Horoscope Today: ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 28, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಶುಕ್ಲಪಕ್ಷ ಚತುರ್ದಶಿ ಇರಲಿದ್ದು, ಜೇಷ್ಠ ನಕ್ಷತ್ರದಲ್ಲಿ ಚಂದ್ರ ಸಂಚರಿಸಲಿದ್ದಾನೆ. ರಾಹುಕಾಲ ಸಂಜೆ 5.10 ರಿಂದ 6.47 ರವರೆಗೆ ಇದ್ದರೆ, ಶುಭಕಾಲ ಬೆಳಿಗ್ಗೆ 10.46 ರಿಂದ 12.22 ರವರೆಗೆ ಇರುತ್ತದೆ.

ರವಿ ಮಿಥುನ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯ ಜೇಷ್ಠ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ. ಇದು ಸೂರ್ಯಾರಾಧನೆ ಮತ್ತು ಸೂರ್ಯ ನಮಸ್ಕಾರಕ್ಕೆ ಹೆಚ್ಚು ಪ್ರಾಶಸ್ತ್ಯವಿರುವ ದಿನವಾಗಿದೆ. ಮೇಷ ರಾಶಿಯವರಿಗೆ ಆರ್ಥಿಕವಾಗಿ ಖರ್ಚು ಹೆಚ್ಚಾಗುವ ಸಾಧ್ಯತೆಯಿದ್ದು, ತುಲಾ ರಾಶಿಯವರಿಗೆ ಅನಿರೀಕ್ಷಿತ ಧನಲಾಭವಿದೆ. ಮಿಥುನ ರಾಶಿಯವರಿಗೆ ಅದೃಷ್ಟ ಕೂಡಿಬರಲಿದ್ದು, ಕುಂಭ ರಾಶಿಯವರಿಗೆ ಸಂತಾನ ಯೋಗದ ಸಾಧ್ಯತೆ ಇದೆ. ಕಟಕ ರಾಶಿಯವರಿಗೆ ಆರೋಗ್ಯ ಚೆನ್ನಾಗಿರಲಿದ್ದು, ಸಿಂಹ ರಾಶಿಯವರಿಗೆ ಮನೆ ಅಥವಾ ವಾಹನ ಖರೀದಿಯ ಯೋಗವಿದೆ. ಪ್ರತಿಯೊಂದು ರಾಶಿಯವರಿಗೂ ಆಯಾ ಗ್ರಹಗಳ ಸ್ಥಿತಿ ಆಧರಿಸಿ ನಿರ್ದಿಷ್ಟ ಸಲಹೆ, ಅದೃಷ್ಟ ಸಂಖ್ಯೆ ಮತ್ತು ಬಣ್ಣಗಳನ್ನು ಡಾ. ಬಸವರಾಜ ಗುರೂಜಿ ನೀಡಿದ್ದಾರೆ.

 

Source link

Leave a Reply

Your email address will not be published. Required fields are marked *