ಚಾಮರಾಜನಗರದ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಏಕೈಕ ಮತ್ತು ಅತ್ಯಂತ ವಿಶೇಷವಾದ ರಥೋತ್ಸವ ಇದಾಗಿದೆ. ಈ ರಥೋತ್ಸವದ ವಿಶೇಷತೆಯೆಂದರೆ ಆಷಾಢ ಮಾಸದಲ್ಲಿ ಬೇರೆ ಬೇರೆಯಾಗಿರುವ ನವ ದಂಪತಿಗಳನ್ನು ಒಂದಾಗಿಸುವ ವಿಶಿಷ್ಟ ಜಾತ್ರೆಯಾಗಿ ಇದು ಗುರುತಿಸಿಕೊಂಡಿದೆ.
ಈ ರಥೋತ್ಸವದಲ್ಲಿ ನವ ದಂಪತಿಗಳು ಭಕ್ತಿಭಾವದಿಂದ ಹಣ್ಣು ಮತ್ತು ದವನವನ್ನು ರಥಕ್ಕೆ ಎಸೆದರೆ ತಮ್ಮ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬ ದೃಢ ನಂಬಿಕೆಯಿದೆ. ಇದೇ ಕಾರಣದಿಂದ ರಾಜ್ಯದ ವಿವಿಧ ಭಾಗಗಳಿಂದ ನೂರಾರು ದಂಪತಿಗಳು ಇಲ್ಲಿಗೆ ಆಗಮಿಸಿ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುತ್ತಾರೆ. ಚಾಮರಾಜನಗರದ ಚಾಮರಾಜೇಶ್ವರಸ್ವಾಮಿ ದೇವಾಲಯ ಮತ್ತು ನಗರದ ಪ್ರಮುಖ ರಾಜ ಬೀದಿಗಳು ರಥೋತ್ಸವಕ್ಕಾಗಿ ಸುಂದರವಾಗಿ ಅಲಂಕೃತಗೊಂಡಿವೆ. ಭಕ್ತರು ಮತ್ತು ಪ್ರವಾಸಿಗರನ್ನು ಸ್ವಾಗತಿಸಲು ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಬಾರಿಯ ಆಷಾಢ ಮಾಸದ ರಥೋತ್ಸವ ಕೂಡ ಎಂದಿನಂತೆ ಅದ್ದೂರಿಯಾಗಿ ನೆರವೇರಲು ಸಜ್ಜಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ