Headlines

Chamarajanagar: ಮೂರ್ನಾಲ್ಕು ತಿಂಗಳಿನಿಂದ 400ಕ್ಕೂ ಹೆಚ್ಚು ಮಂದಿಗೆ ಸಿಗ್ತಿಲ್ಲ ವೃದ್ಧಾಪ್ಯ ವೇತನ – Kannada News | Chamarajanagar Pension Crisis: Over 400 Elders in Ummattur Deprived of Old Age and Widows Pension For 4 Months

ಚಾಮರಾಜನಗರ, ಜುಲೈ 1: ಚಾಮರಾಜನಗರ ಜಿಲ್ಲೆಯಲ್ಲಿ 400ಕ್ಕೂ ಹೆಚ್ಚು ವಯೋವೃದ್ಧರು ಕಳೆದ ನಾಲ್ಕು ತಿಂಗಳಿಂದ ವೃದ್ಧಾಪ್ಯ, ವಿಧವಾ ಹಾಗೂ ಸಂಧ್ಯಾ ಸುರಕ್ಷಾ ಪಿಂಚಣಿಗಳಿಂದ ವಂಚಿತರಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ತಾಲೂಕು ಕಚೇರಿ ಹಾಗೂ ಜಿಲ್ಲಾಡಳಿತ ಕಚೇರಿಗಳಿಗೆ ಹಲವು ಬಾರಿ ಅಲೆದಿದ್ದರೂ, ಪಿಂಚಣಿ ದೊರೆಯದೆ ಫಲಾನುಭವಿಗಳು ನಿರಾಶೆಗೊಂಡಿದ್ದಾರೆ. ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮವೊಂದರಲ್ಲೇ 400ಕ್ಕೂ ಅಧಿಕ ಮಂದಿಗೆ ಪಿಂಚಣಿ ಬಂದಿಲ್ಲ ಎಂದು ಫಲಾನುಭವಿಗಳು ದೂರಿದ್ದಾರೆ. ಪಿಂಚಣಿಯೇ ತಮ್ಮ ಜೀವನದ ಆಧಾರವಾಗಿದ್ದ ಅನೇಕರಿಗೆ, ಹಣವಿಲ್ಲದೆ ಊಟಕ್ಕೂ ತೊಂದರೆಯಾಗುವ ಪರಿಸ್ಥಿತಿ ಬಂದಿದೆ.

‘ನನ್ನನ್ನು ನೋಡಿಕೊಳ್ಳಲು ಯಾರೂ ಇಲ್ಲ, ಪಿಂಚಣಿಯೇ ಆಧಾರವಾಗಿತ್ತು’ ಎಂದು ವಯೋವೃದ್ಧೆಯೊಬ್ಬರು ‘ಟಿವಿ9’ ಮುಂದೆ ಕಣ್ಣೀರಿಟ್ಟಿದ್ದಾರೆ. ಅಧಿಕಾರಿಗಳು ತಾಂತ್ರಿಕ ದೋಷ ಅಥವಾ ಆದಾಯ ಮಿತಿಗಳಂತಹ ಕಾರಣಗಳನ್ನು ನೀಡುತ್ತಿದ್ದರೂ, ಫಲಾನುಭವಿಗಳು ದಾಖಲಾತಿ ಸಮೇತ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನಹರಿಸಿ, ಹಿರಿಯ ನಾಗರಿಕರಿಗೆ ಅವರ ನ್ಯಾಯಯುತ ಪಿಂಚಣಿಯನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *