Cauvery Water Dispute: ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ ರಾಮಲಿಂಗಾ ರೆಡ್ಡಿ? – Kannada News | Cauvery Dispute: BJPs Protest is Political, Government Stands with Farmers, Says Minister Ramalinga Reddy

ಬೆಂಗಳೂರು, ಜುಲೈ 31: ಕಾವೇರಿ ನದಿ ನೀರಿನ ವಿವಾದ ತೀವ್ರಗೊಂಡಿದ್ದು, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕುಡಿಯುವ ನೀರಿಗೂ ತೊಂದರೆಯಾಗಿದ್ದು, ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.

ಕರ್ನಾಟಕದ ನಿಲುವು ಬಹಳ ಸ್ಪಷ್ಟವಾಗಿದ್ದು, ಮುಖ್ಯಮಂತ್ರಿಗಳು ಈಗಾಗಲೇ ರಾಜ್ಯದ ಹಿತಾಸಕ್ತಿ ಕಾಯುವ ಬಗ್ಗೆ ಭರವಸೆ ನೀಡಿದ್ದಾರೆ. ಅಲ್ಲದೆ, ಸೆಪ್ಟೆಂಬರ್ 3 ರಂದು ಎಲ್ಲ ವಿರೋಧ ಪಕ್ಷಗಳ ನಾಯಕರನ್ನು ಒಳಗೊಂಡ ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಕಾವೇರಿ ವಿಚಾರದಲ್ಲಿ ಮುಂದಿನ ಕಾರ್ಯತಂತ್ರ ಮತ್ತು ನಿರ್ಧಾರಗಳ ಕುರಿತು ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. “ನಮ್ಮ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಲುವನ್ನು ಸರ್ಕಾರ ತೆಗೆದುಕೊಂಡಿರುವುದರಿಂದ ಸದ್ಯಕ್ಕೆ ಯಾವುದೇ ಹೋರಾಟದ ಅವಶ್ಯಕತೆ ಇಲ್ಲ” ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *