Category Archives: Blog

Your blog category

T20 World Cup: ಭಾರತವನ್ನು ದುಃಸ್ವಪ್ನದಂತೆ ಕಾಡಿದ ಪಾಕ್ ವಿರುದ್ಧದ ಸೋಲು ಯಾವುದು ಗೊತ್ತಾ?

Source link

ಮಹಿಳೆಯರು, ರೈತರು, ಯುವಕರಿಗೆ ಗುಡ್ ನ್ಯೂಸ್; ಸೇವಾ ತೀರ್ಥ ಕಚೇರಿಯಲ್ಲಿ ಪ್ರಧಾನಿ ಮೋದಿ ಮೊದಲ ನಿರ್ಧಾರ – Kannada News | PM Narendra Modi’s First Decisions From Seva Teerth Office Farmers, Women, youth welfare on focus

ನವದೆಹಲಿ, ಫೆಬ್ರವರಿ 13: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಹೊಸ ಕಚೇರಿಯಾದ ಸೇವಾ ತೀರ್ಥದಲ್ಲಿ (Seva Teerth) ತಮ್ಮ ಮೊದಲ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ಸಹಿ ಹಾಕಿದ 4 ನಿರ್ಧಾರಗಳು ರೈತರು, ಮಹಿಳೆಯರು, ಯುವಕರ ಮೇಲೆ ಕೇಂದ್ರೀಕೃತವಾಗಿದೆ. ಇಂದು ಮೋದಿ ರಾಹತ್ ಯೋಜನೆಯನ್ನು ಪ್ರಾರಂಭಿಸಲು ಅನುಮೋದನೆ ನೀಡಿದರು, ಲಖಪತಿ ದೀದಿಯ ಯೋಜನೆಯ ಮಿತಿಯನ್ನು ದ್ವಿಗುಣಗೊಳಿಸಿದರು ಮತ್ತು ಕೃಷಿ ಮೂಲಸೌಕರ್ಯ ನಿಧಿಯ ವೆಚ್ಚವನ್ನು ಹೆಚ್ಚಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಲುಟಿಯೆನ್‌ನ ದೆಹಲಿಯ ದಕ್ಷಿಣ ಬ್ಲಾಕ್‌ನಲ್ಲಿರುವ ತಮ್ಮ ಬ್ರಿಟಿಷ್ ಯುಗದ ಕಚೇರಿಯಿಂದ “ಸೇವಾ ತೀರ್ಥ” ಎಂಬ ಹೊಸ ಕಚೇರಿಗೆ ಸ್ಥಳಾಂತರಗೊಂಡಿದ್ದಾರೆ. ಇದೇ ವೇಳೆ ಅವರು ಮಹಿಳೆಯರು, ಯುವಕರು ಮತ್ತು ದುರ್ಬಲ ನಾಗರಿಕರಿಗೆ ಸಂಬಂಧಿಸಿದ ಪ್ರಮುಖ ಫೈಲ್‌ಗಳಿಗೆ ಸಹಿ ಹಾಕಿದರು.

ಇದನ್ನೂ ಓದಿ: ಭಯದಿಂದ ಪ್ರಧಾನಿ ಮೋದಿ ಸದನಕ್ಕೆ ಗೈರು; ಕಾಂಗ್ರೆಸ್ ಮಹಿಳಾ ಸಂಸದರಿಂದ ಲೋಕಸಭಾ ಸ್ಪೀಕರ್‌ಗೆ ಪತ್ರ

ಪಿಎಂ ರಾಹತ್ ಯೋಜನೆ:

ಪ್ರಧಾನ ಮಂತ್ರಿ ಮೋದಿ ಪಿಎಂ ರಾಹತ್ ಯೋಜನೆಯನ್ನು ಪ್ರಾರಂಭಿಸಲು ಅನುಮೋದನೆ ನೀಡಿದರು. ಈ ಉಪಕ್ರಮದ ಅಡಿಯಲ್ಲಿ ಅಪಘಾತಕ್ಕೊಳಗಾದವರಿಗೆ 1.5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆ ದೊರೆಯಲಿದ್ದು, ತಕ್ಷಣದ ವೈದ್ಯಕೀಯ ಸಹಾಯದ ಕೊರತೆಯಿಂದಾಗಿ ಯಾವುದೇ ಪ್ರಾಣಹಾನಿ ಆಗದಂತೆ ತಡೆಯುತ್ತದೆ.

ಲಕ್ಷಪತಿ ದೀದಿ ಗುರಿ ಹೆಚ್ಚಳ:

ಕೇಂದ್ರ ಸರ್ಕಾರವು 3 ಕೋಟಿ ಲಕ್ಷಪತಿ ದೀದಿಗಳ ಮೈಲಿಗಲ್ಲನ್ನು ದಾಟಿದೆ. ಪ್ರಧಾನಿ ಮೋದಿ ಈಗ ಮಾರ್ಚ್ 2029ರ ವೇಳೆಗೆ 6 ಕೋಟಿ ಲಕ್ಷಪತಿ ದೀದಿಗಳ ಹೊಸ ಗುರಿಯನ್ನು ಹೊಂದಿದ್ದು, ಇದು ಪ್ರಮಾಣ ಮತ್ತು ಆಕಾಂಕ್ಷೆ ಎರಡನ್ನೂ ದ್ವಿಗುಣಗೊಳಿಸುತ್ತದೆ.

ರೈತರಿಗೆ ಪ್ರೋತ್ಸಾಹ:

ಭಾರತದ ಸಂಪೂರ್ಣ ಕೃಷಿ ಸರಪಳಿಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರ ಕೃಷಿ ಮೂಲಸೌಕರ್ಯ ನಿಧಿಯನ್ನು 2 ಲಕ್ಷ ಕೋಟಿಗೆ ದ್ವಿಗುಣಗೊಳಿಸಿದೆ. ಭಾರತದ ಸಂಪೂರ್ಣ ಕೃಷಿ ಮೌಲ್ಯ ಸರಪಳಿಯನ್ನು ಬಲಪಡಿಸುವ ಗುರಿಯೊಂದಿಗೆ ಪ್ರಧಾನಿ ಮೋದಿ ಕೃಷಿ ಮೂಲಸೌಕರ್ಯ ನಿಧಿಯ ವೆಚ್ಚವನ್ನು ₹1 ಲಕ್ಷ ಕೋಟಿ ರೂ.ನಿಂದ 2 ಲಕ್ಷ ಕೋಟಿಗೆ ದ್ವಿಗುಣಗೊಳಿಸಲು ಅನುಮೋದಿಸಿದ್ದಾರೆ.

ಇದನ್ನೂ ಓದಿ: Budget 2026: ಲಖ್ಪತಿ ದೀದಿ ಯೋಜನೆ ವಿಸ್ತರಣೆ, ಮಹಿಳಾ ಉದ್ಯಮಶೀಲತೆ ಉತ್ತೇಜಿಸಲು ಶಿ-ಮಾರ್ಟ್ ಸ್ಥಾಪನೆ

ಸ್ಟಾರ್ಟ್ಅಪ್ ಇಂಡಿಯಾ ಅನುದಾನ ಹೆಚ್ಚಳ:

ಯುವಕರು ಉದ್ಯಮವನ್ನು ಆರಂಭಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ಟಾರ್ಟ್ಅಪ್ ಇಂಡಿಯಾ ಯೋಜನೆ ಆರಂಭಿಸಲಾಗಿದೆ. ಭಾರತದ ತಂತ್ರಜ್ಞಾನ, ಉತ್ಪಾದನೆ ಮತ್ತು ತಂತ್ರಜ್ಞಾನಗಳಲ್ಲಿ ಪ್ರಧಾನ ಮಂತ್ರಿಗಳು 10,000 ಕೋಟಿ ರೂ.ಗಳ ನಿಧಿಯೊಂದಿಗೆ ಸ್ಟಾರ್ಟ್ಅಪ್ ಇಂಡಿಯಾ ನಿಧಿ 2.0 ಅನ್ನು ಅನುಮೋದಿಸಿದ್ದಾರೆ.

ಪ್ರಧಾನ ಮಂತ್ರಿ ಕಚೇರಿಯ ಹೊಸ ಕಟ್ಟಡವಾದ ಸೇವಾ ತೀರ್ಥ ಮತ್ತು ಇತರ 2 ಭವ್ಯ ಸರ್ಕಾರಿ ಕಟ್ಟಡಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಸೇವಾ ತೀರ್ಥವು ಪಿಎಂಒ, ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಕ್ಯಾಬಿನೆಟ್ ಸಚಿವಾಲಯವನ್ನು ಹೊಂದಿದೆ. ಇವೆಲ್ಲವೂ ಹಿಂದೆ ಸೆಂಟ್ರಲ್ ವಿಸ್ಟಾ ಪ್ರದೇಶದ ವಿವಿಧ ಸ್ಥಳಗಳಲ್ಲಿ ಇದ್ದವು. ಇದರಿಂದ ಸಮನ್ವಯದ ಸಮಸ್ಯೆ ಎದುರಾಗಿತ್ತು. ಹೊಸ ಕರ್ತವ್ಯ ಭವನ 1 ಮತ್ತು ಕರ್ತವ್ಯ ಭವನ 2 ಕಾನೂನು, ರಕ್ಷಣೆ, ಹಣಕಾಸು, ಆರೋಗ್ಯ, ಕೃಷಿ ಮತ್ತು ಇತರ ಹಲವಾರು ಪ್ರಮುಖ ಸಚಿವಾಲಯಗಳನ್ನು ಒಳಗೊಂಡಿರುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ: ಸರ್ಕಾರಿ ಬಸ್ – ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ – Kannada News | Hanur: Over 20 Injured in Major Bus Collision Near Mahadeshwara Betta Festival Turn

ಚಾಮರಾಜನಗರ, ಫೆ.13: ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಒಂದು ಭೀಕರ ಅಪಘಾತ ನಡೆದಿದೆ. ಕೆಎಸ್​ಆರ್​ಟಿಸಿ ಬಸ ಮತ್ತು ಖಾಸಗಿ ಬಸ್​ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಬರ್ತಿದ್ದ ಸರ್ಕಾರಿ ಬಸ್ ಮುಂದೆಯಿಂದ ಬಂದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮಹದೇಶ್ವರ ಬೆಟ್ಟದ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs PAK Live Streaming: ಭಾರತ- ಪಾಕ್ ನಡುವಿನ ಹೈವೋಲ್ಟೇಜ್ ಕದನ ಯಾವಾಗ? ಉಚಿತವಾಗಿ ವೀಕ್ಷಿಸುವುದು ಹೇಗೆ? – Kannada News | India vs Pakistan Live Streaming When and Where to Watch India vs Pakistan T20 World Cup Today Cricket Match Score in Kannada

2026 ರ ಟಿ20 ವಿಶ್ವಕಪ್​ನ (T20 World Cup) ಬಹುನಿರೀಕ್ಷತ ಪಂದ್ಯಕ್ಕಾಗಿ ಇಡೀ ಕ್ರಿಕೆಟ್ ಜಗತ್ತೇ ಕಾದು ಕುಳಿತಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ಈ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಉಭಯ ತಂಡಗಳು ಈ ಟೂರ್ನಿಯಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿವೆ. ಭಾರತ ಮೊದಲ ಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎರಡನೇ ಸ್ಥಾನದಲ್ಲಿದೆ. ಇದೀಗ ತಮ್ಮ ಮೂರನೇ ಪಂದ್ಯದಲ್ಲಿ ಎರಡೂ ತಂಡಗಳು ಎದುರುಬದುರಾಗುತ್ತಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಸೂಪರ್ 8 ಸುತ್ತಿನ ಟಿಕೆಟ್ ಅಧಿಕೃತವಾಗಿ ಸಿಗಲಿದೆ. ಹೀಗಾಗಿ ಉಭಯ ತಂಡಗಳು ತಮ್ಮ ಅಜೇಯ ಓಟವನ್ನು ಮುಂದುವರೆಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆಯುವ ಇರಾದೆಯಲ್ಲಿವೆ.

ಉಭಯ ತಂಡಗಳ ಪ್ರದರ್ಶನ

ಈ ಟೂರ್ನಿಯಲ್ಲಿ ಉಭಯ ತಂಡಗಳು ಇದುವರೆಗೆ ತಲಾ ಎರಡು ಪಂದಗಳನ್ನು ಆಡಿವೆ. ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು 29 ರನ್​ಗಳಿಂದ ಮಣಿಸಿದರೆ, ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು ಬರೋಬ್ಬರಿ 93 ರನ್​ಗಳಿಂದ ಮಣಿಸಿದೆ. ಹೀಗಾಗಿ ಪಾಯಿಂಟ್ ಪಟ್ಟಿಯಲ್ಲಿ 4 ಅಂಕ ಹಾಗೂ +3.050 ನೆಟ ರನ್​ ರೇಟ್​ನೊಂದಿಗೆ ಅಗ್ರಸ್ಥಾನದಲ್ಲಿದೆ.

ಇತ್ತ ಪಾಕಿಸ್ತಾನ ಕೂಡ ತನ್ನ ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಕೊನೆಯ ಓವರ್​ನಲ್ಲಿ ಸೋಲಿಸಿ ರೋಚಕ ಗೆಲುವು ದಾಖಲಿಸಿತು. ಆ ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಯುಎಸ್​ಎ ತಂಡವನ್ನು 32 ರನ್​ಗಳಿಂದ ಸೋಲಿಸಿತು. ಈ ಎರಡು ಗೆಲುವುಗಳಿಂದ 4 ಅಂಕ ಕಲೆಹಾಕಿರುವ ಪಾಕ್ ತಂಡ +0.932 ನೆಟ್​ ರನ್​ ರೇಟ್ ಹೊಂದಿದ್ದು ಎರಡನೇ ಸ್ಥಾನದಲ್ಲಿದೆ.

ಲೈವ್ ಸ್ಟ್ರೀಮಿಂಗ್ ವಿವರ

ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಫೆಬ್ರವರಿ 15 ರಂದು ನಡೆಯಲಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಟಿ20 ವಿಶ್ವಕಪ್‌ನ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಲಭ್ಯವಿರುತ್ತವೆ. ನೀವು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್/ಲ್ಯಾಪ್‌ಟಾಪ್ ಮತ್ತು ಟಿವಿಯಲ್ಲಿ ಲೈವ್ ಪಂದ್ಯಗಳನ್ನು ವೀಕ್ಷಿಸಬಹುದು.

T20 World Cup: ಪಾಕ್ ವಿರುದ್ಧವೂ ಅಭಿಷೇಕ್ ಆಡಲ್ಲ: ಶಾಕಿಂಗ್ ಹೇಳಿಕೆ ನೀಡಿದ ಸೂರ್ಯ

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಪಾಕಿಸ್ತಾನ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಮ್, ಫಹೀಮ್ ಅಶ್ರಫ್, ಫಖರ್ ಜಮಾನ್, ಖವಾಜಾ ನಫಯ್, ಮೊಹಮ್ಮದ್ ನವಾಜ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ನಸೀಮ್ ಶಾ, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಶಾಹೀನ್ ಶಾ ಅಫ್ರಿದಿ, ಶಾದಾಬ್ ಖಾನ್, ಉಸ್ಮಾನ್ ಖಾನ್, ಉಸ್ಮಾನ್ ತಾರಿಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯ ರಾಜಕಾರಣಕ್ಕೆ ಮಾಜಿ ಕೇಂದ್ರ ಸಚಿವ ಅನಂತ್​​ ಕುಮಾರ್​​ ಹೆಗಡೆ? ಯತ್ನಾಳ್​​ ಸ್ಫೋಟಕ ಹೇಳಿಕೆ – Kannada News | Basangouda Patil Yatnal’s Explosive Statement Amid Rumours of Ananth Kumar Hegde’s Return to State Politics

ಅನಂತ್​​ ಕುಮಾರ್​​ ಹೆಗಡೆ ಮತ್ತು ಯತ್ನಾಳ್​​Image Credit source: Tv9 Kannada

ಉಡುಪಿ, ಫೆಬ್ರವರಿ 13: ಕಳೆದ ಲೋಕಸಭಾ ಚುನಾವಣೆ ಸಮಯದಿಂದಲೇ ರಾಜಕಾರಣದಿಂದ ದೂರ ಉಳಿದಿರುವ ಕೇಂದ್ರದ ಮಾಜಿ ಸಚಿವ ಅನಂತ್​​ ಕುಮಾರ್​​ ಹೆಗಡೆ ರಾಜ್ಯ ರಾಜಕಾರಣಕ್ಕೆ ಬರುತ್ತಾರೆಂಬ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡ್ತಿದೆ. ಹಿಂದೂ ಕಾರ್ಯಕರ್ತರ ಪಾಲಿಗೆ ಫೈರ್​​ ಬ್ರ್ಯಾಂಡ್​​ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ಅನಂತ್​​ ಕುಮಾರ್​​ ಮತ್ತೆ ರಾಜಕಾರಣಕ್ಕೆ ಬರಲಿ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ. ಈ ಹೊತ್ತಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಯತ್ನಾಳ್​​ ಹೇಳಿದ್ದೇನು?

ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಸಂಬಂಧ ಅನಂತ್ ಕುಮಾರ್ ಹೆಗಡೆ ವೈಯಕ್ತಿಕವಾಗಿ ಎಲ್ಲೂ ಪ್ರತಿಕ್ರಿಯೆ ಕೊಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ದೆಹಲಿಗೆ ಬುಲಾವ್ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಆ ಬಗ್ಗೆ ಯಾವುದೇ ದೃಢ ಮಾಹಿತಿ ಇನ್ನೂ ಸಿಕ್ಕಿಲ್ಲ. ಹೀಗಾಗಿ ರಾಜ್ಯ ರಾಜಕಾರಣಕ್ಕೆ ಬರಲು ಅವರಿಗೆ ಮನಸ್ಸಿದೆಯೋ? ಇಲ್ಲವೋ? ಎಂಬುದನ್ನು ಅವರೇ ಬಹಿರಂಗಪಡಿಸಬೇಕು. ಬಿಜೆಪಿಯಲ್ಲಿ ಒಳ್ಳೆಯ ನಾಯಕತ್ವವನ್ನು ಮುಗಿಸುತ್ತಾರೆ. ತಂದೆ ಮಕ್ಕಳ ಸಹವಾಸದಿಂದ ಹೀಗೆ ಆಗಿದ್ದು, ಇಂತವರಿಗೆ ನಾಯಕತ್ವ ನೀಡಬೇಕು ಎಂದು ಕೇಂದ್ರ ಸರ್ಕಾರ ನಿರ್ಧರಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ರಾಹುಲ್​ ಗಾಂಧಿ ಕೈನಲ್ಲಿ ಡಿ.ಕೆ.ಶಿವಕುಮಾರ್​ ಭವಿಷ್ಯ? ಸಿಎಂ ಗಾದಿಗೆ ಇನ್ನೊಂದೇ ಮೆಟ್ಟಿಲು?

ವಿಧಾನಸಭೆಯಲ್ಲಿ ಕೂಡ ಕೆಲ ಬಿಜೆಪಿಗರು ಮಾತನಾಡದೆ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ವಿಜಯೇಂದ್ರ ನಿನ್ನ ಫೈಲ್​​ ತೆಗೆಯಲಾ ಎಂದು ಡಿ.ಕೆ ಶಿವಕುಮಾರ್ ನೇರವಾಗಿ ಬೆದರಿಸುತ್ತಾರೆ. ಬಿಜೆಪಿ ತನ್ನ ನೈತಿಕ ಶಕ್ತಿಯನ್ನೇ ವಿಧಾನಸಭೆಯಲ್ಲಿ ಕಳೆದುಕೊಂಡಿದೆ. ಹೀಗಿದ್ದರೂ ಕೇಂದ್ರದ ನಾಯಕರಿಗೆ ಯಾಕೆ ವಿಶೇಷ ಮಮಕಾರ ಇದೆಯೋ ಗೊತ್ತಿಲ್ಲ. ಕುಟುಂಬ ರಾಜಕೀಯಕ್ಕೆ ಅವಕಾಶ ನೀಡಲ್ಲ ಎಂದು ಪ್ರಧಾನಿ ಪದೇಪದೇ ಹೇಳುತ್ತಾರೆ. ಆದರೆ ಕರ್ನಾಟಕದಲ್ಲಿ ಆ ವಿಚಾರ ಮರೆತು ಹೋಗಿರುವುದು ದುರ್ದೈವ ಎಂದು ಯತ್ನಾಳ್​​ ಕಿಡಿ ಕಾರಿದ್ದಾರೆ.

ರಾಜಕೀಯದಿಂದ ಅಂತರ ಕಾಯ್ದುಕೊಂಡಿರುವ ಹೆಗಡೆ

ಒಮ್ಮೆ ಕೇಂದ್ರ ಸಚಿವ ಮತ್ತು ಬರೋಬ್ಬರಿ 6 ಬಾರಿ ಸಂಸದರಾಗಿದ್ದ ಅನಂತ ಕುಮಾರ ಹೆಗಡೆ ಅವರು 2024ರ ಲೋಕಸಭೆ ಚುನಾವಣೆ ಸಂದರ್ಭದಿಂದಲೇ ರಾಜಕೀಯದಿಂದ ಬಹಳ ಅಂತರ ಕಾಯ್ದುಕೊಂಡಿದ್ದಾರೆ. ತಮ್ಮ ಉದ್ಯಮದಲ್ಲಿ ಬ್ಯುಸಿ ಆಗಿರುವ ಅವರು, ಎಲ್ಲಿಯೂ ರಾಜಕೀಯ ಸಂಬಂಧಿತ ಹೇಳಿಕೆಗಳನ್ನೂ ನೀಡುತ್ತಿಲ್ಲ. ಇದರಿಂದಾಗಿ ಅವರ ಅಭಿಮಾನಿಗಳು ತೀವ್ರ ನಿರಾಸೆಗೆ ಒಳಗಾಗಿದ್ದಾರೆ. ಈ ನಡುವೆ ರಾಜಕೀಯಕ್ಕೆ ಬರುವಂತೆ ಅವರಿಗೆ ಹೈಕಮಾಂಡ್‌ ಕರೆ ಬಂದಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಸುದ್ದಿಯಾಗಿರೋದೀಗ ಹತ್ತು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಪ್ರಧಾನಿ ಮೋದಿ – Kannada News | PM Narendra Modi inaugurates Seva Teerth New Prime Minister office address in Delhi

ನವದೆಹಲಿ, ಫೆಬ್ರವರಿ 13: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ದೆಹಲಿಯ ನೂತನ ಪ್ರಧಾನಮಂತ್ರಿ ಕಚೇರಿಯ ಕಾಂಪ್ಲೆಕ್ಸ್​​ನ ಹೆಸರನ್ನು ಉದ್ಘಾಟಿಸಿದರು. ಈ ಕಟ್ಟಡಕ್ಕೆ ಸೇವಾ ತೀರ್ಥ (Seva Teerth) ಎಂದು ಹೆಸರಿಡಲಾಗಿದೆ. ಈ ಹೆಸರಿನ ಕೆಳಗೆ ನಾಗರಿಕ ದೇವೋ ಭವ (ಪ್ರಜೆಗಳೇ ದೇವರು) ಎಂದು ಕೂಡ ಬರೆಯಲಾಗಿದೆ. ಈ ಮೂಲಕ ಪ್ರಧಾನಮಂತ್ರಿ ಕಚೇರಿಗೆ ಶಾಶ್ವತವಾಗಿ ಹೊಸ ವಿಳಾಸ ಸಿಕ್ಕಂತಾಗಿದೆ. ಈ ಹೊಸ ಕಟ್ಟಡ ಪ್ರಧಾನ ಮಂತ್ರಿ ಕಚೇರಿ, ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಕ್ಯಾಬಿನೆಟ್ ಸಚಿವಾಲಯವನ್ನು ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಐ ಕಲಿಯಿರಿ, ಇಲ್ಲವಾ ಕೆಲಸ ಬಿಟ್ಟುಹೋಗಿ; ಉದ್ಯೋಗಿಗಳಿಗೆ ಗೂಗಲ್​ನಿಂದ ವಾಲಂಟರಿ ಎಕ್ಸಿಟ್ ಪ್ಯಾಕೇಜ್​ಗಳ ಆಫರ್ – Kannada News | Learn AI, or leave the company, Google offers voluntary exit packages for its employees

ನವದೆಹಲಿ, ಫೆಬ್ರುವರಿ 13: ಜಗತ್ತು ಈಗ ಹೆಚ್ಚೆಚ್ಚು ಎಐಮಯವಾಗುತ್ತಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಎಐ ಅಳವಡಿಕೆ ಕ್ಷಿಪ್ರವಾಗಿ ನಡೆಯುತ್ತಿದೆ. ಬಹಳ ತಜ್ಞರ ಪ್ರಕಾರ ಎಐನಿಂದ ಎಲ್ಲಾ ಸೆಕ್ಟರ್ ಉದ್ಯೋಗಗಳು ಬಾಧಿತವಾಗಬಹುದು. ಅದರಲ್ಲೂ ಟೆಕ್ ಸೆಕ್ಟರ್ ಅಂತೂ ಎಐ ಜೊತೆ ನಿಕಟ ಸಂಬಂಧ ಹೊಂದಿದೆ. ಎಐ ಅಭಿವೃದ್ಧಿಯಲ್ಲಿ ತೊಡಗಿರುವ ಗೂಗಲ್​ನಂತಹ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ ಈಗ ಎಐ ಭೀತಿ ಶುರುವಾಗಿದೆ. ಗೂಗಲ್​ನಲ್ಲಿ ಭಾರೀ ಮಟ್ಟದಲ್ಲಿ ಲೇ ಆಫ್​ಗಳು ನಡೆಯುವ ತಯಾರಿಯಾಗಿದೆ. ಆದರೆ, ಉದ್ಯೋಗಿಗಳನ್ನು ಕೆಲಸದಿಂದ ಕಿತ್ತುಹಾಕುವ ಮೊದಲು ಅವರಿಗೆ ಎಐ ಕಲಿಯಿರಿ ಇಲ್ಲ ತೊರೆಯಿರಿ ಎನ್ನುವ ಒಂದು ಆಯ್ಕೆ ಕೊಡುತ್ತಿದೆ ಎಂದು ವರದಿಗಳು ಹೇಳುತ್ತಿವೆ.

ಗೂಗಲ್ ಈಗ ಎಲ್ಲಾ ಉದ್ಯೋಗಿಗಳಿಗೂ ವಾಲಂಟರಿ ಎಕ್ಸಿಡ್ ಸ್ಕೀಮ್ ಅನ್ನು ಆಫರ್ ಮಾಡಿದೆ. ಅಂದರೆ, ಸ್ವಯಂ ತೊರೆಯುವಿಕೆಗೆ ಅವಕಾಶ ಕೊಟ್ಟಿದೆ. ಪ್ರತಿಯೊಬ್ಬರು ಕೂಡ ಎಐ ಪರಿಣಿತಿ ಹೊಂದಿರಬೇಕು. ಎಲ್ಲವೂ ತಿಳಿದಿರಬೇಕು. ಇದಕ್ಕೆ ಸಿದ್ಧರಿಲ್ಲದವರು ಕಂಪನಿಯನ್ನು ತಾವಾಗಿಯೇ ಬಿಟ್ಟುಹೋಗಬಹುದು. ಅವರಿಗೆ ಒಂದಷ್ಟು ಪರಿಹಾರಗಳನ್ನು ಕೊಟ್ಟು ಕಳುಹಿಸಲಾಗುವುದು. ಇದು ಗೂಗಲ್ ತನ್ನ ಉದ್ಯೋಗಿಗಳಿಗೆ ಕೊಟ್ಟಿರುವ ವಾಲಂಟರಿ ಎಕ್ಸಿಟ್ ಪ್ಯಾಕೇಜ್​ನ ಆಫರ್.

ಇದನ್ನೂ ಓದಿ: ಮೂರೂವರೆ ಲಕ್ಷ ಕೋಟಿ ರೂ ಮೌಲ್ಯದ ಕ್ಷಿಪಣಿ, ಯುದ್ಧ ವಿಮಾನಗಳ ಖರೀದಿಗೆ ಅನುಮೋದನೆ

ಎಐ ಬಹಳ ವೇಗವಾಗಿ ಅಭಿವೃದ್ದಿಗೊಳ್ಳುತ್ತಿದೆ. ಆರ್ಟಿಫಿಶಿಯಲ್ ಜೆನರೇಟಿವ್ ಇಂಟೆಲಿಜೆನ್ಸ್ ಆಗಮನವಾಗುತ್ತಿದೆ. ಜಗತ್ತಿನ ಟೆಕ್ ಲೋಕ ಕ್ಷಿಪ್ರವಾಗಿ ಬದಲಾವಣೆಗಳನ್ನು ಕಾಣುತ್ತಿದೆ. ಈ ವೇಗಕ್ಕೆ ಉದ್ಯೋಗಿಗಳು ಹೊಂದಿಕೊಳ್ಳಲಾಗದಿದ್ದರೆ ತಾವಾಗಿಯೇ ತೊರೆದು ಹೋಗಬೇಕು ಎಂಬುದು ಗೂಗಲ್​ನ ಕಟ್ಟಳೆ.

ಈ ವಾಲಂಟರಿ ಎಕ್ಸಿಟ್ ಪ್ಯಾಕೇಜ್​ನಿಂದ ಗೂಗಲ್ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯಬಹುದು. ಮೊದಲೆಯದು, ಲೇ ಆಫ್ ಮಾಡದೆಯೇ ಉದ್ಯೋಗಿಗಳ ಸಂಖ್ಯೆಯನ್ನು ಇಳಿಸಬಹುದು. ಎರಡನೆಯದು, ಎಐ ಪರಿಣಿತಿ ಹಾಗೂ ಎಲ್ಲವನ್ನೂ ಮಾಡಬಲ್ಲ ಪ್ರಬಲ ಉದ್ಯೋಗ ಸಮೂಹವು ಗೂಗಲ್​ಗೆ ಸಿಕ್ಕಂತಾಗುತ್ತದೆ.

ಹಾಗೆಯೇ, ಉದ್ಯೋಗಿಗಳಿಗೂ ಕೂಡ ಗೌರವಯುತವಾಗಿ ಕಂಪನಿ ತೊರೆಯುವ ಅವಕಾಶ ಸಿಗುತ್ತದೆ. ವಾಲಂಟರಿ ಎಕ್ಸಿಟ್ ಪ್ಯಾಕೇಜ್ ಪಡೆದು, ತಾನಾಗಿಯೇ ನಿರ್ಗಮಿಸಿದ್ದು ಎಂದು ಸಮಾಧಾನಪಟ್ಟುಕೊಳ್ಳಬಹುದು. ನಿರ್ದಿಷ್ಟ ತಿಂಗಳುಗಳ ಸಂಬಳದ ಹಣವನ್ನು ಪರಿಹಾರವಾಗಿ ಪಡೆಯಬಹುದು.

ಇದನ್ನೂ ಓದಿ: ಭಾರತದಲ್ಲಿ ಹಣದುಬ್ಬರಕ್ಕೆ ಹೊಸ ಸ್ವರೂಪ; ಮೂಲ ವರ್ಷ ಬದಲಾವಣೆ; ಜನವರಿಯಲ್ಲಿ ಶೇ. 2.8 ಇನ್​ಫ್ಲೇಶನ್ ದಾಖಲು

ವರದಿ ಪ್ರಕಾರ, ವಿಇಪಿ ಪ್ಯಾಕೇಜ್​ನಲ್ಲಿ ಉದ್ಯೋಗಿಗಳಿಗೆ ಕನಿಷ್ಠ 14 ವಾರಗಳ ಸಂಬಳವನ್ನು ಪರಿಹಾರವಾಗಿ ಕೊಡಲಾಗುತ್ತಿದೆ. ಇದರ ಜೊತೆಗೆ, ಅವರು ಕೆಲಸ ಮಾಡಿದ ವರ್ಷಗಳ ಸಂಖ್ಯೆಯಷ್ಟು ವಾರಗಳ ವೇತನವನ್ನೂ ಹೆಚ್ಚುವರಿಯಾಗಿ ಕೊಡಲಾಗುತ್ತದೆ. ಉದಾಹರಣೆಗೆ, ಒಬ್ಬ ವ್ಯಕ್ತಿ ಗೂಗಲ್​ನಲ್ಲಿ 10 ವರ್ಷ ಕೆಲಸ ಮಾಡಿದರೆ 14 ವಾರ + 10 ವಾರ, ಒಟ್ಟು 24 ವಾರಗಳಷ್ಟು ಸಂಬಳ ಪಡೆಯಬಹುದು. 14 ವಾರ ಎಂದರೆ ಸುಮಾರು ನಾಲ್ಕು ತಿಂಗಳಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಸಿದ್ದ ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು – Kannada News | Chikkaballapur: Farmer’s Lakhs Lost as Banana Crop Vandalized by Enmity

ಚಿಕ್ಕಬಳ್ಳಾಪುರ,ಫೆ.13: ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಸುಂದರವಾದ ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. 300ಕ್ಕೂ ಹೆಚ್ಚು ಬಾಳೆ ಗಿಡಗಳು ಇಲ್ಲಿದ್ದವು, ಅದು ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ರಾತ್ರೋ ರಾತ್ರಿ ಬಾಳೆ ಗಿಡಗಳನ್ನು ಕಡಿದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಬಳಗೆರೆ ಗ್ರಾಮದ ಮಂಜುನಾಥ್ ಹಾಗೂ ನಂದಿನಿ ದಂಪತಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದೆ. ನಾಲ್ಕು ಎಕರೆ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬಾಳೆ ಗಿಡ ಹಾಕಿದ್ದರು. ಇನ್ನೇನು ಎರಡು ತಿಂಗಳು ಆಗಿದ್ರೆ, ಬಾಳೆ ಗೊನೆ ಬಿಟ್ಟು ಫಸಲು ಕೈಗೆ ಬರಬೇಕಿತ್ತು. ಅಷ್ಟರಲ್ಲೆ ದುಷ್ಕರ್ಮಿಗಳು ರಾತ್ರೋ ರಾತ್ರಿ ಎಲ್ಲವನ್ನು ನಾಶ ಮಾಡಿದ್ದಾರೆ. ಇನ್ನು ಈ ಕೃತ್ಯವನ್ನು ಹಳೆಯ ದ್ವೇಷಕ್ಕೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Source link

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ – Kannada News | Hampi Utsav 2026: Grand Preparations Underway for Three Day Cultural Extravaganza

ಬಳ್ಳಾರಿ, ಫೆಬ್ರವರಿ 13: ವಿಜಯನಗರ ಸಾಮ್ರಾಜ್ಯದ ಭವ್ಯ ಇತಿಹಾಸವನ್ನು ಸ್ಮರಿಸುವ ಹಂಪಿ ಉತ್ಸವ 2026ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಭವ್ಯ ವೇದಿಕೆ ಸಿದ್ದಗೊಂಡಿದೆ. ಎಂ.ಪಿ. ಪ್ರಕಾಶ್ ವೇದಿಕೆಯನ್ನು ನಿರ್ಮಿಸಿದ್ದು, ಶ್ರೀಕೃಷ್ಣ ದೇವರಾಯ ಆಳ್ವಿಕೆಯ ದರ್ಬಾರ್ ಕಲಾಕೃತಿ ನಿರ್ಮಿಸಲಾಗಿದ್ದು, ಜನರ ಕಣ್ಮನ ಸೆಳೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಇಂದು ಸಂಜೆ 6 ಗಂಟೆಗೆ ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದ್ದು, ಆಸನ ವ್ಯವಸ್ಥೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Optical Illusion: ಅಡುಗೆ ಮನೆಯಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಗುರುತಿಸುವಿರಾ – Kannada News | Optical Illusion: find the cat hiding in the kitchen in 20 seconds

ಆಪ್ಟಿಕಲ್‌ ಇಲ್ಯೂಷನ್ ಚಿತ್ರImage Credit source: Social Media

ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳು ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ. ಹೆಚ್ಚಿನವರು ಇಂತಹ ಒಗಟನ್ನು ಬಿಡಿಸಲು ಪ್ರಯತ್ನಿಸುತ್ತಾರೆ. ಆದರೆ ಎಲ್ಲರಿಗೂ ಅದು ಸಾಧ್ಯವಾಗಲ್ಲ. ಇದೀಗ ಮೆದುಳಿನ ತೀಕ್ಷ್ಣತೆಗೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಅಡುಗೆ ಮನೆಯಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಕಂಡುಹಿಡಿಯುವ ಸವಾಲು ಇಲ್ಲಿದೆ. ಇಲ್ಲಿರುವ ವಸ್ತುಗಳ ನಡುವೆ ಅಡಗಿ ಕುಳಿತಿರುವುದರಿಂದ ಕಳ್ಳ ಬೆಕ್ಕನ್ನು ಕಂಡು ಹಿಡಿಯುವುದು  ಅಷ್ಟು ಸುಲಭವಲ್ಲ. ಇದೀಗ ಕೇವಲ 20 ಸೆಕೆಂಡುಗಳೊಳಗೆ ಈ ಮನೆಯ ಮುದ್ದಿನ ಸಾಕು ಪ್ರಾಣಿಯನ್ನು ಹುಡುಕಿ ಜಾಣರು ಎನಿಸಿಕೊಳ್ಳಿ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ವಸ್ತುಗಳನ್ನು, ಪ್ರಾಣಿ ಪಕ್ಷಿಗಳನ್ನು ಕಂಡು ಹಿಡಿಯುವುದು ಹೇಳುವಷ್ಟು ಸುಲಭವಲ್ಲ. ಈ ಚಿತ್ರ ನೋಡಿದಾಗ ನಿಮಗೆ ಅಡುಗೆ ಮನೆಯ ಸ್ಪಷ್ಟ ಚಿತ್ರಣವು ಕಾಣಿಸುತ್ತದೆ. ಈ ಅಡುಗೆ ಮನೆಯಲ್ಲಿ ಪಾತ್ರೆ, ಡೈನಿಂಗ್ ಟೇಬಲ್ ಸೇರಿದಂತೆ ವಿವಿಧ ವಸ್ತುಗಳಿವೆ. ನೀವು ಇಲ್ಲಿ ಅಡಗಿ ಕುಳಿತಿರುವ ಬೆಕ್ಕನ್ನು ಪತ್ತೆ ಹಚ್ಚಬೇಕು.

ಇದನ್ನೂ ಓದಿ: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ

ಬೆಕ್ಕು ನಿಮ್ಮ ಕಣ್ಣಿಗೆ ಕಾಣಿಸಿತೇ?

ಅಡುಗೆ ಮನೆಯಲ್ಲಿ ಅಡಗಿ ಕುಳಿತಿರುವ ಮನೆಯ ಮುದ್ದಿನ ಬೆಕ್ಕನ್ನು ಹುಡುಕುವುದು ಕಷ್ಟಕರ. ಹೌದು, ನೀವು ಕಣ್ಣು ಅಗಲಿಸಿ ನೋಡಿದರೂ ಕಳ್ಳ ಬೆಕ್ಕು ನಿಮ್ಮ ಕಣ್ಣಿಗೆ ಕಾಣಿಸಿಲ್ಲವೇ. ಈ ಟ್ರಿಕ್ಕಿ ಒಗಟು ಬಿಡಿಸಲು ಸಾಧ್ಯವಾಗಿಲ್ಲ ಅಂದ್ರೆ ನಾವೇ ಈ ಸಾಕು ಪ್ರಾಣಿ ಎಲ್ಲಿದೆ ಎಂದು ಹೇಳುತ್ತೇವೆ. ಬೆಕ್ಕು ಎಲ್ಲಿದೆ ಎಂದು ಈ ಕೆಳಗಿನ ಚಿತ್ರದಲ್ಲಿ ಗುರುತಿಸಿದ್ದೇವೆ. ನೀವು ಈ ಸಾಕು ಪ್ರಾಣಿಯನ್ನು ನೋಡಿದ್ದೀರಿ ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link