
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 15, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಪೂರ್ವಭಾದ್ರ ನಕ್ಷತ್ರ, ಬ್ರಹ್ಮಯೋಗ ಮತ್ತು ಗರಜಕರಣಗಳಿಂದ ಕೂಡಿದ ಈ ದಿನದ ರಾಹುಕಾಲ ಮಧ್ಯಾಹ್ನ 12:29 ರಿಂದ 1:52ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ, ಶುಭಕಾಲ ಬೆಳಗ್ಗೆ 10:46 ರಿಂದ 12:19ರವರೆಗೆ ಇದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.