Horoscope Today: ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 06, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಕೃಷ್ಣಪಕ್ಷ ಷಷ್ಟಿ, ಪೂರ್ವಾಭಾದ್ರ ನಕ್ಷತ್ರ, ಸೌಭಾಗ್ಯ ಯೋಗ, ವಣಿಕ ಕರಣ ಇರಲಿದೆ. ರಾಹುಕಾಲ 7:35 ರಿಂದ 9:11 ನಿಮಿಷಗಳವರೆಗೆ ಇದ್ದು, ಶುಭಕಾಲ 9:11 ರಿಂದ 10:47 ನಿಮಿಷಗಳವರೆಗೆ ಇರುತ್ತದೆ ಎಂದು ಗುರೂಜಿ ಹೇಳಿದ್ದಾರೆ.

ಸೋಮವಾರ ಶಿವನ ಆರಾಧನೆಗೆ ಪ್ರಶಸ್ತ ದಿನವಾಗಿದ್ದು, ಓಂ ನಮಃ ಶಿವಾಯ ಮಂತ್ರ ಜಪಿಸುವುದರಿಂದ ಜೀವನದಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ರವಿ ಮಿಥುನ ರಾಶಿಯಲ್ಲಿ ಮತ್ತು ಚಂದ್ರ ಕುಂಭ ರಾಶಿಯ ಪೂರ್ವಾಭಾದ್ರ ನಕ್ಷತ್ರದಲ್ಲಿ ಸಂಚರಿಸಲಿದ್ದು, ಈ ಗ್ರಹಗಳ ಸಂಚಾರವು ಪ್ರತಿ ರಾಶಿಯವರ ದೈನಂದಿನ ಜೀವನದ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬುದನ್ನು ಗುರೂಜಿ ವಿವರಿಸಿದ್ದಾರೆ. ಮೇಷದಿಂದ ಮೀನ ರಾಶಿಯವರೆಗೆ ಎಲ್ಲ ರಾಶಿಗಳ ಹಣಕಾಸು, ಆರೋಗ್ಯ, ವೃತ್ತಿ, ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಶುಭ-ಅಶುಭ ಫಲಗಳನ್ನು, ಅದೃಷ್ಟ ಸಂಖ್ಯೆಗಳು, ಬಣ್ಣಗಳು ಮತ್ತು ಪರಿಹಾರ ಮಂತ್ರಗಳ ಬಗ್ಗೆ ಮಾರ್ಗದರ್ಶನ ನೀಡಲಾಗಿದೆ.

Source link

Leave a Reply

Your email address will not be published. Required fields are marked *