Headlines

ವಾರಕ್ಕೆ 800 ರೂ. ಸಂಬಳ: ಜೀತಕ್ಕೆ ದುಡಿಯುತ್ತಿದ್ದ ಒಡಿಶಾ ಮುಲದ 24 ಮಂದಿ ಕಾರ್ಮಿಕರ ರಕ್ಷಣೆ – Kannada News | Odisha Bonded Laborers Rescued from Bagalkot Brick Kiln: Case Filled Against Owner

ರಕ್ಷಣೆ ಮಾಡಲಾದ ಕಾರ್ಮಿಕರುImage Credit source: Tv9 Kannada ಬಾಗಲಕೋಟೆ, ಫೆಬ್ರವರಿ 13: ಜಿಲ್ಲೆಯ ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದ ಇಟ್ಟಿಗೆ ಭಟ್ಟಿಯಲ್ಲಿ ಜೀತಕ್ಕೆ ದುಡಿಯುತ್ತಿದ್ದ ಐವರು ಬಾಲ ಕಾರ್ಮಿಕರು ಸೇರಿದಂತೆ ಒಡಿಶಾ ಮೂಲದ ಒಟ್ಟು 24 ಮಂದಿಯನ್ನು ಇಳಕಲ್ ತಹಶೀಲ್ದಾರ್, ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಈರಪ್ಪ ಕುಂಬಾರ ಎಂಬುವರ ಇಟ್ಟಿಗೆ ಭಟ್ಟಿಯಲ್ಲಿ ಇವರು ಕೆಲಸ ಮಾಡುತ್ತಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬಾಲ ಕಾರ್ಮಿಕ ನಿಷೇಧ‌‌ ಮತ್ತು ಜೀತ ಪದ್ಧತಿ ನಿಷೇಧ ಕಾಯ್ದೆಯಡಿ…

Read More

ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ; ಬಿಗ್ ಬಾಸ್ ಸ್ಪರ್ಧಿಗಳ ಪಾಡು ನೋಡಿ

‘ಬಿಗ್ ಬಾಸ್’ ಈ ಸೀಸನ್ ಸ್ಪರ್ಧಿಗಳನ್ನು ಇಟ್ಟುಕೊಂಡು ‘ದೊಡ್ಮನೆ ಹಬ್ಬ’ ಆಯೋಜನೆ ಮಾಡಲಾಗಿದೆ. ಈ ಹಬ್ಬದಲ್ಲಿ ಸಾಕಷ್ಟು ಫನ್ ಇತ್ತು. ಕಿವಿಗೆ ಹೆಡ್ ಫೋನ್ ಮಾದರಿಯನ್ನು ಹಾಕಿ ಒಂದು ಲೈನ್ ಹೇಳಿಸಲಾಯಿತು. ಆರಂಭದಲ್ಲಿ ಹೇಳಿದ್ದು ಒಂದಾದರೆ, ಕೊನೆಯ ವ್ಯಕ್ತಿ ಬರೋವರೆಗೆ ಅದು ಇನ್ನೊಂದು ರೀತಿಯಲ್ಲಿ ತಿರುಗಿತು. ಈ ಫನ್ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಜನವರಿ 14 ಅಂದರೆ ಶನಿವಾರ ಸಂಜೆ 6ಕ್ಕೆ ಈ ಕಾರ್ಯಕ್ರಮ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಬಾಂಗ್ಲಾದೇಶದ ಪ್ರಧಾನಿಯಾಗಲಿರುವ ಬಿಎನ್​​ಪಿಯ ತಾರಿಕ್ ರೆಹಮಾನ್ ಒಟ್ಟು ಆಸ್ತಿ ಎಷ್ಟು? – Kannada News | Bangladesh’s next PM Tarique Rahman: BNP Leader’s Assets and Election Victory Overview

ಢಾಕಾ, ಫೆಬ್ರವರಿ 13: ಬಾಂಗ್ಲಾದೇಶ(Bangladesh)ದಲ್ಲಿ ಅಶಾಂತಿ ನೆಲೆಸಿದೆ. ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಚುನಾವಣಾ ಫಲಿತಾಂಶಗಳು ಸೂಚಿಸುತ್ತಿಚೆ. ಸುಮಾರು ಎರಡು ದಶಕಗಳ ನಂತರ ಬಿಎನ್‌ಪಿ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ಅವರ ಮೈತ್ರಿಕೂಟ ಈಗಾಗಲೇ ಬಹುಮತದ ಗಡಿ ದಾಟಿದೆ. ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಬಿಎನ್‌ಪಿ ಸರ್ಕಾರದಲ್ಲಿ ಪ್ರಧಾನಿಯಾಗಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. 17 ವರ್ಷಗಳ ವನವಾಸದ ನಂತರ ಬಾಂಗ್ಲಾದೇಶಕ್ಕೆ ಮರಳಿರುವ ತಾರಿಕ್ ರೆಹಮಾನ್, ಒಂದೂವರೆ ತಿಂಗಳಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿಯಾಗುವ ಹಾದಿಯಲ್ಲಿದ್ದಾರೆ….

Read More

ಭಾರತದಲ್ಲಿ ಹಣದುಬ್ಬರಕ್ಕೆ ಹೊಸ ಸ್ವರೂಪ; ಮೂಲ ವರ್ಷ ಬದಲಾವಣೆ; ಜನವರಿಯಲ್ಲಿ ಶೇ. 2.8 ಇನ್​ಫ್ಲೇಶನ್ ದಾಖಲು – Kannada News | Retail inflation at 2.8pc in January 2026, based on new CPI series with 2024 as base year

ನವದೆಹಲಿ, ಫೆಬ್ರುವರಿ 13: ಭಾರತದ ರೀಟೇಲ್ ಹಣದುಬ್ಬರ (Retail Inflation) ಜನವರಿಯಲ್ಲಿ ಶೇ. 2.8 ಎಂದು ದಾಖಲಾಗಿದೆ. ಬದಲಾವಣೆ ಮಾಡಲಾದ ಮಾನಕದ ಪ್ರಕಾರ ಹಣದುಬ್ಬರ ಲೆಕ್ಕಾಚಾರ ಮಾಡಲಾಗಿದೆ. ಮೂಲ ವರ್ಷ ಅಥವಾ ಬೇಸ್ ವರ್ಷವನ್ನು 2012ರಿಂದ 2024ಕ್ಕೆ ಬದಲಾಯಿಸಲಾಗಿದೆ. 2023-24ರ ಗೃಹ ಅನುಭೋಗ ಸಮೀಕ್ಷೆಯ ದತ್ತಾಂಶವನ್ನು ಬಳಸಿ ದೇಶಾದ್ಯಂತ ಅನುಭೋಗ ಮಾದರಿ (consumption pattern) ಆಗಿರುವ ಬದಲಾವಣೆಯನ್ನು ಗುರುತಿಸಲಾಗಿದೆ. ಹಣದುಬ್ಬರ ಲೆಕ್ಕಾಚಾರ ಪಟ್ಟಿಯಲ್ಲಿರುವ ಸರಕುಗಳಿಗೆ ಹೊಸ ಸೇರ್ಪಡೆ ಮತ್ತು ವೈಟೇಜ್ ಅನ್ನು ಕೊಡಲಾಗಿದೆ. ಆಹಾರಕ್ಕಿರುವ ವೈಟೇಜ್ ಅನ್ನು…

Read More

ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ! 47 ಎಕರೆ ಭೂಮಿ ವಸತಿ ವಲಯಕ್ಕೆ ಬದಲಿಸಲು ಹುನ್ನಾರ? – Kannada News | Corruption Allegations Persist in Mysuru Development Authority (MDA) Despite Rebranding

ಮೈಸೂರು, ಫೆಬ್ರವರಿ 13: ಮುಡಾ ಈಗ ಎಂಡಿಎ (MDA)ಆಗಿ ಹೆಸರು ಬದಲಾದರೂ ಅಕ್ರಮಗಳು ನಿಲ್ಲಲಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಆರೋಪಿಸಿದ್ದಾರೆ. 2025ರ ಆಗಸ್ಟ್ 8ರಂದು ನಡೆದ ಎಂಡಿಎ ಮೊದಲ ಸಭೆಯಲ್ಲೇ 4.27 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜೊತೆಗೆ 47 ಎಕರೆ ಕೃಷಿ ವಲಯದ ಭೂಮಿಯನ್ನು ವಸತಿ ವಲಯಕ್ಕೆ ಬದಲಿಸಲು ಹುನ್ನಾರ ನಡೆದಿದೆ ಎಂದು ದೂರಿದ್ದಾರೆ. ಮುಡಾ ಪ್ರಭಾರ ಆಯುಕ್ತ ರಕ್ಷಿತ್, ಪರಿಷತ್ ಸದಸ್ಯ ಮಧು…

Read More

Kumbha Sankramana 2026: ಇಂದು ಕುಂಭ ರಾಶಿಗೆ ಸೂರ್ಯ ಪ್ರವೇಶ; ಮಾ.15 ರವರೆಗೆ ಈ ರಾಶಿಯವರು ಜಾಗರೂಕರಾಗಿರಿ – Kannada News | Kumbha Sankramana 2026: Auspicious and Inauspicious Effects on All Zodiac Signs

2026 ರ ಫೆಬ್ರವರಿ 13 ರಂದು, ಸಂಜೆ 4 ಗಂಟೆ 14 ನಿಮಿಷಕ್ಕೆ ಸೂರ್ಯ ಕುಂಭ ರಾಶಿಗೆ ಪ್ರವೇಶ ಮಾಡಲಿದೆ. ಇದನ್ನು ಕುಂಭ ಸಂಕ್ರಮಣ ಎಂದು ಕರೆಯಲಾಗುತ್ತದೆ. ಈ ಸಂಚಾರವು ಮುಂದಿನ ತಿಂಗಳ ಮಾರ್ಚ್ 15 ರವರೆಗೆ ಮುಂದುವರೆಯಲಿದೆ. ಈ ಅವಧಿಯಲ್ಲಿ ದ್ವಾದಶ ರಾಶಿಗಳ ಮೇಲೆ ಸೂರ್ಯನ ಈ ಸಂಚಾರ ಯಾವ ರೀತಿ ಪ್ರಬಾವ ಬೀರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಮೇಷ ರಾಶಿ: ಮೇಷ ರಾಶಿಯವರಿಗೆ ಸೂರ್ಯನ ಈ ಸಂಚಾರವು 11ನೇ ಮನೆಯಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಮತ್ತು…

Read More

ಯೋಗಿ 50ನೇ ಸಿನಿಮಾಗೆ ‘ಕಿಂಗ್’ ಟೈಟಲ್; ರಗಡ್ ಅವತಾರದಲ್ಲಿ ಬಂದ ಲೂಸ್ ಮಾದ – Kannada News | Yogi’s 50th Film ‘King’: Loose Maada Returns in Rugged Avatar, Teaser Creates Buzz

ಯೋಗಿ ಅವರ ವೃತ್ತಿ ಜೀವನ ಸಾಕಷ್ಟು ಏರಿಳಿತಗಳಿಂದ ಕೂಡಿದೆ. ಇಷ್ಟು ದಿನ ಒಂದು ಲೆಕ್ಕವಾದರೆ, ಇನ್ಮುಂದೆ ಬೇರೆಯದೇ ಲೆಕ್ಕ ಶುರು ಎಂದು ಅವರು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಅವರ ಐವತ್ತನೇ ಸಿನಿಮಾ ಅನೌನ್ಸ್ ಆಗಿದೆ. ಈ ಸಿನಿಮಾಗೆ ‘ಕಿಂಗ್’ ಟೈಟಲ್ ಇಡಲಾಗಿದೆ. ಈ ಸಿನಿಮಾ ಟೈಟಲ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಟೀಸರ್ ಕೂಡ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಭಾರಿ ಬಜೆಟ್​​ನಲ್ಲಿ ಚಿತ್ರ ಸಿದ್ಧವಾಗುತ್ತಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ವೃತ್ತಿ ಜೀವನದಲ್ಲಿ ಯೋಗಿ ಸಾಕಷ್ಟು ಹಿಟ್…

Read More

Video: ಶಾಂಘೈನಲ್ಲಿ ದೈತ್ಯ ಸಿಂಕ್​​ಹೋಲ್​​ ರಸ್ತೆಯನ್ನೇ ನುಂಗಿದ ಕ್ಷಣ – Kannada News | Shanghai Street Collapses as Massive Sinkhole Opens Without Warning

ಶಾಂಘೈ, ಫೆಬ್ರವರಿ 13: ಚೀನಾದ ಶಾಂಘೈನಲ್ಲಿ ರಸ್ತೆಯ ಒಂದು ಭಾಗದಲ್ಲಿ ವಾಹನಗಳು ಮತ್ತು ಕಟ್ಟಡಗಳನ್ನು ದೈತ್ಯ ಸಿಂಕ್​ಹೋಲ್ ನುಂಗುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ತುಂಬಾ ಭಯಾನಕವಾಗಿದೆ. ಗುರುವಾರ ಹತ್ತಿರದ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ರಸ್ತೆ ಹಠಾತ್ತನೆ ಕುಸಿದಿದೆ. ಈ ಘಟನೆಯಲ್ಲಿ ಯಾವುದೇ ಗಾಯ ಅಥವಾ ಸಾವುನೋವು ವರದಿಯಾಗಿಲ್ಲ. ಜನವರಿ 2024 ರಲ್ಲಿ ಮಿನ್ಹಾಂಗ್ ಜಿಲ್ಲೆಯಲ್ಲಿ ಒಳಚರಂಡಿ ಪೈಪ್ ವೈಫಲ್ಯದ ನಂತರ ರಸ್ತೆಯ ಒಂದು ಭಾಗ ಹೀಗೆಯೇ ಕುಸಿದಿತ್ತು. ಆಗಸ್ಟ್ 2023…

Read More

ಸಿಎಂ ಕುರ್ಚಿ ಕದನ: ಹೈಕಮಾಂಡ್​​ ಭೇಟಿ ಬಳಿಕವೂ ಡಿಕೆಶಿಗೆ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ? – Kannada News | Karnataka Power Tussle: DK Shivakumars Delhi Hopes Dashed, Lack of Clarity Persists

ಬೆಂಗಳೂರು, ಫೆಬ್ರವರಿ 13: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ದೆಹಲಿ ಪ್ರವಾಸದ ಬಳಿಕವೂ ಅಧಿಕಾರ ಹಸಸ್ತಾಂತರದ ಬಗ್ಗೆ ಯಾವುದೇ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಡಿಕೆಶಿಪಾಳಯವು ಒಂದು ಮಹತ್ವದ ಬೆಳವಣಿಗೆಯ ನಿರೀಕ್ಷೆಯಲ್ಲಿತ್ತು. ಆದರೆ ದೆಹಲಿ ಭೇಟಿಯು ಅಸ್ಸಾಂ ಚುನಾವಣೆ ಚರ್ಚೆಗೆ ಮಾತ್ರ ಸೀಮಿತವಾಗಿದೆ. ಹೀಗಾಗಿ ಈ ಬಾರಿಯಾದರೂ ಗುಡ್ ನ್ಯೂಸ್ ಸಿಗುತ್ತದೆ ಎಂದು ಆಶಿಸಿದ್ದ ಬೆಂಬಲಿತ ಶಾಸಕರು ಮತ್ತೆ ನಿರಾಸೆಗೊಂಡಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿರುವುದು, ಅಧಿಕಾರ ಹಂಚಿಕೆ…

Read More

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್​ನಲ್ಲಿ ಕಿಡ್ನಿ ರವಾನೆ – Kannada News | Vijayapura’s First Organ Donation: Bike Accident Victim’s Kidneys Save Lives

ವಿಜಯಪುರ, ಫೆಬ್ರವರಿ 13: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ (Organ Donation) ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಬೈಕ್ ಅಪಘಾತದಲ್ಲಿ ಗಂಭೀರಗೊಂಡಿದ್ದ ವ್ಯಕ್ತಿ ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು….

Read More