ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 20, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ತದಿಗೆ, ಉತ್ತರ ಭಾದ್ರ ನಕ್ಷತ್ರ, ಸಾಧ್ಯ ಯೋಗ ಮತ್ತು ಗರಜೆ ಕರಣ ಇರತಕ್ಕಂತಹ ಈ ದಿನದಂದು ರಾಹುಕಾಲವು ಬೆಳಗ್ಗೆ 11:04 ರಿಂದ ಮಧ್ಯಾಹ್ನ 12:32 ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 1:35 ರಿಂದ 2:53 ರ ತನಕವಿದೆ. ಇದು ಮಹಾಲಕ್ಷ್ಮಿಯ ಅನುಗ್ರಹವನ್ನು ಪಡೆಯಲು ಶುಭಕರವಾದ ಶುಕ್ರವಾರವಾಗಿದೆ.
ಈ ದಿನದಂದು ಹೊರನಾಡು ಅನ್ನಪೂರ್ಣೇಶ್ವರಿ ರಥೋತ್ಸವ, ವಿಶ್ವ ಸಾಮಾಜಿಕ ನ್ಯಾಯದ ದಿನ, ಹಾಗೂ ಪಾಂಡವಪುರ, ಚಿನಕುರುಳಿ ಸಿದ್ದಲಿಂಗೇಶ್ವರ ಸ್ವಾಮಿಗಳ ರಥೋತ್ಸವವೂ ನಡೆಯಲಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ.
