ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಾಮಾನ್ಯವಾಗಿ, ಒಬ್ಬ ವ್ಯಕ್ತಿಯ ಪ್ರಗತಿಯು ಆತನ ಪರಿಶ್ರಮ, ಮನಸ್ಸತ್ವ ಮತ್ತು ಸಾಧನೆಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ, ಮತ್ತೊಬ್ಬರ ಅಭಿವೃದ್ಧಿ, ಕೀರ್ತಿ, ಅಥವಾ ಹೆಸರನ್ನು ಕಂಡಾಗ ಅಸೂಯೆ ಪಡುವ ಭಾವನೆ ಹೆಚ್ಚಾಗುತ್ತಿದೆ.
ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಟ್ಟರೆ ನಮ್ಮ ಸಮಯ ವ್ಯರ್ಥವಾಗುತ್ತದೆ, ದೇಹದ ಧನಾತ್ಮಕ ಶಕ್ತಿಗಳು ಹೊರಟುಹೋಗುತ್ತವೆ ಮತ್ತು ದೈವಬಲ ಕುಂದುತ್ತದೆ. ಇಂತಹ ನಕಾರಾತ್ಮಕ ಭಾವನೆಗಳು ನಮ್ಮ ದೇಹದಲ್ಲಿ ವಿಷ ತುಂಬಿದಂತೆ. ದುರ್ಯೋಧನನ ಕಥೆಯು ಇದಕ್ಕೆ ಉತ್ತಮ ಉದಾಹರಣೆ. ಪಾಂಡವರ ಬಗ್ಗೆ ಅಸೂಯೆ ಪಟ್ಟ ದುರ್ಯೋಧನ ತನ್ನ ಇಡೀ ಸಾಮ್ರಾಜ್ಯವನ್ನೇ ನಾಶ ಮಾಡಿಕೊಂಡ. ಬದಲಿಗೆ, ನಾವು ಮೆಚ್ಚುಗೆ ವ್ಯಕ್ತಪಡಿಸಿದಾಗ, ಶುಭಾಶಯ ಕೋರಿದಾಗ ಅಥವಾ ಸಕಾರಾತ್ಮಕವಾಗಿ ಯೋಚಿಸಿದಾಗ ನಕಾರಾತ್ಮಕ ಶಕ್ತಿಗಳು ದೂರವಾಗಿ ಧನಾತ್ಮಕ ಶಕ್ತಿಗಳು ಆವರಿಸಿಕೊಳ್ಳುತ್ತವೆ. ಇದು ನಮ್ಮ ಪ್ರಗತಿಗೆ ಸಹಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.
