Headlines

ಬೆಂಗಳೂರಲ್ಲಿ ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಉಗಾಂಡಾ ಮಹಿಳೆ ಸೇರಿ ಮೂವರ ಬಂಧನ – Kannada News | Bengaluru Drug Bust: Rs 5.67 Crore Hydro Ganja and Cocaine Seized in Three Separate Raids; Ugandan Woman Arrested

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 2.77 ಕೋಟಿ ರೂ. ಮೌಲ್ಯದ ಗಾಂಜಾ ಸೀಜ್Image Credit source: tv9 ಬೆಂಗಳೂರು, ಜೂನ್ 16: ಬೆಂಗಳೂರಿನಲ್ಲಿ (Bengaluru) ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಹಾಗೂ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಕೊಕೇನ್ ಜಪ್ತಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಡ್ರಗ್ಸ್ ಡೀಲಿಂಗ್‌ನಲ್ಲಿ ತೊಡಗಿದ್ದ ಉಗಾಂಡಾ ಮೂಲದ ಮಹಿಳಾ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ….

Read More

ಸಮಂತಾ ಹೂಡಿಕೆ ಮಾಡಿರುವ ಉದ್ಯಮಗಳ ಸಂಪೂರ್ಣ ಮಾಹಿತಿ – Kannada News | Samantha Ruth Prabhu’s investments detail and their current situation

ಸಮಂತಾ (Samantha), ಸ್ಟಾರ್ ನಟಿ ಮಾತ್ರವಲ್ಲ ಒಳ್ಳೆಯ ಉದ್ಯಮಿಯೂ ಸಹ. ಕಳೆದ ಐದಾರು ವರ್ಷಗಳಲ್ಲಿ ಅವರು ಒಂದರ ಹಿಂದೆ ಒಂದರಂತೆ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ಅವರ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆ ಆಗುತ್ತಿದೆ. ಕೆಲ ತಿಂಗಳ ಹಿಂದೆ ಸಮಂತಾ ಪಾಲ್ಗೊಂಡಿದ್ದ ಸಂದರ್ಶನವೊಂದರಲ್ಲಿ ತಮ್ಮ ಉದ್ಯಮಗಳ ಬಗ್ಗೆ ವಿವರವಾಗಿ ಮಾತನಾಡಿದ್ದರು. ಉದ್ಯಮಗಳನ್ನು ಆರಂಭಿಸಿದ್ದು ಯಾವಾಗ ಮತ್ತು ಅವು ಹೇಗೆ ನಡೆಯುತ್ತಿವೆ ಎಂಬಿತ್ಯಾದಿ ವಿವರಗಳನ್ನು ಸಮಂತಾ ಋತ್ ಪ್ರಭು ಹಂಚಿಕೊಂಡಿದ್ದರು. ಸಮಂತಾ ಅವರು ‘ಸಾಖಿ’…

Read More

Financial Stress: ಇಎಂಐ ಮತ್ತು ಸಾಲದ ಹೊರೆಯಿಂದ ಕಂಗಾಲಾಗಿದ್ದೀರಾ? ಮಂಗಳವಾರ ಈ ಒಂದು ಕೆಲಸ ಮಾಡಿ – Kannada News | Financial Peace: Angaraka Stotra Solution for Debt and Loan EMI Stress

ಇಂದಿನ ಆಧುನಿಕ ಜೀವನದಲ್ಲಿ ಹೋಮ್ ಲೋನ್​, ವೈಯಕ್ತಿಕ ಸಾಲ (Personal Loan), ಮತ್ತು ಕ್ರೆಡಿಟ್ ಕಾರ್ಡ್ ಇಎಂಐಗಳ ಸುಳಿಗೆ ಸಿಲುಕದವರೇ ಇಲ್ಲ. ಈ ಸಾಲದ ಕಂತುಗಳು ಕೇವಲ ಜೇಬಿಗೆ ಕತ್ತರಿ ಹಾಕುವುದು ಮಾತ್ರವಲ್ಲದೆ, ತೀವ್ರ ಮಾನಸಿಕ ಅಶಾಂತಿ ಮತ್ತು ಕೌಟುಂಬಿಕ ಒತ್ತಡಕ್ಕೂ ಕಾರಣವಾಗುತ್ತವೆ. ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಕಠಿಣ ಪರಿಶ್ರಮದ ಜೊತೆಗೆ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪರಿಹಾರಗಳ ಮೊರೆ ಹೋಗುವವರಿಗಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಒಂದು ವಿಶೇಷ ಮಾರ್ಗವನ್ನು ಸೂಚಿಸಲಾಗಿದೆ. ಅದೇ ‘ಋಣ ವಿಮೋಚನ ಅಂಗಾರಕ ಸ್ತೋತ್ರ’. ಸಾಲ…

Read More

ಒಟಿಟಿಯಲ್ಲಿ ಸದ್ದು ಮಾಡುತ್ತಿದೆ ‘ರಾಖ್’ ವೆಬ್ ಸರಣಿ; ಸರಣಿ ನೋಡಿದ್ರೆ ಮೈ ನಡುಗುತ್ತೆ – Kannada News | Raakh Web Series: Unearthing The Chilling 1978 Ranga Billa True Crime On Amazon Prime

ಸಸ್ಪೆನ್ಸ್ ಹಾಗೂ ಕ್ರೈಂ ಥ್ರಿಲ್ಲರ್ ಕಥೆಗಳನ್ನು ನೋಡುವು ಎಂದರೆ ಒಂದು ವರ್ಗದ ಜನರಿಗೆ ಸದಾ ಇಷ್ಟ ಆಗುತ್ತದೆ. ಇವುಗಳಲ್ಲಿ ಬಹುತೇಕವು ಕಾಲ್ಪನಿಕ ಕಥೆ. ಆದರೆ, ಈಗ ನೈಜ ಘಟನೆ ಆಧಾರಿತ ಸರಣಿ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಈ ವೆಬ್ ಸರಣಿ ಹೆಸರು ರಾಖ್. ಬಿಡುಗಡೆಯಾದ ದಿನದಿಂದಲೇ ಈ ಸರಣಿ ತನ್ನ ವಿಭಿನ್ನ ಕಥಾಹಂದರ ಹಾಗೂ ರೋಚಕ ತಿರುವುಗಳಿಂದ ಪ್ರೇಕ್ಷಕರ ಗಮನ ಸೆಳೆದಿದೆ. ಈ ಸರಣಿಯು ಕೇವಲ ಕಾಲ್ಪನಿಕ ಕಥೆಯಲ್ಲ, ಬದಲಿಗೆ ಇಡೀ ಭಾರತವನ್ನೇ…

Read More

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ವನ್ಯಜೀವಿ ಬೇಟೆ: ಗೋವಾ ಸರ್ಕಾರಿ ನೌಕರನ ಬಂಧನ, ನಾಲ್ವರು ಪರಾರಿ – Kannada News | Kali Tiger Reserve Poaching: Goa Government Employee Arrested for Wildlife Hunting in Karnataka; 4 Absconding

ಬಂಧಿತ ಆರೋಪಿ ದಿಗಂಬರ್ ಗಾವ್ಡೆImage Credit source: The New Indian Express ಬೆಂಗಳೂರು, ಜೂನ್ 16: ಕರ್ನಾಟಕ-ಗೋವಾ ಗಡಿಭಾಗದ ಕಾಳಿ ಹುಲಿ ಸಂರಕ್ಷಿತಾರಣ್ಯದ (Kali Tiger Reserve) ವ್ಯಾಪ್ತಿಯಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಜಾಲವನ್ನು ಭೇದಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಗೋವಾ ಸರ್ಕಾರದ ಸಾರಿಗೆ ಸಂಸ್ಥೆಯ ನೌಕರನೊಬ್ಬನನ್ನು ಬಂಧಿಸಿದ್ದಾರೆ. ಜೊಯಿಡಾ ತಾಲೂಕಿನ ಡಿಗ್ಗಿ ಸಮೀಪದ ಬೊಂಡೇಲಿ ಗ್ರಾಮದಲ್ಲಿ ಭಾನುವಾರ ಈ ಕಾರ್ಯಾಚರಣೆ ನಡೆದಿದೆ. ಬೇಟೆಗೆ ಸಹಕರಿಸಿದ ಸ್ಥಳೀಯ ಶೂಟರ್ ಹಾಗೂ ಗೋವಾದ ಮತ್ತಿಬ್ಬರು ಭದ್ರತಾ ಏಜೆನ್ಸಿ ಸಿಬ್ಬಂದಿ…

Read More

Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ – Kannada News | Government Suspends Telegram Access Ahead of NEET Re Exam to Curb Malpractice

ನವದೆಹಲಿ, ಜೂನ್ 16: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET-UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ‘ಟೆಲಿಗ್ರಾಮ್’ (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ನೀಡಿರುವ ಅಧಿಕೃತ ನಿರ್ದೇಶನದ ಪ್ರಕಾರ, ಭಾರತದಲ್ಲಿ ಜೂನ್ 22, 2026 ರವರೆಗೆ ಟೆಲಿಗ್ರಾಮ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ. ಜೂನ್ 21 ರಂದು ದೇಶಾದ್ಯಂತ ಬಿಗಿಯಾದ…

Read More

ಪಾಕಿಸ್ತಾನ್ ತಂಡದ ‘ಆಯ್ಕೆ ಮತ್ತು ವೇತನ’ ವ್ಯವಸ್ಥೆಯೇ ಬದಲು..! – Kannada News | PCB’s New Format Based Contract System

ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತನ್ನ ಆಟಗಾರರ ಆಯ್ಕೆ ಮತ್ತು ಸೆಂಟ್ರಲ್ ಕಾಂಟ್ರಾಕ್ಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ಇದುವರೆಗೆ ಚಾಲ್ತಿಯಲ್ಲಿದ್ದ ಸಾಂಪ್ರದಾಯಿಕ ‘A ಇಂದ D ಗ್ರೇಡ್’ ಶ್ರೇಣೀಕೃತ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, ಅದರ ಜಾಗದಲ್ಲಿ ಆಟಗಾರರು ಆಡುವ ಕ್ರಿಕೆಟ್ ಸ್ವರೂಪಗಳನ್ನು ಆಧರಿಸಿದ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಕ್ರಿಕೆಟ್‌ನಲ್ಲಿ ಹೆಚ್ಚುತ್ತಿರುವ ಟಿ20 ಫ್ರಾಂಚೈಸಿ ಲೀಗ್‌ಗಳ ಹಾವಳಿ ಮತ್ತು ಟೆಸ್ಟ್ ಕ್ರಿಕೆಟ್‌ಗೆ ಉಂಟಾಗುತ್ತಿರುವ ಹಿನ್ನಡೆಯನ್ನು ತಡೆಯಲು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಈ ಮಹತ್ವದ ನಿರ್ಧಾರ…

Read More

RSS ನೋಂದಣಿ ಬಗ್ಗೆ ಪ್ರಶ್ನಿಸಿದ್ದ ಪ್ರಿಯಾಂಕ್​​ ಖರ್ಗೆಗೆ ಬಹಿರಂಗ ಪತ್ರ ಬರೆದ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ – Kannada News | RSS Registration Row: BJP MP Narayansa Bhandage Pens Open Letter To Priyank Kharge, Slams Appeasement Politics

ಪ್ರಿಯಾಂಕ್ ಖರ್ಗೆಗೆ ನಾರಾಯಣಸಾ ಭಾಂಡಗೆ ಬಹಿರಂಗ ಪತ್ರImage Credit source: PTI and Narayanasa Bhandage X Account ಬೆಂಗಳೂರು, ಜೂನ್​​ 16: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೋಂದಣಿಯ ಬಗ್ಗೆ ಪ್ರಶ್ನೆ ಮಾಡುತ್ತಲೇ ಬಂದಿರುವ ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಈ ಸಂಬಂಧ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರವೊಂದನ್ನು ಬರೆದಿರೋದು ಚರ್ಚೆಗೆ ಗ್ರಾಸವಾಗಿತ್ತು. ಸಂಘಟನೆಯ ಕಾನೂನುಬದ್ಧ ಸ್ಥಾನಮಾನ ಮತ್ತು ಪಾರದರ್ಶಕತೆಯ ಬಗ್ಗೆ ಅವರು ಕೇಳಿದ್ದ ಪ್ರಶ್ನೆಗಳಿಗೆ ತಿರುಗೇಟು ನೀಡಿದ್ದ ಭಾಗವತ್​​, ಹಿಂದೂ ಧರ್ಮ…

Read More

ಡೀಸಲ್ ಮತ್ತು ಜೆಟ್ ಇಂಧನದ ಮೇಲಿನ ರಫ್ತು ಸುಂಕ ಹೆಚ್ಚಳ; ಪೆಟ್ರೋಲ್ ರೀಟೇಲ್ ಬೆಲೆ ಮೇಲೆ ಪರಿಣಾಮ ಬೀರುತ್ತಾ? – Kannada News | India Hikes Diesel, ATF Export Duty: No Impact on Domestic Fuel Prices

ನವದೆಹಲಿ, ಜೂನ್ 16: ಕೇಂದ್ರ ಸರ್ಕಾರವು ಡೀಸೆಲ್ ಮತ್ತು ವಿಮಾನ ಇಂಧನ (ATF) ರಫ್ತುಗಳ ಮೇಲಿನ ಸುಂಕವನ್ನು (Export Duty) ಹೆಚ್ಚಿಸಿದೆ. ಆದರೆ ಪೆಟ್ರೋಲ್ ಮೇಲಿನ ರಫ್ತು ಸುಂಕದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಡೀಸೆಲ್ ರಫ್ತು ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು (SAED) 50 ಪೈಸೆ ಏರಿಸಲಾಗಿದೆ. ಪ್ರತಿ ಲೀಟರ್‌ಗೆ 13.5 ರೂನಿಂದ 14 ರೂಗೆ ಹೆಚ್ಚಿಸಲಾಗಿದೆ . ವಿಮಾನ ಇಂಧನದ ರಫ್ತು ಸುಂಕವನ್ನು ಪ್ರತಿ ಲೀಟರ್‌ಗೆ 3 ರೂ ಹೆಚ್ಚಿಸಲಾಗಿದೆ. 9.5 ರೂನಿಂ 12.5…

Read More

ನೀಟ್ ಮರು-ಪರೀಕ್ಷೆಗೂ ಮುನ್ನವೇ ಆಘಾತ; ರಾಜಸ್ಥಾನದ ಸೀಕರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಸಾವು! – Kannada News | NEET Aspirant Suicide in Sikar: Second Student Death in Coaching Hub, Exam Pressure

ನೀಟ್ ಮರು-ಪರೀಕ್ಷೆಗೂ ಮುನ್ನ ಮತ್ತೊಬ್ಬ ವಿದ್ಯಾರ್ಥಿ ಸಾವುImage Credit source: Pinterest ರಾಜಸ್ಥಾನದ ಪ್ರಮುಖ ಕೋಚಿಂಗ್ ಹಬ್ ಆಗಿರುವ ಸೀಕರ್ (Sikar) ಜಿಲ್ಲೆಯಲ್ಲಿ ಮಂಗಳವಾರದಂದು ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಜೂನ್ 21 ರಂದು ದೇಶಾದ್ಯಂತ ನೀಟ್ ಮರು-ಪರೀಕ್ಷೆ ನಡೆಯಲಿದ್ದು, ಅದಕ್ಕೆ ಸಜ್ಜಾಗುತ್ತಿದ್ದ 22 ವರ್ಷದ ನೀಟ್ ಅಭ್ಯರ್ಥಿ ಉಮೇಶ್ ಮಾಲಿ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವಕನನ್ನು ಜುಂಜುನು ಜಿಲ್ಲೆಯ ನವಲಗಢ ಪ್ರದೇಶದ ಕಾರಿ ಗ್ರಾಮದ ನಿವಾಸಿ ಉಮೇಶ್ ಮಾಲಿ…

Read More