Cauvery Water Dispute: ‘ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ, ಆದರೆ ಡ್ಯಾಂ ತುಂಬುವ ಹಂತದಲ್ಲಿದೆ’ ಎಂದ ಡಿ.ಕೆ ಶಿವಕುಮಾರ್ – Kannada News | Dams Reaching Full Capacity, Water Discharge Inevitable: DCM DK Shivakumar on Cauvery Water Dispute

ಬೆಂಗಳೂರು, ಆಗಸ್ಟ್ 01:  ರಾಜ್ಯದಲ್ಲಿ ಕಾವೇರಿ ನೀರು ಹಂಚಿಕೆಯ ಕಾವು ಏರುತ್ತಿರುವಾಗಲೇ, ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ.  ಈ ಹಿನ್ನೆಲೆ ಪ್ರತಿಕ್ರಿಯಿಸಿರುವ ಮುಖ್ಯಂತ್ರಿ ಡಿ.ಕೆ. ಶಿವಕುಮಾರ್, ನಾವು ಇನ್ನು ತಮಿಳುನಾಡಿಗೆ ಪ್ರತ್ಯೇಕವಾಗಿ ನೀರು ಹರಿಸಿಲ್ಲ. ಡ್ಯಾಂ ಸಂಪೂರ್ಣವಾಗಿ ತುಂಬುವ ಹಂತಕ್ಕೆ ತಲುಪಿದೆ. ಡ್ಯಾಂ ಭರ್ತಿಯಾದರೆ ಸುರಕ್ಷತೆಯ ದೃಷ್ಟಿಯಿಂದ ನೀರನ್ನು ಹರಿಬಿಡುವುದು ಅನಿವಾರ್ಯವಾಗುತ್ತದೆ. ನೀರು ಜಲಾಶಯದ ಸಾಮರ್ಥ್ಯ ಮೀರಿ ಹರಿಯುವಾಗ ಅದನ್ನು ತಡೆದು ಹಿಡಿದಿಟ್ಟುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.

ಅಲ್ಲದೆ ತಮಿಳುನಾಡು ಈಗಾಗಲೇ ಸುಪ್ರೀಂಕೋರ್ಟ್‌ಗೆ ಹೋಗಲು ಸಿದ್ಧತೆ ನಡೆಸಿದೆ. ಸದ್ಯ ಕಾವೇರಿಯಲ್ಲಿ 36 ರಿಂದ 39 ಕ್ಯೂಸೆಕ್ ನೀರು ಹರಿಯುತ್ತಿದೆ. ತಮಿಳುನಾಡು 3,600 ಕ್ಯೂಸೆಕ್ ನೀರನ್ನು ಕೇಳಿದೆ. ವಿರೋಧ ಪಕ್ಷದ ನಾಯಕರೊಂದಿಗೆ ಮತ್ತು ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿ ನಾಳೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *