ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ,ಪಂಚಮಿಯ ಈ ದಿನ, ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ.
ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗೆ ಅನ್ವಯಿಸುವ ಗ್ರಹಗಳ ಶುಭ ಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಪ್ರಯತ್ನಕ್ಕೆ ತಕ್ಕ ಫಲ, ಆದಾಯ ವೃದ್ಧಿ ಮತ್ತು ಆಸ್ತಿ ಕಲಹ ನಿವಾರಣೆಯಾಗಲಿದೆ. ವೃಷಭ ರಾಶಿಯವರಿಗೆ ಆತ್ಮವಿಶ್ವಾಸ, ಪಾಲುದಾರಿಕೆಯಿಂದ ಲಾಭ ಹಾಗೂ ಮೇಲಧಿಕಾರಿಗಳಿಂದ ಸಹಕಾರ ಸಿಗಲಿದೆ. ಮಿಥುನ ರಾಶಿಯವರಿಗೆ ವೃತ್ತಿಯಲ್ಲಿ ಪ್ರಗತಿ, ಕುಟುಂಬ ಸೌಖ್ಯ ಮತ್ತು ಮಕ್ಕಳಿಂದ ಶುಭ ಸಮಾಚಾರವಿದೆ. ಕರ್ಕಾಟಕ ರಾಶಿಯವರು ಆರೋಗ್ಯದಲ್ಲಿ ಚೇತರಿಕೆ ಕಾಣಲಿದ್ದು, ಸಾಲ ಮುಕ್ತರಾಗುವ ಯೋಗವಿದೆ ಎಂದಿದ್ದಾರೆ.