Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಶುಭ ಸಮಾರಂಭದಲ್ಲಿ ಒಳ್ಳೆಯ ಆಹಾರ ಸೇವನೆಯ ನಂತರ ತಾಂಬೂಲ ಸೇವಿಸುವುದು ವಾಡಿಕೆ. ಇದು ಜೀರ್ಣಕ್ರಿಯೆಗೆ ಸಹಕಾರಿ ಹಾಗೂ ಮಹಾಲಕ್ಷ್ಮಿ, ಐಶ್ವರ್ಯ ಮತ್ತು ಸಂತೋಷದ ಸಂಕೇತವಾಗಿದೆ.

ಆದರೆ ವಿದ್ಯಾರ್ಥಿಗಳು ತಾಂಬೂಲ ಸೇವನೆಯಿಂದ ದೂರವಿರಬೇಕು ಎಂದು ಶಾಸ್ತ್ರಗಳು ಹೇಳುತ್ತವೆ. ಬ್ರಹ್ಮಚಾರಿಗಳು ಕೂಡ ಇದನ್ನು ಸೇವಿಸಬಾರದು. ತಾಂಬೂಲದಲ್ಲಿ ವೀಳ್ಯದೆಲೆ, ಅಡಿಕೆ, ಸುಣ್ಣ, ಏಲಕ್ಕಿ, ಕಸ್ತೂರಿ, ಜಾಜಿ, ಜಾಪತ್ರೆ ಇರುತ್ತವೆ. ಇದನ್ನು ಸೇವಿಸುವುದರಿಂದ ವಿದ್ಯಾರ್ಥಿಗಳ ಮನಸ್ಸು ಮತ್ತು ದೇಹದ ಮೇಲೆ ಪರಿಣಾಮ ಉಂಟಾಗಿ, ಅಧ್ಯಯನಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ. ನಾಲಿಗೆ ದಪ್ಪವಾಗುವುದು, ವಿಕೃತ ಭಾವನೆಗಳು ಮತ್ತು ಅಹಂಕಾರ ಉಂಟಾಗುವುದು ಇತ್ಯಾದಿ ಸಮಸ್ಯೆಗಳು ಎದುರಾಗಬಹುದು. ಹಿಂದೆ ಗುರುಕುಲಗಳಲ್ಲಿಯೂ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಅಡ್ಡಿಯಾಗುವಂತಹ ಈರುಳ್ಳಿ, ಬೆಳ್ಳುಳ್ಳಿ, ಮೂಲಂಗಿ, ಹುಳಿ ಮೊಸರಿನಂತಹ ಆಹಾರ ಪದಾರ್ಥಗಳನ್ನು ನೀಡುತ್ತಿರಲಿಲ್ಲ. ಹಾಗೆಯೇ ತಾಂಬೂಲ ಕೂಡ ವಿದ್ಯಾರ್ಥಿಗಳಿಗೆ ಸೂಕ್ತವಲ್ಲ ಎಂದು ಗುರೂಜಿ ಹೇಳಿದ್ದಾರೆ.

 

 

 

Source link

Leave a Reply

Your email address will not be published. Required fields are marked *