Headlines

‘ಧುರಂಧರ್ 2’ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ‘ಟಾಕ್ಸಿಕ್’ – Kannada News | Toxic became India’s most anticipated movie beating Dhurandhar 2

ಯಶ್ (Yash) ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಸಿನಿಮಾದ ಇತರೆ ರಾಜ್ಯಗಳ ಬಿಡುಗಡೆ ಹಕ್ಕುಗಳು ದಾಖಲೆ ಮೊತ್ತಕ್ಕೆ ಮಾರಾಟವಾಗುತ್ತಿದೆ. ಕೇವಲ ಸಿನಿಮಾದ ಟೀಸರ್ ಇಂದಲೇ ಸಿನಿಮಾದ ಬಗ್ಗೆ ಬಹುದೊಡ್ಡ ಹೈಪ್ ಕ್ರಿಯೇಟ್ ಆಗಿದೆ. ಆದರೆ ‘ಟಾಕ್ಸಿಕ್’ ಬಿಡುಗಡೆ ಆಗುವ ದಿನವೇ ಹಿಂದಿಯ ‘ಧುರಂಧರ್ 2’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ಎರಡೂ ಸಿನಿಮಾಗಳ ಬಗ್ಗೆ ಭಾರಿ ಪೈಪೋಟಿ ಏರ್ಪಟ್ಟಿದೆ. ಆದರೆ ಇದೀಗ ‘ಟಾಕ್ಸಿಕ್’ ಸಿನಿಮಾ ‘ಧುರಂಧರ್ 2’ ಸಿನಿಮಾವನ್ನು…

Read More

7.11 ಕೋಟಿ ದರೋಡೆ ಹಣ ಕ್ಯಾಸಿನೊಗೆ ಸುರಿಯಲು ಪ್ಲ್ಯಾನ್​! ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​ – Kannada News | 7.11 Cr Cash Van Heist: Bengaluru Police Charge Sheet Exposes Goa Casino Spree Plot

ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ದರೋಡೆ ಕೇಸ್​Image Credit source: Google ಬೆಂಗಳೂರು, ಫೆಬ್ರವರಿ 13: ಆರ್‌ಬಿಐ ಅಧಿಕಾರಿಗಳಂತೆ ನಟಿಸಿ ದಕ್ಷಿಣ ಬೆಂಗಳೂರಿನಲ್ಲಿ ಸಿಎಂಎಸ್ ಇನ್ಫೋ ಸಿಸ್ಟಮ್ಸ್‌ನ ಹಣ ಸಾಗಾಣಿಕೆ ವ್ಯಾನ್‌ನ್ನು ಅಡ್ಡಗಟ್ಟಿ, ಸಿಬ್ಬಂದಿಯನ್ನು ಬೆದರಿಸಿ 7.11 ಕೋಟಿ ಹಣ ದರೋಡೆ ಪ್ರಕರಣ ಸಂಬಂಧ ಸಿದ್ಧಾಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. 2025ರ ನವೆಂಬರ್ 19ರಂದು ದೋಚಿದ್ದ ಹಣವನ್ನು ಆರೋಪಿಗಳು ಗೋವಾಕ್ಕೆ ತೆರಳಿ ಕ್ಯಾಸಿನೊಗಳಲ್ಲಿ ಖರ್ಚು ಮಾಡಲು ನಿರ್ಧರಿಸಿದ್ದರು ಎಂಬುದು ಈ ವೇಳೆ ಬೆಳಕಿಗೆ…

Read More

ಕಪ್ಪತ್ತಗುಡ್ಡದಲ್ಲಿ ಮತ್ತೊಂದು ಸಂಪತ್ತಿನ ಗುಹೆ ರಹಸ್ಯ ಬಯಲು: ಸಂಜೀವಿನಿ ಗುಡ್ಡದೊಳಗೊಂದು ವಿಸ್ಮಯ ಲೋಕ – Kannada News | Gadag’s Sanjeevini Hill: Unveiling Ancient Gold Treasures and Hidden Mysteries

ಗದಗ, ಫೆಬ್ರವರಿ 13: ಐತಿಹಾಸಿ ಲಕ್ಕುಂಡಿಯಲ್ಲಿ (Lakkundi) ಚಿನ್ನದ ನಿಧಿ ಸಿಕ್ಕ ಬಳಿಕ ಸಂಪತ್ತಿನ ಖಜಾನೆಗಳ ಒಂದೊಂದು ರಹಸ್ಯಗಳು ಬಯಲಾಗುತ್ತಿವೆ. ಲಕ್ಕುಂಡಿ ಸಂಪತ್ತನ್ನೂ ಮೀರಿಸುವ ಸಂಪತ್ತಿನ ಖಜಾನೆಗಳು ಗದಗ ಜಿಲ್ಲೆಯಲ್ಲಿವೆ. ಲಕ್ಕುಂಡಿ ಚಿನ್ನದ ಸಂಪತ್ತು ಆಯ್ತು, ಕಪ್ಪತ್ತಗುಡ್ಡದ ಚಿನ್ನದ ಗುಹೆಗಳ ಬಗ್ಗೆಯೂ ಟಿವಿ9 ಇಂಚಿಂಚು ವರದಿ ಮಾಡಿದೆ. ಆದರೆ ಇದೀಗ ರಹಸ್ಯ ಗವಿಯೊಳಗೆ ಸಂಪತ್ತು ಸುದ್ದಿ ಕೇಳಿದರೆ ನೀವು ಬೆಚ್ಚಿಬೀಳ್ತೀರಾ. ಈ ಸಂಜೀವಿನಿ ಗುಡ್ಡದ (Sanjeevini Hill) ಗವಿಯೊಳಗೆ ಅನಂತಪದ್ಮನಾಭ, ಕುಬೇರನ ಸಂಪತ್ತಿಗೂ ಅಪಾರವಿದೆಯಂತೆ. ಲಕ್ಕುಂಡಿ ಕಲ್ಯಾಣ…

Read More

‘ಇನ್ಮುಂದೆ ಪ್ಯಾಂಟಿ ಹಾಕಲ್ಲ’; ಜ್ಯೋತಿಷಿ ಹೇಳಿದಂತೆ ನಡೆದುಕೊಂಡ ರಾಖಿ ಸಾವಂತ್ – Kannada News | Rakhi Sawant Will Not Wear Panty And Other innerwear Astrologer Suggested this

ರಾಖಿ ಸಾವಂತ್ ಅವರು ಸದಾ ಸುದ್ದಿಲ್ಲಿ ಇರಲು ಪ್ರಯತ್ನಿಸುತ್ತಾರೆ. ಅವರು ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಸದಾ ಮುಂದಿರುತ್ತಾರೆ. ಈಗ ಅವರು ನೀಡಿರೋ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಅವರು ಇನ್ಮುಂದೆ ಒಳ ಉಡುಪು ಹಾಕುವುದಿಲ್ಲವಂತೆ. ಇದಕ್ಕೆ ಜ್ಯೋತಿಷಿಗಳು ಕೊಟ್ಟ ಸೂಚನೆಯೇ ಕಾರಣ ಎಂದು ಅವರು ಹೇಳಿದ್ದಾರೆ. ಈ ವಿಷಯದಲ್ಲಿ ಅವರು ಸಾಕಷ್ಟು ಟೀಕೆ ಎದುರಿಸುತ್ತಾ ಇದ್ದಾರೆ. ರಾಖಿ ಸಾವಂತ್ ಅವರು ಓಪನ್ ಆಗಿ ಮಾತನಾಡುತ್ತಾರೆ. ಕೆಲವೊಮ್ಮೆ ಕೆಲವು ವಿಷಯಗಳಲ್ಲಿ ಅವರು ಅತಿಯಾಗಿ ನಡೆದುಕೊಳ್ಳುತ್ತಾರೆ. ಈಗ ಅವರು ಆಡಿದ ಮಾತು…

Read More

Solar Eclipse 2026: ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Dr. Basavaraj Gurujis Predictions for Leo Zodiac Sign.

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಸಿಂಹ ರಾಶಿಯವರ ಮೇಲೆ ಪ್ರಮುಖ ಪರಿಣಾಮಗಳನ್ನು ಬೀರಲಿದೆ. ಈ ಗ್ರಹಣವು ಸಿಂಹ ರಾಶಿಯ ಕಳತ್ರ ಸ್ಥಾನದಲ್ಲಿ, ಅಂದರೆ ಏಳನೇ ಮನೆಯಲ್ಲಿ ಸಂಭವಿಸಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಮಖಾ, ಪುಬ್ಬಾ, ಉತ್ತರಾ ನಕ್ಷತ್ರದವರಿಗೆ ಈ ರಾಶಿಯ ಪ್ರಭಾವ ಇರುತ್ತದೆ. ಸಿಂಹ ರಾಶಿಯವರು ಈ ಅವಧಿಯಲ್ಲಿ ಹೆಚ್ಚು ಜಾಗರೂಕತೆ ವಹಿಸುವುದು ಅಗತ್ಯ. ಗ್ರಹಣದ ಪ್ರಭಾವ ಅಷ್ಟು ಶುಭಕರವಾಗಿಲ್ಲ ಎನ್ನಲಾಗಿದೆ. ಗಂಡ-ಹೆಂಡತಿಯರ ನಡುವೆ ಜಗಳ, ಕುಟುಂಬದಲ್ಲಿ ಅನಗತ್ಯ ತೊಂದರೆಗಳು, ರಾಜಕೀಯ…

Read More

ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ – Kannada News | Hubballi KIMS Implements QR Code for Enhanced Maternity Ward Security and Access

ಹುಬ್ಬಳ್ಳಿ, ಫೆ.13: ಹುಬ್ಬಳ್ಳಿ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಶಿಶುಗಳ ಸುರಕ್ಷತೆ ಮತ್ತು ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸ ಪ್ಲಾನ್ ಮಾಡಿದೆ. ಆಸ್ಪತ್ರೆಯಲ್ಲಿ ಇತ್ತೀಚೆಗೆ ಶಿಶುಗಳ ಕಳ್ಳತನ ಆಗುತ್ತಿದೆ. ಇದನ್ನು ತಡೆಗಟ್ಟಲು ಕ್ಯೂಆರ್ ಕೋಡ್ (QR Code) ವ್ಯವಸ್ಥೆಯನ್ನು ತಂದಿದೆ. ಇನ್ನು ಮುಂದೆ ಹೆರಿಗೆ ವಾರ್ಡ್ಗೆ ಬರಬೇಕಾದರೆ ಕ್ಯೂಆರ್​​ ಕೋಡ್ ಸ್ಕ್ಯಾನ್ ಮಾಡಿ ಬರಬೇಕು. ಕ್ಯೂಆರ್ ಕೋಡ್​​​​ ಸ್ಕ್ಯಾನ್ ಮಾಡಿ ಕುಟುಂಬದವರು ಒಳಹೋಗಬೇಕು ಎಂದು ಕಿಮ್ಸ್ ಹೇಳಿದೆ. ಹೆರಿಗೆ ವಾರ್ಡ್ ಪ್ರವೇಶಿಸುವ ಕುಟುಂಬದ ಸದಸ್ಯರಿಗೆ ಸಿಬ್ಬಂದಿ ಕ್ಯೂಆರ್ ಕೋಡ್ ಜನರೇಟ್…

Read More

ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಕ್ಯಾಂಟರ್​ ಚಾಲಕ – Kannada News | Hosakote Highway Tragedy: Canter Driver Describes Deadly Hosakote Accident

ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್​​ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

Solar Eclipse 2026 Horoscope: ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ? – Kannada News | Solar Eclipse 2026: Astrological Impacts on Cancer Zodiac Sign by Dr. Basavaraj Guruji

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಕರ್ಕಾಟಕ ರಾಶಿಯವರಿಗೆ ಅಷ್ಟಮ ಸ್ಥಾನದಲ್ಲಿ ಸಂಭವಿಸಲಿದೆ ಎಂದು ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಚಂದ್ರ, ಸೂರ್ಯ, ರಾಹು, ಶುಕ್ರ ಮತ್ತು ಬುಧ ಗ್ರಹಗಳ ಭಾಗವಹಿಸುವಿಕೆಯಿಂದಾಗಿ ಕರ್ಕಾಟಕ ರಾಶಿಯವರು ಎಚ್ಚರದಿಂದ ಇರಬೇಕಾಗುತ್ತದೆ. ಆಕಸ್ಮಿಕ ಅನಾರೋಗ್ಯ, ದೃಷ್ಟಿದೋಷಗಳು, ಮತ್ತು ಶತ್ರು ಕಾಟದಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಅಸ್ಥಿರತೆ, ಮಾನಸಿಕ ಯಾತನೆ ಹಾಗೂ ನಂಬಿಕೆ ದ್ರೋಹದಂತಹ ಸನ್ನಿವೇಶಗಳು ಇರಬಹುದು. ಆದಾಗ್ಯೂ, ಕರ್ಕಾಟಕ ರಾಶಿಯವರಿಗೆ ಉತ್ತಮ ದೈವಬಲ ಇರುವುದು ಸಮಾಧಾನಕರ ಸಂಗತಿ. ಕೃಷಿ…

Read More

AUS vs ZIM: ಬಲಿಷ್ಠ ಆಸ್ಟ್ರೇಲಿಯಾಕ್ಕೆ ಮಣ್ಣು ಮುಕ್ಕಿಸಿದ ಜಿಂಬಾಬ್ವೆ – Kannada News | Historic Upset: Zimbabwe Defeats Strong Australia in 2026 T20 World Cup Match

2026 ರ ಟಿ20 ವಿಶ್ವಕಪ್​ನ 19ನೇ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಹಾಗೂ ಜಿಂಬಾಬ್ವೆ ವಿರುದ್ಧ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾಕ್ಕೆ ಗೆಲುವು ಖಚಿತ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಎಲ್ಲರ ನಿರೀಕ್ಷೆಯನ್ನು ಹುಸಿ ಮಾಡಿದ ಜಿಂಬಾಬ್ವೆ ಆಟಗಾರರು ಕೆಚ್ಚೆದೆಯ ಹೋರಾಟ ನೀಡಿ ಕಾಂಗರೂಗಳಿಗೆ ಮಣ್ಣು ಮುಕ್ಕಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಜಿಂಬಾಬ್ವೆ 20 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ…

Read More

ಬೆಂಗಳೂರಿಗರೇ ಗಮನಿಸಿ: ಫೆ. 14ರಂದು ಈ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ; ಇಲ್ಲಿದೆ ಮಾಹಿತಿ – Kannada News | Bengaluru Power Cut February 14: BESCOM Announces Scheduled Outages in Various Areas

ಬೆಂಗಳೂರು, ಫೆಬ್ರವರಿ 13: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಫೆಬ್ರವರಿ 14 ಶನಿವಾರದಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ವಿವಿಧೆಡೆ ವಿದ್ಯುತ್​​ ಸರಬರಾಜಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ತುಮಕೂರಿನ  ಶಿರಾ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿಯೂ ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್​​ ಸರಬರಾಜಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ ಜಾಲಹಳ್ಳಿ: ಡಿಬಿ ಸಂದ್ರ 2ನೇ ಮತ್ತು 4ನೇ ಬ್ಲಾಕ್,…

Read More