ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 17, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ.ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ, ಪುನರ್ವಸು ನಕ್ಷತ್ರ, ಧ್ರುವ ಯೋಗ, ತೈತಲ ಕರಣವಿರುವ ಶುಭ ದಿನವಾಗಿದೆ.
ಈ ದಿನದ ರಾಹುಕಾಲ ಮಧ್ಯಾಹ್ನ 12:19 ರಿಂದ 1:55 ರವರೆಗೆ ಇದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಬೆಳಗ್ಗೆ 10:43 ರಿಂದ 12:19 ರವರೆಗೆ ಇರುತ್ತದೆ. ಇಂದು ಕದಳಿ ಗೌರಿ ವ್ರತ ಮತ್ತು ರಾಣಾ ಪ್ರತಾಪ್ ಸಿಂಹರ ಜನ್ಮದಿನೋತ್ಸವವನ್ನೂ ಆಚರಿಸಲಾಗುತ್ತದೆ. ಪಾರ್ವತಿ ದೇವಿಯನ್ನು ಆರಾಧಿಸುವುದರಿಂದ ಸಾಕಷ್ಟು ಶುಭ ಫಲಗಳು ದೊರೆಯುತ್ತವೆ. ರವಿ ಮತ್ತು ಚಂದ್ರ ಇಬ್ಬರೂ ಮಿಥುನ ರಾಶಿಯ ಪುನರ್ವಸು ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದಾರೆ ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.
