Category Archives: Blog

Your blog category

Mega Job Fair 2026: ಮೈಸೂರಿನ ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್​; ಜೂ. 24 ಬೃಹತ್ ಉದ್ಯೋಗ ಮೇಳ! – Kannada News | Periyapatna Mega Job Fair 2026: Mysuru District Offers Career Opportunities for Youth

ಮೈಸೂರು: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಮಹತ್ವದ ಸಿಹಿ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ನೇತೃತ್ವದಲ್ಲಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೈಸೂರು ಮತ್ತು ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಗಳು ಪಿರಿಯಾಪಟ್ಟಣ ಇವರ ಜಂಟಿ ಸಹಯೋಗದೊಂದಿಗೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಒಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಈ ಮೇಳವು ಒಂದು ಅತ್ಯುತ್ತಮ ವೇದಿಕೆಯಾಗಲಿದ್ದು, ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ.

ಉದ್ಯೋಗ ಮೇಳದ ಸಂಪೂರ್ಣ ವಿವರಗಳು:

  • ದಿನಾಂಕ: 24-06-2026 (ಬುಧವಾರ)
  • ಸಮಯ: ಬೆಳಿಗ್ಗೆ 8:00 ರಿಂದ ಸಂಜೆ 4:00 ರವರೆಗೆ
  • ಸ್ಥಳ: ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಗಳು, ಅಬ್ಬೂರು ಗ್ರಾಮ, ಪಿರಿಯಾಪಟ್ಟಣ ತಾಲ್ಲೂಕು, ಮೈಸೂರು ಜಿಲ್ಲೆ.

ಅರ್ಹತೆ ಮತ್ತು ವಯೋಮಿತಿ:

ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ವಿವಿಧ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಎಸ್‌ಎಸ್‌ಎಲ್‌ಸಿ (SSLC), ಪಿಯುಸಿ (PUC), ಡಿಪ್ಲೋಮಾ, ಐಟಿಐ (ITI), ಯಾವುದೇ ಪದವಿ (Graduate) ಮತ್ತು ಸ್ನಾತಕೋತ್ತರ ಪದವಿ (Post Graduate) ಪಡೆದವರು ಭಾಗವಹಿಸಬಹುದು. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ಆನ್‌ಲೈನ್ ನೋಂದಣಿ ಮತ್ತು ಸಂಪರ್ಕ ಮಾಹಿತಿ:

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಕೆಳಗಿನ ಗೂಗಲ್ ಫಾರ್ಮ್ ಲಿಂಕ್ ಬಳಸಿ ತಕ್ಷಣವೇ ನೋಂದಾಯಿಸಿಕೊಳ್ಳಬಹುದು:

ಇಲ್ಲಿ ಕ್ಲಿಕ್ ಮಾಡಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಿ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ನಿಮಗೆ ಉದ್ಯೋಗ ಮೇಳದ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಹೆಚ್ಚಿನ ಮಾಹಿತಿ ಅಗತ್ಯವಿದ್ದರೆ, ಈ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ:

  • 9036356862
  • 9964463361
  • 8748984360

ಮುಖ್ಯ ಸೂಚನೆ:

ಉದ್ಯೋಗಾಕಾಂಕ್ಷಿಗಳು ಮೇಳಕ್ಕೆ ಬರುವಾಗ ತಮ್ಮ ರೆಸ್ಯೂಮ್ (Resume/Biodata) ಹಾಗೂ ಶೈಕ್ಷಣಿಕ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಲು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Cough Syrup: ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್ ಸಿಗಲ್ಲ, ಕೇಂದ್ರ ಸರ್ಕಾರದಿಂದ ಹೊಸ ನಿಯಮ – Kannada News | Cough Syrup Rule: Doctor’s Prescription Now Mandatory for Purchase in India

ಸಿರಪ್-ಸಾಂದರ್ಭಿಕ ಚಿತ್ರImage Credit source: Vecteezy

ನವದೆಹಲಿ, ಜೂನ್ 16: ಇನ್ನುಮುಂದೆ ಮೆಡಿಕಲ್ ಶಾಪ್​ನಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್(Cough Syrup) ಕೊಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿ ಮಾಡಿದೆ. ಸಾರ್ವಜನಿಕ ಆರೋಗ್ಯ ರಕ್ಷಣೆಯನ್ನು ಬಲಪಡಿಸಲು ಮತ್ತು ಕೆಮ್ಮಿನ ಸಿರಪ್​ಗಳ ಅತಿಯಾದ ದುರುಪಯೋಗವನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಜೂನ್ 9ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ, ಇನ್ನುಮುಂದೆ ವೈದ್ಯರ ಅಧಿಕೃತ ಪ್ರಿಸ್ಕ್ರಿಪ್ಷನ್ ಇಲ್ಲದೆ ಯಾವುದೇ ಕೆಮ್ಮು, ಶೀತ ಹಾಗೂ ಜ್ವರಕ್ಕೆ ಸಿರಪ್ ಪಡೆದುಕೊಳ್ಳಲು ಸಾಧ್ಯವಿಲ್ಲ.

ಕೇಂದ್ರ ಸರ್ಕಾರವು 1945ರ ಹಳೆಯ ಔಷಧ ನಿಯಮಗಳ ವೇಳಾಪಟ್ಟಿ ಕೆ ಸಿರಪ್ ಪದವನ್ನು ಅಧಿಕೃತವಾಗಿ ತೆಗೆದುಹಾಕಿದೆ. ಈ ಹಿಂದೆ 1,000 ಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಸಣ್ಣ ಹಳ್ಳಿಗಳಲ್ಲಿ ಕೆಮ್ಮಿನ ಸಿರಪ್‌ಗಳನ್ನು ಮಾರಾಟ ಮಾಡಲು ಕೆಲವು ಪರವಾನಗಿ ನಿಯಮಗಳಿಂದ ವಿನಾಯಿತಿ ನೀಡಲಾಗಿತ್ತು. ಆದರೆ ಇನ್ನು ಮುಂದೆ ಸಣ್ಣ ಹಳ್ಳಿಗಳಲ್ಲೂ ಪರವಾನಗಿ ಇಲ್ಲದೆ ಸಿರಪ್ ಮಾರಾಟ ಮಾಡುವಂತಿಲ್ಲ.

ಹೊಸ ಬದಲಾವಣೆಯ ನಂತರ, ಎಲ್ಲಾ ರೀತಿಯ ಕೆಮ್ಮಿನ ಸಿರಪ್‌ಗಳನ್ನು 1940 ರ ಔಷಧಗಳು ಮತ್ತು ಸೌಂದರ್ಯವರ್ಧಕ ಕಾಯ್ದೆಯಡಿ ಪರವಾನಗಿ ಪಡೆದ ಔಷಧಾಲಯಗಳ ಮೂಲಕ ಮಾತ್ರ ಮಾರಾಟ ಮಾಡಬೇಕಾಗುತ್ತದೆ. ಗ್ರಾಹಕರು ವೈದ್ಯರ ಚೀಟಿಯನ್ನು ತೋರಿಸುವುದು ಈಗ ಕಡ್ಡಾಯವಾಗಿದೆ.

ಮತ್ತಷ್ಟು ಓದಿ: 2 ವರ್ಷದೊಳಗಿನ ಮಕ್ಕಳಿಗೆ ಶೀತ, ಕೆಮ್ಮಿನ ಸಿರಪ್ ನೀಡಬೇಡಿ; 11 ಮಕ್ಕಳ ಸಾವಿನ ಬಳಿಕ ಕೇಂದ್ರ ಸರ್ಕಾರ ಎಚ್ಚರಿಕೆ

ದುರುಪಯೋಗಪಡಿಸಿಕೊಳ್ಳುತ್ತಿರುವುದು ಹೆಚ್ಚಾಗಿದೆ. ಇದನ್ನು ತಡೆಯಲು ಮತ್ತು ದೇಶಾದ್ಯಂತ ಜವಾಬ್ದಾರಿಯುತ ಔಷಧ ಮಾರಾಟವನ್ನು ಖಚಿತಪಡಿಸಿಕೊಳ್ಳಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ನಿಯಮ ಉಲ್ಲಂಘಿಸುವ ತಯಾರಕರು ಹಾಗೂ ವಿತರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 1:19 pm, Tue, 16 June 26

Source link

500, 1000, 2000 ಮತ್ತು 14000… ದಾಖಲೆಗಳ ಮೇಲೆ ಕಣ್ಣಿಟ್ಟಿರುವ ರೂಟ್ – Kannada News | Joe Root Set for Historic Milestones as Interim England Captain

500, 1000, 2000 ಮತ್ತು 14000… ಇವು ಕೇವಲ ಅಂಕಿ-ಅಂಶಗಳಲ್ಲ, ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಜೋ ರೂಟ್ ಮುಂದಿರುವ ದಾಖಲೆಗಳು! ಒಂದು ಕಡೆ ಕಿವೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 2,000 ರನ್ ಪೂರೈಸುವ ವಿಶ್ವದ ಮೊದಲ ಬ್ಯಾಟರ್ ಆಗುವ ಸನಿಹದಲ್ಲಿರುವ ರೂಟ್, ಮತ್ತೊಂದೆಡೆ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ನಾಯಕತ್ವದ ಜವಾಬ್ದಾರಿಯೊಂದಿಗೆ ಮೈದಾನಕ್ಕಿಳಿಯಲಿರುವ ಜೋ ರೂಟ್ ಕಣ್ಣಿಟ್ಟಿರುವ ಪ್ರಮುಖ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ…

  • 2000 ರನ್ ಗಳ ಐತಿಹಾಸಿಕ ಮೈಲಿಗಲ್ಲು: ಜೋ ರೂಟ್ ನ್ಯೂಝಿಲೆಂಡ್ ವಿರುದ್ಧ ಇದುವರೆಗೆ ಆಡಿದ 22 ಟೆಸ್ಟ್ ಪಂದ್ಯಗಳಿಂದ 1,934 ರನ್ ಗಳಿಸಿದ್ದಾರೆ. ಇನ್ನು ಕೇವಲ 66 ರನ್ ಗಳಿಸಿದರೆ, ಕಿವೀಸ್ ವಿರುದ್ಧ ಟೆಸ್ಟ್ ಇತಿಹಾಸದಲ್ಲೇ 2,000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ರೂಟ್ ಪಾತ್ರರಾಗಲಿದ್ದಾರೆ. ಈಗಾಗಲೇ ಜಾವೇದ್ ಮಿಯಾಂದಾದ್ (1,919 ರನ್) ಅವರ 31 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿರುವ ರೂಟ್ ಲೀಡ್ಸ್​ನಲ್ಲಿ ಹೊಸ ಇತಿಹಾಸ ಬರೆಯುವುದನ್ನು ಎದುರು ನೋಡಬಹುದು.
  •  1000 ರನ್​ಗಳ ಸರದಾರ: ನ್ಯೂಝಿಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್​ನಲ್ಲಿ 1000 ರನ್ ಕಲೆಹಾಕಿದ ದಾಖಲೆ ಬರೆಯಲು ಜೋ ರೂಟ್​ಗೆ ಬೇಕಿರುವುದು ಕೇವಲ 72 ರನ್​ಗಳು ಮಾತ್ರ. ಈಗಾಗಲೇ ಇಂಗ್ಲೆಂಡ್ ಪಿಚ್​ನಲ್ಲಿ ಕಿವೀಸ್ ವಿರುದ್ಧ 928 ರನ್ ಕಲೆಹಾಕಿರುವ ರೂಟ್ ಈ ಬಾರಿ ಸಾವಿರ ರನ್ ಸರದಾರ ಎನಿಸಿಕೊಳ್ಳುವ ನಿರೀಕ್ಷೆಯಿದೆ.
  • 14000 ಟೆಸ್ಟ್ ರನ್​: ಜೋ ರೂಟ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 14,000 ಟೆಸ್ಟ್ ರನ್ ಗಳ ಬೃಹತ್ ಮೈಲಿಗಲ್ಲನ್ನು ತಲುಪುವ ಸನಿಹದಲ್ಲಿದ್ದಾರೆ. ಈಗಾಗಲೇ 13,952 ರನ್ ಗಳಿಸಿರುವ ರೂಟ್ 2ನೇ ಟೆಸ್ಟ್​ನಲ್ಲಿ 48 ರನ್ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.
  •  500 ಟೆಸ್ಟ್ ರನ್‌: ಜೋ ರೂಟ್ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ತಂಡದ ನಾಯಕನಾಗಿ ತಮ್ಮ ಏಳನೇ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ . ಈ ಹಿಂದೆ ಆಡಿರುವ ಆರು ಟೆಸ್ಟ್‌ಗಳಲ್ಲಿ, ಅವರು 43.45 ರ ಸರಾಸರಿಯಲ್ಲಿ 478 ರನ್ ಗಳಿಸಿದ್ದಾರೆ. ಇನ್ನು 22 ನೇ ರನ್ ಗಳಿಸಿದರೆ ನ್ಯೂಝಿಲೆಂಡ್ ವಿರುದ್ಧ 500 ರನ್ ಕಲೆಹಾಕಿದ ಇಂಗ್ಲೆಂಡ್ ನಾಯಕ ಎನಿಸಿಕೊಳ್ಳಲಿದ್ದಾರೆ.

ಕ್ಯಾಪ್ಟನ್ ರೂಟ್:

ಮೊದಲ ಟೆಸ್ಟ್ ಪಂದ್ಯದ ಬಳಿಕ ತಡರಾತ್ರಿಯ ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿದ ಕಾರಣಕ್ಕಾಗಿ ನಾಯಕ ಬೆನ್ ಸ್ಟೋಕ್ಸ್ ಮತ್ತು ವೇಗಿ ಗಸ್ ಅಟ್ಕಿನ್ಸನ್ ಅವರನ್ನು ಇಂಗ್ಲೆಂಡ್ ತಂಡದಿಂದ ಅಮಾನತುಗೊಳಿಸಲಾಗಿದೆ. ಹೀಗಾಗಿ 2ನೇ ಟೆಸ್ಟ್ ಪಂದ್ಯಕ್ಕೆ ಜೋ ರೂಟ್ ಅವರನ್ನು ಕ್ಯಾಪ್ಟನ್ ಆಗಿ ನೇಮಿಸಲಾಗಿದೆ.

ಇದನ್ನೂ ಓದಿ: ಹೊಸ ಇತಿಹಾಸ… ಒಂದೇ ದಿನ 4 ಪಂದ್ಯಗಳು ಡ್ರಾ..!

ಈ ಹಿಂದೆ ಇಂಗ್ಲೆಂಡ್ ಟೆಸ್ಟ್ ತಂಡವನ್ನು 64 ಪಂದ್ಯಗಳಲ್ಲಿ ಮುನ್ನಡೆಸಿದ್ದ ರೂಟ್ 27 ಮ್ಯಾಚ್​ಗಳಲ್ಲಿ ಜಯ ತಂದು ಕೊಟ್ಟಿದ್ದರು. ಇನ್ನು ರೂಟ್ ನಾಯಕತ್ವದಲ್ಲಿ ಆಂಗ್ಲ ಪಡೆ 11 ಪಂದ್ಯಗಳಲ್ಲಿ ಡ್ರಾ ಸಾಧಿಸಿದರೆ, 26 ಮ್ಯಾಚ್​ಗಳಲ್ಲಿ ಸೋಲನುಭವಿಸಿತ್ತು. ಇದೀಗ 65ನೇ ಪಂದ್ಯದಲ್ಲಿ ನಾಯಕನಾಗಿ ಕಣಕ್ಕಿಳಿಯಲು ಜೋ ರೂಟ್ ಸಿದ್ಧರಾಗಿದ್ದು, ಈ ಬಾರಿ ಮತ್ತೊಮ್ಮೆ ತಮ್ಮ ನಾಯಕತ್ವದ ಕಮಾಲ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

Source link

ಎನ್​ಆರ್​ಐಗಳ ಡೆಪಾಸಿಟ್​ಗಳನ್ನು ಕೈಬೀಸಿ ಕರೆಯುತ್ತಿವೆ ಭಾರತದ ಹೊಸ FCNR(B) ದರಗಳು; ಅನಿವಾಸಿ ಭಾರತೀಯರಿಗೆ ಹೇಗೆ ಲಾಭ? – Kannada News | How India’s new FCNR B rates can benefit NRIs

ನವದೆಹಲಿ, ಜೂನ್ 16: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ ಕೈಗೊಂಡಿರುವ ಮಹತ್ವದ ನಿರ್ಧಾರದಿಂದಾಗಿ ಭಾರತದಲ್ಲಿ FCNR (B) ಠೇವಣಿಗಳ ಮೇಲಿನ ಬಡ್ಡಿ ದರಗಳು ದಾಖಲೆ ಮಟ್ಟಕ್ಕೆ ಏರಿಕೆಯಾಗಿವೆ. ಅನಿವಾಸಿ ಭಾರತೀಯರಿಗೆ (NRIs) ಇದು ಸುವರ್ಣಾವಕಾಶವಾಗಿ ಮಾರ್ಪಟ್ಟಿದೆ. ಎಫ್‌ಸಿಎನ್‌ಆರ್(ಬಿ) – Foreign Currency Non-Resident (Bank) Deposit- ಎಂದರೆ ಅನಿವಾಸಿ ಭಾರತೀಯರು ತಾವು ವಿದೇಶದಲ್ಲಿ ಗಳಿಸಿದ ಹಣವನ್ನು ಭಾರತೀಯ ಬ್ಯಾಂಕುಗಳಲ್ಲಿ ವಿದೇಶಿ ಕರೆನ್ಸಿಯ ರೂಪದಲ್ಲೇ (ಉದಾಹರಣೆಗೆ ಯುಎಸ್ ಡಾಲರ್, ಬ್ರಿಟಿಷ್ ಪೌಂಡ್, ಯುರೋ ಇತ್ಯಾದಿ) ಇಡಬಹುದಾದ ಒಂದು ಫಿಕ್ಸೆಡ್ ಡೆಪಾಸಿಟ್ (Fixed Deposit) ಯೋಜನೆ ಆಗಿದೆ.

ಜೂನ್ 2026ರಲ್ಲಿ ಆರ್‌ಬಿಐ (RBI) ಬ್ಯಾಂಕುಗಳಿಗಾಗಿ ಒಂದು ವಿಶೇಷ ‘ಫಾರೆಕ್ಸ್ ಸ್ವಾಪ್ ವಿಂಡೋ’ (Forex Swap Window) ಸೌಲಭ್ಯವನ್ನು ಮುಕ್ತಗೊಳಿಸಿದೆ. ಇದರ ಅಡಿಯಲ್ಲಿ ಸೆಪ್ಟೆಂಬರ್ 30 ರವರೆಗೆ ಜಮೆಯಾಗುವ ಹೊಸ FCNR(B) ಠೇವಣಿಗಳ ಮೇಲಿನ ‘ಕರೆನ್ಸಿ ಏರಿಳಿತದ ರಿಸ್ಕ್ ವೆಚ್ಚವನ್ನು’ (Hedging Cost) ಆರ್‌ಬಿಐ ತಾನೇ ಭರಿಸಲಿದೆ. ಇದರಿಂದಾಗಿ ಬ್ಯಾಂಕುಗಳ ಮೇಲಿನ ಆರ್ಥಿಕ ಹೊರೆ ತಪ್ಪುತ್ತದೆ. ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಹೆಚ್ಚಿನ ಬಡ್ಡಿ ನೀಡಲು ಸಾಧ್ಯವಾಗುತ್ತದೆ. ಈ ಮೊದಲು ಶೇಕಡಾ 3 ರಿಂದ 4 ರಷ್ಟಿದ್ದ ಬಡ್ಡಿ ದರಗಳು, ಈಗ ಶೇ. 6 ರಿಂದ 7.1 ರಷ್ಟು ದಾಖಲೆ ಮಟ್ಟಕ್ಕೆ ಜಿಗಿದಿವೆ.

ಇದನ್ನೂ ಓದಿ: ಷೇರುಪೇಟೆಯಲ್ಲಿ ಧೂಳೆಬ್ಬಿಸುತ್ತಿರುವ ಸ್ಪೇಸ್​ಎಕ್ಸ್; ಇಲಾನ್ ಮಸ್ಕ್ ಒಂದು ದಿನದಲ್ಲಿ ಗಳಿಸಿದ ಸಂಪತ್ತು ವಾರನ್ ಬಫೆಟ್​ನ ಒಟ್ಟೂ ಸಂಪತ್ತಿಗೆ ಸಮ

ಪ್ರಮುಖ ಬ್ಯಾಂಕುಗಳ ಪ್ರಸ್ತುತ ಬಡ್ಡಿ ದರಗಳು (USD ಠೇವಣಿಗಳ ಮೇಲೆ)

  • ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್: ಶೇ. 7.10
  • ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್: ಶೇ 7.13
  • ಐಸಿಐಸಿಐ ಬ್ಯಾಂಕ್: ಶೇ. 6.50
  • ಎಚ್‌ಡಿಎಫ್‌ಸಿ ಬ್ಯಾಂಕ್: ಶೇ. 6
  • ಆಕ್ಸಿಸ್ ಬ್ಯಾಂಕ್: ಶೇ. 6
  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI): ಶೇ. 5.75 – 6.00

NRI ಹೂಡಿಕೆದಾರರಿಗೆ ಇದರಿಂದ ಆಗುವ 4 ಪ್ರಮುಖ ಲಾಭಗಳು

  1. ಕರೆನ್ಸಿ ನಷ್ಟದ ಭಯವಿಲ್ಲ: ಸಾಮಾನ್ಯವಾಗಿ ವಿದೇಶದಿಂದ ಭಾರತಕ್ಕೆ ಹಣ ಕಳುಹಿಸಿ NRE ಅಕೌಂಟ್‌ನಲ್ಲಿ ಇಟ್ಟಾಗ, ರೂಪಾಯಿ ಮೌಲ್ಯ ಕುಸಿದರೆ (Depreciation) ನಷ್ಟವಾಗುವ ಸಾಧ್ಯತೆ ಇರುತ್ತದೆ. ಆದರೆ FCNR(B) ನಲ್ಲಿ ನೀವು ಡಾಲರ್ ರೂಪದಲ್ಲೇ ಹಣ ಇಡುವುದರಿಂದ ಮತ್ತು ವಾಪಸ್ ಪಡೆಯುವಾಗಲೂ ಡಾಲರ್ ರೂಪದಲ್ಲೇ ಸಿಗುವುದರಿಂದ ರೂಪಾಯಿ ಮೌಲ್ಯದ ಏರಿಳಿತ ನಿಮ್ಮ ಹೂಡಿಕೆಯ ಮೇಲೆ ಯಾವುದೇ ಪ್ರಭಾವ (No Currency Risk) ಬೀರುವುದಿಲ್ಲ.
  2. ಭಾರತದಲ್ಲಿ ಸಂಪೂರ್ಣ ತೆರಿಗೆ ಮುಕ್ತ: ಭಾರತದ ಆದಾಯ ತೆರಿಗೆ ನಿಯಮಗಳ ಪ್ರಕಾರ, FCNR(B) ಠೇವಣಿಗಳ ಮೇಲೆ ಗಳಿಸುವ ಸಂಪೂರ್ಣ ಬಡ್ಡಿ ಆದಾಯಕ್ಕೆ ಭಾರತದಲ್ಲಿ ಯಾವುದೇ ತೆರಿಗೆ ಇರುವುದಿಲ್ಲ (100% Tax-Free).
  3. ಸುಲಭವಾಗಿ ವಿದೇಶಕ್ಕೆ ಮರು-ಸಾಗಣೆ: ಈ ಖಾತೆಯಲ್ಲಿರುವ ಅಸಲು ಮತ್ತು ಬಡ್ಡಿ ಹಣ ಎರಡನ್ನೂ ಯಾವುದೇ ಮಿತಿ ಅಥವಾ ಕಠಿಣ ನಿಯಮಗಳಿಲ್ಲದೆ, ನೀವು ವಾಸಿಸುತ್ತಿರುವ ವಿದೇಶಕ್ಕೆ ಸುಲಭವಾಗಿ ವರ್ಗಾಯಿಸಿಕೊಳ್ಳಬಹುದು (Full Repatriation).
  4. ದೇಶಿ ಬ್ಯಾಂಕುಗಳಿಗಿಂತ ಹೆಚ್ಚಿನ ಲಾಭ: ಪ್ರಸ್ತುತ ಅಮೆರಿಕ ಅಥವಾ ಯೂರೋಪ್‌ನ ಬ್ಯಾಂಕುಗಳಲ್ಲಿ ಸ್ಥಿರ ಠೇವಣಿಗಳ (CDs) ಮೇಲೆ ಶೇಕಡಾ 4 ರಿಂದ 5 ರಷ್ಟು ಮಾತ್ರ ಬಡ್ಡಿ ಸಿಗುತ್ತಿದೆ. ಆದರೆ ಭಾರತದ ಬ್ಯಾಂಕುಗಳು ಸುರಕ್ಷಿತವಾಗಿ ಅದೇ ಡಾಲರ್ ಮೇಲೆ 6% ರಿಂದ 7% ಕ್ಕಿಂತ ಹೆಚ್ಚು ಬಡ್ಡಿ ನೀಡುತ್ತಿರುವುದರಿಂದ NRIಗಳಿಗೆ ಇದು ಅತ್ಯುತ್ತಮ ಮತ್ತು ಸುರಕ್ಷಿತ ಹೂಡಿಕೆಯಾಗಿದೆ.

ಇದನ್ನೂ ಓದಿ: ಡೀಸಲ್ ಮತ್ತು ಜೆಟ್ ಇಂಧನದ ಮೇಲಿನ ರಫ್ತು ಸುಂಕ ಹೆಚ್ಚಳ; ಪೆಟ್ರೋಲ್ ರೀಟೇಲ್ ಬೆಲೆ ಮೇಲೆ ಪರಿಣಾಮ ಬೀರುತ್ತಾ?

ಸೆಪ್ಟೆಂಬರ್ 30ರವರೆಗೆ ಇದೆ ಈ ಆಫರ್

ಆರ್‌ಬಿಐ ನೀಡಿರುವ ಈ ವಿಶೇಷ ರಿಯಾಯಿತಿ ಸೌಲಭ್ಯವು 2026ರ ಸೆಪ್ಟೆಂಬರ್ 30 ರವರೆಗೆ ಮಾತ್ರ ಲಭ್ಯವಿರುತ್ತದೆ. ಈ ಅವಧಿಯ ಒಳಗಾಗಿ ಆರಂಭಿಸುವ 3 ರಿಂದ 5 ವರ್ಷಗಳ ಅವಧಿಯ ಠೇವಣಿಗಳಿಗೆ ಮಾತ್ರ ಈ ಹೆಚ್ಚಿನ ಬಡ್ಡಿ ದರ ಅನ್ವಯವಾಗುತ್ತದೆ. ಕನಿಷ್ಠ 1 ವರ್ಷದ ಲಾಕ್-ಇನ್ ಅವಧಿ ಇರಲಿದ್ದು, ಅವಧಿಗೂ ಮುನ್ನ ಹಣ ಹಿಂಪಡೆದರೆ ಬಡ್ಡಿಯಲ್ಲಿ ಕಡಿತವಾಗುವ ಸಾಧ್ಯತೆ ಇರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ

ನಟ ಶ್ರೀಮುರುಳಿ ಹಾಗೂ ವಿಜಯ್ ರಾಘವೇಂದ್ರ ಅವರ ತಾಯಿ ಜಯಮ್ಮ ಇಂದು (ಜೂನ್ 16) ನಿಧನ ಹೊಂದಿದ್ದಾರೆ. ಸದಾ ಧೈರ್ಯದಿಂದ ಇರುತ್ತಿದ್ದ ‘ರೋರಿಂಗ್ ಸ್ಟಾರ್’ ಶ್ರೀಮುರುಳಿ ಅವರು ಅಮ್ಮನ ಪಾರ್ಥಿವ ಶರೀರವನ್ನು ನೋಡುತ್ತಿದ್ದಂತೆ ತಡೆಯಲಾರದೆ ಕಣ್ಣೀರಿಟ್ಟ ಘಟನೆ ಎಲ್ಲರನ್ನೂ ಭಾವುಕರನ್ನಾಗಿಸಿದೆ. ಯಾವಾಗಲೂ ಬೆಳ್ಳಿತೆರೆಯ ಮೇಲೆ ರಗಡ್ ಆಕ್ಷನ್ ಪಾತ್ರಗಳ ಮೂಲಕ ಅಬ್ಬರಿಸುವ ಶ್ರೀಮುರುಳಿ, ವೈಯಕ್ತಿಕ ಜೀವನದಲ್ಲಿ ತಾಯಿಗೆ ಅತಿಯಾಗಿ ಹತ್ತಿರವಾಗಿದ್ದರು. ತಮ್ಮ ಸಿನಿ ಜರ್ನಿ ಹಾಗೂ ವೈಯಕ್ತಿಕ ಬೆಳವಣಿಗೆಗೆ ಸದಾ ಬೆನ್ನೆಲುಬಾಗಿ ನಿಲ್ಲುತ್ತಿದ್ದ ಅಮ್ಮ ಇನ್ನು ನೆನಪು ಮಾತ್ರ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಜಯಮ್ಮ ಅವರ ಪಾರ್ಥಿವ ಶರೀರದ ಮುಂದೆ ಮೌನವಾಗಿ ಕಣ್ಣೀರು ಸುರಿಸುತ್ತಿದ್ದ ಶ್ರೀಮುರುಳಿ ಅವರನ್ನು ನೋಡಿ ಅಲ್ಲಿ ನೆರೆದಿದ್ದ ಬಂಧುಗಳು ಮತ್ತು ಚಿತ್ರರಂಗದ ಸ್ನೇಹಿತರು ಸಾಂತ್ವನ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಹೇಗಿದೆ ನೋಡಿ ನಟ ಅಜಿತ್ ಕುಟುಂಬ; ಇಲ್ಲಿವೆ ಸುಂದರ ಫೋಟೋಸ್

Source link

ಸಲ್ಮಾನ್ ಖಾನ್ ಜೊತೆಗೆ ಸಮಂತಾ ಹಾಲಿ ಪತಿ ಸಿನಿಮಾ – Kannada News | Raj Nidimoru confirms him and DK doing a big budget movie with Bollywood star

ಸಮಂತಾ ಋತ್ ಪ್ರಭು (Samantha Ruth Prabhu) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಇದೇ 19ನೇ ತಾರೀಖು ಬಿಡುಗಡೆ ಆಗಲಿದೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ಸಿನಿಮಾನಲ್ಲಿ ಸಮಂತಾ, ಗೃಹಿಣಿಯಾಗಿ ಜೊತೆಗೆ ಸಖತ್ ಆಕ್ಷನ್ ಮಾಡುವ ಫೈಟರ್ ಆಗಿಯೂ ಕಾಣಿಸಿಕೊಂಡಿದ್ದಾರೆ. ಸಿನಿಮಾ ಅನ್ನು ಸಿನಿಮಾ ಅನ್ನು ನಂದಿನಿ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಮಾಡಿರುವುದು ಸಮಂತಾರ ಹಾಲಿ ಪತಿ ರಾಜ್ ನಿಧಿಮೋರು. ಅಸಲಿಗೆ ರಾಜ್ ನಿಧಿಮೋರು ಸಹ ಜನಪ್ರಿಯ ಚಿತ್ರಕತೆ ಬರಹಗಾರ ಮತ್ತು ನಿರ್ದೇಶಕ ಆಗಿದ್ದು, ಖುದ್ದು ಪತ್ನಿಯ ಸಿನಿಮಾ ಮೇಲೆ ಬಂಡವಾಳ ಹೂಡಿದ್ದಾರೆ. ರಾಜ್ ಅವರು ತಮ್ಮ ಗೆಳೆಯ ಡಿಕೆ ಜೊತೆ ಸೇರಿಕೊಂಡು (ರಾಜ್-ಡಿಕೆ) ಬಾಲಿವುಡ್​​ನಲ್ಲಿ ಈಗಾಗಲೇ ಕೆಲ ಸಿನಿಮಾ ಮತ್ತು ವೆಬ್ ಸರಣಿ ನಿರ್ದೇಶಿಸಿದ್ದಾರೆ. ಇದೀಗ ಬಾಲಿವುಡ್​ನ ದೊಡ್ಡ ಸ್ಟಾರ್ ನಟನ ಜೊತೆಗೆ ಕೆಲಸ ಮಾಡಲು ಮುಂದಾಗಿದ್ದಾರೆ.

‘ಮಾ ಇಂಟಿ ಬಂಗಾರಂ’ ಸಿನಿಮಾದ ಪ್ರಚಾರ ಕಾರ್ಯಕ್ರಮದ ವೇಳೆ ರಾಜ್ ನಿಧಿಮೋರು ಅವರು ಈ ವಿಷಯ ಮಾತನಾಡಿದ್ದು, ಸಲ್ಮಾನ್ ಖಾನ್ ಹೆಸರು ನೇರವಾಗಿ ಹೇಳದೇ ಇದ್ದರೂ, ಪರೋಕ್ಷವಾಗಿ ತಾವು ಸಲ್ಮಾನ್ ಖಾನ್ ಜೊತೆಗೆ ಸಿನಿಮಾ ಮಾಡುವುದಾಗಿ ಹೇಳಿದ್ದಾರೆ. ರಾಜ್ ಮತ್ತು ಡಿಕೆ ಒಟ್ಟಾಗಿ ಈ ಸಿನಿಮಾ ನಿರ್ದೇಶಿಸಲಿದ್ದಾರೆ.

ರಾಜ್ ಮತ್ತು ಡಿ.ಕೆ ಕಳೆದ ಕೆಲವು ವರ್ಷಗಳಿಂದ ‘ದಿ ಫ್ಯಾಮಿಲಿ ಮ್ಯಾನ್’, ‘ಫರ್ಜಿ’, ‘ಗನ್ಸ್ ಅಂಡ್ ಗುಲಾಬ್ಸ್’ ಮತ್ತು ‘ಸಿಟಾಡೆಲ್: ಹನಿ ಬನ್ನಿ’ ಅಂತಹ ಬ್ಲಾಕ್‌ಬಸ್ಟರ್ ಸರಣಿಗಳೊಂದಿಗೆ ಡಿಜಿಟಲ್ ಲೋಕದಲ್ಲಿ ಪ್ರಾಬಲ್ಯ ಮೆರೆದಿದ್ದಾರೆ. ಆದರೆ ಈಗ ಮತ್ತೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಅದೂ ಈ ಬಾರಿ ಅವರು ಭಾರಿ ಬಜೆಟ್​ನ ಸೂಪರ್ ಹೀರೋ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದು, ಸಹಜವಾಗಿಯೇ ಸಿನಿಮಾ ಪ್ರೇಮಿಗಳಲ್ಲಿ ಇದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ:ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?

ಇತ್ತೀಚೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ರಾಜ್ ನಿದಿಮೋರು, ‘ಒಬ್ಬ ದೊಡ್ಡ ನಟನೊಂದಿಗೆ ತಾವು ಕೈಜೋಡಿಸುತ್ತಿರುವುದಾಗಿ ಹೇಳಿದ್ದಾರೆ. ಒಂದು ಹಾಲಿವುಡ್ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಪ್ರಾರಂಭವಾಗಿವೆ, ಮತ್ತು ಅದು ಪ್ರಿ-ಪ್ರೊಡಕ್ಷನ್ ಹಂತದಲ್ಲಿದೆ. ಮತ್ತೊಂದು ಸರಣಿಯು ಅಭಿವೃದ್ಧಿ ಹಂತದಲ್ಲಿದೆ. ನಮ್ಮ ಹಿಂದಿ ಚಲನಚಿತ್ರದ ನಿರ್ಮಾಣವು ಶೀಘ್ರದಲ್ಲೇ ಪ್ರಾರಂಭವಾಗಲಿದೆ’ ಎಂದು ತಿಳಿಸಿದರು.

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರೊಂದಿಗೆ ರಾಜ್ ಮತ್ತು ಡಿಕೆ ಸಿನಿಮಾ ಮಾಡುವುದಾಗಿ ಈ ಹಿಂದೆಯೇ ಸುದ್ದಿಗಳು ಹರಿದಾಡಿದ್ದವು. ಪ್ರಸ್ತುತ ಪ್ರಿ-ವಿಶುವಲೈಸೇಶನ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡ ನಂತರ, ಅಕ್ಟೋಬರ್ 2026 ರ ವೇಳೆಗೆ ಚಿತ್ರೀಕರಣವನ್ನು ಪ್ರಾರಂಭಿಸಲಾಗುವುದಂತೆ. ಈ ಸಿನಿಮಾ ಮೂಲಕ ಸಲ್ಮಾನ್ ಖಾನ್ ಅವರು ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾಕ್ಕೆ ರಾಜ್ ಅವರ ಪತ್ನಿ ಹಾಗೂ ನಟಿ ಸಮಂತಾ ರುತ್ ಪ್ರಭು ಅವರು ನಾಯಕಿಯಾಗಿ ನಟಿಸಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ಇತಿಹಾಸ… ಒಂದೇ ದಿನ 4 ಪಂದ್ಯಗಳು ಡ್ರಾ..!

Source link

ಭ್ರಷ್ಟಾಚಾರ ನಿರ್ಮೂಲನೆ, ಬೆಂಗಳೂರು ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ – Kannada News | Mohandas Pai Urges CM D.K. Shivakumar to Tackle Corruption, Accelerate Bengaluru’s Development

ಬೆಂಗಳೂರು, ಜೂನ್​​ 16:  ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡುವಂತೆ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ವಿಶೇಷ ಗಮನ ಹರಿಸುವಂತೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಸಲಹೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರು ತಮ್ಮ ಮಾರ್ಗದರ್ಶಕರಾದ ಎಸ್.ಎಂ. ಕೃಷ್ಣ ಅವರಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಕೆಲಸ ಮಾಡಿ ಬೆಂಗಳೂರಿನ ಹೆಸರನ್ನು ವಿಶ್ವ ಮಟ್ಟದಲ್ಲಿ ಮತ್ತೊಮ್ಮೆ ಎತ್ತಿ ಹಿಡಿಯಬೇಕು ಎಂದವರು ಆಶಿಸಿದ್ದಾರೆ. ಭ್ರಷ್ಟಾಚಾರದಿಂದಾಗಿ ನಗರದ ರಸ್ತೆಗಳು ಹಾಳಾಗಿವೆ, ಫುಟ್‌ಪಾತ್‌ಗಳಿಲ್ಲ, ದುಡ್ಡು ತಿನ್ನುವ ಕೆಲಸ ನಡೆಯುತ್ತಿದೆ ಎಂದು ಪೈ ಕಳವಳ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಷೇರುಪೇಟೆಯಲ್ಲಿ ಧೂಳೆಬ್ಬಿಸುತ್ತಿರುವ ಸ್ಪೇಸ್​ಎಕ್ಸ್; ಇಲಾನ್ ಮಸ್ಕ್ ಒಂದು ದಿನದಲ್ಲಿ ಗಳಿಸಿದ ಸಂಪತ್ತು ವಾರನ್ ಬಫೆಟ್​ನ ಒಟ್ಟೂ ಸಂಪತ್ತಿಗೆ ಸಮ – Kannada News | SpaceX Soars: Elon Musk Becomes First Trillionaire as Market Value Hits $3T

ವಾಷಿಂಗ್ಟನ್, ಜೂನ್ 16: ಇಲಾನ್ ಮಸ್ಕ್ ಅವರ ಸ್ಪೇಸ್-ಎಕ್ಸ್ (SpaceX) ಕಂಪನಿ ಷೇರು ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ. ಎರಡೇ ದಿನದಲ್ಲಿ ಅದು ಟಾಪ್-5 ಲಿಸ್ಟೆಡ್ ಕಂಪನಿಗಳ ಪಟ್ಟಿಗೆ ಜಂಪ್ ಮಾಡಿದೆ. ಐಪಿಒದಲ್ಲಿ ದಾಖಲೆಯ 137 ಡಾಲರ್ ಬೆಲೆಯಲ್ಲಿ ಮಾರುಕಟ್ಟೆಗೆ ಪದಾರ್ಪಣೆ ಮಾಡಿದ ಸ್ಪೇಸ್ ಎಕ್ಸ್ ಇದೀಗ 192 ಡಾಲರ್ ಬೆಲೆ ಪಡೆದಿದೆ. ಅದರ ಮಾರುಕಟ್ಟೆ ಸಂಪತ್ತು (Market Capital) 3 ಟ್ರಿಲಿಯನ್ ಡಾಲರ್ ಗಡಿ ದಾಟಿದೆ. ಮಾರುಕಟ್ಟೆಯ ಬ್ಲಾಕ್​ಬಸ್ಟರ್ ಕಂಪನಿಗಳಾದ ಎನ್​ವಿಡಿಯಾ (Nvidia), ಗೂಗಲ್, ಆ್ಯಪಲ್ ಮತ್ತು ಮೈಕ್ರೋಸಾಫ್ಟ್ ನಂತರದ ಸ್ಥಾನಕ್ಕೆ ಸ್ಪೇಸ್ ಎಕ್ಸ್ ಏರಿದೆ.

ಮಾರುಕಟ್ಟೆ ಮೌಲ್ಯವು ಭಾರೀ ಏರಿಕೆ ಕಂಡಿದ್ದು, ಈಗ ಅದು ಮೈಕ್ರೋಸಾಫ್ಟ್ ಕಂಪನಿಯ ಮೌಲ್ಯಕ್ಕೆ ಸನಿಹಕ್ಕೆ ಬಂದಿದೆ. ಈ ಬೆಳವಣಿಗೆಯಿಂದಾಗಿ ಮಸ್ಕ್ ಅವರ ಸಂಪತ್ತಿನಲ್ಲಿ ಒಂದೇ ದಿನದಲ್ಲಿ ಆದ ಹೆಚ್ಚಳವು ಬಿಲ್ ಗೇಟ್ಸ್ ಅವರ ಒಟ್ಟು ನಿವ್ವಳ ಆಸ್ತಿ ಮೌಲ್ಯಕ್ಕಿಂತಲೂ ಹೆಚ್ಚಾಗಿದೆ ಎಂದು ವರದಿಯಾಗಿದೆ. ಸ್ಪೇಸ್ ಎಕ್ಸ್ ಭರ್ಜರಿ ಪದಾರ್ಪಣೆ ಬೆನ್ನಲ್ಲೇ ಇಲಾನ್ ಮಸ್ಕ್ ಅವರು ವಿಶ್ವದ ಮೊದಲ ಟ್ರಿಲಿಯನೇರ್ ಎನಿಸಿದ್ದಾರೆ.

ಇದನ್ನೂ ಓದಿ: ಡೀಸಲ್ ಮತ್ತು ಜೆಟ್ ಇಂಧನದ ಮೇಲಿನ ರಫ್ತು ಸುಂಕ ಹೆಚ್ಚಳ; ಪೆಟ್ರೋಲ್ ರೀಟೇಲ್ ಬೆಲೆ ಮೇಲೆ ಪರಿಣಾಮ ಬೀರುತ್ತಾ?

ಸ್ಪೇಸ್‌ಎಕ್ಸ್‌ನ ಮೌಲ್ಯವು ಗಣನೀಯವಾಗಿ ಹೆಚ್ಚಾಗಿದ್ದು, ಇದು ಜಾಗತಿಕ ಟೆಕ್ ದೈತ್ಯ ಮೈಕ್ರೋಸಾಫ್ಟ್‌ನ ಮಾರುಕಟ್ಟೆ ಮೌಲ್ಯವನ್ನು ಮೀರಿಸುವ ಹಂತದಲ್ಲಿದೆ. ಇದು ಬಾಹ್ಯಾಕಾಶ ಉದ್ಯಮದಲ್ಲಿ ಸ್ಪೇಸ್‌ಎಕ್ಸ್‌ನ ಬಲವನ್ನು ತೋರಿಸುತ್ತದೆ. ಈ ಕಂಪನಿಯ ಮೌಲ್ಯ ಹೆಚ್ಚಾದ ಪರಿಣಾಮ, ಇಲಾನ್ ಮಸ್ಕ್ ಅವರ ವೈಯಕ್ತಿಕ ಸಂಪತ್ತು ಒಂದೇ ದಿನದಲ್ಲಿ ಅಸಾಧಾರಣ ಮಟ್ಟದಲ್ಲಿ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಮಸ್ಕ್ ಅವರ ಸಂಪತ್ತಿಗೆ ಸೇರ್ಪಡೆಯಾದ ಮೊತ್ತವು ಎಷ್ಟಿದೆಯೆಂದರೆ, ಅದು ಮೈಕ್ರೋಸಾಫ್ಟ್‌ನ ಸಹ-ಸ್ಥಾಪಕರಾದ ಬಿಲ್ ಗೇಟ್ಸ್ ಅವರ ಒಟ್ಟು ಸಂಪತ್ತಿಗಿಂತಲೂ ಹೆಚ್ಚಾಗಿದೆ. ವರದಿಗಳ ಪ್ರಕಾರ, ಇಲಾನ್ ಮಸ್ಕ್ ಅವರ ವೈಯಕ್ತಿಕ ಸಂಪತ್ತು ಒಂದು ದಿನದಲ್ಲಿ 165 ಬಿಲಿಯನ್ ಡಾಲರ್​ನಷ್ಟು ಹೆಚ್ಚಳ ಆಗಿದೆ. ವಾರನ್ ಬಫೆಟ್, ಬಿಲ್ ಗೇಟ್ಸ್ ಅವರಂತಹ ಗಣ್ಯರ ಒಟ್ಟಾರೆ ಸಂಪತ್ತಿಗಿಂತ ಇದು ಹೆಚ್ಚು. ಭಾರತದ ಮುಕೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಅವರ ಒಟ್ಟಾರೆ ಆಸ್ತಿಯನ್ನು ಸೇರಿಸಿದರೂ ಇಲಾನ್ ಮಸ್ಕ್ ಅವರ ಒಂದು ದಿನದ ಸಂಪತ್ತು ಹೆಚ್ಚಳಕ್ಕೆ ಸಮವಾಗಿಲ್ಲ ಎನ್ನುವುದು ಗಮನಾರ್ಹ.

ಇದನ್ನೂ ಓದಿ: ಇರಾನ್-ಅಮೆರಿಕ ಶಾಂತಿ ಒಪ್ಪಂದವು ಭಾರತಕ್ಕೆ ಖುಷಿ ವಿಚಾರವಲ್ಲ: ಮಾಜಿ ಇಸ್ರೇಲ್ ವಕ್ತಾರರ ಎಚ್ಚರಿಕೆ

ಫೋರ್ಬ್ಸ್ ಬಿಲಿಯನೇರ್ ಇಂಡೆಕ್ಸ್ ಪಟ್ಟಿ ಪ್ರಕಾರ, ಇಲಾನ್ ಮಸ್ಕ್ ಅವರ ವೈಯಕ್ತಿಕ ನಿವ್ವಳ ಆಸ್ತಿ ಮೌಲ್ಯ 1.3 ಟ್ರಿಲಿಯನ್ ಡಾಲರ್ ಇದೆ. ಇದರಲ್ಲಿ ಹೆಚ್ಚಿನ ಭಾಗವು ಸ್ಪೇಸ್​ಎಕ್ಸ್ ಷೇರು ಒಡೆತನದಿಂದ ಬಂದಿರುವಂಥದ್ದು. ಬಾಹ್ಯಾಕಾಶ ಕ್ಷೇತ್ರದಲ್ಲಿನ ಹೊಸ ತಂತ್ರಜ್ಞಾನ ಮತ್ತು ಸ್ಪೇಸ್‌ಎಕ್ಸ್‌ನ ಯಶಸ್ಸು ಹೂಡಿಕೆದಾರರಲ್ಲಿ ಭರವಸೆ ಮೂಡಿಸಿರುವುದರಿಂದ ಕಂಪನಿಯ ಮೌಲ್ಯದಲ್ಲಿ ಈ ಮಟ್ಟದ ಏರಿಕೆ ಕಂಡುಬಂದಿದೆ. ಇದರೊಟ್ಟಿಗೆ ಮಸ್ಕ್ ಅವರ ಸಿರಿತನವೂ ಹೆಚ್ಚಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link