ್ತು. ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಮಾಡಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿಸಿಕೊಳ್ಳಬೇಕಾಯಿತು ಎಂದು ಪ್ರದೀಪ್‌ ಗುಪ್ತಾ ತಿಳಿಸಿದ್ದಾರೆ. ಇದಲ್ಲದೇ ಪಶ್ಚಿಮ ಬಂಗಾಳದಲ್ಲಿ ಹಿಂಸಾತ್ಮಕ ರಾಜಕIೈ ಮನಸ್ಥಿತಿ ಬಗ್ಗೆ ಇನ್ನೊಂದು ಅಂಶ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮತ ಎಣಿಕೆಗೂ ಮುನ್ನ ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ

ಸಮೀಕ್ಷೆಗೆ ಜನರನ್ನು ಭೇಟಿಯಾದಾಗ ಶೇ.70ಕ್ಕೂ ಅಧಿಕ ಜನರು ತಮ್ಮ ಅಭಿಪ್ರಾಯವನ್ನು ಹೇಳಲು ಹೆದರುತ್ತಿದ್ದರು ಅಥವಾ ಬಾಯಿ ಬಿಡುತ್ತಿರಲಿಲ್ಲ. ಹೌದು ಅಥವಾ ಇಲ್ಲ ಎನ್ನುವ ಪ್ರಶ್ನೆಗೂ ಉತ್ತರಿಸಲು ನಿರಾಕರಿಸುತ್ತಿದ್ದರು. ಇಂತಹ ಸಂದರ್ಭದಲ್ಲಿ ನಾನು ಹೇಗೆ ವೈಜ್ಞಾನಿಕವಾದ ಸಮೀಕ್ಷೆಯನ್ನು ಸಿದ್ಧಪಡಿಸಲಿ ಎಂದು ಪ್ರದೀಪ್‌ ಗುಪ್ತಾ ಪ್ರಶ್ನಿಸಿದ್ದಾರೆ. ಇದೇ ಕಾರಣದಿಂದ ಅವರು ಪಶ್ಚಿಮ ಬಂಗಾಳದ ಚುನಾವಣೋತ್ತರ ಸಮೀಕ್ಷಾ ವರದಿಯನ್ನು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.

ಹೀಗಿರುವಾಗ ಚುನಾವಣೋತ್ತರ ಸಮೀಕ್ಷೆ ಹಾಗೂ ಪಶ್ಚಿಮ ಬಂಗಾಳದ ಬಗ್ಗೆ ಎರಡು ರೀತಿಯ ಪ್ರಶ್ನೆಗಳನ್ನು ಜನರು ಸಾಮಾಜಿಕ ಜಾಲತಾಣದಲ್ಲಿ ಎತ್ತುತ್ತಿದ್ದಾರೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆ ಎಂದು ಭಾಷಣ ಮಾಡುವ ಮಮತಾ ಬ್ಯಾನರ್ಜಿ ಹಾಗೂ ಅವರ ಸಹೋದ್ಯೋಗಿ ರಾಜಕೀಯ ಪಕ್ಷಗಳು ತಮ್ಮದೇ ರಾಜ್ಯದಲ್ಲಿ ಇಂತಹ ಭಯಭೀತ ವಾತಾವರಣವನ್ನು ಹೊಂದಿದ್ದರೂ ಮೌನವಾಗಿರುವುದೇಕೆ? ಜನರ ವಾಕ್‌ ಸ್ವಾತಂತ್ರ್ಯಕ್ಕೂ ಬೆಲೆಯಿಲ್ಲದ ರೀತಿ ಆಡಳಿತ ನಡೆಸಲಾಗುತ್ತಿದೆ ಎಂದು ಟೀಕಿಸುತ್ತಿದ್ದಾರೆ.

ಇನ್ನೊಂದೆಡೆ ಆಕ್ಸಿಸ್‌ ಮೈ ಇಂಡಿಯಾ ಸಂಸ್ಥೆಗೆ ಶೇ.70ರಷ್ಟು ಜನರು ಅಭಿಪ್ರಾಯ ನೀಡಲು ಹಿಂದೇಟು ಹಾಕಿದ್ದಾರೆ ಎನ್ನುವುದಾದರೆ, ಉಳಿದ ಸಂಸ್ಥೆಗಳು ಹೇಗೆ ಚುನಾವಣೋತ್ತರ ಸಮೀಕ್ಷೆ ನಡೆಸಿದವು ಹಾಗೂ ಅದರ ನಿಖರತೆ ಏನು ಎಂದು ಪ್ರಶ್ನಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಮೈಕಲ್’ ಬಾಕ್ಸ್ ಆಫೀಸ್: ಏಳು ದಿನಕ್ಕೆ ದಾಖಲೆ ಕಲೆಕ್ಷನ್, ಭಾರತದಲ್ಲೆಷ್ಟು? – Kannada News | Michael movie collection report, how much it gets in India on first week

ಮೈಕಲ್ ಜಾಕ್ಸನ್ (Michael) ಅವರ ಜೀವನ ಆಧಾರಿಸಿದ ಸಿನಿಮಾ ‘ಮೈಕಲ್’ ಏಪ್ರಿಲ್ 24 ರಂದು ಬಿಡುಗಡೆ ಆಗಿದೆ. ಸಿನಿಮಾಕ್ಕೆ ಮೊದಲ ದಿನ ಮಿಶ್ರ ವಿಮರ್ಶೆಗಳು ವ್ಯಕ್ತವಾಗಿದ್ದವು, ಹಾಗಿದ್ದರೂ ಸಹ ಜನ ಮುಗಿಬಿದ್ದು ಸಿನಿಮಾ ನೋಡುತ್ತಿದ್ದು, ಏಳು ದಿನಗಳಲ್ಲಿ ಭಾರಿ ದೊಡ್ಡ ಕಲೆಕ್ಷನ್ ಮಾಡಿದೆ. ಕೇವಲ ಏಳೇ ದಿನದಲ್ಲಿ ‘ಮೈಖಲ್’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಮುರಿದಿದೆ. ಮಾತ್ರವಲ್ಲ ಭಾರತದಲ್ಲಿಯೂ ಸಹ ದೊಡ್ಡ ಮೊತ್ತದ ಗಳಿಕೆ ಮಾಡಿದೆ ಈ ಸಿನಿಮಾ.

ಮೈಖಲ್ ಜಾಕ್ಸನ್ ಅವರ ಸಹೋದರನ ಪುತ್ರ ಜಫಾರ್ ಜಾಕ್ಸನ್ ತಮ್ಮ ಚಿಕ್ಕಪ್ಪನ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಕೇವಲ ಏಳು ದಿನಗಳಲ್ಲಿ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 2600 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಇಷ್ಟು ದೊಡ್ಡ ಮೊತ್ತವನ್ನು ‘ಮೈಖಲ್’ ಸಿನಿಮಾ ಗಳಿಸಿದ್ದು, ಅತಿ ಹೆಚ್ಚು ಮೊತ್ತ ಗಳಿಕೆ ಮಾಡಿದ ಸಿನಿಮಾಗಳ ಪಟ್ಟಿಯನ್ನು ‘ಮೈಖಲ್’ ಸಿನಿಮಾ ಸಹ ಸೇರಿಕೊಂಡಿದ್ದು, ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಸಿನಿಮಾದ ಗಳಿಕೆ ದಿನೇ-ದಿನೇ ಹೆಚ್ಚಾಗುತ್ತಿದೆ. ಈ ಸಿನಿಮಾ ಸುಮಾರು 10 ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಸಬಹುದು ಎಂದು ಬಾಕ್ಸ್ ಆಫೀಸ್ ವಿಶ್ಲೇಷಕರು ಅಂದಾಜಿಸಿದ್ದಾರೆ.

ಇದನ್ನೂ ಓದಿ:ಮೂರೇ ದಿನಕ್ಕೆ 2100 ಕೋಟಿ ಗಳಿಸಿದ ‘ಮೈಖಲ್’: ಭಾರತದಲ್ಲಿ ಎಷ್ಟು?

ಭಾರತದಲ್ಲಿ ಸಹ ಮೈಖಲ್ ಜಾಕ್ಸನ್​​ಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಹಾಗಾಗಿ ಭಾರತದಲ್ಲೂ ಸಹ ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ‘ಧುರಂಧರ್ 2’, ‘ಭೂತ್ ಬಂಗ್ಲ’ ಇನ್ನಿತರೆ ಸಿನಿಮಾಗಳ ಪ್ರಬಲ ಸ್ಪರ್ಧೆಯ ನಡುವೆಯೂ ಸಹ ‘ಮೈಖಲ್’ ಸಿನಿಮಾ ಭಾರತದಲ್ಲಿ ಒಂದು ವಾರಕ್ಕೆ 32 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ದೊಡ್ಡ ಮೊತ್ತ ಅಲ್ಲದಿದ್ದರೂ ಕಳಪೆ ಪ್ರದರ್ಶನವಂತೂ ಅಲ್ಲ. ‘ಸ್ಪೈಡರ್​​ಮ್ಯಾನ್’, ‘ಅವೇಂಜರ್ಸ್’ ಇನ್ನಿತರೆ ಕೆಲ ಸಿನಿಮಾಗಳು ಭಾರತದಲ್ಲಿ 100 ಕೋಟಿ, 200 ಕೋಟಿ ಗಳಿಸಿದ ಉದಾಹರಣೆಗಳೂ ಇವೆ. ಆದರೆ ‘ಮೈಖಲ್’ ಭಾರತದಲ್ಲಿ 150 ಕೋಟಿ ಗಳಿಕೆ ದಾಟುವುದು ತುಸು ಅನುಮಾನವೇ ಎನ್ನಲಾಗುತ್ತಿದೆ.

‘ಮೈಖಲ್’ ಸಿನಿಮಾವು ವಿಶ್ವ ವಿಖ್ಯಾತ ಪಾಪ್ ಸ್ಟಾರ್ ಮೈಖಲ್ ಜಾಕ್ಸನ್ ಜೀವನ ಕುರಿತ ಕತೆಯನ್ನು ಒಳಗೊಂಡಿದೆ. ಈಗ ಬಿಡುಗಡೆ ಆಗಿರುವ ಸಿನಿಮಾನಲ್ಲಿ ಮೈಖಲ್ ಅವರ ಆರಂಭಿಕ ಜೀವನದ ಕತೆಯನ್ನಷ್ಟೆ ತೋರಿಸಲಾಗಿದೆ. ಮೈಖಲ್ ಅವರ ಹಲವು ಹಾಡುಗಳನ್ನು ಸಿನಿಮಾನಲ್ಲಿ ಬಳಸಿಕೊಳ್ಳಲಾಗಿದೆ. ಅವರ ಬಾಲ್ಯ, ಬಾಲ್ಯದಲ್ಲಿ ಅನುಭವಿಸಿದ ನೋವುಗಳು, ಸಂಗೀತದ ಬಗೆಗಿನ ಆಸಕ್ತಿ, ಸ್ಟಾರ್ ಆಗಿ ಬೆಳೆದ ರೀತಿ ಇನ್ನೂ ಹಲವು ವಿಷಯಗಳನ್ನು ಸಿನಿಮಾನಲ್ಲಿ ತೋರಿಸಲಾಗಿದೆ. ಸಿನಿಮಾದ ಎರಡನೇ ಭಾಗದಲ್ಲಿ ಮೈಖಲ್ ಅವರ ಜೀವನದ ಕರಾಳ ದಿನಗಳು, ಆ ಸಮಯದಲ್ಲಿ ಮೈಖಲ್ ಅನುಭವಿಸಿದ ನೋವು ಇನ್ನಿತರೆಗಳನ್ನು ತೋರಿಸಲಾಗುತ್ತದೆಯಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬ್ರೌನ್ ಬಾಯ್ ಎಂದು ಕರೀತಿದ್ರು, ಜೆಪಿ ಮೋರ್ಗನ್ ಹಿರಿಯ ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ – Kannada News | JPMorgan Controversy: Senior Executive Faces Harassment Lawsuit by Junior Colleague

ನ್ಯಾಯಾರ್ಕ್​, ಮೇ 01: ವಿಶ್ವದ ಅತಿದೊಡ್ಡ ಬ್ಯಾಂಕಿಂಗ್ ಸಮೂಹವಾದ ಜೆಪಿ ಮಾರ್ಗನ್ ಚೇಸ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದೆ. ಕಾರ್ಯನಿರ್ವಾಹಕ ನಿರ್ದೇಶಕಿ ಲೋರ್ನಾ ಹಜ್ದಿನಿ ಅವರು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಿರಿಯ ಸಹೋದ್ಯೋಗಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ನ್ಯೂಯಾರ್ಕ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದೆ. 37 ವರ್ಷದ ಲೋರ್ನಾ ಹಜ್ದಿನಿ ಅವರು ಬ್ಯಾಂಕಿನ ಲಿವರೇಜ್ಡ್ ಫೈನಾನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಸಹೋದ್ಯೋಗಿಯೊಬ್ಬರು ನೀಡಿರುವ ದೂರಿನಲ್ಲಿ ಈ ಕೆಳಗಿನ ಗಂಭೀರ ಅಂಶಗಳನ್ನು ಉಲ್ಲೇಖಿಸಲಾಗಿದೆ.

ತಿಂಗಳುಗಳ ಕಾಲ ತಾವು ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಕಿರುಕುಳವನ್ನು ಅನುಭವಿಸಿದ್ದಾಗಿ ದೂರುದಾರರು ಆರೋಪಿಸಿದ್ದಾರೆ. ಬಡ್ತಿ ಮತ್ತು ವೃತ್ತಿಜೀವನದ ಬೆಳವಣಿಗೆಗೆ ಬದಲಾಗಿ ಲೋರ್ನಾ ಅವರು ಹಲವಾರು ಅವಿವೇಕದ ಬೇಡಿಕೆಗಳನ್ನು ಮುಂದಿಟ್ಟು ಒತ್ತಡ ಹೇರುತ್ತಿದ್ದರು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ದೂರುದಾರರು ಜನಾಂಗೀಯ ನಿಂದನೆ ಮತ್ತು ಅವಹೇಳನಕಾರಿ ಮಾತುಗಳನ್ನು ಎದುರಿಸಬೇಕಾಯಿತು ಎಂದು ದೂರಿನಲ್ಲಿ ಹೇಳಿದ್ದಾರೆ.

ಬೇಡಿಕೆಗಳನ್ನು ವಿರೋಧಿಸಿದರೆ ವೃತ್ತಿಜೀವನವನ್ನು ಕೊನೆಗೊಳಿಸುವ ಮತ್ತು ಕೆಲಸದಿಂದ ವಜಾಗೊಳಿಸುವ ಬೆದರಿಕೆಗಳನ್ನು ಹಾಕಲಾಗಿತ್ತು. ಪದೇ ಪದೇ ನಿರಾಕರಿಸಿದರೂ ಮಾನಸಿಕ ಒತ್ತಡ ಮುಂದುವರಿದ ಹಿನ್ನೆಲೆಯಲ್ಲಿ, ದೂರುದಾರರು ಬ್ಯಾಂಕ್ ತೊರೆದು ಬೇರೆಡೆ ಕೆಲಸ ಹುಡುಕಲು ಪ್ರಯತ್ನಿಸಿದ್ದರು. ಆದರೆ, ಆ ಸಂದರ್ಭದಲ್ಲಿಯೂ ಹೊಸ ಉದ್ಯೋಗ ದೊರೆಯದಂತೆ ಅಡ್ಡಿಪಡಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರು ಡೆಲಿವರಿ ಬಾಯ್ಸ್ ಅರೆಸ್ಟ್​​

ಈ ಎಲ್ಲಾ ಆರೋಪಗಳನ್ನು ಜೆಪಿ ಮೋರ್ಗನ್ ಚೇಸ್ ಸಾರಾಸಗಟಾಗಿ ನಿರಾಕರಿಸಿದೆ. ತನಿಖೆಗೆ ಹಲವಾರು ಉದ್ಯೋಗಿಗಳು ಸಹಕರಿಸಿದರೂ, ದೂರುದಾರರು ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ಕಂಪನಿ ಹೇಳಿದೆ.

ದೂರುದಾರರು ತಮಗೆ ಉಂಟಾದ ಮಾನಸಿಕ ಯಾತನೆ, ಆರ್ಥಿಕ ನಷ್ಟ ಮತ್ತು ಖ್ಯಾತಿಗೆ ಆದ ಹಾನಿಗಾಗಿ ದಂಡನಾತ್ಮಕ ಪರಿಹಾರವನ್ನು (Punitive Damages) ಕೋರಿದ್ದಾರೆ. ಜೊತೆಗೆ, ಇಂತಹ ಘಟನೆಗಳು ಮರುಕಳಿಸದಂತೆ ಕೆಲಸದ ಸ್ಥಳದ ನೀತಿಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಕಾರ್ಪೊರೇಟ್ ವಲಯದಲ್ಲಿ ಉನ್ನತ ಸ್ಥಾನದಲ್ಲಿರುವವರು ತಮ್ಮ ಅಧಿಕಾರವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಬಹುದು ಎಂಬ ಚರ್ಚೆಗೆ ಈ ಪ್ರಕರಣವು ಹೊಸ ಆಯಾಮ ನೀಡಿದೆ. ಸಂಸ್ಥೆಯ ಪಾರದರ್ಶಕತೆ ಮತ್ತು ಉದ್ಯೋಗಿಗಳ ಸುರಕ್ಷತೆಯ ಬಗ್ಗೆ ಈಗ ಜಾಗತಿಕ ಮಟ್ಟದಲ್ಲಿ ಪ್ರಶ್ನೆಗಳು ಎದ್ದಿವೆ. ಇತ್ತೀಚೆಗಷ್ಟೇ ಭಾರತದದ ಟಿಸಿಎಸ್​ ಕಂಪನಿಯಲ್ಲೂ ಕೂಡ ಇಂಥದ್ದೇ ಪ್ರರಕಣ ದಾಖಲಾಗಿತ್ತು. ಹಲವು ಜನರನ್ನು ಮತಾಂತರಗೊಳಿಸಲು ಪ್ರಯತ್ನಿಸಿದ್ದರು, ಇನ್ನೊಂದಷ್ಟು ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ

ಕುರಿ ಪ್ರತಾಪ್ ಅವರು ‘ಜೋಡಿ ನಂಬರ್ 1’ ಶೋನಲ್ಲಿ ನಿರೂಪಕರಾಗಿದ್ದಾರೆ. ವೇದಿಕೆ ಮೇಲೆ ಅವರ ಮಗನಿಗೆ ಹೆಣ್ಣು ನೋಡುವ ಶಾಸ್ತ್ರ ನಡೆದಿದೆ. ಹುಡುಗಿ ರೂಪದಲ್ಲಿ ಬಂದಿದ್ದು ಮಿಮಿಕ್ರಿ ಗೋಪಿ ಅವರು.  ಫನ್ ರೂಪದಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಸಖತ್ ಫನ್ ರೂಪದಲ್ಲಿ ಈ ವಿಡಿಯೋ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಒಪೆಕ್ ಒಕ್ಕೂಟಕ್ಕೆ ಯುಎಇ ಗುಡ್‌ಬೈ: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿಮೆಯಾಗುತ್ತಾ? – Kannada News | UAE Quits OPEC: Strategic Exit to Boost Oil Production; Big Win for India’s Energy Needs

ನವದೆಹಲಿ, ಮೇ 1: ಜಾಗತಿಕ ಇಂಧನ ಮಾರುಕಟ್ಟೆ ದೃಷ್ಟಿಯಲ್ಲಿ ಇಂದು (ಮೇ 1, 2026) ಒಂದು ಮಹತ್ವದ ಬೆಳವಣಿಗೆ ಸಂಭವಿಸಿದೆ. ಕಳೆದ 60 ವರ್ಷಗಳಿಂದ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಒಕ್ಕೂಟದ (OPEC) ಪ್ರಬಲ ಸದಸ್ಯನಾಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಈ ಒಕ್ಕೂಟದಿಂದ ಇಂದಿನಿಂದ ಅಧಿಕೃತವಾಗಿ ಹೊರಬಂದಿದೆ. ಯುಎಇ ಕೈಗೊಂಡಿರುವ ಈ ನಿರ್ಧಾರವು ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ದೀರ್ಘಕಾಲದ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಒಪೆಕ್ (OPEC) ಎಂದರೇನು?

ಒಪೆಕ್ ಎಂದರೆ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಒಕ್ಕೂಟ. 1960ರಲ್ಲಿ ಇರಾಕ್‌ನ ಬಾಗ್ದಾದ್‌ನಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಜಗತ್ತಿನ ಒಟ್ಟು ಕಚ್ಚಾ ತೈಲ ಉತ್ಪಾದನೆಯ ಶೇ 38ಕ್ಕಿಂತ ಹೆಚ್ಚಿನ ಪಾಲನ್ನು ನಿಯಂತ್ರಿಸುತ್ತದೆ. ಇದರ ಪ್ರಧಾನ ಕಚೇರಿ ಆಸ್ಟ್ರಿಯಾದ ವಿಯೆನ್ನಾದಲ್ಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಸ್ಥಿರವಾಗಿರುವಂತೆ ನೋಡಿಕೊಳ್ಳುವುದು ಮತ್ತು ಸದಸ್ಯ ರಾಷ್ಟ್ರಗಳ ಹಿತಾಸಕ್ತಿ ಕಾಯುವುದು ಇದರ ಮುಖ್ಯ ಉದ್ದೇಶ.

ಯುಎಇ ಒಪೆಕ್​ನಿಂದ ಹೊರಬರಲು ಕಾರಣವೇನು?

ತನ್ನ ತೈಲ ಉತ್ಪಾದನಾ ನೀತಿಯಲ್ಲಿ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಸ್ವಂತ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಯುಎಇ ಈ ಕ್ರಮ ಕೈಗೊಂಡಿದೆ. ಒಪೆಕ್ ವಿಧಿಸಿರುವ ಉತ್ಪಾದನಾ ಮಿತಿಗಳು ತನ್ನ ದೇಶದ ಆರ್ಥಿಕ ಬೆಳವಣಿಗೆಗೆ ಅಡ್ಡಿಯಾಗುತ್ತಿವೆ ಎಂಬುದು ಯುಎಇ ಅಭಿಪ್ರಾಯ. ಇದರೊಂದಿಗೆ ಪ್ರಾದೇಶಿಕ ರಾಜಕೀಯ ಭಿನ್ನಾಭಿಪ್ರಾಯಗಳು ಮತ್ತು ಇರಾನ್ ಕುರಿತಾದ ನಿಲುವುಗಳು ಕೂಡ ಈ ನಿರ್ಧಾರಕ್ಕೆ ಕಾರಣ ಎನ್ನಲಾಗುತ್ತಿದೆ.

ಯುಎಇ ಒಪೆಕ್​ನಿಂದ ಹೊರಬಂದರೆ ಭಾರತಕ್ಕೇನು ಲಾಭ?

ಯುಎಇ ಒಪೆಕ್‌ನಿಂದ ಹೊರಬಂದಿರುವುದು ಭಾರತಕ್ಕೆ ಹಲವು ವಿಧಗಳಲ್ಲಿ ಅನುಕೂಲಕರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

  • ರಿಯಾಯಿತಿ ದರದಲ್ಲಿ ತೈಲ: ಒಪೆಕ್‌ನ ನಿಯಂತ್ರಣವಿಲ್ಲದ ಕಾರಣ ಯುಎಇ ಹೆಚ್ಚಿನ ಪ್ರಮಾಣದಲ್ಲಿ ತೈಲ ಉತ್ಪಾದನೆ ಮಾಡಬಹುದು ಮತ್ತು ತಾನೇ ಬೆಲೆ ನಿರ್ಧರಿಸಬಹುದು. ಮತ್ತೊಂದೆಡೆ, ಯುಎಇ ಹಾಗೂ ಭಾರತದ ನಡುವೆ ಕಳೆದ ಹಲವು ವರ್ಷಗಳಿಂದಲೂ ಅತ್ಯುತ್ತಮ ಬಾಂಧವ್ಯವಿದೆ. ಉತ್ಪಾದನೆ ಹೆಚ್ಚಳ ಮತ್ತು ತಾನೇ ಬೆಲೆ ನಿರ್ಧರಿಸಬಹುದಾದ್ದರಿಂದ ಭಾರತಕ್ಕೆ ರಿಯಾಯಿತಿ ದರದಲ್ಲಿ ಯುಎಇ ಕಚ್ಚಾತೈಲ ಪೂರೈಕೆ ಮಾಡುವ ಸಾಧ್ಯತೆ ಹೆಚ್ಚಿದೆ.
  • ಪೂರೈಕೆಯಲ್ಲಿ ಸ್ಥಿರತೆ: ಯುಎಇ ಪುಜೈರಾ ಬಂದರಿನವರೆಗೆ ಪೈಪ್‌ಲೈನ್ ಹೊಂದಿರುವುದರಿಂದ, ಹೊರ್ಮುಜ್ ಜಲಸಂಧಿಯ ಯಾವುದೇ ಬಿಕ್ಕಟ್ಟುಗಳಿಲ್ಲದೆ ಭಾರತಕ್ಕೆ ಸರಾಗವಾಗಿ ತೈಲ ಪೂರೈಕೆಯಾಗಲಿದೆ.
  • ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ: ಭಾರತ ತನ್ನ ತೈಲ ಅಗತ್ಯದ ಶೇ 45ರಷ್ಟು ಭಾಗವನ್ನು ಒಪೆಕ್ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತದೆ. ಯುಎಇ ಉತ್ಪಾದನೆ ಹೆಚ್ಚಿಸಿದರೆ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಇರಾನ್ ಯುದ್ಧದ ನಡುವೆ ತೈಲ ರಫ್ತು ಸಂಘಟನೆಯಾದ OPECನಿಂದ ಹೊರಬಂದ ಯುಎಇ

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ? – Kannada News | Massive hike in Commercial Gas Cylinder Price: Hotels and Consumers Face Steep Challenges

ಬೆಂಗಳೂರು, ಮೇ 01: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 993 ರೂಪಾಯಿಗಳಷ್ಟು ಭಾರಿ ಏರಿಕೆ (LPG Gas cylinder Hike) ಕಂಡಿದ್ದು, ಹೋಟೆಲ್ ಮಾಲೀಕರಿಗೆ ಮತ್ತು ಜನಸಾಮಾನ್ಯರಿಗೆ ಮತ್ತೊಂದು ಆಘಾತ ನೀಡಿದೆ. ಈ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಊಟ, ತಿಂಡಿ ಮತ್ತು ಪಾನೀಯಗಳ ಬೆಲೆಗಳು ಹೆಚ್ಚಾಗುವ ಅನಿವಾರ್ಯತೆ ಸೃಷ್ಟಿಯಾಗಿದೆ.

ಗ್ಯಾಸ್ ಅಭಾವದಿಂದ ಈಗಾಗಲೇ ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ಬೆಲೆ ಏರಿಕೆಯಾಗಿರುವುದು ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡಿದೆ. ಇದೀಗ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿರುವುದರಿಂದ ಕಾಫಿ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಬಹುದು ಎಂಬ ಆತಂಕ ಸೃಷ್ಟಿಯಾಗಿದೆ. ಇದರಿಂದ ಬಡವರು, ಮಧ್ಯಮ ವರ್ಗದವರು ಕಾಫಿ ಕುಡಿಯಲೂ ಜನ 10 ಬಾರಿ ಯೋಚಿಸುವಂತಾಗಬಹುದು.ಅಂತಿಮವಾಗಿ ಇದರ ಹೊರೆ ಗ್ರಾಹಕರ ಮೇಲೆ ಬೀಳಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ: ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​ – Kannada News | Child Commission Member Arrested for Blackmailing and Physical Assault of Women

ಮಹಿಳೆಯರ ಜೊತೆ ಆರೋಪಿ ಚಂದ್ರೇಗೌಡImage Credit source: Tv9 Kannada

ಬೆಂಗಳೂರು, ಮೇ 1: ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನನ್ನು ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಚಂದ್ರೇಗೌಡ ಬಂಧಿತನಾಗಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅವುಗಳನ್ನು ಈತ ವಿಡಿಯೋಮಾಡಿಟ್ಟುಕೊಳ್ಳುತ್ತಿದ್ದ. ಫೋಟೋ, ವಿಡಿಯೋ ಇಟ್ಟುಕೊಂಡು ಪೀಡಿಸುತ್ತಿದ್ದ. ಪೊಲೀಸ್ ಅಧಿಕಾರಿ, ವಕೀಲ, ಮಾಧ್ಯಮ ಪ್ರತಿನಿಧಿ ಎಂದು ಬಿಂಬಿಸಿ, ನಕಲಿ ಐಡಿ ಮಾಡಿಕೊಂಡು ಹಲವರಿಗೆ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ.

20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ, ಫೋಟೋ ಪತ್ತೆ

ಇನ್ನು ಆರೋಪಿ ಮೊಬೈಲ್​​ ಪರಿಶೀಲಿಸಿದಾಗ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ, ಫೋಟೋ ಪತ್ತೆಯಾಗಿವೆ. ಗಂಡನಿಂದ ದೂರವಾಗಿದ್ದ ಮಹಿಳೆ ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಗೆ ನಾನು ಲೆಕ್ಚರ್ ಎಂದು ಪರಿಚಯ ಮಾಡಿಕೊಂಡಿದ್ದ. ನನಗೆ ಡಿವೋರ್ಸ್ ಆಗಿದ್ದು, ನಿನ್ನನ್ನು ಮದುವೆ ಆಗುತ್ತೇನೆಂದು ನಂಬಿಸಿ ಆಕೆಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದ. ಖಾಸಗಿ ಕ್ಷಣವನ್ನು ವಿಡಿಯೋ ಮಾಡಿಕೊಂಡಿದ್ದ ಚಂದ್ರೇಗೌಡ ಅದನ್ನು ಇಟ್ಟುಕೊಂಡು ಮಹಿಳೆಗೆ ಹೆದರಿಸಿ ಆಕೆಯಿಂದ 5 ಲಕ್ಷ ಹಣ ಪಡೆದಿದ್ದ ಎಂದು ದೂರಲಾಗಿದೆ. ಸಂತ್ರಸ್ತ ಮಹಿಳೆ ಒಮ್ಮೆ ಚಂದ್ರೇಗೌಡನ ಮೊಬೈಲ್ ಪರಿಶೀಲಿಸಿದ್ದ ವೇಳೇ ಆಕೆಗೆ ಶಾಕ್​​ ಆಗಿದ್ದು, ಮೊಬೈಲ್​​ನಲ್ಲಿ ಹಲವು ಮಹಿಳೆಯರ ವಿಡಿಯೋ, ಚಾಟಿಂಗ್ ಪತ್ತೆಯಾಗಿತ್ತು. ಹೀಗಾಗಿ ಆರೋಪಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಪೂಜಾ ದತ್ತಾ ಬೆತ್ತಲೆ ಶವ ಪತ್ತೆ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಸಿಕ್ತು ಹಲವು ಆಘಾತಕಾರಿ ಮಾಹಿತಿ!

ಮದುವೆ ಡ್ರಾಮಾ

ಇನ್ನು ದೂರುದಾರ ಮಹಿಳೆಯನ್ನು ಮದುವೆಯಾಗಿ ನಂಬಿಸಿದ್ದ ಆರೋಪಿ ವಿವಾಹವಾಗಿದ್ದೇನೆ ಎಂದು ನಂಬಿಸಲು ಆಕೆಯ ಕೊರಳಿಗೆ ಅರಿಶಿನದ ಕೊಂಬನ್ನೂ ಕಟ್ಟಿದ್ದ. ಸಂತ್ರಸ್ತೆಯ ಆಧಾರ್​​ ಕಾರ್ಡ್​​ ಕೂಡ ಪಡೆದಿದ್ದ ಈತ ತಾನು ಆಕೆಯ ಗಂಡನೆಂದು ಬಿಂಬಿಸಿ ಮಾಡಿಗೆ ಮನೆಯೊಂದಕ್ಕೆ ಕರಾರು ಪತ್ರವನ್ನೂ ಮಾಡಿಸಿದ್ದ. ತನ್ನ ತಾಯಿಯನ್ನೂ ಸಂತ್ರಸ್ತೆಯ ಮನೆಯಲ್ಲೇ ಆತ ಬಿಟ್ಟಿದ್ದು, ವರ್ಷಾನುಗಟ್ಟಲೆ ಆಕೆಯ ಆರೈಕೆಯನ್ನು ದೂರುದಾರ ಮಹಿಳೆ ಮಾಡಿದ್ದಾಳೆ ಎನ್ನಲಾಗಿದೆ. ಸಾಲದ್ದಕ್ಕೆ ಸಂತ್ರಸ್ತೆಯ ಮಗಳ ವ್ಯಾಸಂಗ ಸಂಬಂಧಿತ ದಾಖಲಾತಿಗಳನ್ನೂ ಬದಲಾಯಿಸಿ, ತಾನೇ ಮಹಿಳೆಯ ಗಂಡ ಎಂದು ಬಿಂಬಿಸಲು ಹೊರಟಿದ್ದ ಎಂದು ಆರೋಪಿಸಲಾಗಿದೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕರ್ನಾಟಕದ ಈ ಜಿಲ್ಲೆಗಳಿಗೆ ರೈಲ್ವೆ ಇಲಾಖೆಯ ಬಂಪರ್ ಕೊಡುಗೆ: 4 ವಿಶೇಷ ರೈಲುಗಳು ‘ಖಾಯಂ’! ದರದಲ್ಲೂ ಇಳಿಕೆ – Kannada News | Kalyana Karnataka Rail Boost: 4 Special Trains Regularized, Cuts Fares and Boosts Connectivity

ಬೆಂಗಳೂರು, ಮೇ.1: ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ರೈಲ್ವೆ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಮಂಡಳಿಯು ಭರ್ಜರಿ ಸಿಹಿಸುದ್ದಿ ನೀಡಿದೆ. ಈವರೆಗೆ ತಾತ್ಕಾಲಿಕವಾಗಿ ‘ವಿಶೇಷ ರೈಲು’ಗಳಾಗಿ ಸಂಚರಿಸುತ್ತಿದ್ದ ನಾಲ್ಕು ಪ್ರಮುಖ ರೈಲುಗಳನ್ನು ಈಗ ಕಾಯಂಗೊಳಿಸಿ ಆದೇಶ ಹೊರಡಿಸಲಾಗಿದೆ. ಇದರಿಂದ ಟಿಕೆಟ್ ದರ ಇಳಿಕೆಯಾಗುವುದರ ಜೊತೆಗೆ ಸಂಚಾರದ ವಿಶ್ವಾಸಾರ್ಹತೆ ಹೆಚ್ಚಾದಂತಾಗಿದೆ.

ಖಾಯಂಗೊಂಡ ರೈಲುಗಳ ವಿವರ:

ಸೊಲ್ಲಾಪುರ – ಕಲಬುರಗಿ ಡೆಮು (71435/71436): ಪ್ರತಿದಿನ ಸಂಚರಿಸುವ ಈ ರೈಲು ಗಾಣಗಾಪುರ ದತ್ತಾತ್ರೇಯ ಭಕ್ತರಿಗೆ ಮತ್ತು ದೈನಂದಿನ ಪ್ರಯಾಣಿಕರಿಗೆ ವರದಾನವಾಗಲಿದೆ.

ದೌಂಡ್ – ಕಲಬುರಗಿ ಫಾಸ್ಟ್ ಪ್ಯಾಸೆಂಜರ್: ವಾರದ ಐದು ದಿನ (51301/51302) ಹಾಗೂ ವಾರಕ್ಕೆ ಎರಡು ದಿನ (51303/51304) ಸಂಚರಿಸುವ ರೈಲುಗಳನ್ನು ನಿಯಮಿತಗೊಳಿಸಲಾಗಿದೆ.

ಸೊಲ್ಲಾಪುರ – ಮುಂಬೈ (ಲೋಕಮಾನ್ಯ ತಿಲಕ್) ಎಕ್ಸ್‌ಪ್ರೆಸ್ (11303/11304): ಕಲಬುರಗಿ, ಹುಮ್ನಾಬಾದ್, ಬೀದರ್ ಮತ್ತು ಭಾಲ್ಕಿ ಮೂಲಕ ಸಂಚರಿಸುವ ಈ ರೈಲು ಕಲ್ಯಾಣ ಕರ್ನಾಟಕದಿಂದ ಮುಂಬೈಗೆ ನೇರ ಸಂಪರ್ಕ ಕಲ್ಪಿಸಲಿದೆ.

ಸೊಲ್ಲಾಪುರ – ಅನಕಾಪಲ್ಲಿ ಎಕ್ಸ್‌ಪ್ರೆಸ್ (11313/11314): ವಾಡಿ, ಯಾದಗಿರಿ ಮತ್ತು ರಾಯಚೂರು ಮೂಲಕ ಸಾಗುವ ಈ ರೈಲು ಆಂಧ್ರಪ್ರದೇಶದ ವಿಜಯವಾಡ ಮತ್ತು ಕರಾವಳಿ ಭಾಗಕ್ಕೆ ತೆರಳಲು ಸಹಕಾರಿಯಾಗಿದೆ.

ಇದನ್ನೂ ಓದಿ: ಮಳೆ ಮಧ್ಯೆ ಜೆಪಿ ನಗರ ಟು ಕೋರಮಂಗಲ ಜರ್ನಿ: ಆಟೋ ಚಾಲಕನ ಈ ಒಂದು ಮಾತು ಪ್ರಿಯಾಂಕಾ ಕಣ್ಣಾಲಿ ಒದ್ದೆ ಮಾಡಿದ್ದು ಯಾಕೆ ಗೊತ್ತಾ?

ಪ್ರಯಾಣಿಕರಿಗಾಗುವ ಲಾಭಗಳೇನು?

ಟಿಕೆಟ್ ದರ ಇಳಿಕೆ: ‘ವಿಶೇಷ ರೈಲು’ ಎಂಬ ಹಣೆಪಟ್ಟಿ ದೂರವಾಗುವುದರಿಂದ ಹೆಚ್ಚುವರಿ ಶುಲ್ಕ ರದ್ದಾಗಿ ಸಾಮಾನ್ಯ ದರ ಅನ್ವಯವಾಗಲಿದೆ.

ಸ್ಥಿರ ಸಂಚಾರ: ರೈಲುಗಳು ರದ್ದಾಗುವ ಆತಂಕವಿಲ್ಲದೆ ಸಾರ್ವಜನಿಕರು ಮುಂಗಡ ಟಿಕೆಟ್ ಕಾಯ್ದಿರಿಸಬಹುದು.

ಅಂತರರಾಜ್ಯ ಸಂಪರ್ಕ: ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಕ್ಕೆ ತೆರಳುವ ವ್ಯಾಪಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಇದು ಹೆಚ್ಚಿನ ಅನುಕೂಲ ಮಾಡಿಕೊಡಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link