Category Archives: Blog

Your blog category

ಸಮಂತಾ ಪತಿಯೊಟ್ಟಿಗೆ ಸಿನಿಮಾ ಮಾಡಲಿದ್ದಾರೆ ಸಲ್ಮಾನ್ ಖಾನ್ – Kannada News | Raj and DK to direct a super hero movie to Salman Khan

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಸದ್ಯ ತೆಲುಗಿನ ನಿರ್ಮಾಪಕ ದಿಲ್ ರಾಜು ನಿರ್ಮಿಸಿ, ವಂಶಿ ಪೈಡಪಲ್ಲಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ‘ಮಹರ್ಷಿ’, ‘ಮುನ್ನಾ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದ ವಂಶಿ ಇದೀಗ ಸಲ್ಮಾನ್ ಖಾನ್​​ಗಾಗಿ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ಸಲ್ಮಾನ್ ಖಾನ್ ಸಹ ದಕ್ಷಿಣದ ನಿರ್ದೇಶಕರುಗಳೊಟ್ಟಿಗೆ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಮುರುಗದಾಸ್ ಜೊತೆಗೆ ‘ಸಿಖಂಧರ್’ ಮಾಡಿದ್ದರು. ಅದು ಫ್ಲಾಪ್ ಆಯ್ತು. ಈಗ ವಂಶಿ ಪೈಡಪಲ್ಲಿ ಜೊತೆ ಕೆಲಸ ಮಾಡುತ್ತಿದ್ದಾರೆ. ಇದಾದ ಬಳಿಕ ಸಮಂತಾರ ಹಾಲಿ ಪತಿಯ ನಿರ್ದೇಶನದಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ.

ಸಮಂತಾರ ಪತಿ ರಾಜ್ ಮತ್ತು ಅವರ ಗೆಳೆಯ ಡಿಕೆ ಸಲ್ಮಾನ್ ಖಾನ್ ಅವರಿಗಾಗಿ ಸೂಪರ್ ಹೀರೋ ಕತೆಯುಳ್ಳ ಸಿನಿಮಾ ನಿರ್ದೇಶಿಸಲು ಸಜ್ಜಾಗಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ‘ರಾಜ್ ಮತ್ತು ಡಿಕೆ’ ಜೋಡಿಯದ್ದು ದೊಡ್ಡ ಹೆಸರು. ಹಲವು ಸಿನಿಮಾಗಳು ಮತ್ತು ಕೆಲವು ಸೂಪರ್ ಹಿಟ್ ವೆಬ್ ಸರಣಿಗಳನ್ನು ಈ ಜೋಡಿ ಈಗಾಗಲೇ ನೀಡಿದೆ. ರಾಜ್ ನಿಧಿಮೋರು ಮತ್ತು ಕೃಷ್ಣ ಡಿಕೆ ಅವರು ದಶಕಗಳಿಂದಲೂ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಕಳೆದ ಎರಡು ವರ್ಷಗಳಿಂದಲೂ ಅವರು ಕತೆಯೊಂದರ ಮೇಲೆ ಕೆಲಸ ಮಾಡಿದ್ದು, ಕತೆಗೆ ಸಲ್ಮಾನ್ ಖಾನ್ ಅವರೇ ಸೂಕ್ತ ಎಂಬ ಕಾರಣಕ್ಕೆ ಇದೀಗ ಸಲ್ಲು ಜೊತೆಗೆ ರಾಜ್ ಮತ್ತು ಡಿಕೆ ಕೈಜೋಡಿಸಿದ್ದಾರೆ. ಸಲ್ಮಾನ್ ಖಾನ್ ಈ ಹಿಂದೆಂದೂ ಕಾಣಿಸಿಕೊಳ್ಳದ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ:ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ

ರಾಜ್ ಮತ್ತು ಡಿಕೆ ಈ ಹಿಂದೆ ಕೆಲವಾರು ಸಿನಿಮಾಗಳನ್ನು ನಿರ್ದೇಶಿಸಿದ್ದಾರಾದರೂ ಸೂಪರ್ ಸ್ಟಾರ್ ನಟನೊಟ್ಟಿಗೆ ಮತ್ತು ಇಷ್ಟು ದೊಡ್ಡ ಬಜೆಟ್​​ನ ಸಿನಿಮಾ ನಿರ್ದೇಶಿಸುತ್ತಿರುವುದು ಇದೇ ಮೊದಲಾಗಿದೆ. ಇದು ಕೇವಲ ಸಾಹಸ ಪ್ರಧಾನ ಚಿತ್ರವಲ್ಲದೆ, ರಾಜ್ ಮತ್ತು ಡಿಕೆ ಅವರ ವಿಶಿಷ್ಟ ಶೈಲಿಯ ಹಾಸ್ಯ ಮತ್ತು ವಿನೂತನ ಕಥಾವಸ್ತುವನ್ನು ಹೊಂದಿರಲಿದೆ. ಈ ಸಿನಿಮಾದ ಪ್ರಾಥಮಿಕ ಕೆಲಸಗಳು ಈಗಾಗಲೇ ಆರಂಭವಾಗಿದ್ದು, ಅಕ್ಟೋಬರ್ 2026 ರಿಂದ ಅಧಿಕೃತವಾಗಿ ಚಿತ್ರೀಕರಣ ಶುರುವಾಗಲಿದೆ ಎಂದು ಮೂಲಗಳು ತಿಳಿಸಿವೆ.

2003 ರಿಂದಲೂ ಸಿನಿಮಾ ನಿರ್ದೇಶನದಲ್ಲಿ ತೊಡಗಿಸಿಕೊಂಡಿರುವ ರಾಜ್ ಮತ್ತು ಡಿಕೆ, ‘99’, ‘ಗೋ ಗಾನ್ ಗೋವಾ’, ‘ಶೋರ್ ಇನ್ ದಿ ಸಿಟಿ’, ‘ಎ ಜಂಟಲ್​​ಮ್ಯಾನ್’ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಬಹಳ ಜನಪ್ರಿಯವಾಗಿರುವ ‘ದಿ ಫ್ಯಾಮಿಲಿ ಮ್ಯಾನ್’, ‘ಫರ್ಜಿ’, ‘ಗನ್ಸ್ ಆಂಡ್ ಗುಲಾಬ್ಸ್’, ‘ಸಿಟಾಡೆಲ್: ಹನಿ ಬನಿ’ ವೆಬ್ ಸರಣಿಗಳನ್ನು ಸಹ ಇವರೇ ನಿರ್ದೇಶಿಸಿದ್ದಾರೆ. ಇದೀಗ ಮೊದಲ ಬಾರಿಗೆ ಸೂಪರ್ ಹೀರೋ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Masala Dosa: ನಮ್ಮ ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್​; ‘ಟಾಪ್ 10’ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಸ್ಥಾನ! – Kannada News | Masala Dosa Ranks 6th Globally: TasteAtlas Crowns It Among World’s Best Pancakes

ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್Image Credit source: gemini ai

ಭಾರತೀಯರ, ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದ ಹೆಮ್ಮೆಯ ಆಹಾರವಾದ ಮಸಾಲ ದೋಸೆ ಈಗ ಜಾಗತಿಕ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಪ್ರಸಿದ್ಧ ಅಂತರಾಷ್ಟ್ರೀಯ ಆಹಾರ ಮಾರ್ಗದರ್ಶಿ ‘ಟೇಸ್ಟ್ ಅಟ್ಲಾಸ್’ (TasteAtlas) ಪ್ರಕಟಿಸಿರುವ ಮೇ 2026ರ ವಿಶ್ವದ ’50 ಅತ್ಯುತ್ತಮ ಪ್ಯಾನ್‌ಕೇಕ್‌ಗಳ’ ಪಟ್ಟಿಯಲ್ಲಿ ಮಸಾಲ ದೋಸೆಗೆ 6ನೇ ಸ್ಥಾನ ಲಭಿಸಿದೆ. ವಿಶ್ವದಾದ್ಯಂತ ಇರುವ ವಿವಿಧ ಬಗೆಯ ತಿಂಡಿಗಳನ್ನು ಹಿಂದಿಕ್ಕಿ, ಮಸಾಲ ದೋಸೆ ಈ ಸ್ಥಾನವನ್ನು ಅಲಂಕರಿಸುವ ಮೂಲಕ ಭಾರತೀಯ ಆಹಾರ ಪದ್ಧತಿಯ ಖ್ಯಾತಿಯನ್ನು ಹೆಚ್ಚಿಸಿದೆ.

ಟೇಸ್ಟ್ ಅಟ್ಲಾಸ್ ವರದಿ:

ವಿಶ್ವದ ವಿವಿಧ ಮೂಲೆಗಳ ಆಹಾರ ಪ್ರಿಯರು ಮತ್ತು ವಿಮರ್ಶಕರು ನೀಡಿರುವ ರೇಟಿಂಗ್ ಆಧಾರದ ಮೇಲೆ ಮಸಾಲ ದೋಸೆಗೆ 4.3 ಸ್ಟಾರ್ ರೇಟಿಂಗ್ ನೀಡಲಾಗಿದೆ. ಒಟ್ಟು 50 ಖಾದ್ಯಗಳ ಪೈಕಿ ಮಸಾಲ ದೋಸೆ 6ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಮಸಾಲ ದೋಸೆಯ ಗರಿಗರಿಯಾದ ವಿನ್ಯಾಸ, ಒಳಗಿನ ಮಸಾಲೆಭರಿತ ಆಲೂಗೆಡ್ಡೆ ಪಲ್ಯ ಮತ್ತು ಅದನ್ನು ಚಟ್ನಿ-ಸಾಂಬಾರ್ ಜೊತೆಗೆ ಸವಿಯುವ ಶೈಲಿಯನ್ನು ಟೇಸ್ಟ್ ಅಟ್ಲಾಸ್ ವಿಶೇಷವಾಗಿ ಶ್ಲಾಘಿಸಿದೆ.

ದಕ್ಷಿಣ ಭಾರತದ ರುಚಿಗೆ ಜಾಗತಿಕ ಮನ್ನಣೆ:

ಸಾಮಾನ್ಯವಾಗಿ ವಿದೇಶಗಳಲ್ಲಿ ‘ಪ್ಯಾನ್‌ಕೇಕ್’ ಎಂದರೆ ಸಿಹಿಯಾದ ತಿಂಡಿ ಎಂಬ ಭಾವನೆ ಇದೆ. ಆದರೆ, ಭಾರತದ ಈ ಖಾರವಾದ ಮತ್ತು ಸತ್ವಯುತವಾದ ಮಸಾಲ ದೋಸೆ, ಅಂತರಾಷ್ಟ್ರೀಯ ಮಟ್ಟದಲ್ಲಿ ‘ಪ್ಯಾನ್‌ಕೇಕ್ ಪಾರ್ಟಿ’ಯನ್ನು ಧೂಳೀಪಟ ಮಾಡಿ ಜಾಗತಿಕ ಆಹಾರ ಪ್ರಿಯರ ಮೆಚ್ಚಿನ ಆಯ್ಕೆಯಾಗಿ ಹೊರಹೊಮ್ಮಿದೆ. ಅಕ್ಕಿ ಮತ್ತು ಉದ್ದಿನ ಬೇಳೆಯ ಹಿಟ್ಟನ್ನು ಹುದುಗಿಸಿ ತಯಾರಿಸುವ ಈ ದೋಸೆ, ಆರೋಗ್ಯ ಮತ್ತು ರುಚಿಯ ದೃಷ್ಟಿಯಿಂದಲೂ ಅತ್ಯುತ್ತಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮತ್ತಷ್ಟು ಓದಿ: ಮನೆ ಬಾಗಿಲು ಹಾಕಲು ಮರೆತು ಹೋದ ಯುವತಿ, ಪಾರ್ಸೆಲ್ ಡೆಲಿವರಿಗೆಂದು ಬಂದ ವ್ಯಕ್ತಿ ಮಾಡಿದ್ದೇನು?

ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮ:

ಈ ಸುದ್ದಿ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ “ದೋಸೆ ಲವರ್ಸ್” ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ. ಮಸಾಲ ದೋಸೆ ಕೇವಲ ಒಂದು ಆಹಾರವಲ್ಲ, ಅದು ಒಂದು ಭಾವನೆ ಎಂದು ನೆಟ್ಟಿಗರು ಕೊಂಡಾಡುತ್ತಿದ್ದಾರೆ. ಹಿಂದೆ ಇದೇ ಟೇಸ್ಟ್ ಅಟ್ಲಾಸ್ ಪಟ್ಟಿಯಲ್ಲಿ ಭಾರತದ ರೊಟ್ಟಿ, ನಾನ್ ಮತ್ತು ಸಮೋಸಾಗಳು ಸ್ಥಾನ ಪಡೆದಿದ್ದವು. ಈಗ ಆ ಪಟ್ಟಿಗೆ ಮಸಾಲ ದೋಸೆಯೂ ಸೇರ್ಪಡೆಯಾಗಿರುವುದು ಭಾರತೀಯ ಪಾಕಶಾಲೆಯ ಶ್ರೀಮಂತಿಕೆಯನ್ನು ಜಗತ್ತಿಗೆ ತೋರಿಸಿಕೊಟ್ಟಿದೆ.

ಪ್ಯಾನ್‌ಕೇಕ್ ಎಂದರೇನು?

ಪ್ಯಾನ್‌ಕೇಕ್ ಎಂಬುದು ಹಿಟ್ಟು, ಮೊಟ್ಟೆ, ಹಾಲು ಮತ್ತು ಬೆಣ್ಣೆಯಂತಹ ಪದಾರ್ಥಗಳ ಮಿಶ್ರಣದಿಂದ ತಯಾರಿಸಿದ ತೆಳುವಾದ ಮತ್ತು ದುಂಡಗಿನ ಆಕಾರದ ಒಂದು ಬಗೆಯ ತಿಂಡಿಯಾಗಿದೆ. ಇದನ್ನು ಸಾಮಾನ್ಯವಾಗಿ ಫ್ರೈಯಿಂಗ್ ಪ್ಯಾನ್ ಅಥವಾ ತವಾ ಮೇಲೆ ಎರಡೂ ಬದಿಗಳಲ್ಲಿ ಬೇಯಿಸಲಾಗುತ್ತದೆ. ಪಾಶ್ಚಾತ್ಯ ದೇಶಗಳಲ್ಲಿ ಇದು ಅತ್ಯಂತ ಜನಪ್ರಿಯ ಉಪಹಾರವಾಗಿದ್ದು, ಸಾಮಾನ್ಯವಾಗಿ ಇದನ್ನು ಜೇನುತುಪ್ಪ (Honey), ಮೇಪಲ್ ಸಿರಪ್ ಅಥವಾ ಹಣ್ಣುಗಳೊಂದಿಗೆ ಸಿಹಿಯಾಗಿ ಸವಿಯುತ್ತಾರೆ. ತಯಾರಿಸುವ ವಿಧಾನದಲ್ಲಿ ಇದು ಭಾರತದ ದೋಸೆ ಅಥವಾ ಉತ್ತಪ್ಪವನ್ನು ಹೋಲುತ್ತದೆಯಾದರೂ, ಪ್ಯಾನ್‌ಕೇಕ್ ಸಾಮಾನ್ಯವಾಗಿ ಮೃದುವಾಗಿ ಮತ್ತು ಸ್ವಲ್ಪ ದಪ್ಪವಾಗಿರುತ್ತದೆ. ಜಾಗತಿಕವಾಗಿ ಇದನ್ನು ಸಿಹಿ ಮತ್ತು ಖಾರ ಹೀಗೆ ಎರಡೂ ರುಚಿಗಳಲ್ಲಿ ಆಯಾ ದೇಶಗಳ ಸಂಪ್ರದಾಯಕ್ಕೆ ತಕ್ಕಂತೆ ತಯಾರಿಸಲಾಗುತ್ತದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:34 am, Fri, 1 May 26

Source link

ಯಾರನ್ನು ಕೇಳಿದ್ರೂ ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಅಂತಿದ್ದಾರೆ, ನಾವೂ ಅದ್ನೇ ಹೇಳ್ತೀವಿ: ಜಿ ಪರಮೇಶ್ವರ! – Kannada News | Everyone says BJP will win in Assam, we say the same: Karnataka Home Minister G Parameshwara

ಬೆಂಗಳೂರು, ಮೇ 1: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇನೂ ಆಶಾವಾದಿಯಾಗಿಲ್ಲ. ಸಮೀಕ್ಷೆಗಳು ಮಾತ್ರವಲ್ಲ, ಜನರೂ ಎಲ್ಲರೂ ಅಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುತ್ತಿದ್ದಾರೆ. ನಾವೂ ಹಾಗೆಯೇ ಭಾವಿಸಿದ್ದೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆಗಳು ಹೇಳುತ್ತಿವೆ ಮತ್ತು ನಮ್ಮೊಂದಿಗೆ ಮಾತನಾಡಿದವರೂ ಇದನ್ನೇ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೇರಳದಲ್ಲಿ ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು, ಕೆಲವು ಅಧಿಕಾರಿಗಳು ಹಾಗೂ ಅಬ್ಸರ್ವರ್‌ಗಳ ಮಾತುಕತೆಯಿಂದ ತಿಳಿದು ಬಂದ ಪ್ರಕಾರ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಅಧಿಕಾರಕ್ಕೆ ಬರುವ ಅವಕಾಶವಿದೆ ಎಂದು ಹೇಳಿದ್ದಾರೆ. ಮಾಧ್ಯಮ ವರದಿಗಳು ಮತ್ತು ಅವರ ಜನಪ್ರಿಯತೆಯನ್ನು ಗಮನಿಸಿದರೆ ಅವರು ಮತ್ತೆ ಅಧಿಕಾರಕ್ಕೆ ಬರಬಹುದು ಎಂದಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೆಲಮಂಗಲದಲ್ಲಿ ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ – Kannada News | Nelamangala Jeweller Robbed: Burglars Drill Wall, Loot 70 KG Silver Worth 1.2 Crore

ನೆಲಮಂಗಲ, ಮೇ 1: ಹಾವನೂರು ಲೇಔಟ್‌ನಲ್ಲಿರುವ ಎಂಬಿ ಜ್ಯುವೆಲರ್ಸ್​​ನಲ್ಲಿ ಭಾರಿ ಕಳ್ಳತನ ನಡೆದಿದೆ. ಖದೀಮರು ಗೋಡೆ ಕೊರೆದು ಅಂಗಡಿಯೊಳಗೆ ಪ್ರವೇಶಿಸಿ, ಸುಮಾರು 70 ಕೆಜಿ ಬೆಳ್ಳಿಯ ಆಭರಣಗಳನ್ನು ದೋಚಿದ್ದಾರೆ. ದೋಚಿದ ಬೆಳ್ಳಿಯ ಮೌಲ್ಯ ಸುಮಾರು 1.2 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.  ಗೋಡೆಯನ್ನು ಕೊರೆದು, ಹಿಂಬದಿಯ ರೂಮ್‌ನ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು, ರಾತ್ರೋರಾತ್ರಿ ಈ ಕೃತ್ಯ ಎಸಗಿದ್ದಾರೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಕಳ್ಳರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ತಾಯಿಗೆ 80 ಕೋಟಿ ಮನೆ ಕೊಟ್ಟು ನಿಧನ ಹೊಂದಿದ ‘ಕಿರಾತಕ’ ನಟ; ಬೇಸರದಲ್ಲಿ ಗುಡಿಸಲು ಸೇರಿದ ಅಮ್ಮ – Kannada News | Daniel Balaji’s Mother’s Grief: Abandons Rs 80 Cr Mansion for Simple Hut

ಪೋಷಕರು ಬದುಕಿರುವಾಗಲೇ ಮಕ್ಕಳ ಸಾವು ಸಂಭವಿಸುವುದು ಬದುಕಿನ ಅತಿದೊಡ್ಡ ಆಘಾತ. ಇಂತಹದ್ದೇ ಒಂದು ಹೃದಯವಿದ್ರಾವಕ ಘಟನೆ ತಮಿಳು ಚಿತ್ರರಂಗದ ಹೀರೋ ಮನೆಯಲ್ಲಿ ನಡೆದಿತ್ತು. ಖ್ಯಾತ ನಟ ಡೇನಿಯಲ್ ಬಾಲಾಜಿ ಅವರ ನಿಧನದ ನಂತರ ಅವರ ತಾಯಿ ರಾಜಲಕ್ಷ್ಮಿ ಅವರ ಪರಿಸ್ಥಿತಿ ಕಂಡು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ಅವರು ಬಂಗಲೆ ತೊರೆದು ಸಣ್ಣ ಮನೆಯಲ್ಲಿ ವಾಸವಾಗುತ್ತಿದ್ದಾರೆ.

ಕೇವಲ ತಮಿಳು ಮಾತ್ರವಲ್ಲದೆ ಕನ್ನಡ ಚಿತ್ರರಂಗದಲ್ಲೂ ಡೇನಿಯಲ್ ಬಾಲಾಜಿ ತಮ್ಮ ಛಾಪು ಮೂಡಿಸಿದ್ದರು. ಯಶ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಕಿರಾತಕ’ ಮೂಲಕ ಇವರು ಚಂದನವನಕ್ಕೆ ಪದಾರ್ಪಣೆ ಮಾಡಿದ್ದರು. ಇದಾದ ಬಳಿಕ ‘ಶಿವಾಜಿನಗರ’ದಂತಹ ಚಿತ್ರಗಳಲ್ಲಿ ನಟಿಸಿ ಕನ್ನಡ ಪ್ರೇಕ್ಷಕರಿಗೂ ಹತ್ತಿರವಾಗಿದ್ದರು. ಅವರ ಕಂಚಿನ ಕಂಠ ಹಾಗೂ ನೈಜ ನಟನೆಯನ್ನು ಕನ್ನಡಿಗರು ಇಂದಿಗೂ ನೆನಪಿಸಿಕೊಳ್ಳುತ್ತಾರೆ.

2024ರಲ್ಲಿ ಡೇನಿಯಲ್ ಬಾಲಾಜಿ ಕೇವಲ 48ನೇ ವಯಸ್ಸಿಗೆ ಹೃದಯಾಘಾತದಿಂದ ನಿಧನರಾದರು. ಅವರ ಅಕಾಲಿಕ ಮರಣ ಇಡೀ ಚಿತ್ರರಂಗ ಮತ್ತು ಕುಟುಂಬಕ್ಕೆ ತುಂಬಲಾರದ ನಷ್ಟ ತಂದಿತು. ವೇಟ್ಟೈಯಾಡು ವಿಲೈಯಾಡು, ಪೋಲ್ಲಾಧವನ್ ಮತ್ತು ವಾಡಾ ಚೆನ್ನೈನಂತಹ ಸಿನಿಮಾಗಳಲ್ಲಿ ಅವರ ನೆಗೆಟಿವ್ ಶೇಡ್ ಪಾತ್ರಗಳು ಜನಪ್ರಿಯವಾಗಿದ್ದವು.

ಡೇನಿಯಲ್ ಬಾಲಾಜಿ ತಮ್ಮ ತಾಯಿ ರಾಜಲಕ್ಷ್ಮಿ ಅವರಿಗಾಗಿ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ಅದ್ದೂರಿ ಬಂಗಲೆಯನ್ನು ನಿರ್ಮಿಸಿದ್ದರು. ಮಗನ ಪ್ರೀತಿಯ ಅರಮನೆಯಲ್ಲಿ ತಾಯಿ ವಾಸವಿದ್ದರು. ಆದರೆ ಮಗನ ಸಾವಿನ ನಂತರ ಆ ಮನೆಯ ಪ್ರತಿಯೊಂದು ಮೂಲೆ ಕೂಡ ಮಗನ ನೆನಪನ್ನು ಕಾಡತೊಡಗಿತು.

ಇದನ್ನೂ ಓದಿ: ಪತ್ನಿಯ ಅಕ್ರಮ ಸಂಬಂಧ: ಪವಿತ್ರಾ ನನಗೇ ಬೇಕು; ಎಂಬ ಹಠಕ್ಕೆ ಕಿರಾತಕ ಪ್ರಿಯತಮ ಮಾಡಿದ್ದೇನು ನೋಡಿ?

ಮಗನ ಅಗಲಿಕೆಯ ದುಃಖ ತಾಳಲಾರದೆ ಆ ತಾಯಿ ಈಗ ಆ ಕೋಟ್ಯಂತರ ರೂಪಾಯಿ ಬೆಲೆಯ ಬಂಗಲೆಯನ್ನು ತೊರೆದಿದ್ದಾರೆ. ಮಗ ತನ್ನ ಜೀವಿತಾವಧಿಯಲ್ಲಿ ಚೆನ್ನೈನ ಆವಡಿಯಲ್ಲಿ ಕಟ್ಟಿಸಿದ್ದ ದೇವಸ್ಥಾನದ ಬಳಿಯಿರುವ ಒಂದು ಪುಟ್ಟ ಗುಡಿಸಲಿನಲ್ಲಿ ಇಂದು ಆ ತಾಯಿ ವಾಸಿಸುತ್ತಿದ್ದಾರೆ. ಒಬ್ಬ ಯಶಸ್ವಿ ನಟ ತನ್ನ ತಾಯಿಗಾಗಿ ಕಟ್ಟಿಸಿದ ಬಂಗಲೆ, ಮಗನ ನೆನಪಿಗಾಗಿ ತಾಯಿ ಅದನ್ನು ಬಿಟ್ಟು ಸಾಮಾನ್ಯ ಬದುಕು ನಡೆಸುತ್ತಿರುವುದು ಪ್ರತಿಯೊಬ್ಬರ ಮನ ಕಲಕುವಂತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಧುರಂಧರ್’ ನಿರ್ದೇಶಕನ ಮೇಲೆ ಕತೆ ಕದ್ದ ಆರೋಪ: ಕರ್ನಾಟಕ ಹೈಕೋರ್ಟ್ ಹೇಳಿದ್ದೇನು? – Kannada News | Karnataka High Court refuse to cancel Dhurandhar 2 movie CBFC certificate

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳ ಒಟ್ಟು ಕಲೆಕ್ಷನ್ 3000 ಕೋಟಿಗಳನ್ನು ದಾಟಿದೆ. ಸಿನಿಮಾ ಅನ್ನು ಜನ ಮುಗಿಬಿದ್ದು ನೋಡುತ್ತಿದ್ದಾರೆ. ಸಿನಿಮಾ ನಿರ್ದೇಶಿಸಿರುವ ಆದಿತ್ಯ ಧರ್ ಈಗ ಭಾರತದ ಸ್ಟಾರ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಆದಿತ್ಯ ಧರ್ ಮೇಲೆ ನಿರ್ದೇಶಕರೊಬ್ಬರು ಕತೆ ಕದ್ದ ಆರೋಪವನ್ನು ಮಾಡಿದ್ದರು, ಅಲ್ಲದೆ, ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿ, ಸಿನಿಮಾಗಳ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ರದ್ದು ಮಾಡುವಂತೆ ಕೋರಿದ್ದರು.

ಕರ್ನಾಟಕದವರಾದ ಸಂತೋಶ್ ಕುಮಾರ್ ಎಂಬುವರು, ‘ಧುರಂಧರ್ 2’ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ದೇಶಕ ಆದಿತ್ಯ ಧರ್ ವಿರುದ್ಧ ಕತೆ ಕದ್ದ ಆರೋಪ ಮಾಡಿದ್ದರು. ತಾವು ಈಗಾಗಲೇ ‘ಡಿ ಸಾಹೇಬ್’ ಹೆಸರಿನ ಕತೆಯನ್ನು ರಿಜಿಸ್ಟರ್ ಮಾಡಿಸಿದ್ದು, ‘ಧುರಂಧರ್ 2’ ಸಿನಿಮಾ ಕತೆ ಅದೇ ಕತೆಯನ್ನು ಕದ್ದು ಮಾಡಲಾಗಿದೆ ಎಂದು ಆರೋಪಿಸಿದ್ದರು. ತಾವು ಕತೆಯನ್ನು ಸ್ಕ್ರೀನ್ ರೈಟರ್ಸ್ ಅಸೋಸಿಯೇಷನ್​​ನಲ್ಲಿ ರಿಜಿಸ್ಟರ್ ಮಾಡಿಸಿರುವುದಾಗಿಯೂ ಅವರು ಹೇಳಿದ್ದರು.

ಕರ್ನಾಟಕ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದ್ದ ಸಂತೋಶ್ ಕುಮಾರ್, ಆದಿತ್ಯ ಧರ್ ಅವರು ತಮ್ಮ ಕತೆಯನ್ನು ಕದ್ದು ಸಿನಿಮಾ ಮಾಡಿದ್ದು, ಸಿನಿಮಾದ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ರದ್ದು ಮಾಡಬೇಕು ಎಂದು ಕೋರಿದ್ದರು. ಆದರೆ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸಿನಿಮಾದ ಪ್ರಮಾಣ ಪತ್ರವನ್ನು ರದ್ದು ಮಾಡಲು ನಿರಾಕರಿಸಿದರು.

ಇದನ್ನೂ ಓದಿ:‘ಧುರಂಧರ್ 2’ ಬಳಿಕ ರಣವೀರ್ ಸಿಂಗ್ ಮುಂದಿನ ಸಿನಿಮಾ ಇದೇ ನೋಡಿ

ಸಂತೋಶ್ ಕುಮಾರ್ ಅವರು ಆದಿತ್ಯ ಧರ್ ವಿರುದ್ಧ ಕೃತಿಚೌರ್ಯದ ಆರೋಪ ಮಾಡಿದ ಬಳಿಕ, ಆದಿತ್ಯ ಧರ್ ಅವರು ಸಂತೋಶ್​​ ವಿರುದ್ಧ ಬಾಂಬೆ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಇತ್ತೀಚೆಗಷ್ಟೆ ಬಾಂಬೆ ಹೈಕೋರ್ಟ್​​ನಲ್ಲಿ ನಡೆದಿದ್ದು, ಸಂತೋಶ್ ಕುಮಾರ್, ಆದಿತ್ಯ ಧರ್ ವಿರುದ್ಧ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ಸೂಚಿಸಿದೆ.

‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳನ್ನು ಆದಿತ್ಯ ಧರ್ ನಿರ್ದೇಶಿಸಿದ್ದು, ಭಾರತೀಯ ಸೈನಿಕನೊಬ್ಬ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರನ್ನು ಮಟ್ಟ ಹಾಕುವ ಕತೆಯನ್ನು ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ರಣ್ವೀರ್ ಸಿಂಗ್ ನಾಯಕ, ಸಂಜಯ್ ದತ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಆರ್ ಮಾಧವನ್ ಇನ್ನೂ ಹಲವರು ಸಿನಿಮಾನಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು: ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Rowdyism in Bengaluru: Armed Gang Creates Ruckus in Nandini Layout, CCTV Captures Threat with Machete

ಬೆಂಗಳೂರು, ಮೇ 1: ಕುಡಿದ ನಶೆಯಲ್ಲಿ ಪುಂಡರ ಗ್ಯಾಂಗ್‌ವೊಂದು ಮಚ್ಚು ಲಾಂಗು ಹಿಡಿದು ದಾಂಧಲೆ ನಡೆಸಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಪ್ರಿಲ್ 25ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪುಂಡರ ಅಟ್ಟಹಾಸಕ್ಕೆ ಸ್ಥಳೀಯರು ಬೆಚ್ಚಿಬೀಳುವಂತಾಗಿದೆ. ಏಪ್ರಿಲ್ 25ರಂದು ಸಂಜೆ ಸುಮಾರು 4:50ರ ಸಮಯದಲ್ಲಿ ಯುವಕನೊಬ್ಬ ಏರಿಯಾದಲ್ಲಿ ಮಚ್ಚು ಹಿಡಿದು ಓಡಾಡಿ ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ. ಪ್ರಶ್ನಿಸಿದ ಅಕ್ಕಪಕ್ಕದ ಮನೆಯವರಿಗೂ ಮಚ್ಚು ತೋರಿಸಿ ಹೆದರಿಸಿದ್ದಾನೆ. ಇದಾದ ಬಳಿಕ ಸಂಜೆ 7 ಗಂಟೆ ಸುಮಾರಿಗೆ ಮತ್ತೆ ಗ್ಯಾಂಗ್​ನೊಂದಿಗೆ ತಂಡೋಪತಂಡವಾಗಿ ಬಂದು ಮನೆಯೊಂದರ ಕಿಟಕಿ ಗಾಜುಗಳನ್ನು ಒಡೆದು ದಾಂಧಲೆ ನಡೆಸಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಮುಗಿಸಿಬಿಡುವುದಾಗಿ ಬೆದರಿಕೆ ಹಾಕಿರುವ ಈ ಪುಂಡರ ಗಲಾಟೆಯ ದೃಶ್ಯಗಳು ಮನೆಯೊಂದರ ಸಿಸಿಟಿವಿಯಲ್ಲಿ (CCTV) ಸೆರೆಯಾಗಿವೆ. ಪುಂಡರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಪೊಲೀಸರನ್ನು ಆಗ್ರಹಿಸಿದ್ದಾರೆ.

ವಿಡಿಯೋ, ವರದಿ: ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್

‘ಕೆಡಿ’ ಸಿನಿಮಾದ ‘ಸರ್ಸೆ ಸರ್ಸೆ’ ಹಾಡು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ವಿವಾದದ ಬಳಿಕ ಯೂಟ್ಯೂಬ್​​ನಿಂದಲೇ ಹಾಡನ್ನು ತೆಗೆಯಲಾಗಿದೆ. ಈಗ ಸಿನಿಮಾದಲ್ಲೂ ಈ ಹಾಡು ಇಲ್ಲ. ಈ ಬಗ್ಗೆ ಪ್ರೇಮ್ ಮಾತನಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಹಾಡನ್ನು ಸಿನಿಮಾದಲ್ಲಿ ಸೇರ್ಪಡೆ ಮಾಡೋದಾಗಿ ಅವರು ಹೇಳಿದ್ದಾರೆ. ಇದನ್ನು ಕೇಳಿ ಪಡ್ಡೆ ಹುಡುಗರು ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

West Bengal Assembly Election 2026: ಯಾವುದೇ ಅಕ್ರಮ ನಡೆದಿಲ್ಲ, ಸ್ಟ್ರಾಂಗ್ ರೂಮ್‌ಗಳು ಸುರಕ್ಷಿತವಾಗಿವೆ ಎಂದ ಚುನಾವಣಾ ಆಯೋಗ – Kannada News | Election Commission Dismisses TMC’s EVM Allegations in West Bengal, Assures Strong Room Security

ಕೋಲ್ಕತ್ತಾ, ಮೇ 1: ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳ(West Bengal) ದಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಚುನಾವಣಾ ಆಯೋಗದ ನಡುವೆ ಶೀತಲ ಸಮರ ಏರ್ಪಟ್ಟಿದೆ. ಮತಪೆಟ್ಟಿಗೆಗಳನ್ನು ತಿರುಚಲಾಗುತ್ತಿದೆ ಎಂದು ಆರೋಪಿಸಿ ಟಿಎಂಸಿ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಆಯೋಗವು ಈ ಆರೋಪಗಳನ್ನು ನಿರಾಕರಿಸಿದೆ.

ಪಕ್ಷದ ಪ್ರತಿನಿಧಿಗಳಿಲ್ಲದೆ ಮತಪೆಟ್ಟಿಗೆಗಳನ್ನು ತೆರೆಯಲಾಗುತ್ತಿದೆ ಎಂದು ಟಿಎಂಸಿ ಆರೋಪಿಸಿದೆ. ಇವಿಎಂ ಯಂತ್ರಗಳನ್ನು ಬದಲಾಯಿಸಲು ಸಂಚು ರೂಪಿಸಲಾಗುತ್ತಿದೆ, 24 ಗಂಟೆಗಳ ಕಾಲ ಜಾಗರೂಕರಾಗಿರಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದ ಹೊರಗೆ ಹಿರಿಯ ನಾಯಕರಾದ ಶಶಿ ಪಂಜಾ ಮತ್ತು ಕುನಾಲ್ ಘೋಷ್ ಧರಣಿ ಪ್ರತಿಭಟನೆ ಆರಂಭಿಸಿದ್ದಾರೆ.

ಟಿಎಂಸಿ ಬಿಡುಗಡೆ ಮಾಡಿದ ವಿಡಿಯೋದಲ್ಲಿರುವುದು ಇವಿಎಂ ಸಂಸ್ಕರಣೆಯಲ್ಲ, ಬದಲಾಗಿ ಅಂಚೆ ಮತಪತ್ರಗಳ (Postal Ballots) ಸಂಸ್ಕರಣೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಮತ್ತಷ್ಟು ಓದಿ: ಎಕ್ಸಿಟ್ ಪೋಲ್‌ ಬಿಜೆಪಿ ಕಚೇರಿಯಿಂದ ಬಂದಿವೆ, ಬಂಗಾಳದಲ್ಲಿ ಮತ್ತೆ ನಾವೇ ಸರ್ಕಾರ ರಚಿಸುತ್ತೇವೆ; ಮಮತಾ ಬ್ಯಾನರ್ಜಿ ವಿಶ್ವಾಸ

ಸ್ಟ್ರಾಂಗ್ ರೂಮ್‌ಗಳು ಸುರಕ್ಷಿತ: 7 ಇವಿಎಂ ಸ್ಟ್ರಾಂಗ್ ರೂಮ್‌ಗಳನ್ನು ಅಭ್ಯರ್ಥಿಗಳು ಮತ್ತು ಏಜೆಂಟ್‌ಗಳ ಸಮ್ಮುಖದಲ್ಲೇ ಸಂಪೂರ್ಣವಾಗಿ ಸೀಲ್ ಮಾಡಲಾಗಿದೆ. ಅಂಚೆ ಮತಪತ್ರಗಳ ಪ್ರತ್ಯೇಕತೆಯ ಪ್ರಕ್ರಿಯೆಯ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಇಮೇಲ್ ಮತ್ತು ಆರ್‌ಒ ಮೂಲಕ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು. ಸಂಜೆ 4 ಗಂಟೆಗೆ ನಿಯಮಗಳ ಪ್ರಕಾರ ಅಂಚೆ ಮತಪತ್ರಗಳ ವಿಂಗಡಣೆ ಆರಂಭವಾಗಿತ್ತು ಎಂದು ಆಯೋಗ ಹೇಳಿದೆ.

ಟಿಎಂಸಿಯ ಈ ಆರೋಪಗಳನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ಟಿಎಂಸಿ ಪಶ್ಚಿಮ ಬಂಗಾಳದಿಂದ ನಿರ್ನಾಮವಾಗುವ ಭೀತಿಯಲ್ಲಿದೆ, ಸಾರ್ವಜನಿಕರ ಜನಾದೇಶವನ್ನು ಒಪ್ಪಿಕೊಳ್ಳಲಾಗದೆ ಈ ನಾಟಕವಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಲೇವಡಿ ಮಾಡಿದ್ದಾರೆ. ಇವಿಎಂಗಳು ಸಿಸಿಟಿವಿ ಕಣ್ಗಾವಲಿನಲ್ಲಿ ಸುರಕ್ಷಿತವಾಗಿದ್ದು, ಅಕ್ರಮಕ್ಕೆ ಅವಕಾಶವಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲ್ ಹೇಳಿದ್ದಾರೆ.

ಸದ್ಯಕ್ಕೆ ಸ್ಟ್ರಾಂಗ್ ರೂಮ್‌ಗಳ ಸುತ್ತ ಬಿಗಿ ಭದ್ರತೆ ಮುಂದುವರೆದಿದ್ದು, ಎಲ್ಲರ ಕಣ್ಣು ಮೇ 4ರ ಫಲಿತಾಂಶದ ಮೇಲೆ ನೆಟ್ಟಿದೆ. ಆಯೋಗವು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಪಾರದರ್ಶಕತೆಯನ್ನು ಸಾಬೀತುಪಡಿಸಿದ್ದು, ಯಾವುದೇ ಅಕ್ರಮ ನಡೆದಿಲ್ಲ ಎಂದು ಭರವಸೆ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 10:48 am, Fri, 1 May 26

Source link

ಶಾರುಖ್​-ದೀಪಿಕಾ ‘ಕಿಂಗ್’ ಚಿತ್ರಕ್ಕೆ ಲೀಕ್ ಕಾಟ; ಪ್ರಮುಖ ದೃಶ್ಯವೇ ಸೋರಿಕೆ – Kannada News | Shah Rukh Khan, Deepika Padukone ‘King’ Movie Set Photos Leaked! Pregnant Deepika Shines

ಚಿತ್ರರಂಗಕ್ಕೆ ಅದರಲ್ಲೂ ಬಿಗ್ ಬಜೆಟ್ ಸಿನಿಮಾಗಳಿಗೆ ಸೆಟ್​ ಫೋಟೋ ಅಋವ ವಿಡಿಯೋ ಲೀಕ್ ಅನ್ನೋದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಇದು ಚಿತ್ರತಂಡದ ಮೇಲಿನ ನಿರೀಕ್ಷೆಯನ್ನು ಹಾಳು ಮಾಡುತ್ತದೆ. ಈಗ ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕಿಂಗ್’ ಚಿತ್ರೀಕರಣದ ಫೋಟೋಗಳು ಲೀಕ್ ಆಗಿವೆ. ಈ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಸೆಟ್‌ನಿಂದ ಹೊರಬಂದಿರುವ ಫೋಟೋ ಹಾಗೂ ವೀಡಿಯೋಗಳಲ್ಲಿ ಈ ಜೋಡಿಯ ಕೆಮಿಸ್ಟ್ರಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇತ್ತೀಚೆಗಷ್ಟೇ ಪತಿ ರಣವೀರ್ ಸಿಂಗ್ ಅವರೊಂದಿಗೆ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವುದನ್ನು ಖಚಿತಪಡಿಸಿದ್ದ ದೀಪಿಕಾ, ಗರ್ಭಿಣಿಯಾಗಿದ್ದರೂ ತಮ್ಮ ವೃತ್ತಿಜೀವನದ ಬದ್ಧತೆಯಲ್ಲಿ ಹಿಂದೆ ಬಿದ್ದಿಲ್ಲ. ಲೀಕ್ ಆದ ಫೋಟೋಗಳಲ್ಲಿ ದೀಪಿಕಾ ಬೋಲ್ಡ್ ಉಡುಪಿನಲ್ಲಿ ಸುಂದರವಾಗಿ ಕಾಣಿಸುತ್ತಿದ್ದಾರೆ. ಶಾರುಖ್ ಅವರೊಂದಿಗೆ ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆ್ಯಕ್ಷನ್ ದೃಶ್ಯಗಳ ಶೂಟ​​್​ಗೆ ಬಾಡಿ ಡಬಲ್ ಬಳಸಲಾಗುತ್ತಿದೆ.

Deepika Padukone and SRK from the sets of KING in Cape Town, South Africa
by
u/GiveMeSomeSunshine3 in
BollyBlindsNGossip

ಸಿದ್ದಾರ್ಥ್ ಆನಂದ್ ನಿರ್ದೇಶನದ ಈ ಚಿತ್ರವು ಶಾರುಖ್ ಖಾನ್ ಮತ್ತು ಅವರ ಮಗಳು ಸುಹಾನಾ ಖಾನ್ ಒಟ್ಟಾಗಿ ನಟಿಸುತ್ತಿರುವ ಮೊದಲ ಸಿನಿಮಾ. ಈ ಕಾರಣದಿಂದಲೂ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಚಿತ್ರದಲ್ಲಿ ಶಾರುಖ್ ಭೂಗತ ಲೋಕದ ಡಾನ್ ಆಗಿ ಕಾಣಿಸಿಕೊಂಡರೆ, ಸುಹಾನಾ ಅವರ ಶಿಷ್ಯೆಯ ಪಾತ್ರ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರದಲ್ಲಿ ಅಭಿಷೇಕ್ ಬಚ್ಚನ್, ಅನಿಲ್ ಕಪೂರ್ ಮತ್ತು ರಾಣಿ ಮುಖರ್ಜಿ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.

ಇದನ್ನೂ ಓದಿ: ‘ಧುರಂಧರ್ 2’ ಬಳಿಕ ರಣವೀರ್ ಸಿಂಗ್ ಮುಂದಿನ ಸಿನಿಮಾ ಇದೇ ನೋಡಿ

ದಕ್ಷಿಣ ಆಫ್ರಿಕಾದ ಚಿತ್ರೀಕರಣ ಮುಗಿಸಿ ಭಾರತಕ್ಕೆ ಮರಳಿದ ನಂತರ ದೀಪಿಕಾ ಪಡುಕೋಣೆ ಅವರು ಅಟ್ಲೀ ನಿರ್ದೇಶನದ ‘ರಾಕಾ’ ಚಿತ್ರದ ಕೆಲಸದಲ್ಲಿ ನಟಿಸಲಿದ್ದಾರೆ. ಸದ್ಯಕ್ಕೆ ‘ಕಿಂಗ್’ ಸೆಟ್‌ನ ಲೀಕ್ ಫೋಟೋಗಳೇ ಬಾಲಿವುಡ್ ಅಂಗಳದ ಹಾಟ್ ಟಾಪಿಕ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link