ಇದಾಗ್ಯೂ ಆರ್ಸಿಬಿ ನಾಯಕ ಸ್ಪಿನ್ನರ್ ಸುಯಶ್ ಶರ್ಮಾ ಅವರಿಗೆ ಚೆಂಡು ನೀಡಿದ್ದರು. ಇದಕ್ಕೆ ಮುಖ್ಯ ಕಾರಣ ಸುಯಶ್ ಮಿಸ್ಟ್ರಿ ಸ್ಪಿನ್ನರ್ ಆಗಿರುವುದು. ಅದೇ ಕೃನಾಲ್ ಪಾಂಡ್ಯ ರನ್ ಗತಿಯನ್ನು ನಿಯಂತ್ರಿಸಬಲ್ಲ ಬೌಲರ್. ಈ ಪಂದ್ಯದಲ್ಲಿ ರನ್ ಗತಿಯನ್ನು ನಿಯಂತ್ರಿಸುವುದಕ್ಕಿಂತ ಹೆಚ್ಚಾಗಿ ಆರ್ಸಿಬಿ ತಂಡಕ್ಕೆ ವಿಕೆಟ್ಗಳ ಅಗತ್ಯವಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜೋಶ್ ಹೇಝಲ್ವುಡ್, ಭುವನೇಶ್ವರ್ ಕುಮಾರ್, ರೊಮಾರಿಯೊ ಶೆಫರ್ಡ್ ಹಾಗೂ ಸುಯಶ್ ಶರ್ಮಾ ಅವರನ್ನು ಮಾತ್ರ ಬಳಸಿಕೊಂಡಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ಆರ್ಸಿಬಿ ತಂಡ 4 ವಿಕೆಟ್ಗಳಿಂದ ಸೋಲನುಭವಿಸಿತು.