ಮೈಸೂರು, ಆಗಸ್ಟ್ 01: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಮೈಸೂರಿಗೆ ಭೇಟಿ ನೀಡಿದ್ದು, ಭರ್ಜರಿ ರೋಡ್ಶೋ ನಡೆಸಿದರು. ಕಾರಂಜಿ ಕೆರೆಯಿಂದ ಆರಂಭಗೊಂಡ ಈ ಬೃಹತ್ ರೋಡ್ಶೋ ಕುರುಬರಹಳ್ಳಿ ಸರ್ಕಲ್ವರೆಗೂ ವಿಸ್ತರಿಸಿತ್ತು. ಡಿ.ಕೆ. ಶಿವಕುಮಾರ್ ಅವರು ತೆರೆದ ವಾಹನದಲ್ಲಿ ಸಾಗುತ್ತಿದ್ದಾಗ, ಹಾದಿಯುದ್ದಕ್ಕೂ ನೆರೆದಿದ್ದ ಅಪಾರ ಸಂಖ್ಯೆಯ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಭೂತಪೂರ್ವ ಸ್ವಾಗತ ನೀಡಿದರು. ಕಾರ್ಯಕರ್ತರು ವೀಳ್ಯದೆಲೆ, ಆ್ಯಪಲ್ ಮತ್ತು ಬೆಲ್ಲದ ಹಾರಗಳನ್ನು ಹಾಕಿ ತಮ್ಮ ನೆಚ್ಚಿನ ನಾಯಕನನ್ನು ಬರಮಾಡಿಕೊಂಡರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
