Category Archives: Blog

Your blog category

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ರಶೀದ್ ಖಾನ್ – Kannada News | Rashid Khan Creates New World Record in T20 Cricket

ಟಿ20 ಕ್ರಿಕೆಟ್​ನಲ್ಲಿ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ (Rashid Khan) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ  ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ. ರಶೀದ್ ಖಾನ್ ಬರೆದಿರುವ ಹೊಸ ವಿಶ್ವ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ದೆಹಲಿಯಲ್ಲಿ ನಡೆದ ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಯುಎಇ ವಿರುದ್ಧ ರಶೀದ್ ಖಾನ್ 4 ಓವರ್​ಗಳನ್ನು ಎಸೆದಿದ್ದರು. ಈ ವೇಳೆ 24 ರನ್ ನೀಡಿ 1 ವಿಕೆಟ್ ಕಬಳಿಸಿದ್ದಾರೆ. ಈ ಒಂದು ವಿಕೆಟ್​ನೊಂದಿಗೆ ಟಿ20 ಕ್ರಿಕೆಟ್​​ನಲ್ಲಿ 700 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಕೂಡ 700 ವಿಕೆಟ್ ಪಡೆದಿರಲಿಲ್ಲ. ಈ ಹಿಂದೆ ಮೂವರು ಬೌಲರ್​ಗಳು 600 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಆರು ನೂರರ ಪಟ್ಟಿಯಿಂದ ರಶೀದ್ ಖಾನ್ ಏಳು ನೂರರ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ತನ್ನ 27ನೇ ವಯಸ್ಸಿನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ. 

ಟಿ20 ಕ್ರಿಕೆಟ್​ನಲ್ಲಿ ಈವರೆಗೆ 513ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ರಶೀದ್ ಖಾನ್ 11794 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 12961 ರನ್ ನೀಡಿ ಬರೋಬ್ಬರಿ 700 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 700 ವಿಕೆಟ್ ಕಬಳಿಸಿದ ವಿಶ್ವದ ಮೊದಲ ಹಾಗೂ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ.

ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಎರಡನೇ ಬೌಲರ್ ದಾಖಲೆ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೊ (631) ಹೆಸರಿನಲ್ಲಿದೆ. ಹಾಗೆಯೇ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ವಿಂಡೀಸ್​ನ ಸುನಿಲ್ ನರೈನ್ ಇದ್ದು, ಈವರೆಗೆ 613 ವಿಕೆಟ್ ಕಬಳಿಸಿದ್ದಾರೆ. ಅಂದರೆ ಇಲ್ಲಿ ಸುನಿಲ್ ನರೈನ್ ನಿವೃತ್ತಿಯಂಚಿನಲ್ಲಿರುವ ಕಾರಣ ರಶೀದ್ ಖಾನ್ ಅವರ ಈ ವಿಶ್ವ ದಾಖಲೆಯನ್ನು ಮುರಿಯಲು ಸಾಧ್ಯವಾಗುವುದಿಲ್ಲ ಎಂದೇ ಹೇಳಬಹುದು.

Published On – 1:53 pm, Mon, 16 February 26

Source link

ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

Source link

ಲಾಭದ ಮೇಲೆ ಗಮನ ಬೇಡ, ಗುಣಮಟ್ಟ ನೋಡಿ, ಅಭಿವೃದ್ಧಿ ಹೊಂದಿದ ಭಾರತಕ್ಕೆ ಖಾಸಗಿ ವಲಯ ನಿರ್ಣಾಯಕ: ಪ್ರಧಾನಿ ಮೋದಿ – Kannada News | PM Modi Interview: Private Sector’s Quality Focus Key to Viksit Bharat and Manufacturing Growth

ನವದೆಹಲಿ, ಫೆಬ್ರವರಿ 16: ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದೊಂದಿಗಿನ ವ್ಯಾಪಾರ ಒಪ್ಪಂದಗಳು ಮತ್ತು 2026ರ ಬಜೆಟ್ ನಂತರ ಪ್ರಧಾನಿ ನರೇಂದ್ರ ಮೋದಿ(Narendra Modi) ತಮ್ಮ ಮೊದಲ ಸಂದರ್ಶನವನ್ನು ಪಿಟಿಐಗೆ ನೀಡಿದ್ದಾರೆ. ಖಾಸಗಿ ವಲಯದಲ್ಲಿರುವವರಿಗೆ ಅವರು ವಿಶೇಷ ಮನವಿ ಮಾಡಿದ್ದಾರೆ. ಲಾಭಕ್ಕಿಂತ ಗುಣಮಟ್ಟದ ಮೇಲೆ ಗಮನಹರಿಸುವಂತೆ ಕರೆ ನೀಡಿದ್ದಾರೆ. ಭಾರತದ ಮುಂದಿನ ಹಂತದ ಆರ್ಥಿಕ ಪರಿವರ್ತನೆಯಲ್ಲಿ ಖಾಸಗಿ ವಲಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಡಿಜಿಟಲ್ ಬೆಳವಣಿಗೆ ಮತ್ತು ರಕ್ಷಣಾ ಆಧುನೀಕರಣದಂತಹ ವಿಷಯಗಳನ್ನು ಅವರು ಒತ್ತಿ ಹೇಳಿದರು.

ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನವನ್ನು ಸಾಧಿಸಲು ಉದ್ಯಮದ ಸಾಮರ್ಥ್ಯಗಳಿಗೆ ಅನುಗುಣವಾಗಿ ನಾವೀನ್ಯತೆ ಮತ್ತು ದೊಡ್ಡ ಹೂಡಿಕೆಗಳ ಪ್ರಾಮುಖ್ಯತೆ ಬಗ್ಗೆ ಮಾತನಾಡಿದ್ದಾರೆ. ಕೈಗಾರಿಕೀಕರಣ ಮತ್ತು ನಗರೀಕರಣದೊಂದಿಗೆ, ಗ್ರಾಮೀಣ ಪ್ರದೇಶದ ಅನೇಕ ಯುವಕರು ನಗರಗಳಿಗೆ ತೆರಳಿ ಜಾಗತಿಕವಾಗಿ ಸಂಪರ್ಕ ಹೊಂದಿದ ಕೈಗಾರಿಕೆಗಳಲ್ಲಿ ಕೆಲಸ ಮಾಡಲು ಬಯಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಹಿಂದಿನ ಸರ್ಕಾರಗಳು ಉತ್ಪಾದನಾ ವಲಯದಲ್ಲಿ ಕೆಲಸ ಮಾಡಲಿಲ್ಲ: ಪ್ರಧಾನಿ ಮೋದಿ
ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ಈ ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು, ದುರದೃಷ್ಟವಶಾತ್, ಹಿಂದಿನ ಸರ್ಕಾರಗಳು ಈ ದಿಕ್ಕಿನಲ್ಲಿ ಹೆಚ್ಚಿನ ಕೆಲಸ ಮಾಡಲಿಲ್ಲ. ಆದರೆ ನಾವು ನಮ್ಮ ವಿಧಾನವನ್ನು ಬದಲಾಯಿಸಿದ್ದೇವೆ. ಅಭಿವೃದ್ಧಿ ಹೊಂದಿದ ಭಾರತದ ನಮ್ಮ ದೃಷ್ಟಿಕೋನಕ್ಕೆ ಉತ್ಪಾದನೆ ಯಾವಾಗಲೂ ಕೇಂದ್ರವಾಗಿದೆ. ಯಾವುದೇ ದೇಶವು ಕೇವಲ ಗ್ರಾಹಕರಾಗಿರುವುದರಿಂದ ವೇಗವಾಗಿ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಅವರು ಜಾಗತಿಕ ಮಟ್ಟದಲ್ಲಿ ಉತ್ತಮ ಗುಣಮಟ್ಟದ ಉತ್ಪಾದಕರಾಗಬೇಕು.

ಮತ್ತಷ್ಟು ಓದಿ: ಕಾಂಗ್ರೆಸ್ ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿತೇ ವಿನಃ ಅಭಿವೃದ್ಧಿಗೆ ಗಮನ ಕೊಡಲಿಲ್ಲ; ಪ್ರಧಾನಿ ಮೋದಿ ಟೀಕೆ

ಇದಕ್ಕಾಗಿಯೇ ಮೇಕ್ ಇನ್ ಇಂಡಿಯಾವನ್ನು ಪ್ರಾರಂಭಿಸಲಾಯಿತು. ಕಾಲಾನಂತರದಲ್ಲಿ, ಉತ್ಪಾದನೆ-ಸಂಬಂಧಿತ ಪ್ರೋತ್ಸಾಹಕ ಯೋಜನೆಗಳನ್ನು ಜಾರಿಗೆ ತರಲಾಯಿತು. ಈ ಪ್ರಯತ್ನಗಳು ಭಾರತದ ಕೈಗಾರಿಕಾ ನೆಲೆಯನ್ನು ಪುನರ್ನಿರ್ಮಿಸುತ್ತಿವೆ, ಜಾಗತಿಕ ಮೌಲ್ಯ ಸರಪಳಿಗಳಲ್ಲಿ ನಮ್ಮನ್ನು ಸಂಯೋಜಿಸುತ್ತಿವೆ ಮತ್ತು ಗಮನಾರ್ಹ ಉದ್ಯೋಗವನ್ನು ಸೃಷ್ಟಿಸುತ್ತಿವೆ. ನಮ್ಮ ಯುವಕರು ಅಗತ್ಯ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ನಾವು ಸಹಾಯ ಮಾಡುತ್ತಿದ್ದೇವೆ. ಫಲಿತಾಂಶಗಳು ನಮ್ಮೆದುರೇ ಕಾಣುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತ ಹಿಂದಿನ ರಫ್ತು ದಾಖಲೆಗಳನ್ನು ಮುರಿದಿದೆ: ನರೇಂದ್ರ ಮೋದಿ

ಭಾರತದ ಸರಕುಗಳ ರಫ್ತು ಹಿಂದಿನ ದಾಖಲೆಗಳನ್ನು ಮುರಿದಿದೆ. ಒಂದು ದಶಕದ ನಂತರ, ಭಾರತ ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಫೋನ್ ಉತ್ಪಾದಕ ರಾಷ್ಟ್ರವಾಗಿದೆ. ಇದಕ್ಕೂ ಮೊದಲು, ಭಾರತ ತನ್ನ ಎಲ್ಲಾ ಮೊಬೈಲ್ ಫೋನ್‌ಗಳನ್ನು ಆಮದು ಮಾಡಿಕೊಳ್ಳುತ್ತಿತ್ತು. ಜಾಗತಿಕವಾಗಿ ಪ್ರಸಿದ್ಧವಾದ ಫೋನ್ ಬ್ರ್ಯಾಂಡ್‌ಗಳನ್ನು ಭಾರತದಲ್ಲಿ ತಯಾರಿಸಲಾಗುತ್ತಿದೆ.

ಭಾರತವು ಔಷಧಗಳ ವಿಶ್ವಾಸಾರ್ಹ ಪೂರೈಕೆದಾರ , ನಮ್ಮ ಎಲೆಕ್ಟ್ರಾನಿಕ್ಸ್ ಉತ್ಪಾದನೆಯೂ ಬೆಳೆದಿದೆ. ಜವಳಿ, ಎಂಜಿನಿಯರಿಂಗ್ ಸರಕುಗಳು ಮತ್ತು ರಾಸಾಯನಿಕಗಳಲ್ಲಿ ಇದೇ ರೀತಿಯ ಪ್ರಗತಿಯನ್ನು ಕಾಣಬಹುದು. ಒಂದು ಕಾಲದಲ್ಲಿ ಲಘುವಾಗಿ ಪರಿಗಣಿಸಲಾಗಿದ್ದ ಕ್ಷೇತ್ರಗಳಲ್ಲಿ ಈ ಬದಲಾವಣೆ ಸ್ಪಷ್ಟವಾಗಿ ಗೋಚರಿಸುತ್ತದೆ.

ಕಳೆದ ದಶಕದಲ್ಲಿ ಭಾರತದಲ್ಲಿ ಆಟಿಕೆ ರಫ್ತು ವೇಗವಾಗಿ ಬೆಳೆದಿದೆ ಎಂದು ಅವರು ಹೇಳಿದರು. ನಮ್ಮ ಯುವ ನಾವೀನ್ಯಕಾರರು ಭಾರತದಲ್ಲಿ ಸ್ಟಾರ್ಟ್‌ಅಪ್ ಕ್ರಾಂತಿಯನ್ನು ಹುಟ್ಟುಹಾಕಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ನಾವು ಒಂದು ದಶಕದೊಳಗೆ ಕೆಲವೇ ನೂರು ಸ್ಟಾರ್ಟ್‌ಅಪ್‌ಗಳಿಂದ 200,000 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳಿಗೆ ಬೆಳೆದಿದ್ದೇವೆ. ನಾವು ಇವುಗಳನ್ನು ತಂತ್ರಜ್ಞಾನ ಸ್ಟಾರ್ಟ್‌ಅಪ್‌ಗಳೆಂದು ಭಾವಿಸುತ್ತೇವೆ, ಆದರೆ ಅವುಗಳಲ್ಲಿ ಹಲವು ಉತ್ಪಾದನೆಗೆ ಸಂಬಂಧಿಸಿದ ಸ್ಟಾರ್ಟ್‌ಅಪ್‌ಗಳಾಗಿವೆ. ಇವು ನಮ್ಮ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿವೆ. ಉತ್ಪಾದನೆಯಲ್ಲಿನ ಬೆಳವಣಿಗೆಯು ನಮ್ಮ ಯುವಕರಿಗೆ ಗಮನಾರ್ಹ ಸಂಖ್ಯೆಯ ಉದ್ಯೋಗಗಳನ್ನು ಸೃಷ್ಟಿಸಿದೆ.

2026 ರ ಬಜೆಟ್ ಉತ್ಪಾದನಾ ಕಾರ್ಯತಂತ್ರವನ್ನು ಮುಂದಕ್ಕೆ ಕೊಂಡೊಯ್ಯುತ್ತದೆ:ನರೇಂದ್ರ ಮೋದಿ
ಇದಲ್ಲದೆ, 2026 ರ ಬಜೆಟ್ ಉತ್ಪಾದನಾ ಕಾರ್ಯತಂತ್ರವನ್ನು ಮುನ್ನಡೆಸುತ್ತದೆ. ಇದು ವಲಯವನ್ನು ಬಲಪಡಿಸುತ್ತದೆ.ಬಜೆಟ್2026 ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದರು.

ಎಂಎಸ್​ಎಂಇ ಬಗ್ಗೆ ಪ್ರಧಾನಿ ಹೇಳಿದ್ದೇನು?
ಭಾರತದ ಬಲವಾದ ಉತ್ಪಾದನೆ, ಸೇವೆ ಮತ್ತು ಎಂಎಸ್‌ಎಂಇ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ವಲಯವು ಭಾರತವು ತನ್ನದೇ ಆದ ನಿಯಮಗಳ ಮೇಲೆ 38 ದೇಶಗಳೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಮಾತುಕತೆ ನಡೆಸಲು ಅನುವು ಮಾಡಿಕೊಟ್ಟಿದೆ ಎಂದು ಅವರು ಹೇಳಿದರು. ಜವಳಿ, ಚರ್ಮ, ರಾಸಾಯನಿಕಗಳು, ಕರಕುಶಲ ವಸ್ತುಗಳು, ಆಭರಣಗಳು ಮತ್ತು ಇತರ ವಲಯಗಳಲ್ಲಿನ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಮಾರುಕಟ್ಟೆ ಪ್ರವೇಶವನ್ನು ವಿಸ್ತರಿಸಲು ನಮ್ಮ ಮುಕ್ತ ವ್ಯಾಪಾರ ಒಪ್ಪಂದಗಳ ವಿನ್ಯಾಸಗೊಳಿಸಲಾಗಿದೆ ಎಂದು ಅವರು ಹೇಳಿದರು.

ಸರ್ಕಾರಿ ಬಜೆಟ್​ಗಳು ಕೇವಲ ಲೆಕ್ಕಪತ್ರಗಳ ದಾಖಲೆಯಲ್ಲ
ಸರ್ಕಾರಿ ಬಜೆಟ್‌ಗಳು ಕೇವಲ ಲೆಕ್ಕಪತ್ರ ದಾಖಲೆಗಳಲ್ಲ, ಬದಲಾಗಿ ದೇಶದ ದೀರ್ಘಕಾಲೀನ ಅಭಿವೃದ್ಧಿಯ ಮಾರ್ಗಸೂಚಿಯಾಗಿದೆ .ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಉತ್ಪನ್ನಗಳು ಹಿಂದಿನ ಎಲ್ಲಾ ರಫ್ತು ದಾಖಲೆಗಳನ್ನು ಮುರಿದಿದೆ.

ಸುಧಾರಣೆಯೇ ಎನ್ ಡಿಎ ಸರ್ಕಾರದ ಬದ್ಧತೆ:  ಪ್ರಧಾನಿ ಮೋದಿ
ಯುಪಿಎ ಸರ್ಕಾರದ ಆರ್ಥಿಕ ದುರಾಡಳಿತವನ್ನು ಪ್ರಧಾನಿ ಮೋದಿ ತೀವ್ರವಾಗಿ ಟೀಕಿಸಿದರು.ಇದರಿಂದಾಗಿ ಭಾರತವು ಇತರ ದೇಶಗಳೊಂದಿಗೆ ವ್ಯಾಪಾರ ಒಪ್ಪಂದಗಳನ್ನು ವಿಶ್ವಾಸದಿಂದ ಮಾತುಕತೆ ನಡೆಸಲು ಸಾಧ್ಯವಾಗಲಿಲ್ಲ.ಯುಪಿಎ ಆಡಳಿತದ ಅವಧಿಯಲ್ಲಿ, ವ್ಯಾಪಾರ ಒಪ್ಪಂದದ ಮಾತುಕತೆಗಳು ಪ್ರಾರಂಭವಾಗಿ ನಂತರ ಮುರಿದು ಬೀಳುತ್ತಿದ್ದವು.ಅನೇಕ ದೇಶಗಳೊಂದಿಗೆ ದೀರ್ಘ ಮಾತುಕತೆಗಳ ಹೊರತಾಗಿಯೂ, ಯಾವುದೇ ಕಾಂಕ್ರೀಟ್ ಫಲಿತಾಂಶಗಳನ್ನು ಸಾಧಿಸಲಾಗಲಿಲ್ಲ.ಸುಧಾರಣೆಯು ಎನ್ ಡಿಎ ಸರ್ಕಾರದ ಬದ್ಧತೆಯಾಗಿದೆ.

ಭಾರತದಲ್ಲಿ ಕಂಪ್ಯೂಟಿಂಗ್ ಸಾಮರ್ಥ್ಯ ಮತ್ತು ಡೇಟಾ ಸೆಂಟರ್ ಮೂಲಸೌಕರ್ಯವನ್ನು ವಿಸ್ತರಿಸುವ ಮೂಲಕ ಭಾರತವು ಅಭಿವೃದ್ಧಿ ಹೊಂದುತ್ತಿರುವ AI ಪರಿಸರ ವ್ಯವಸ್ಥೆಗೆ ಅಡಿಪಾಯ ಹಾಕುತ್ತಿದೆ. ಮುಂದಿನ ದಶಕಗಳಲ್ಲಿ ಪ್ರಧಾನಿ ಮೋದಿ ಮೂರು ಪ್ರಮುಖ ಸುಧಾರಣೆಗಳಿಗೆ ಆದ್ಯತೆಗಳನ್ನು ವಿವರಿಸಿದ್ದಾರೆ.

ಭಾರತದ ಪ್ರಗತಿಗೆ ಮಹಿಳೆಯರ ನೇತೃತ್ವ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಮಹಿಳೆಯರ ಕಲ್ಯಾ ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗುತ್ತಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸರ್ಕಾರದ ನೀತಿಗಳು ಮತ್ತು ನಿರ್ಧಾರಗಳ ಹಿಂದಿನ ಪ್ರಮುಖ ಮಾರ್ಗದರ್ಶಿ ಶಕ್ತಿ ಮಹಿಳೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸುತ್ತಾರೆ ಮತ್ತು ಮಹಿಳೆಯರು ದೇಶದ ಪ್ರಗತಿಯನ್ನು ಮುನ್ನಡೆಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 7 ಕಾರ್ಮಿಕರು ಸಜೀವದಹನ – Kannada News | Factory Blast in Rajasthan Leaves Multiple Casualties, Rescue Teams Deployed

ಜೈಪುರ, ಫೆಬ್ರವರಿ 16: ರಾಜಸ್ಥಾನದ ಭಿವಾಡಿಯಲ್ಲಿರುವ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಕಾರ್ಮಿಕರು ಸಜೀವದಹನವಾಗಿದ್ದಾರೆ. ಕಾರ್ಖಾನೆಯ ಒಳಗಿನಿಂದ ರಕ್ಷಣಾ ತಂಡಗಳು ಏಳು ಕಾರ್ಮಿಕರ ಶವಗಳನ್ನು ಹೊರತೆಗೆದರೆ, ತಿಜಾರಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಇನ್ನೂ ಹಲವಾರು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಯಿತು. ಒಂದೂವರೆ ಗಂಟೆಗಳ ಕಠಿಣ ಪರಿಶ್ರಮದ ನಂತರ, ಸಿಬ್ಬಂದಿ ಮತ್ತು ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.ಘಟನೆ ನಡೆದ ಸಮಯದಲ್ಲಿ ಕಾರ್ಖಾನೆಯಲ್ಲಿ 20-25 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೆಲವರು ತಾವಾಗಿಯೇ ಹೊರಬರುವಲ್ಲಿ ಯಶಸ್ವಿಯಾದರು, ಆದರೆ ಅನೇಕರು ಒಳಗೆ ಸಿಲುಕಿಕೊಂಡು ಬೆಂಕಿಯಲ್ಲಿ ಸಾವನ್ನಪ್ಪಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ! – Kannada News | Kolar’s Vemagal Hosts India’s First Tata Airbus Helicopter Assembly Unit Launch by Pm Modi and France president

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಚಾಲನೆ!

ಕೋಲಾರ, ಫೆಬ್ರವರಿ 16: ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಖುದ್ದು ವೇಮಗಲ್‌ಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಎಂ.ಆರ್. ರವಿ ಮತ್ತು ಎಸ್ಪಿ ಕನ್ನಿಕಾ ಸಿಕ್ರಿವಾಲ್ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ವರ್ಷಕ್ಕೆ 10 ಹೆಲಿಕಾಪ್ಟರ್‌ಗಳನ್ನು ತಯಾರಿಸಲಿದೆ ಈ ಘಟಕ!

ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಸುಮಾರು 16 ಎಕರೆ ಪ್ರದೇಶದಲ್ಲಿ ಈ ಘಟಕ ನಿರ್ಮಾಣಗೊಂಡಿದ್ದು, ಇದು ದೇಶದಲ್ಲೇ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ ವರ್ಷಕ್ಕೆ H125 ಮಾದರಿಯ ಹತ್ತು ಹೆಲಿಕಾಪ್ಟರ್‌ಗಳನ್ನು ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ. ಮುಂದಿನ ದಿನಗಳಲ್ಲಿ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಯೋಜನೆಗಳೂ ರೂಪುಗೊಂಡಿವೆ.

ಇದನ್ನೂ ಓದಿ ಎಐ ಇಂಪ್ಯಾಕ್ಟ್ ಶೃಂಗಸಭೆ; ಭಾರತದ ಪ್ರಗತಿಗೆ ಇಗೋ ನೋಡಿ ಸಾಕ್ಷ್ಯ ಎಂದ ಪ್ರಧಾನಿ ಮೋದಿ

ವೇಮಗಲ್ ಕೈಗಾರಿಕಾ ಪ್ರದೇಶವು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಸಮೀಪವಿರುವುದು ಈ ಸ್ಥಳ ಆಯ್ಕೆಗೂ ಪ್ರಮುಖ ಕಾರಣವಾಗಿದೆ. ಈ ಘಟಕ ಆರಂಭದಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಹೆಚ್ಚಳವಾಗಲಿದ್ದು, ಕೋಲಾರ ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ವೇಗ ಸಿಗಲಿದೆ. ರಾಷ್ಟ್ರಮಟ್ಟದಲ್ಲಿ ಕೋಲಾರ ಜಿಲ್ಲೆಯ ಹೆಗ್ಗಳಿಕೆಯನ್ನು ಮತ್ತಷ್ಟು ಹೆಚ್ಚಿಸುವ ಯೋಜನೆ ಇದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 1:26 pm, Mon, 16 February 26

Source link

ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ – Kannada News | Pavithra Gowda Bail Denied in Renukaswamy Murder Case: Interim Plea Fails, Jail Continues

ರೇಣುಕಾ ಸ್ವಾಮಿ (Renukaswamy ) ಕೊಲೆ ಕೇಸ್​​ನಲ್ಲಿ ಎ1 ಆಗಿರೋ ಪವಿತ್ರಾ ಗೌಡ ಅವರು ಜಾಮೀನು ಪಡೆಯಬೇಕು ಎಂದು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಈಗ ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್​​ನಲ್ಲಿ ಕೋರಿದ್ದರು. ಆದರೆ, ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜೈಲುವಾಸ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಪವಿತ್ರಾ ಗೌಡ ಅವರು ದರ್ಶನ್ ಆಪ್ತೆ ಎನಿಸಿಕೊಂಡಿದ್ದರು. ಇಬ್ಬರೂ ಲಿವಿನ್ ರಿಲೇಶನ್​ಶಿಪ್​​ನಲ್ಲಿ ಇದ್ದ ಬಗ್ಗೆ ಚಾರ್ಜ್​ಶಿಟ್​​ನಲ್ಲಿ ಉಲ್ಲೇಖಿಸಲಾಗಿದೆ. ಪವಿತ್ರಾಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಕಿರುಕುಳ ನೀಡಿದ್ದ. ಈ ವಿಷಯ ದರ್ಶನ್ ಕಿವಿಗೂ ಬಿತ್ತು. ಹೀಗಾಗಿ, ಆತನನ್ನು ಬೆಂಗಳೂರಿಗೆ ಕರೆಸಿ, ಪಟ್ಟಣಗೆರೆ ಶೆಡ್​​ನಲ್ಲಿ ಆತನ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈ ವೇಳೆ ಪವಿತ್ರಾ ಗೌಡ, ದರ್ಶನ್ ಕೂಡ ಸ್ಥಳದಲ್ಲಿ ಇದ್ದರು ಮತ್ತು ಹಲ್ಲೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ1 ಆರೋಪಿ ಆಗಿದ್ದಾರೆ. ದರ್ಶನ್ ಎ2 ಆಗಿದ್ದಾರೆ. ಪವಿತ್ರಾಗೆ ಇರೋದು ಎಂದರೆ ಮಗಳು ಮಾತ್ರ. ಅವಳಿಗೆ ಪರೀಕ್ಷೆ ಸಮೀಪಿಸಿದೆ. ಹೀಗಾಗಿ, 25 ದಿನಗಳ ಮಧ್ಯಂತ ಜಾಮೀನು ನೀಡಿ ಎಂದು ಕೋರ್ಟ್​ ಅಲ್ಲಿ ಮನವಿ ಮಾಡಿದ್ದರು. ಆದರೆ, ಇದನ್ನು ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪವಿತ್ರಾಗೆ ಜಾಮೀನು ನೀಡಲು ನಿರಾಕರಿಸಿದೆ.

ಇದನ್ನೂ ಓದಿ: ಪವಿತ್ರಾ ಮನೆ ಊಟಕ್ಕೆ ಬ್ರೇಕ್: ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್

ಈ ಮೊದಲು ಪವಿತ್ರಾ ಅವರು ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಜೈಲು ಊಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದರು. ಕೆಲ ದಿನ ಇದಕ್ಕೆ ಅವಕಾಶ ಇತ್ತು. ನಂತರ ಇದನ್ನು ರದ್ದು ಮಾಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Gold Rate Today: ಚಿನ್ನದ ಬೆಲೆ 10 ಗ್ರಾಮ್​ಗೆ 1,200 ರೂ ಇಳಿಕೆ; ಬೆಳ್ಳಿಯೂ ಕುಸಿತ – Kannada News | Gold Price Today on 16th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆಯಾಗುವುದು ಮುಂದುವರಿದಿದೆ. ವಾರಾಂತ್ಯದಲ್ಲಿ ಸುಮಾರು 200 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 120 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 7 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,800 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,644 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,340 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,733 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 268 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,644 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,340 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 268 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,340 ರೂ
  • ಚೆನ್ನೈ: 14,440 ರೂ
  • ಮುಂಬೈ: 14,340 ರೂ
  • ದೆಹಲಿ: 14,355 ರೂ
  • ಕೋಲ್ಕತಾ: 14,340 ರೂ
  • ಕೇರಳ: 14,340 ರೂ
  • ಅಹ್ಮದಾಬಾದ್: 14,345 ರೂ
  • ಜೈಪುರ್: 14,355 ರೂ
  • ಲಕ್ನೋ: 14,355 ರೂ
  • ಭುವನೇಶ್ವರ್: 14,340 ರೂ

ಇದನ್ನೂ ಓದಿ: ಈ ಪೋಸ್ಟ್ ಆಫೀಸ್ ಸ್ಕೀಮ್​ನಿಂದ ತೆರಿಗೆ ಉಳಿತಾಯದ ಜೊತೆಗೆ ತಿಂಗಳಿಗೆ 20,000 ರೂ ಆದಾಯ ಸೃಷ್ಟಿಸುವುದು ಹೇಗೆ? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 607 ರಿಂಗಿಟ್ (14,116 ರುಪಾಯಿ)
  • ದುಬೈ: 562.50 ಡಿರಾಮ್ (13,892 ರುಪಾಯಿ)
  • ಅಮೆರಿಕ: 157 ಡಾಲರ್ (14,240 ರುಪಾಯಿ)
  • ಸಿಂಗಾಪುರ: 197.60 ಸಿಂಗಾಪುರ್ ಡಾಲರ್ (14,209 ರುಪಾಯಿ)
  • ಕತಾರ್: 558 ಕತಾರಿ ರಿಯಾಲ್ (13,886 ರೂ)
  • ಸೌದಿ ಅರೇಬಿಯಾ: 570 ಸೌದಿ ರಿಯಾಲ್ (13,786 ರುಪಾಯಿ)
  • ಓಮನ್: 59.70 ಒಮಾನಿ ರಿಯಾಲ್ (14,067 ರುಪಾಯಿ)
  • ಕುವೇತ್: 45.98 ಕುವೇತಿ ದಿನಾರ್ (13,668 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 268 ರೂ
  • ಚೆನ್ನೈ: 280 ರೂ
  • ಮುಂಬೈ: 268 ರೂ
  • ದೆಹಲಿ: 268 ರೂ
  • ಕೋಲ್ಕತಾ: 268 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 268 ರೂ
  • ಜೈಪುರ್: 268 ರೂ
  • ಲಕ್ನೋ: 268 ರೂ
  • ಭುವನೇಶ್ವರ್: 280 ರೂ
  • ಪುಣೆ: 268

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಆಡಿದ್ದು ಸಾಕು, ಮೂವರಿಗೆ ಗೇಟ್ ಪಾಸ್ ನೀಡಿ: ಅಫ್ರಿದಿ ಆಗ್ರಹ – Kannada News | Drop Babar Azam, Shaheen afridi, Shadab Khan: Shahid Afridi

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಮತ್ತೊಮ್ಮೆ ಮುಗ್ಗರಿಸಿದೆ. ಅದು ಸಹ ತನ್ನ ಬದ್ಧವೈರಿ ಭಾರತದ ವಿರುದ್ಧ. ಇತ್ತ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ 8ನೇ ಬಾರಿ ಗೆಲುವಿನ ನಗೆ ಬೀರಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 175 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ 18 ಓವರ್​ಗಳಲ್ಲೇ ಆಲೌಟ್ ಆಯಿತು. ಅದು ಸಹ ಕೇವಲ 114 ರನ್​ಗಳಿಸಿ. ಈ ಮೂಲಕ 61 ರನ್​ಗಳಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ನಡೆದ ಚಾನೆಲ್​ ಚರ್ಚೆಯೊಂದರಲ್ಲಿ ಕಾಣಿಸಿಕೊಂಡ ಪಾಕಿಸ್ತಾನ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಹಿರಿಯ ಆಟಗಾರರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಈ ಆಟಗಾರರನ್ನು ತಂಡದಿಂದ ಕೈ ಬಿಡುವ ಸಮಯ ದಾಟಿದೆ ಎಂದಿದ್ದಾರೆ.

ಪಾಕಿಸ್ತಾನ್ ತಂಡದಲ್ಲಿ ಮಹತ್ವದ ಬದಲಾವಣೆಯಾಗೇಬೇಕಿದೆ. ಟೀಮ್​ನಲ್ಲಿರುವ ಹಿರಿಯ ಆಟಗಾರರಾದ ಬಾಬರ್ ಆಝಂ, ಶಾಹೀನ್ ಅಫ್ರಿದಿ ಹಾಗೂ ಶಾದಾಬ್ ಖಾನ್​ರನ್ನು ತಂಡದಿಂದ ಕೈ ಬಿಡಬೇಕು. ಅವರ ಬದಲಿಗೆ ಹೊಸ ಆಟಗಾರರಿಗೆ ಅವಕಾಶ ಕಲ್ಪಿಸಬೇಕು.

ಏಕೆಂದರೆ ಅನುಭವಿ ಆಟಗಾರರಾಗಿ ತಂಡಕ್ಕೆ ಆಯ್ಕೆಯಾಗಿ ಇವರು  ಯಾವುದೇ ಅನುಭವದ ಪ್ರದರ್ಶನ ನೀಡುತ್ತಿಲ್ಲ. ಇದಾಗ್ಯೂಇವುರಗಳು ಬಹಳ ಸಮಯದಿಂದ ತಂಡದಲ್ಲಿದ್ದಾರೆ. ಆದರೆ ಸಿಗಬೇಕಾದ ಫಲಿತಾಂಶ ಮಾತ್ರ. ಹೀಗಾಗಿ ಈ ಮೂವರಿಗೆ ತಂಡದಿಂದ ಗೇಟ್ ಪಾಸ್ ನೀಡಬೇಕು ಎಂದು ಶಾಹಿದ್ ಅಫ್ರಿದಿ ಆಗ್ರಹಿಸಿದ್ದಾರೆ.

ಬಾಬರ್, ಶಾಹೀನ್ ಹಾಗೂ ಶಾದಾಬ್ ಅವರನ್ನು ತಂಡದಿಂದ ಹೊರಗಿಟ್ಟು ಅವರ ಬದಲಿಗೆ ಹೊಸ ಆಟಗಾರರಿಗೆ ಸ್ಥಾನ ಕಲ್ಪಿಸಬೇಕು. ಈ ಮೂಲಕ ಪಾಕಿಸ್ತಾನ್ ತಂಡ ಪ್ರಯೋಗಕ್ಕೆ ಮುಂದಾಗಬೇಕು. ಇಲ್ಲದಿದ್ದರೆ ಭಾರತದಂತಹ ತಂಡದ ವಿರುದ್ಧ ಪಾಕಿಸ್ತಾನ್ ತಂಡದ ಗೆಲುವು ಮರೀಚಿಕೆಯಾಗಿರಲಿದೆ ಎಂದು ಶಾಹಿದ್ ಅಫ್ರಿದಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: VIDEO: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ನಡುವೆ ‘ಒಳ’ಜಗಳ

ಕುತೂಹಲಕಾರಿ ವಿಷಯ ಎಂದರೆ ಪಾಕಿಸ್ತಾನ್ ತಂಡದಲ್ಲಿರುವ ಶಾಹೀನ್ ಅಫ್ರಿದಿ, ಶಾಹಿದ್ ಅಫ್ರಿದಿ ಅವರ ಅಳಿಯ. ಅಂದರೆ ಅಫ್ರಿದಿ ಅವರ ಮಗಳನ್ನು ಶಾಹೀನ್ ಶಾ ಅಫ್ರಿದಿ ವಿವಾಹವಾಗಿದ್ದಾರೆ. ಇದೀಗ ಶಾಹೀನ್ ಅಫ್ರಿದಿಯನ್ನೇ ಪಾಕಿಸ್ತಾನ್ ತಂಡದಿಂದ ಕೈ ಬಿಡಬೇಕೆಂದು ಆಗ್ರಹಿಸಿ ಶಾಹಿದ್ ಅಫ್ರಿದಿ ಎಲ್ಲರ ಗಮನ ಸೆಳೆದಿದ್ದಾರೆ.

Source link

ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್: ಹಳೇ ಸಂದೇಶ ಮುಂದಿಟ್ಟು ಖರ್ಗೆಗೆ ಖಡಕ್ ಉತ್ತರ ಕೊಟ್ಟ RSS – Kannada News | RSS Responds to Priyank Kharge Row: Gurudakshina Is Devotion, Not Donation, Mohan Bhagwat old video circulating again

ಮೋಹನ್ ಭಾಗವತ್ ಹಾಗೂ ಪ್ರಿಯಾಂಕ್ ಖರ್ಗೆ (ಸಂಗ್ರಹ ಚಿತ್ರ)Image Credit source: tv9

ಬೆಂಗಳೂರು, ಫೆಬ್ರವರಿ 16: ‘ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್’ ಎಂಬ ಮೋಹನ್ ಭಾಗವತ್ (Mohan Bhagwat) ಅವರ ಹೇಳಿಕೆಯನ್ನು ಮತ್ತೆ ಮುನ್ನೆಲೆಗೆ ತರುವ ಮೂಲಕವೇ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ಟೀಕಾಕಾರರಿಗೆ ಆರ್​ಎಸ್​ಎಸ್ (RSS) ಖಡಕ್ ಉತ್ತರ ನೀಡಿದೆ. ಆರ್​ಎಸ್​ಎಸ್​ನ ಆರ್ಥಿಕ ಮೂಲ ಯಾವುದು ಮತ್ತು ಅದು ತೆರಿಗೆ ಪಾವತಿಸುತ್ತಿದೆಯೇ ಎಂಬ ಪ್ರಶ್ನೆಗಳಿಗೆ ಈವರೆಗೆ ಉತ್ತರ ಸಿಕ್ಕಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಅದಕ್ಕುತ್ತರವಾಗಿ ಮೋಹನ್ ಭಾಗವತ್ ಅವರ ಹೇಳಿಕೆಯ ವಿಡಿಯೋವನ್ನು ಸಂಘ ಮತ್ತೆ ಮುನ್ನೆಲೆಗೆ ತಂದಿದೆ.

ಏನು ಹೇಳಿದ್ದರು ಮೋಹನ್ ಭಾಗವತ್?

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಕಳೆದ ನವೆಂಬರ್‌ನಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಆಗ ಮಾತನಾಡಿ, ಸಂಘದ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಿದ್ದರು. ‘ನಾವು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ, ದೇಣಿಗೆ ತೆಗೆದುಕೊಳ್ಳುವುದಿಲ್ಲ, ಸಂಘದ ಸದಸ್ಯರೇ ಗುರುದಕ್ಷಿಣೆ ನೀಡುತ್ತಾರೆ’ ಎಂದು ಭಾಗವತ್ ಹೇಳಿದ್ದರು. ಅಲ್ಲದೆ, ಸಂಘ ಸಮಾಜವನ್ನು ಬಲಪಡಿಸುವ ಕೆಲಸ ಮಾಡುತ್ತಿದೆ ಮತ್ತು ರಾಜಕಾರಣದಿಂದ ದೂರವಿದೆ ಎಂದು ಸ್ಪಷ್ಟಪಡಿಸಿದ್ದರು.

ವಿಡಿಯೋ ನೋಡಿ


ಈ ವಿಚಾರವಾಗಿ ಬೆಂಗಳೂರಿನ ಗಾಂಧಿಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಮಾತನಾಡಿದ ಖರ್ಗೆ, ಆರ್​ಎಸ್​ಎಸ್ ಫಂಡಿಂಗ್ ತೆಗೆದುಕೊಳ್ಳುವುದಿಲ್ಲ, ಸದಸ್ಯರೇ ಗುರುದಕ್ಷಿಣೆ ನೀಡುತ್ತಾರೆ ಎಂದು ಮೋಹನ್ ಭಾಗವತ್ ಹೇಳುತ್ತಾರೆ. ಆದರೆ, ಇವರದ್ದು ದೊಡ್ಡ ನೆಟ್‌ವರ್ಕ್ ಇದೆ. ಅಮೆರಿಕಾ, ಇಂಗ್ಲೆಂಡ್ ಸೇರಿ ವಿದೇಶಗಳಿಂದ ಹೆಚ್ಚು ಫಂಡಿಂಗ್ ಬರುತ್ತದೆ. ತಮ್ಮ ಧ್ವಜದ ಹೆಸರಲ್ಲಿ ಗುರುದಕ್ಷಿಣೆ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. 2,500 ಸಂಘಟನೆಗಳ ಜಾಲ ಇದೆ. ಈ ಜನರು ಹಣ ವರ್ಗಾವಣೆಯಲ್ಲಿ ತೊಡಗಿದ್ದಾರೆ. ಇವರಿಗೆ ಇಷ್ಟು ಹಣ ಎಲ್ಲಿಂದ ಬರುತ್ತದೆ ಎಂದು ಖರ್ಗೆ ಪ್ರಶ್ನಿಸಿದ್ದರು.

ಆರ್​​ಎಸ್​ಎಸ್ ವಿರುದ್ಧ ಖರ್ಗೆ ಹೇಳಿದ್ದೇನು?

‘57 ವರ್ಷಗಳ ಕಾಲ ದೇಶದ ಧ್ವಜವನ್ನು ಹಾರಿಸದವರು ಈಗ ದೇಶಪ್ರೇಮದ ಬಗ್ಗೆ ಮಾತನಾಡುತ್ತಿದ್ದಾರೆ. ಸಂಘದ ಆರ್ಥಿಕ ಮೂಲ ಯಾವುದು? ಅದು ತೆರಿಗೆ ಪಾವತಿಸುತ್ತಿದೆಯೇ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ’ ಎಂದು ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದರು. ಮುಂದುವರಿದು, ಆರ್​ಎಸ್​ಎಸ್ ದೆವ್ವ ಇದ್ದಂತೆ, ಬಿಜೆಪಿ ದೆವ್ವದ ಕರಿ ನೆರಳು. ನಾವು ನೆರಳಿನ ಜೊತೆ ಅಲ್ಲ, ದೆವ್ವದ ಜೊತೆ ಹೋರಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು: ಸಚಿವ ಪ್ರಿಯಾಂಕ್ ಖರ್ಗೆ

ಆರ್​ಎಸ್​ಎಸ್​​ ಅನ್ನು ನೋಂದಣಿ ಮಾಡುವ ಅಗತ್ಯವಿಲ್ಲ ಎಂಬುದನ್ನು ಖಂಡಿಸಿರುವ ಖರ್ಗೆ, ಇವತ್ತಲ್ಲ, ನಾಳೆ ಆರ್‍ಎಸ್‍ಎಸ್ ನೋಂದಣಿ ಆಗಲೇಬೇಕು. ನಾನೇ ಅದನ್ನು ಮಾಡಿಸುತ್ತೇನೆ ಎಂದಿದ್ದಾರೆ. ನಾವು ಹೋಗಿ ರಿಜಿಸ್ಟ್ರೇಷನ್ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಏಕೆಂದರೆ ಅವರು ವ್ಯಕ್ತಿಗಳ ಸಮೂಹ ಎಂದು ಹೇಳುತ್ತಾರೆ. ಮೋಹನ್ ಭಾಗವತ್ ಅವರು ಹೇಳಿದರೂ, ನಮಗೆ ನೋಂದಣಿಗೆ ಅವಕಾಶವಿಲ್ಲ ಎಂದು ಗೊತ್ತಾಗಲಿಲ್ಲವೇ? ನಾನು ಮಾತು ಕೊಡುತ್ತೇನೆ, ಇವತ್ತಿನಿಂದ ನಾಳೆ ಅವರು ನೋಂದಣಿ ಆಗಲೇಬೇಕು. ಆಗ್ತಾರೆ, ನಾನು ಮಾಡಿಸುತ್ತೇನೆ ಎಂದು ಖರ್ಗೆ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ – Kannada News | Sabarimala Women Entry: Supreme Courts 9 Judge Bench to Rehear Case from April 7

ದೆಹಲಿ, ಫೆಬ್ರವರಿ 16: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಗಳ ವಿಚಾರಣೆಗೆ ಒಪ್ಪಿಗೆ ನೀಡಿದೆ. ಏಪ್ರಿಲ್ 7ರಿಂದ ಈ ವಿಚಾರಣೆ ಆರಂಭವಾಗಲಿದ್ದು, ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಇದನ್ನು ನಡೆಸಲಿದೆ. 2018ರಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಮಹಿಳೆಯರಿಗೆ ಶಬರಿಮಲೆಗೆ ಪ್ರವೇಶಕ್ಕೆ ಅವಕಾಶ ನೀಡಿ ತೀರ್ಪು ನೀಡಿತ್ತು. ಆದರೆ, ಈ ತೀರ್ಪಿನ ನಂತರ ಭಕ್ತರು ಮತ್ತು ಧಾರ್ಮಿಕ ಹೋರಾಟಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹಿಂದಿನ ತೀರ್ಪನ್ನು ಸಾಂವಿಧಾನಿಕ ಪೀಠವೇ ನೀಡಿರುವುದರಿಂದ, ಅದರ ಮರುಪರಿಶೀಲನೆಗೂ ಸಾಂವಿಧಾನಿಕ ಪೀಠವೇ ಬೇಕು. ಹೀಗಾಗಿ ಒಂಭತ್ತು ನ್ಯಾಯಾಧೀಶರ ಪೀಠವನ್ನು ರಚಿಸಲಾಗಿದೆ. ಏಪ್ರಿಲ್ 7 ಮತ್ತು 9ರಂದು ವಾದಿಗಳಿಗೆ, ಹಾಗೂ ಏಪ್ರಿಲ್ 14, 15 ಮತ್ತು 16ರಂದು ಪ್ರತಿವಾದಿಗಳಿಗೆ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಏಪ್ರಿಲ್ 14ರೊಳಗೆ ಲಿಖಿತ ರೂಪದಲ್ಲಿ ವಾದ-ಪ್ರತಿವಾದಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಈ ಮರುಪರಿಶೀಲನಾ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಕೂಡ ಸಹಮತ ವ್ಯಕ್ತಪಡಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link