ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 19, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ ಪಂಚಮಿ, ಉತ್ತರಾ ನಕ್ಷತ್ರ, ಪರಿಘ ಯೋಗ ಮತ್ತು ಬಾಲವಕರಣ ಇರುತ್ತದೆ. ರಾಹುಕಾಲ ಸಂಜೆ 5:11 ರಿಂದ 6:47 ರವರೆಗೆ ಇರಲಿದ್ದು, ಸಂಕಲ್ಪ ಕಾಲ ಬೆಳಗ್ಗೆ 10:49 ರಿಂದ ಮಧ್ಯಾಹ್ನ 12:25 ರವರೆಗೆ ಇರುತ್ತದೆ. ಇಂದು ಅಮೃತ ಲಕ್ಷ್ಮಿ ವ್ರತ, ಅಗಡಿ ನಾರಾಯಣ ಜಯಂತಿ ಹಾಗೂ ಮಹಂಗಾವ ಮಹಾರಾಜರ ಪುಣ್ಯದಿನವೂ ಆಗಿದೆ. ರವಿ ಕರ್ಕಾಟಕ ರಾಶಿಯಲ್ಲಿ ಹಾಗೂ ಚಂದ್ರ ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.
