Category Archives: Blog

Your blog category

ಷೇರುಪೇಟೆಯಲ್ಲಿ ಧೂಳೆಬ್ಬಿಸುತ್ತಿರುವ ಸ್ಪೇಸ್​ಎಕ್ಸ್; ಇಲಾನ್ ಮಸ್ಕ್ ಒಂದು ದಿನದಲ್ಲಿ ಗಳಿಸಿದ ಸಂಪತ್ತು ವಾರನ್ ಬಫೆಟ್​ನ ಒಟ್ಟೂ ಸಂಪತ್ತಿಗೆ ಸಮ – Kannada News | SpaceX Soars: Elon Musk Becomes First Trillionaire as Market Value Hits $3T

ವಾಷಿಂಗ್ಟನ್, ಜೂನ್ 16: ಇಲಾನ್ ಮಸ್ಕ್ ಅವರ ಸ್ಪೇಸ್-ಎಕ್ಸ್ (SpaceX) ಕಂಪನಿ ಷೇರು ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ. ಎರಡೇ ದಿನದಲ್ಲಿ ಅದು ಟಾಪ್-5 ಲಿಸ್ಟೆಡ್ ಕಂಪನಿಗಳ ಪಟ್ಟಿಗೆ ಜಂಪ್ ಮಾಡಿದೆ. ಐಪಿಒದಲ್ಲಿ ದಾಖಲೆಯ 137 ಡಾಲರ್ ಬೆಲೆಯಲ್ಲಿ ಮಾರುಕಟ್ಟೆಗೆ ಪದಾರ್ಪಣೆ ಮಾಡಿದ ಸ್ಪೇಸ್ ಎಕ್ಸ್ ಇದೀಗ 192 ಡಾಲರ್ ಬೆಲೆ ಪಡೆದಿದೆ. ಅದರ ಮಾರುಕಟ್ಟೆ ಸಂಪತ್ತು (Market Capital) 3 ಟ್ರಿಲಿಯನ್ ಡಾಲರ್ ಗಡಿ ದಾಟಿದೆ. ಮಾರುಕಟ್ಟೆಯ ಬ್ಲಾಕ್​ಬಸ್ಟರ್ ಕಂಪನಿಗಳಾದ ಎನ್​ವಿಡಿಯಾ (Nvidia), ಗೂಗಲ್, ಆ್ಯಪಲ್ ಮತ್ತು ಮೈಕ್ರೋಸಾಫ್ಟ್ ನಂತರದ ಸ್ಥಾನಕ್ಕೆ ಸ್ಪೇಸ್ ಎಕ್ಸ್ ಏರಿದೆ.

ಮಾರುಕಟ್ಟೆ ಮೌಲ್ಯವು ಭಾರೀ ಏರಿಕೆ ಕಂಡಿದ್ದು, ಈಗ ಅದು ಮೈಕ್ರೋಸಾಫ್ಟ್ ಕಂಪನಿಯ ಮೌಲ್ಯಕ್ಕೆ ಸನಿಹಕ್ಕೆ ಬಂದಿದೆ. ಈ ಬೆಳವಣಿಗೆಯಿಂದಾಗಿ ಮಸ್ಕ್ ಅವರ ಸಂಪತ್ತಿನಲ್ಲಿ ಒಂದೇ ದಿನದಲ್ಲಿ ಆದ ಹೆಚ್ಚಳವು ಬಿಲ್ ಗೇಟ್ಸ್ ಅವರ ಒಟ್ಟು ನಿವ್ವಳ ಆಸ್ತಿ ಮೌಲ್ಯಕ್ಕಿಂತಲೂ ಹೆಚ್ಚಾಗಿದೆ ಎಂದು ವರದಿಯಾಗಿದೆ. ಸ್ಪೇಸ್ ಎಕ್ಸ್ ಭರ್ಜರಿ ಪದಾರ್ಪಣೆ ಬೆನ್ನಲ್ಲೇ ಇಲಾನ್ ಮಸ್ಕ್ ಅವರು ವಿಶ್ವದ ಮೊದಲ ಟ್ರಿಲಿಯನೇರ್ ಎನಿಸಿದ್ದಾರೆ.

ಇದನ್ನೂ ಓದಿ: ಡೀಸಲ್ ಮತ್ತು ಜೆಟ್ ಇಂಧನದ ಮೇಲಿನ ರಫ್ತು ಸುಂಕ ಹೆಚ್ಚಳ; ಪೆಟ್ರೋಲ್ ರೀಟೇಲ್ ಬೆಲೆ ಮೇಲೆ ಪರಿಣಾಮ ಬೀರುತ್ತಾ?

ಸ್ಪೇಸ್‌ಎಕ್ಸ್‌ನ ಮೌಲ್ಯವು ಗಣನೀಯವಾಗಿ ಹೆಚ್ಚಾಗಿದ್ದು, ಇದು ಜಾಗತಿಕ ಟೆಕ್ ದೈತ್ಯ ಮೈಕ್ರೋಸಾಫ್ಟ್‌ನ ಮಾರುಕಟ್ಟೆ ಮೌಲ್ಯವನ್ನು ಮೀರಿಸುವ ಹಂತದಲ್ಲಿದೆ. ಇದು ಬಾಹ್ಯಾಕಾಶ ಉದ್ಯಮದಲ್ಲಿ ಸ್ಪೇಸ್‌ಎಕ್ಸ್‌ನ ಬಲವನ್ನು ತೋರಿಸುತ್ತದೆ. ಈ ಕಂಪನಿಯ ಮೌಲ್ಯ ಹೆಚ್ಚಾದ ಪರಿಣಾಮ, ಇಲಾನ್ ಮಸ್ಕ್ ಅವರ ವೈಯಕ್ತಿಕ ಸಂಪತ್ತು ಒಂದೇ ದಿನದಲ್ಲಿ ಅಸಾಧಾರಣ ಮಟ್ಟದಲ್ಲಿ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಮಸ್ಕ್ ಅವರ ಸಂಪತ್ತಿಗೆ ಸೇರ್ಪಡೆಯಾದ ಮೊತ್ತವು ಎಷ್ಟಿದೆಯೆಂದರೆ, ಅದು ಮೈಕ್ರೋಸಾಫ್ಟ್‌ನ ಸಹ-ಸ್ಥಾಪಕರಾದ ಬಿಲ್ ಗೇಟ್ಸ್ ಅವರ ಒಟ್ಟು ಸಂಪತ್ತಿಗಿಂತಲೂ ಹೆಚ್ಚಾಗಿದೆ. ವರದಿಗಳ ಪ್ರಕಾರ, ಇಲಾನ್ ಮಸ್ಕ್ ಅವರ ವೈಯಕ್ತಿಕ ಸಂಪತ್ತು ಒಂದು ದಿನದಲ್ಲಿ 165 ಬಿಲಿಯನ್ ಡಾಲರ್​ನಷ್ಟು ಹೆಚ್ಚಳ ಆಗಿದೆ. ವಾರನ್ ಬಫೆಟ್, ಬಿಲ್ ಗೇಟ್ಸ್ ಅವರಂತಹ ಗಣ್ಯರ ಒಟ್ಟಾರೆ ಸಂಪತ್ತಿಗಿಂತ ಇದು ಹೆಚ್ಚು. ಭಾರತದ ಮುಕೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಅವರ ಒಟ್ಟಾರೆ ಆಸ್ತಿಯನ್ನು ಸೇರಿಸಿದರೂ ಇಲಾನ್ ಮಸ್ಕ್ ಅವರ ಒಂದು ದಿನದ ಸಂಪತ್ತು ಹೆಚ್ಚಳಕ್ಕೆ ಸಮವಾಗಿಲ್ಲ ಎನ್ನುವುದು ಗಮನಾರ್ಹ.

ಇದನ್ನೂ ಓದಿ: ಇರಾನ್-ಅಮೆರಿಕ ಶಾಂತಿ ಒಪ್ಪಂದವು ಭಾರತಕ್ಕೆ ಖುಷಿ ವಿಚಾರವಲ್ಲ: ಮಾಜಿ ಇಸ್ರೇಲ್ ವಕ್ತಾರರ ಎಚ್ಚರಿಕೆ

ಫೋರ್ಬ್ಸ್ ಬಿಲಿಯನೇರ್ ಇಂಡೆಕ್ಸ್ ಪಟ್ಟಿ ಪ್ರಕಾರ, ಇಲಾನ್ ಮಸ್ಕ್ ಅವರ ವೈಯಕ್ತಿಕ ನಿವ್ವಳ ಆಸ್ತಿ ಮೌಲ್ಯ 1.3 ಟ್ರಿಲಿಯನ್ ಡಾಲರ್ ಇದೆ. ಇದರಲ್ಲಿ ಹೆಚ್ಚಿನ ಭಾಗವು ಸ್ಪೇಸ್​ಎಕ್ಸ್ ಷೇರು ಒಡೆತನದಿಂದ ಬಂದಿರುವಂಥದ್ದು. ಬಾಹ್ಯಾಕಾಶ ಕ್ಷೇತ್ರದಲ್ಲಿನ ಹೊಸ ತಂತ್ರಜ್ಞಾನ ಮತ್ತು ಸ್ಪೇಸ್‌ಎಕ್ಸ್‌ನ ಯಶಸ್ಸು ಹೂಡಿಕೆದಾರರಲ್ಲಿ ಭರವಸೆ ಮೂಡಿಸಿರುವುದರಿಂದ ಕಂಪನಿಯ ಮೌಲ್ಯದಲ್ಲಿ ಈ ಮಟ್ಟದ ಏರಿಕೆ ಕಂಡುಬಂದಿದೆ. ಇದರೊಟ್ಟಿಗೆ ಮಸ್ಕ್ ಅವರ ಸಿರಿತನವೂ ಹೆಚ್ಚಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Video: ನೀನು ಸತ್ತಿಲ್ಲ ಏಳು, ಎದೆಗವಚಿ ಮರಿಗೆ ಮುತ್ತಿಡುತ್ತಾ, ಸತ್ತ ಮರಿಗೆ ಜೀವ ತುಂಬಲು ಯತ್ನಿಸುತ್ತಿರುವ ತಾಯಿ ಮಂಗ – Kannada News | Emotional Scene Captured as Mother Monkey Refuses to Leave Her Lifeless Infant

ಔರೈಯಾ, ಜೂನ್ 16: ನೀನು ಸತ್ತಿಲ್ಲ ಏಳು, ಎದೆಗವಚಿ ಮರಿಗೆ ಮುತ್ತಿಡುತ್ತಾ, ಸತ್ತ ಮರಿಗೆ ತಾಯಿ ಮಂಗ ಜೀವ ತುಂಬಲು ಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಔರೈಯಾದಲ್ಲಿ ನಡೆದಿದೆ. ಮರಿಯನ್ನು ಬಿಗಿಯಾಗಿ ಅಪ್ಪಿಕೊಂಡಿರುವ ಕೋತಿ(Monkey) ಸತ್ತ ಪರಿಯನ್ನು ಬಿಟ್ಟು ಹೋಗುಲು ಸಿದ್ಧಳಿಲ್ಲ. ವೈರಲ್ ಆಗಿರುವ ದೃಶ್ಯಾವಳಿಯಲ್ಲಿ, ಹೆಣ್ಣು ಕೋತಿಯು ತನ್ನ ಸತ್ತ ಮರಿಯ ದೇಹವನ್ನು ಎದೆಯ ಮೇಲೆ ಮಲಗಿಸಿಕೊಂಡಿರುವುದು ಕಂಡುಬಂದಿದೆ.

ಆ ಮರಿಗೆ ಮತ್ತೆ ಜೀವ ಬರಬಹುದು ಎಂಬ ಆಶಯದಿಂದ ತಾಯಿ ಮಂಗವು ಪದೇ ಪದೇ ಮರಿಯ ಮುಖಕ್ಕೆ ಮುತ್ತಿಡುತ್ತಾ, ಅದನ್ನು ನೆಕ್ಕುತ್ತಾ ಎಬ್ಬಿಸಲು ಪ್ರಯತ್ನಿಸುತ್ತಿದೆ. ಮರಿ ಕೋತಿಯು ಹೇಗೆ ಸಾವನ್ನಪ್ಪಿದೆ ಎಂಬುದು ತಿಳಿದುಬಂದಿಲ್ಲವಾದರೂ, ತಾಯಿಯ ಈ ತವಕ ನೋಡುಗರ ಕಣ್ಣಾಲಿಗಳನ್ನು ಒದ್ದೆಯಾಗಿಸುತ್ತಿದೆ.

ವಿಡಿಯೋ

ಉಮೇಶ್ ಅವಸ್ಥಿ ಎಂಬ ಬಳಕೆದಾರರು ಈ ವಿಡಿಯೋವನ್ನು ಎಕ್ಸ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ತಾಯಿಯ ವಾತ್ಸಲ್ಯ ಮತ್ತು ಅಗಲಿಕೆಯ ನೋವು ಕೇವಲ ಮನುಷ್ಯರಿಗಷ್ಟೇ ಅಲ್ಲ, ಜಗತ್ತಿನ ಎಲ್ಲಾ ಜೀವಿಗಳಿಗೂ ಒಂದೇ ಆಗಿರುತ್ತದೆ ಎಂಬುದಕ್ಕೆ ಈ ದೃಶ್ಯವೇ ಸಾಕ್ಷಿ ಎಂದು ಅವರು ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: Video: ಗೊಂಬೆಯೇ ಈ ಕೋತಿ ಮರಿಯ ಕುಟುಂಬ, ಬೇರೆ ಕೋತಿಗಳು ಕೊಡುವ ಕಾಟ ನೋಡಿದ್ರೆ ನಿಮ್ಮ ಕಣ್ಣಲ್ಲೂ ನೀರು ಬರುತ್ತೆ

ಈ ವೀಡಿಯೋ ಪ್ರಾಣಿ ಪ್ರಪಂಚದಲ್ಲಿರುವ ತಾಯ್ತನದ ನೈಜ ಪ್ರವೃತ್ತಿಯನ್ನು ಜಗತ್ತಿಗೆ ಪರಿಚಯಿಸಿದೆ. ಯಾವುದೇ ಪ್ರಾಣಿಯಾದರೂ ಹೆತ್ತ ಕರುಳಿನ ಬಾಂಧವ್ಯ ಎಷ್ಟು ಪವಿತ್ರ ಮತ್ತು ಸಾರ್ವತ್ರಿಕ ಎಂಬುದನ್ನು ಈ ವಿಡಿಯೋ ಎಲ್ಲರಿಗೂ ನೆನಪಿಸುವಂತಿದೆ.

ಇತ್ತೀಚೆಗಷ್ಟೇ ಕೋತಿಯೊಂದು ನಾಯಿ ಮರಿಯನ್ನು ಎತ್ತಿಕೊಂಡು ಹೋಗಿ 15 ನಿಮಿಷಗಳ ಕಾಲ ಮರದ ಮೇಲೆ ಕುಳಿತಿರುವ ವಿಡಿಯೋ ವೈರಲ್ ಆಗಿತ್ತು. ಹಾಗೆಯೇ ಮೆಟ್ರೋ ನಿಲ್ದಾಣವೊಂದರಲ್ಲಿ ಕೋತಿಯೊಂದು ತನ್ನ ಮರಿಯ ಅವಶೇಷಗಳನ್ನು ಹಿಡಿದುಕೊಂಡು ಅದಿನ್ನು ಬದುಕಿದೆ ಎಂಬ ಭ್ರಮೆಯಲ್ಲಿದ್ದ ವಿಡಿಯೋ ಕೂಡ ಕಾಣಿಸಿಕೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸುರ್ಜೇವಾಲ ಸಂಧಾನ ಸಕ್ಸಸ್​​: 13 ದಿನಗಳ ನಂತರ ಖಾತೆ ವಹಿಸಿಕೊಂಡ ಕೃಷ್ಣ ಭೈರೇಗೌಡ – Kannada News | Minister Krishna Byre Gowda Takes Charge of Bengaluru Urban Development, Chairs GBA Meeting.

ಬೆಂಗಳೂರು, ಜೂನ್​​ 16: 13 ದಿನಗಳ ಅಸಮಾಧಾನದ ನಂತರ ಸಚಿವ ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಖಾತೆ ಹಂಚಿಕೆಯಲ್ಲಿ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರು ಬೇಸರಗೊಂಡಿದ್ದರು. ಆದರೆ ಸಚಿವರ ಮುನಿಸನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಕಾಂಗ್ರೆಸ್​​ ಉಸ್ತುವಾರಿಯಾಗಿರುವ ಸುರ್ಜೇವಾಲ ತಣಿಸಿದ್ದಾರೆ. ಈ ಬೆನ್ನಲ್ಲೇ ಜಿಬಿಎ ಕೇಂದ್ರ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿಯೇ ಮೊದಲ ಸಭೆಯನ್ನು ಸಚಿವ ಕೃಷ್ಣ ಭೈರೇಗೌಡ ನಡೆಸಿದ್ದಾರೆ. ಈ ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರಿನ ಐದು ಪಾಲಿಕೆಗಳ ಆಯುಕ್ತರು ಹಾಗೂ ಮುಖ್ಯ ಇಂಜಿನಿಯರ್‌ಗಳು ಭಾಗವಹಿಸಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರಲ್ಲಿ ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಉಗಾಂಡಾ ಮಹಿಳೆ ಸೇರಿ ಮೂವರ ಬಂಧನ – Kannada News | Bengaluru Drug Bust: Rs 5.67 Crore Hydro Ganja and Cocaine Seized in Three Separate Raids; Ugandan Woman Arrested

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 2.77 ಕೋಟಿ ರೂ. ಮೌಲ್ಯದ ಗಾಂಜಾ ಸೀಜ್Image Credit source: tv9

ಬೆಂಗಳೂರು, ಜೂನ್ 16: ಬೆಂಗಳೂರಿನಲ್ಲಿ (Bengaluru) ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಹಾಗೂ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಕೊಕೇನ್ ಜಪ್ತಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಡ್ರಗ್ಸ್ ಡೀಲಿಂಗ್‌ನಲ್ಲಿ ತೊಡಗಿದ್ದ ಉಗಾಂಡಾ ಮೂಲದ ಮಹಿಳಾ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಕೋಟ್ಯಂತರ ಮೌಲ್ಯದ ಮಾದಕ ದ್ರವ್ಯ ಜಪ್ತಿ.
  • ಉಗಾಂಡಾ ಮಹಿಳೆ ಸೇರಿ ಮೂವರು ಪೆಡ್ಲರ್‌ಗಳ ಸೆರೆ.
  • ಬ್ಯಾಂಕಾಕ್ ಮತ್ತು ನಾಸಿಕ್‌ನಿಂದ ಸರಬರಾಜಾಗುತ್ತಿದ್ದ ಡ್ರಗ್ಸ್.

ಹೆಬ್ಬಾಳದಲ್ಲಿ 2.20 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಸೀಜ್

ನಗರದ ಹೆಬ್ಬಾಳ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಹೈಡ್ರೋ ಗಾಂಜಾ ಡೀಲಿಂಗ್‌ನಲ್ಲಿ ನಿರತನಾಗಿದ್ದ ಹಳೆ ಆರೋಪಿ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ 2.20 ಕೋಟಿ ರೂಪಾಯಿ ಮೌಲ್ಯದ 3 ಕೆಜಿ 180 ಗ್ರಾಂ ತೂಕದ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಇಮ್ರಾನ್ ಈ ಮಾದಕ ವಸ್ತುವನ್ನು ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ತರುತ್ತಿದ್ದ ಎನ್ನಲಾಗಿದ್ದು, ಈತನ ಮೇಲೆ ಈಗಾಗಲೇ ನಗರದ ಬೇರೆ ಬೇರೆ ಪೊಲೀಸ್ ಸ್ಟೇಷನ್‌ಗಳಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 2.77 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಥಾಯ್ಲೆಂಡ್‌ನ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನ ಲಗೇಜ್ ಬ್ಯಾಗ್‌ಗಳನ್ನು ತಪಾಸಣೆ ನಡೆಸಿದಾಗ 2.77 ಕೋಟಿ ರೂಪಾಯಿ ಮೌಲ್ಯದ 7.92 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಅಧಿಕಾರಿಗಳು ಗಾಂಜಾವನ್ನು ಜಪ್ತಿ ಮಾಡಿ, ಪ್ರಯಾಣಿಕನನ್ನು ವಶಕ್ಕೆ ಪಡೆದು ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಸಿಸಿಬಿ ಬಲೆಯಲ್ಲಿ ಉಗಾಂಡಾ ಮೂಲದ ಮಹಿಳಾ ಪೆಡ್ಲರ್

ಮತ್ತೊಂದು ಪ್ರಮುಖ ಕಾರ್ಯಾಚರಣೆಯಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಚಿಕ್ಕಬಾಣಾವರದಲ್ಲಿ ದಾಳಿ ನಡೆಸಿ 70.50 ಲಕ್ಷ ರೂಪಾಯಿ ಮೌಲ್ಯದ 130 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ. ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಜನತ್ ಮತ್ತು ಡ್ರಗ್ಸ್ ರಿಸೀವರ್ ವಾಹಬ್ ಎಲ್ವಿಸ್ ಯುನಿಸ್ ಎಂಬಿಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ: 13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, 6 ಮಂದಿಯ ಬಂಧನ

ಆರೋಪಿ ವಾಹಬ್ ಯಶವಂತಪುರ ಮತ್ತು ಗೊರಗುಂಟೆಪಾಳ್ಯ ಸುತ್ತಮುತ್ತ ಡ್ರಗ್ಸ್ ಡೀಲಿಂಗ್ ಮಾಡುತ್ತಿದ್ದ. ಬಂಧಿತ ಮಹಿಳೆ ಜನತ್ ಬಿಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಪೆಡ್ಲಿಂಗ್ ದಂಧೆ ಆರಂಭಿಸಿದ್ದಳು. ಈಕೆ ಈ ಹಿಂದೆ ದೆಹಲಿಯಲ್ಲೂ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು 5 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಳು ಎಂಬುದು ಬೆಳಕಿಗೆ ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಮಂತಾ ಹೂಡಿಕೆ ಮಾಡಿರುವ ಉದ್ಯಮಗಳ ಸಂಪೂರ್ಣ ಮಾಹಿತಿ – Kannada News | Samantha Ruth Prabhu’s investments detail and their current situation

ಸಮಂತಾ (Samantha), ಸ್ಟಾರ್ ನಟಿ ಮಾತ್ರವಲ್ಲ ಒಳ್ಳೆಯ ಉದ್ಯಮಿಯೂ ಸಹ. ಕಳೆದ ಐದಾರು ವರ್ಷಗಳಲ್ಲಿ ಅವರು ಒಂದರ ಹಿಂದೆ ಒಂದರಂತೆ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ಅವರ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆ ಆಗುತ್ತಿದೆ. ಕೆಲ ತಿಂಗಳ ಹಿಂದೆ ಸಮಂತಾ ಪಾಲ್ಗೊಂಡಿದ್ದ ಸಂದರ್ಶನವೊಂದರಲ್ಲಿ ತಮ್ಮ ಉದ್ಯಮಗಳ ಬಗ್ಗೆ ವಿವರವಾಗಿ ಮಾತನಾಡಿದ್ದರು. ಉದ್ಯಮಗಳನ್ನು ಆರಂಭಿಸಿದ್ದು ಯಾವಾಗ ಮತ್ತು ಅವು ಹೇಗೆ ನಡೆಯುತ್ತಿವೆ ಎಂಬಿತ್ಯಾದಿ ವಿವರಗಳನ್ನು ಸಮಂತಾ ಋತ್ ಪ್ರಭು ಹಂಚಿಕೊಂಡಿದ್ದರು.

ಸಮಂತಾ ಅವರು ‘ಸಾಖಿ’ ಹೆಸರಿನ ಉಡುಪು ಬ್ರ್ಯಾಂಡ್​​ನಲ್ಲಿ ಕೋವಿಡ್ ಪ್ರಾರಂಭಕ್ಕೆ ಕೆಲ ತಿಂಗಳುಗಳ ಹಿಂದೆಯೇ ಹೂಡಿಕೆ ಮಾಡಿದರು. ಅವರೇ ಹೇಳಿಕೊಂಡಿರುವಂತೆ ಅದು ಅವರ ಮೊದಲ ಗಂಭೀರ ಹೂಡಿಕೆ. ಸ್ವಂತ ಹಣವನ್ನು ಆ ಉದ್ಯಮದಲ್ಲಿ ಅವರು ತೊಡಗಿಸಿದರಂತೆ. ಆರಂಭದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾದರೂ ಬಳಿಕ ಅದು ಲಾಭದ ಕಡೆಗೆ ಸಾಗಿತಂತೆ. ಈಗಲೂ ಅದು ಚೆನ್ನಾಗಿ ನಡೆಯುತ್ತಿದೆ ಎಂದಿದ್ದಾರೆ ಸಮಂತಾ.

ಸಮಂತಾ ಸೆಲೆಬ್ರಿಟಿ ಆಗಿದ್ದರೂ ಅವರು ಶಿಕ್ಷಣ ಕ್ಷೇತ್ರದಲ್ಲೂ ಹೂಡಿಕೆ ಮಾಡಿದ್ದಾರೆ. ಏಕಂ ಲರ್ನಿಂಗ್ ಸೆಂಟರ್ ಹೆಸರಿನ ಟ್ರೈನಿಂಗ್ ಉದ್ಯಮದಲ್ಲಿ ಅವರು ಪಾಲುದಾರರು. ಸಮಂತಾ ಹೇಳಿರುವಂತೆ ಅವರ ತಾಯಿ ಶಿಕ್ಷಕಿ ಆಗಿದ್ದರಂತೆ ಹಾಗಾಗಿ ಶಿಕ್ಷಣದ ಮೇಲೆ ಅವರಿಗೆ ಮೊದಲಿನಿಂದಲೂ ಆಸಕ್ತಿ ಹಾಗಾಗಿ ಅವರು ಏಕಂನಲ್ಲಿ ಹೂಡಿಕೆ ಮಾಡಿದರಂತೆ.

ಇದನ್ನೂ ಓದಿ:‘ಮಾ ಇಂಟಿ ಬಂಗಾರಂ’: ಗೆಲ್ಲಲೇ ಬೇಕಾದ ಒತ್ತಡದಲ್ಲಿ ಸಮಂತಾ

ಅರ್ಬನ್ ಕಿಸಾನ್ ಹೆಸರಿನ ಸಂಸ್ಥೆಯಲ್ಲಿ ಸಮಂತಾ ಹೂಡಿಕೆ ಮಾಡಿದ್ದಾರೆ. ಇದು ಅಪಾರ್ಟ್​​ಮೆಂಟ್​​ಗಳಲ್ಲಿ ಅಥವಾ ನಗರ ಪ್ರದೇಶದ ಕಡಿಮೆ ಸ್ಥಳದಲ್ಲಿ ತರಕಾರಿ ಇನ್ನಿತರೆ ಪದಾರ್ಥಗಳನ್ನು ಬೆಳೆಸುವ ಹಾಗೂ ಬೆಳೆಯುವುದನ್ನು ಹೇಳಿಕೊಡುವ ಸಂಸ್ಥೆಯಾಗಿದೆ. ಕೋವಿಡ್ ಸಮಯದಲ್ಲಿ ಈ ಸಂಸ್ಥೆಯಲ್ಲಿ ಸಮಂತಾ ಹೂಡಿಕೆ ಮಾಡಿದ್ದು, ಈ ಸಂಸ್ಥೆ ಇದೇ ವರ್ಷ ತನ್ನ ಐಪಿಓ ಸಹ ಬಿಡುಗಡೆ ಮಾಡಲಿದೆಯಂತೆ.

ಸೀಕ್ರೆಟ್ ಅಲ್ಕೆಮಿಸ್ಟ್ ಎಂಬ ಸಂಸ್ಥೆಯಲ್ಲಿಯೂ ಸಮಂತಾ ಹೂಡಿಕೆ ಮಾಡಿದ್ದಾರೆ. ಸಮಂತಾ ಅವರು ಆರೋಗ್ಯ ಸಮಸ್ಯೆ ಎದುರಿಸಿದ್ದಾಗ ಅವರು ವಿದೇಶಗಳಿಗೆ ಚಿಕಿತ್ಸೆಗೆ ಹೋದಾಗ ಅಲ್ಲೆಲ್ಲ ಅರೋಮಾ ಥೆರಪಿ ಬಳಸುತ್ತಿದ್ದಿದ್ದನ್ನು ಗಮನಿಸಿದರಂತೆ. ಭಾರತದಲ್ಲಿ ಇದರ ಬಗ್ಗೆ ಹೆಚ್ಚು ಮಾಹಿತಿ, ಜಾಗೃತಿ ಇಲ್ಲವೆಂದು ತಿಳಿದು ಆ ಸಂಸ್ಥೆಯ ಮೇಲೆ ನಟಿ ಸಮಂತಾ ಹೂಡಿಕೆ ಮಾಡಿದ್ದಾರೆ.

ಚೆನ್ನೈ ಸೂಪರ್ ಚಾಂಪ್ಸ್ ಹೆಸರಿನ ಪಿಕಲ್ ಬಾಲ್ ತಂಡವನ್ನು ಸಮಂತಾ ಖರೀದಿಸಿದ್ದಾರೆ. ಪಿಕಲ್ ಬಾಲ್​​ ಕ್ರೀಡೆಯ ಮೇಲೆ ಸಾಕಷ್ಟು ಹೂಡಿಕೆ ಮಾಡಿರುವ ಸಮಂತಾ. ಆಟವನ್ನು ಹೆಚ್ಚು ಪ್ರಮೋಟ್ ಮಾಡುತ್ತಿದ್ದಾರೆ. ಸ್ವಂತ ತಂಡವನ್ನೂ ಹೊಂದಿದ್ದಾರೆ. ಇದರ ಜೊತೆಗೆ ‘ಟೇಕ್ 20’ ಹೆಸರಿನ ಯೂಟ್ಯೂಬ್ ಚಾನೆಲ್ ಹೋಂದಿರುವ ಸಮಂತಾ, ಅಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ 20 ನಿಮಿಷಗಳ ಕಂಟೆಂಟ್ ಅಪ್​​ಲೋಡ್ ಮಾಡುತ್ತಿರುತ್ತಾರೆ.

ಟ್ರಾಲಾಲಾ ಪ್ರೊಡಕ್ಷನ್ ಹೌಸ್ ಅನ್ನು ಸಹ ಸಮಂತಾ ಪ್ರಾರಂಭಿಸಿದ್ದು, ಆ ಪ್ರೊಡಕ್ಷನ್ ಹೌಸ್ ಮೂಲಕ ‘ಶುಭಂ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದರು. ಅದು ಅವರ ಮೊದಲ ನಿರ್ಮಾಣದ ಸಿನಿಮಾ ಆಗಿತ್ತು. ಈಗ ‘ಮಾ ಇಂಟಿ ಬಂಗಾರಂ’ ಸಿನಿಮಾವನ್ನೂ ಸಹ ಅದೇ ನಿರ್ಮಾಣ ಸಂಸ್ಥೆಯ ಮೂಲಕ ಸಹ ನಿರ್ಮಾಣ ಮಾಡುತ್ತಿದ್ದಾರೆ. ಇವುಗಳ ಜೊತೆಗೆ ಪ್ರತ್ಯುಷಾ ಫೌಂಡೇಶನ್ ಅನ್ನು ಸಮಂತಾ ಅವರು 2012-13 ರಲ್ಲಿ ಪ್ರಾರಂಭಿಸಿದರಂತೆ. ಅನಾಥ ಮಕ್ಕಳು ಮತ್ತು ಮಹಿಳೆಯರ ಪೋಷಣೆಗಾಗಿ ಈ ಫೌಂಡೇಶನ್ ಅನ್ನು ಸಮಂತಾ ಪ್ರಾರಂಭಿಸಿದರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Financial Stress: ಇಎಂಐ ಮತ್ತು ಸಾಲದ ಹೊರೆಯಿಂದ ಕಂಗಾಲಾಗಿದ್ದೀರಾ? ಮಂಗಳವಾರ ಈ ಒಂದು ಕೆಲಸ ಮಾಡಿ – Kannada News | Financial Peace: Angaraka Stotra Solution for Debt and Loan EMI Stress

ಇಂದಿನ ಆಧುನಿಕ ಜೀವನದಲ್ಲಿ ಹೋಮ್ ಲೋನ್​, ವೈಯಕ್ತಿಕ ಸಾಲ (Personal Loan), ಮತ್ತು ಕ್ರೆಡಿಟ್ ಕಾರ್ಡ್ ಇಎಂಐಗಳ ಸುಳಿಗೆ ಸಿಲುಕದವರೇ ಇಲ್ಲ. ಈ ಸಾಲದ ಕಂತುಗಳು ಕೇವಲ ಜೇಬಿಗೆ ಕತ್ತರಿ ಹಾಕುವುದು ಮಾತ್ರವಲ್ಲದೆ, ತೀವ್ರ ಮಾನಸಿಕ ಅಶಾಂತಿ ಮತ್ತು ಕೌಟುಂಬಿಕ ಒತ್ತಡಕ್ಕೂ ಕಾರಣವಾಗುತ್ತವೆ. ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಕಠಿಣ ಪರಿಶ್ರಮದ ಜೊತೆಗೆ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪರಿಹಾರಗಳ ಮೊರೆ ಹೋಗುವವರಿಗಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಒಂದು ವಿಶೇಷ ಮಾರ್ಗವನ್ನು ಸೂಚಿಸಲಾಗಿದೆ. ಅದೇ ‘ಋಣ ವಿಮೋಚನ ಅಂಗಾರಕ ಸ್ತೋತ್ರ’.

ಸಾಲ ಪರಿಹಾರಕ್ಕೆ ಮಂಗಳವಾರದ ಮಹತ್ವ:

ಸನಾತನ ಸಂಪ್ರದಾಯದಲ್ಲಿ ಮಂಗಳವಾರವನ್ನು ಸಂಕಟಹರ ಹನುಮಂತ ಮತ್ತು ಮಂಗಳ ಗ್ರಹದ (ಕುಜ) ಪೂಜೆಗೆ ಅತ್ಯಂತ ಶ್ರೇಷ್ಠ ದಿನವೆಂದು ಪರಿಗಣಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜಾತಕದಲ್ಲಿ ಮಂಗಳ ಗ್ರಹವು ಅಶುಭ ಸ್ಥಾನದಲ್ಲಿದ್ದರೆ ಅಥವಾ ದುರ್ಬಲನಾಗಿದ್ದರೆ, ಆ ವ್ಯಕ್ತಿ ಸಾಲದ ಸುಳಿಯಲ್ಲಿ ಸಿಲುಕುತ್ತಾನೆ ಮತ್ತು ಆರ್ಥಿಕ ನಷ್ಟಗಳನ್ನು ಅನುಭವಿಸುತ್ತಾನೆ. ಅಂತಹ ಸಂದರ್ಭಗಳಲ್ಲಿ ಹನುಮಂತನನ್ನು ಹಾಗೂ ಮಂಗಳ ದೇವನನ್ನು ಆರಾಧಿಸುವುದರಿಂದ ಜಾತಕದಲ್ಲಿನ ಕುಜ ದೋಷದ ನಕಾರಾತ್ಮಕ ಪ್ರಭಾವಗಳು ಕಡಿಮೆಯಾಗುತ್ತವೆ ಎಂದು ನಂಬಲಾಗಿದೆ.

ಋಣ ಮುಕ್ತಿ ಅಂಗಾರಕ ಸ್ತೋತ್ರದ ಶಕ್ತಿ:

‘ಋಣ ವಿಮೋಚನ ಅಂಗಾರಕ ಸ್ತೋತ್ರ’ ಅಥವಾ ‘ಋಣ ಮಂಗಳ ಮುಕ್ತಿ ಸ್ತೋತ್ರ’ವು ಆರ್ಥಿಕ ಸಂಕಷ್ಟಗಳನ್ನು ದೂರ ಮಾಡುವಲ್ಲಿ ಅತ್ಯಂತ ಪರಿಣಾಮಕಾರಿ ಎಂದು ನಂಬಲಾಗಿದೆ. ಹನುಮಂತ ಮತ್ತು ಮಂಗಳ ಗ್ರಹಕ್ಕೆ ಸಮರ್ಪಿತವಾಗಿರುವ ಈ ಸ್ತೋತ್ರವನ್ನು ಭಕ್ತಿಯಿಂದ ಪಠಿಸುವುದರಿಂದ ಸಾಲದ ಹೊರೆ ತ್ವರಿತವಾಗಿ ಕರಗುತ್ತದೆ, ನಕಾರಾತ್ಮಕ ಶಕ್ತಿಗಳು ದೂರವಾಗುತ್ತವೆ ಮತ್ತು ಜೀವನದಲ್ಲಿ ಧನಾತ್ಮಕ ಬದಲಾವಣೆಗಳು ಕಂಡುಬರುತ್ತವೆ ಎಂಬುದು ಭಕ್ತರ ದೃಢ ವಿಶ್ವಾಸವಾಗಿದೆ.

ಇದನ್ನೂ ಓದಿ: ಫ್ಯಾಶನ್​​ಗಾಗಿ ವಜ್ರ ಧರಿಸುವ ಮುನ್ನ ಎಚ್ಚರ! ಈ ರಾಶಿಯವರು ವಜ್ರ ಧರಿಸಿದರೆ ಕಷ್ಟ ತಪ್ಪಿದ್ದಲ್ಲ!

ಸ್ತೋತ್ರ ಪಠಿಸುವ ಸರಿಯಾದ ವಿಧಾನ:

  • ಈ ಸಾಲ ವಿಮೋಚನಾ ಸ್ತೋತ್ರವನ್ನು ಪ್ರತಿದಿನ ಅಥವಾ ಕನಿಷ್ಠ ಪ್ರತಿ ಮಂಗಳವಾರದಂದಾದರೂ ನಿಯಮಬದ್ಧವಾಗಿ ಪಠಿಸಬೇಕು.
  • ಮುಂಜಾನೆ ಸ್ನಾನ ಮಾಡಿದ ನಂತರ, ಶುಚಿಯಾದ ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಬೇಕು.
  • ಪೂಜಾ ಕೋಣೆಯಲ್ಲಿ ಕೆಂಪು ಆಸನದ ಮೇಲೆ ಕುಳಿತು ಹನುಮಂತನಿಗೆ ಮತ್ತು ಮಂಗಳ ದೇವನಿಗೆ ದೀಪ ಬೆಳಗಿ ಆರಾಧಿಸಬೇಕು.
  • ತದನಂತರ ಪೂರ್ಣ ಶ್ರದ್ಧೆಯಿಂದ ಈ ಅಂಗಾರಕ ಸ್ತೋತ್ರವನ್ನು ಕನಿಷ್ಠ 11 ಬಾರಿ ಪಠಿಸುವುದು ಒಳ್ಳೆಯದು.
  • ಹೆಚ್ಚಿನ ಫಲಿತಾಂಶಕ್ಕಾಗಿ ಈ ನಿಯಮವನ್ನು ಸತತವಾಗಿ 21 ಅಥವಾ 40 ದಿನಗಳವರೆಗೆ ನಿರಂತರವಾಗಿ ಪಾಲಿಸಲು ಸಲಹೆ ನೀಡಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಟಿಟಿಯಲ್ಲಿ ಸದ್ದು ಮಾಡುತ್ತಿದೆ ‘ರಾಖ್’ ವೆಬ್ ಸರಣಿ; ಸರಣಿ ನೋಡಿದ್ರೆ ಮೈ ನಡುಗುತ್ತೆ – Kannada News | Raakh Web Series: Unearthing The Chilling 1978 Ranga Billa True Crime On Amazon Prime

ಸಸ್ಪೆನ್ಸ್ ಹಾಗೂ ಕ್ರೈಂ ಥ್ರಿಲ್ಲರ್ ಕಥೆಗಳನ್ನು ನೋಡುವು ಎಂದರೆ ಒಂದು ವರ್ಗದ ಜನರಿಗೆ ಸದಾ ಇಷ್ಟ ಆಗುತ್ತದೆ. ಇವುಗಳಲ್ಲಿ ಬಹುತೇಕವು ಕಾಲ್ಪನಿಕ ಕಥೆ. ಆದರೆ, ಈಗ ನೈಜ ಘಟನೆ ಆಧಾರಿತ ಸರಣಿ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಈ ವೆಬ್ ಸರಣಿ ಹೆಸರು ರಾಖ್. ಬಿಡುಗಡೆಯಾದ ದಿನದಿಂದಲೇ ಈ ಸರಣಿ ತನ್ನ ವಿಭಿನ್ನ ಕಥಾಹಂದರ ಹಾಗೂ ರೋಚಕ ತಿರುವುಗಳಿಂದ ಪ್ರೇಕ್ಷಕರ ಗಮನ ಸೆಳೆದಿದೆ.

ಈ ಸರಣಿಯು ಕೇವಲ ಕಾಲ್ಪನಿಕ ಕಥೆಯಲ್ಲ, ಬದಲಿಗೆ ಇಡೀ ಭಾರತವನ್ನೇ ನಡುಗಿಸಿದ್ದ ಅತ್ಯಂತ ಘೋರವಾದ ನೈಜ ಕ್ರಿಮಿನಲ್ ಘಟನೆಯೊಂದನ್ನು ಆಧರಿಸಿದೆ. 1978ರಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ನಡೆದಿದ್ದ ‘ರಂಗಾ-ಬಿಲ್ಲಾ’ ಅಪಹರಣ ಮತ್ತು ಕೊಲೆ ಪ್ರಕರಣದ ಕರಾಳ ಹಿನ್ನೆಲೆಯನ್ನು ಈ ಸರಣಿ ಹೊಂದಿದೆ.

1978ರ ಆಗಸ್ಟ್ 26ರಂದು ದೆಹಲಿಯಲ್ಲಿ ಭಾರತೀಯ ನೌಕಾಪಡೆಯ ಹಿರಿಯ ಅಧಿಕಾರಿ ಕ್ಯಾಪ್ಟನ್ ಮದನ್ ಮೋಹನ್ ಚೋಪ್ರಾ ಅವರ ಮಕ್ಕಳಾದ ಗೀತಾ ಚೋಪ್ರಾ (16) ಮತ್ತು ಸಂಜಯ್ ಚೋಪ್ರಾ (14) ಎಂಬ ಇಬ್ಬರು ಅಪ್ರಾಪ್ತ ಸಹೋದರ-ಸಹೋದರಿ ರೇಡಿಯೋ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮನೆ ಬಿಟ್ಟಿದ್ದರು. ದಾರಿಯಲ್ಲಿ ಅವರಿಗೆ ಲಿಫ್ಟ್ ಕೊಡುವ ನೆಪದಲ್ಲಿ ಕುಲಜೀತ್ ಸಿಂಗ್ ಅಲಿಯಾಸ್ ರಂಗಾ ಮತ್ತು ಜಸ್ಬೀರ್ ಸಿಂಗ್ ಅಲಿಯಾಸ್ ಬಿಲ್ಲಾ ಎಂಬ ಇಬ್ಬರು ಕ್ರೂರ ಅಪರಾಧಿಗಳು ಕಾರಿನಲ್ಲಿ ಅಪಹರಿಸಿದ್ದರು. ಅವರನ್ನು ಕೊಲೆ ಕೂಡ ಮಾಡಿದ್ದರು. ಈ ಘಟನೆ ಇಡೀ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ತದನಂತರ ಭಾರಿ ಕಾರ್ಯಾಚರಣೆಯ ಮೂಲಕ ರಂಗಾ ಮತ್ತು ಬಿಲ್ಲಾನನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಈ ಕಾರ್ಯಚಾರಣೆಯ ಕಥೆಯೇ ‘ರಾಖ್’.

‘ರಾಖ್’ ಎಂದರೆ ಹಿಂದಿಯಲ್ಲಿ ‘ಬೂದಿ’ ಎಂದರ್ಥ. ಹೆಸರೇ ಸೂಚಿಸುವಂತೆ ಈ ಸರಣಿಯು ಸೇಡು, ಅಪರಾಧ ಸುತ್ತ ಸುತ್ತುತ್ತದೆ. ನಿರ್ದೇಶಕ ಪ್ರೋಸಿತ್ ರಾಯ್ ಈ ಕರಾಳ ಸತ್ಯ ಘಟನೆಯನ್ನು ಆಧರಿಸಿಯೇ ಈ ಸರಣಿಯನ್ನು ರೂಪಿಸಿದ್ದು, ಕಥೆಯಲ್ಲಿ ಪಾತ್ರಗಳ ಹೆಸರನ್ನು ಬದಲಾಯಿಸಲಾಗಿದೆ.

ಇದನ್ನೂ ಓದಿ: ಈ ವಾರ ಒಟಿಟಿಗೆ ಬಂದಿವೆ ಜಬರ್ದಸ್ಥ್ ಸಿನಿಮಾಗಳು, ಪಟ್ಟಿ ಇಲ್ಲಿದೆ

ತಾಂತ್ರಿಕತೆ ಮತ್ತು ನಟನೆ

ಈ ಸರಣಿಗೆ ಪ್ರಮುಖ ಪ್ಲಸ್ ಪಾಯಿಂಟ್ ಎಂದರೆ ಅದರ ಸಿನೆಮಾಟೋಗ್ರಫಿ ಹಾಗೂ ಸೆಟ್. 1978ರ ಕಾಲಘಟ್ಟವನ್ನು ಕಣ್ಣಿಗೆ ಕಟ್ಟುವಂತೆ ತೋರಿಸಲಾಗಿದೆ. ಕ್ರೈಮ್ ಶೈಲಿಯ ಅದರಲ್ಲೂ ರಿಯಲ್ ಕಥೆ ಇಷ್ಟಪಡುವವರಾಗಿದ್ದರೆ, ಅಮೆಜಾನ್ ಪ್ರೈಮ್‌ನಲ್ಲಿ ಸ್ಟ್ರೀಮ್ ಆಗುತ್ತಿರುವ ‘ರಾಖ್’ ವೆಬ್ ಸರಣಿ ನಿಮಗೆ ಖಂಡಿತ ಒಂದು ಉತ್ತಮ ಆಯ್ಕೆ. ಈ ಸರಣಿಯಲ್ಲಿ ಪೊಲೀಸ್ ಅಧಿಕಾರಿಯಾಗಿ ಅಲಿ ಫಜಲ್ ಗಮನ ಸೆಳೆಯುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ವನ್ಯಜೀವಿ ಬೇಟೆ: ಗೋವಾ ಸರ್ಕಾರಿ ನೌಕರನ ಬಂಧನ, ನಾಲ್ವರು ಪರಾರಿ – Kannada News | Kali Tiger Reserve Poaching: Goa Government Employee Arrested for Wildlife Hunting in Karnataka; 4 Absconding

ಬಂಧಿತ ಆರೋಪಿ ದಿಗಂಬರ್ ಗಾವ್ಡೆImage Credit source: The New Indian Express

ಬೆಂಗಳೂರು, ಜೂನ್ 16: ಕರ್ನಾಟಕ-ಗೋವಾ ಗಡಿಭಾಗದ ಕಾಳಿ ಹುಲಿ ಸಂರಕ್ಷಿತಾರಣ್ಯದ (Kali Tiger Reserve) ವ್ಯಾಪ್ತಿಯಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಜಾಲವನ್ನು ಭೇದಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಗೋವಾ ಸರ್ಕಾರದ ಸಾರಿಗೆ ಸಂಸ್ಥೆಯ ನೌಕರನೊಬ್ಬನನ್ನು ಬಂಧಿಸಿದ್ದಾರೆ. ಜೊಯಿಡಾ ತಾಲೂಕಿನ ಡಿಗ್ಗಿ ಸಮೀಪದ ಬೊಂಡೇಲಿ ಗ್ರಾಮದಲ್ಲಿ ಭಾನುವಾರ ಈ ಕಾರ್ಯಾಚರಣೆ ನಡೆದಿದೆ. ಬೇಟೆಗೆ ಸಹಕರಿಸಿದ ಸ್ಥಳೀಯ ಶೂಟರ್ ಹಾಗೂ ಗೋವಾದ ಮತ್ತಿಬ್ಬರು ಭದ್ರತಾ ಏಜೆನ್ಸಿ ಸಿಬ್ಬಂದಿ ಸೇರಿದಂತೆ ನಾಲ್ವರು ಆರೋಪಿಗಳು ಸದ್ಯ ತಲೆಮರೆಸಿಕೊಂಡಿದ್ದಾರೆ.

ಮುಖ್ಯಾಂಶಗಳು

  • ಕಾಳಿ ಅರಣ್ಯದಲ್ಲಿ ವನ್ಯಜೀವಿ ಬೇಟೆಯಾಡುತ್ತಿದ್ದ ಜಾಲ ಭೇದಿಸಿದ ಅರಣ್ಯ ಇಲಾಖೆ.
  • ಗೋವಾ ಸಾರಿಗೆ ಸಂಸ್ಥೆಯ ಮೆಕ್ಯಾನಿಕ್ ಬಂಧನ.
  • ಮರಬೆಕ್ಕು ಹಾಗೂ ಇತರ ಮಾಂಸ ವಶ.

ಬಂಧಿತ ಆರೋಪಿಯನ್ನು ಗೋವಾ ಸರ್ಕಾರಿ ಸ್ವಾಮ್ಯದ ಕದಂಬ ಸಾರಿಗೆ ಸಂಸ್ಥೆಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿರುವ ಜಯೇಂದ್ರ ದಿಗಂಬರ್ ಗಾವ್ಡೆ (45) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಸಿಬ್ಬಂದಿ ಈತನ ಹೆಡೆಮುರಿ ಕಟ್ಟಿದ್ದಾರೆ. ಇದೇ ವೇಳೆ ಕುಂಬಾರವಾಡ ವಲಯದ ಅರಣ್ಯ ಸಿಬ್ಬಂದಿ, ಬೇಟೆಗೆ ಬಳಸಲಾದ ಬಂದೂಕಿನ ಮಾಲೀಕ ಎನ್ನಲಾದ ಸುಭಾಷ್ ಮಿರಾಶಿ ಎಂಬಾತನ ಮನೆ ಮೇಲೆ ದಾಳಿ ನಡೆಸಿದ್ದು, ಆತನೂ ಸೇರಿದಂತೆ ಉಳಿದ ಮೂವರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.

ನಿಷೇಧಿತ ವನ್ಯಜೀವಿಗಳ ಮಾಂಸ, ಬಂದೂಕು ವಶ

ದಾಳಿಯ ವೇಳೆ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಶೆಡ್ಯೂಲ್-II ರ ಅಡಿಯಲ್ಲಿ ಸಂರಕ್ಷಿತ ಪ್ರಭೇದವಾಗಿರುವ ಮರಬೆಕ್ಕಿನ (Palm Civet) ಕಳೇಬರವನ್ನು ವಶಪಡಿಸಿಕೊಂಡಿದ್ದಾರೆ. ಇದನ್ನು ಬಂದೂಕಿನಿಂದ ಶೂಟ್ ಮಾಡಿ ಕೊಲ್ಲಲಾಗಿತ್ತು. ಇದರೊಂದಿಗೆ ಉಡ ಹಾಗೂ ಕಸ್ತೂರಿ ಜಿಂಕೆ ಎಂದು ಶಂಕಿಸಲಾದ ಮತ್ತೊಂದು ಪ್ರಾಣಿಯ ಮಾಂಸವನ್ನು ವಶಕ್ಕೆ ಪಡೆಯಲಾಗಿದ್ದು, ನಿಖರ ಮಾಹಿತಿ ಪತ್ತೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬೇಟೆಗೆ ಬಳಸಿದ್ದ ಬಂದೂಕನ್ನು ಸಹ ಜಪ್ತಿ ಮಾಡಲಾಗಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಗೋವಾ ಗಡಿಗೆ ತೀರಾ ಹತ್ತಿರದಲ್ಲಿರುವ ಕೇವಲ 60 ಮನೆಗಳಿರುವ ಬೊಂಡೇಲಿ ಗ್ರಾಮವು ಅಕ್ರಮ ಬೇಟೆಗಾರರ ತಾಣವಾಗುತ್ತಿದೆ ಎಂದು ವನ್ಯಜೀವಿ ಕಾರ್ಯಕರ್ತರು ಕಳವಳ ವ್ಯಕ್ತಪಡಿಸಿರುವುದಾಗಿಯೂ ವರದಿ ಉಲ್ಲೇಖಿಸಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪೈಕಿ ಮತ್ತೊಬ್ಬ ಗೋವಾ ಸರ್ಕಾರಿ ನೌಕರನೂ ಸೇರಿದ್ದಾನೆ ಎನ್ನಲಾಗಿದೆ. ಗೋವಾದ ಪ್ರಭಾವಿ ವ್ಯಕ್ತಿಗಳಿಂದ ಈ ಪ್ರಕರಣವನ್ನು ಹಳ್ಳ ಹಿಡಿಸಲು ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿದ್ದು, ಗಡಿ ದಾಟಿ ಬಂದು ಸ್ಥಳೀಯರ ಸಹಾಯದಿಂದ ಜಿಂಕೆ, ಉಡಗಳನ್ನು ಬೇಟೆಯಾಡುವ ಅಂತರರಾಜ್ಯ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ – Kannada News | Government Suspends Telegram Access Ahead of NEET Re Exam to Curb Malpractice

ನವದೆಹಲಿ, ಜೂನ್ 16: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET-UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ‘ಟೆಲಿಗ್ರಾಮ್’ (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ.

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ನೀಡಿರುವ ಅಧಿಕೃತ ನಿರ್ದೇಶನದ ಪ್ರಕಾರ, ಭಾರತದಲ್ಲಿ ಜೂನ್ 22, 2026 ರವರೆಗೆ ಟೆಲಿಗ್ರಾಮ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ. ಜೂನ್ 21 ರಂದು ದೇಶಾದ್ಯಂತ ಬಿಗಿಯಾದ ಭದ್ರತೆಯೊಂದಿಗೆ ನೀಟ್ (UG) ಮರು ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅಥವಾ ಪ್ರಶ್ನೆಪತ್ರಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸೋರಿಕೆಯಾಗದಂತೆ ತಡೆಯಲು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ನೀಟ್ ಪರೀಕ್ಷೆಯನ್ನು ನಡೆಸುವ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಕೇಂದ್ರ ಸರ್ಕಾರದ ಈ ತ್ವರಿತ ಮತ್ತು ಕಠಿಣ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದೆ. ಈ ತಾತ್ಕಾಲಿಕ ನಿಷೇಧವು ಪರೀಕ್ಷೆಯ ನ್ಯಾಯಸಮ್ಮತತೆಯನ್ನು ಕಾಪಾಡಲು ಮತ್ತು ದೇಶದ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗದಂತೆ ತಡೆಯಲು ನೆರವಾಗಲಿದೆ ಎಂದು ಎನ್‌ಟಿಎ ತಿಳಿಸಿದೆ.

ಮತ್ತಷ್ಟು ಓದಿ: ‘ಎರಡು ವರ್ಷದ ಶ್ರಮ ವ್ಯರ್ಥವಾಯಿತು’: ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ

ಜೂನ್ 21 ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ವದಂತಿಗಳು ಹರಡದಂತೆ ತಡೆಯಲು ಕೇಂದ್ರ ಸರ್ಕಾರವು ಮುಂಜಾಗ್ರತಾ ಕ್ರಮವಾಗಿ ಜೂನ್ 22 ರವರೆಗೆ ಭಾರತದಲ್ಲಿ ಟೆಲಿಗ್ರಾಮ್ ಆಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ.

ಭಾರತದಲ್ಲಿ ಟೆಲಿಗ್ರಾಂ ಬಳಸುತ್ತಿರುವವರು ಎಷ್ಟು ಮಂದಿ?

ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಸರಿಸುಮಾರು 10 ಕೋಟಿಗೂ ಹೆಚ್ಚು ಮಂದಿ ಟೆಲಿಗ್ರಾಂ ಸಕ್ರಿಯ ಬಳಕೆದಾರರಿದ್ದಾರೆ. ಜಾಗತಿಕವಾಗಿ ಟೆಲಿಗ್ರಾಮ್ ಆಪ್ ಡೌನ್‌ಲೋಡ್ ಆಗುವ ಒಟ್ಟು ಪ್ರಮಾಣದಲ್ಲಿ ಸುಮಾರು ಶೇ. 22 ರಷ್ಟು ಪಾಲು ಭಾರತದ್ದೇ ಆಗಿದೆ. ಭಾರತದ ಇಂಟರ್ನೆಟ್ ಬಳಕೆದಾರರಲ್ಲಿ ಶೇ. 39 ರಷ್ಟು ಜನರು ವಿವಿಧ ಅಗತ್ಯಗಳಿಗಾಗಿ ಟೆಲಿಗ್ರಾಮ್ ಅನ್ನು ಬಳಸುತ್ತಾರೆ.

ಈ ತಾತ್ಕಾಲಿಕ ನಿಷೇಧದಿಂದಾಗಿ ಸಾಮಾನ್ಯ ಬಳಕೆದಾರರಿಗೆ ಕೆಲವು ದಿನಗಳ ಕಾಲ ತೊಂದರೆಯಾಗಲಿದ್ದರೂ, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಪರೀಕ್ಷೆಯ ಭದ್ರತೆಯ ಹಿತದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿತ್ತು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಿಳಿಸಿದೆ.

ಎಡಿಟಿಂಗ್ ವೈಶಿಷ್ಟ್ಯದ ಮೇಲೂ ನಿರ್ಬಂಧ: ಟೆಲಿಗ್ರಾಮ್ ಆಪ್ ಮೇಲಿನ ನಿಷೇಧ ಜೂನ್ 22ಕ್ಕೆ ಮುಗಿದರೂ, ಜೂನ್ 30ರವರೆಗೆ ಭಾರತದಲ್ಲಿ ಈ ಮೆಸೇಜ್ ಎಡಿಟಿಂಗ್ ವೈಶಿಷ್ಟ್ಯವನ್ನು ನಿಷ್ಕ್ರಿಯಗೊಳಿಸುವಂತೆ (Disable) ಟೆಲಿಗ್ರಾಮ್ ಸಂಸ್ಥೆಗೆ ಸರ್ಕಾರ ಆದೇಶಿಸಿದೆ.

ಟೆಲಿಗ್ರಾಮ್‌ನಲ್ಲಿ ಹಳೆಯ ಸಂದೇಶಗಳ ಸಮಯವನ್ನು (Timestamp) ಬದಲಾಯಿಸದೆ, ಅವುಗಳ ಒಳಗಿನ ಪಠ್ಯವನ್ನು ಎಡಿಟ್ ಮಾಡಬಹುದು. ಪರೀಕ್ಷೆ ಮುಗಿದ ನಂತರ ಹಳೆಯ ಮೆಸೇಜ್‌ಗಳನ್ನು ಎಡಿಟ್ ಮಾಡಿ, ತಮಗೆ ಪರೀಕ್ಷೆಗೂ ಮುನ್ನವೇ ಪ್ರಶ್ನೆಪತ್ರಿಕೆ ಸಿಕ್ಕಿತ್ತು ಎಂದು ಸುಳ್ಳು ಪುರಾವೆಗಳನ್ನು ಸೃಷ್ಟಿಸಿ ಪ್ರಶ್ನೆಪತ್ರಿಕೆ ಸೋರಿಕೆ (Paper Leak) ವದಂತಿಗಳನ್ನು ಹರಡಲು ಈ ವೈಶಿಷ್ಟ್ಯವನ್ನು ಬಳಸಲಾಗುತ್ತಿತ್ತು. ಇದನ್ನು ತಡೆಯಲು ಸರ್ಕಾರ ಈ ನಿರ್ಧಾರ ಮಾಡಿದೆ.

ನೀಟ್ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ತಾವೇ ಮೊದಲು ನೀಡುವುದಾಗಿ ಹೇಳಿ ಕೆಲವು ವಂಚಕರ ಜಾಲಗಳು ಟೆಲಿಗ್ರಾಮ್ ಚಾನೆಲ್‌ಗಳ ಮೂಲಕ ಅಭ್ಯರ್ಥಿಗಳು ಹಾಗೂ ಅವರ ಪೋಷಕರಿಂದ ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದವು. ಇಂತಹ ವಂಚನೆಗಳನ್ನು ತಡೆಯಲು ಸರ್ಕಾರ ಮುಂದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:06 am, Tue, 16 June 26

Source link

ಪಾಕಿಸ್ತಾನ್ ತಂಡದ ‘ಆಯ್ಕೆ ಮತ್ತು ವೇತನ’ ವ್ಯವಸ್ಥೆಯೇ ಬದಲು..! – Kannada News | PCB’s New Format Based Contract System

ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತನ್ನ ಆಟಗಾರರ ಆಯ್ಕೆ ಮತ್ತು ಸೆಂಟ್ರಲ್ ಕಾಂಟ್ರಾಕ್ಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ಇದುವರೆಗೆ ಚಾಲ್ತಿಯಲ್ಲಿದ್ದ ಸಾಂಪ್ರದಾಯಿಕ ‘A ಇಂದ D ಗ್ರೇಡ್’ ಶ್ರೇಣೀಕೃತ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, ಅದರ ಜಾಗದಲ್ಲಿ ಆಟಗಾರರು ಆಡುವ ಕ್ರಿಕೆಟ್ ಸ್ವರೂಪಗಳನ್ನು ಆಧರಿಸಿದ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಕ್ರಿಕೆಟ್‌ನಲ್ಲಿ ಹೆಚ್ಚುತ್ತಿರುವ ಟಿ20 ಫ್ರಾಂಚೈಸಿ ಲೀಗ್‌ಗಳ ಹಾವಳಿ ಮತ್ತು ಟೆಸ್ಟ್ ಕ್ರಿಕೆಟ್‌ಗೆ ಉಂಟಾಗುತ್ತಿರುವ ಹಿನ್ನಡೆಯನ್ನು ತಡೆಯಲು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

 ನಾಲ್ಕು ‘ಒಪ್ಪಂದ’:

ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಹೊಸ ನಿಯಮದ ಪ್ರಕಾರ, ಆಟಗಾರರನ್ನು ಯಾವುದೇ ಸಾಮಾನ್ಯ ಗ್ರೇಡ್‌ಗಳಲ್ಲಿ ಗುರುತಿಸದೆ, ಅವರು ಆಡುವ ಕ್ರಿಕೆಟ್ ಮಾದರಿಯ ಆಧಾರದ ಮೇಲೆ ನಾಲ್ಕು ಪ್ರತ್ಯೇಕ ಟ್ರ್ಯಾಕ್‌ಗಳಾಗಿ ವಿಂಗಡಿಸಲಾಗಿದೆ.

  • ಟ್ರ್ಯಾಕ್ A (ಟೆಸ್ಟ್): ಇದು ಕೇವಲ ಟೆಸ್ಟ್ ಕ್ರಿಕೆಟ್ ಆಡುವ ಆಟಗಾರರಿಗಾಗಿ ಮೀಸಲಾದ ಟ್ರ್ಯಾಕ್. ಟೆಸ್ಟ್ ಕ್ರಿಕೆಟ್‌ಗೆ ಹೆಚ್ಚಿನ ಆದ್ಯತೆ ನೀಡಲು ಈ ಆಟಗಾರರಿಗೆ ಗರಿಷ್ಠ ಆರ್ಥಿಕ ಪ್ರೋತ್ಸಾಹ ಧನ ನೀಡಲಾಗುತ್ತದೆ. ಆದರೆ, ಇವರು ಜಾಗತಿಕ ಟಿ20 ಫ್ರಾಂಚೈಸಿ ಲೀಗ್‌ಗಳಲ್ಲಿ ಆಡಲು ಕಠಿಣ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ.
  • ಟ್ರ್ಯಾಕ್ AB (ದ್ವಿ ಸ್ವರೂಪ): ಟೆಸ್ಟ್ ಮತ್ತು ಏಕದಿನ ಎರಡೂ ಮಾದರಿಯ ಕ್ರಿಕೆಟ್ ಆಡುವ ಆಟಗಾರರು ಈ ಟ್ರ್ಯಾಕ್‌ಗೆ ಒಳಪಡುತ್ತಾರೆ.
  • ಟ್ರ್ಯಾಕ್ BC (ಸೀಮಿತ ಓವರ್‌ಗಳ ಸ್ವರೂಪ): ಏಕದಿನ ಮತ್ತು ಟಿ20 ಅಂತರರಾಷ್ಟ್ರೀಯ ಪಂದ್ಯಗಳ ಮೇಲೆ ಮಾತ್ರ ಗಮನ ಹರಿಸುವ ಆಟಗಾರರನ್ನು ಈ ಗುಂಪಿಗೆ ಸೇರಿಸಲಾಗುತ್ತದೆ.
  • ಟ್ರ್ಯಾಕ್ D (ಟಿ20): ಕೇವಲ ಟಿ20 ಸ್ವರೂಪಗಳಲ್ಲಿ ಆಡುವ ಆಟಗಾರರು ಈ ಒಪ್ಪಂದದಲ್ಲಿ ಒಳಪಡಲಿದ್ದಾರೆ.  ಇವರಿಗೆ ಮಂಡಳಿಯಿಂದ ಸಿಗುವ ವಾರ್ಷಿಕ ಸಂಭಾವನೆ ಕಡಿಮೆಯಿದ್ದರೂ, ವಿಶ್ವದಾದ್ಯಂತ ನಡೆಯುವ ಟಿ20 ಲೀಗ್‌ಗಳಲ್ಲಿ ಆಡಲು ಇವರಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಲಾಗುತ್ತದೆ.

ಆಯ್ಕೆ ವ್ಯವಸ್ಥೆಯಲ್ಲೂ ಬದಲಾವಣೆ:

ಈ ಹೊಸ ಒಪ್ಪಂದ ವ್ಯವಸ್ಥೆಯು ಕೇವಲ ಹಣಕಾಸಿನ ಬದಲಾವಣೆಯಷ್ಟೇ ಅಲ್ಲದೆ, ಪಾಕಿಸ್ತಾನ ಕ್ರಿಕೆಟ್‌ನ ಆಡಳಿತ ಶೈಲಿಯನ್ನೇ ಬದಲಿಸುವ ನಿಟ್ಟಿನಲ್ಲಿ ಕೆಲವು ಕಠಿಣ ನಿಯಮಗಳನ್ನು ಒಳಗೊಂಡಿದೆ.

  • ಶೇ. 85 ರಷ್ಟು ಡೇಟಾ ಆಧಾರಿತ ಆಯ್ಕೆ: ಆಟಗಾರರ ಆಯ್ಕೆ ಮತ್ತು ಒಪ್ಪಂದ ಪ್ರಕ್ರಿಯೆಯಲ್ಲಿ ಪಕ್ಷಪಾತವನ್ನು ತಪ್ಪಿಸಲು ಶೇ. 85 ರಷ್ಟು ನಿರ್ಧಾರಗಳನ್ನು ಸಂಪೂರ್ಣವಾಗಿ ಕಂಪ್ಯೂಟರೈಸ್ಡ್ ತಂತ್ರಜ್ಞಾನ ಮತ್ತು ಆಟಗಾರರ ಅಂಕಿ-ಅಂಶಗಳ ಆಧಾರದ ಮೇಲೆ ತೆಗೆದುಕೊಳ್ಳಲಾಗುತ್ತದೆ. ಉಳಿದ ಶೇ. 15 ರಷ್ಟು ಮಾತ್ರ ರಾಷ್ಟ್ರೀಯ ಆಯ್ಕೆಗಾರರ ಶಿಫಾರಸಿಗೆ ಬಿಡಲಾಗುತ್ತದೆ.
  • ದೇಶಿ ಕ್ರಿಕೆಟ್ ಕಡ್ಡಾಯ: ಕೇಂದ್ರ ಒಪ್ಪಂದವನ್ನು ಪಡೆಯಲು ಆಟಗಾರರು ಪಾಕಿಸ್ತಾನದ ಸ್ಥಳೀಯ ದೇಶಿ ಕ್ರಿಕೆಟ್ ಪಂದ್ಯಗಳಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ದೇಶಿ ಪಂದ್ಯಗಳಿಂದ ದೂರ ಉಳಿಯುವ ಆಟಗಾರರ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸಲಾಗುತ್ತದೆ.
  •  ಸಂಪೂರ್ಣ ಗೌಪ್ಯತೆ: ಯಾವ ಆಟಗಾರ ಯಾವ ಟ್ರ್ಯಾಕ್‌ನಲ್ಲಿದ್ದಾರೆ ಮತ್ತು ಅವರಿಗೆ ಸಿಗುವ ಒಟ್ಟು ಸಂಭಾವನೆ ಎಷ್ಟು ಎಂಬ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸದೆ ಗೌಪ್ಯವಾಗಿಡಲು ಪಿಸಿಬಿ ತೀರ್ಮಾನಿಸಿದೆ. ಇದರಿಂದ ಆಟಗಾರರ ಮೇಲಿನ ಅನಗತ್ಯ ಸಾಮಾಜಿಕ ಮಾಧ್ಯಮಗಳ ಒತ್ತಡ ಕಡಿಮೆಯಾಗಲಿದೆ ಎಂಬುದು ಮಂಡಳಿಯ ಆಶಯ.
  •  ಮಂಡಳಿಯದ್ದೇ ಅಂತಿಮ ನಿರ್ಧಾರ: ಆಟಗಾರರು ತಮಗೆ ಇಷ್ಟ ಬಂದ ಟ್ರ್ಯಾಕ್ ಅನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿಲ್ಲ. ತಂಡದ ಅಗತ್ಯಕ್ಕೆ ತಕ್ಕಂತೆ ಮಂಡಳಿಯೇ ಆಟಗಾರರನ್ನು ಆಯಾ ಟ್ರ್ಯಾಕ್‌ಗಳಿಗೆ ನಿಯೋಜಿಸುತ್ತದೆ.

ಇದನ್ನೂ ಓದಿ: ಕೊಡಗಿನಲ್ಲಿ ಫುಟ್​ಬಾಲ್ ಕ್ರೇಝ್: ತಲೆ ಎತ್ತಿ ನಿಂತ ಕ್ರಿಸ್ಟಿಯಾನೊ ರೊನಾಲ್ಡೊ!

ಒಟ್ಟಿನಲ್ಲಿ ಟಿ20 ಲೀಗ್‌ಗಳ ಆಕರ್ಷಣೆಯಿಂದಾಗಿ ಆಟಗಾರರು ದೇಶಿ ಕ್ರಿಕೆಟ್ ಮತ್ತು ಟೆಸ್ಟ್ ಮಾದರಿಯನ್ನು ನಿರ್ಲಕ್ಷಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೊಸ ಹೆಜ್ಜೆಯನ್ನಿಟ್ಟಿದೆ. ಈ ಮೂಲಕ ಹಣಕಾಸಿನ ಭದ್ರತೆಯೊಂದಿಗೆ ಪ್ರತಿಭೆ ಮತ್ತು ಯೋಗ್ಯತೆಗೆ ತಕ್ಕಂತೆ ಆಟಗಾರರನ್ನು ಗೌರವಿಸುವ ಈ ‘ಮಾದರಿ ಆಧಾರಿತ ವ್ಯವಸ್ಥೆ’ ಪರಿಚಯಿಸಲು ಮುಂದಾಗಿದೆ.

Source link