ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 12, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಇಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಕೃಷ್ಣ ಪಕ್ಷದ ತ್ರಯೋದಶಿ. ರೋಹಿಣಿ ನಕ್ಷತ್ರ, ವೃದ್ಧಿ ಯೋಗದ ಈ ದಿನವು ಪ್ರದೋಷ, ಮಾಸ ಶಿವರಾತ್ರಿ ಮತ್ತು ಜಗದ್ಗುರು ವಿದ್ಯಾರಣ್ಯರ ಆರಾಧನೆಯ ವಿಶೇಷ ಪರ್ವ ದಿನವಾಗಿದೆ. ರವಿ ಮಿಥುನ ರಾಶಿಯಲ್ಲಿ ಮತ್ತು ಚಂದ್ರ ವೃಷಭ ರಾಶಿಯ ರೋಹಿಣಿ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ. ಉತ್ತಮ ಆಲೋಚನೆಗಳು ನಮ್ಮನ್ನು ಕೀರ್ತಿ ಪ್ರತಿಷ್ಠೆಗಳಿಗೆ ಕೊಂಡೊಯ್ಯುವ ಮಾರ್ಗವನ್ನು ತೆರೆಯಲಿವೆ ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.
