ಚಾಮರಾಜನಗರ, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಕಾವೇರಿ ವಿವಾದದ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ತಮಿಳುನಾಡು ಸಿಎಂ ಆಕಾಂಕ್ಷಿ, ನಟ ಜೋಸೆಫ್ ವಿಜಯ್ ಅಭಿನಯದ ‘ಜನನಾಯಗನ್’ (Jananayagan) ಸಿನಿಮಾವನ್ನು ಪ್ರದರ್ಶನದಿಂದ ರದ್ದುಗೊಳಿಸಿ ಎತ್ತಂಗಡಿ ಮಾಡಲಾಗಿದೆ.
ತಮಿಳುನಾಡು ಸರ್ಕಾರದ ಧೋರಣೆ ಖಂಡಿಸಿ ವಿವಿಧ ಕನ್ನಡ ಮತ್ತು ರೈತ ಸಂಘಟನೆಗಳು ಚಿತ್ರಮಂದಿರಕ್ಕೆ ಮುತ್ತಿಗೆ ಹಾಕುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಸ್ಥಳೀಯರ ಆಕ್ರೋಶಕ್ಕೆ ಮಣಿದ ಚಿತ್ರಮಂದಿರದ ಮಾಲೀಕರು ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಬಿಸಿ ದಿನದಿಂದ ದಿನಕ್ಕೆ ಏರುತ್ತಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ