Headlines

IND vs ENG: ‘ಇದು ಐಪಿಎಲ್ ಅಲ್ಲ’; ಟೀಂ ಇಂಡಿಯಾ ಆಟಗಾರರನ್ನು ಎಚ್ಚರಿಸಿದ ಆರ್ಚರ್ – Kannada News | Team India’s Struggle: Jofra Archer Blames IPL Mindset for Overseas Cricket Failures

ಐಪಿಎಲ್‌ನಲ್ಲಿ (IPL) ಅಬ್ಬರಿ ಬೊಬ್ಬಿರಿದಿದ್ದ ಟೀಂ ಇಂಡಿಯಾ ಆಟಗಾರರು ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಪೆವಿಲಿಯನ್ ಪರೇಡ್ ನಡೆಸುತ್ತಿದ್ದಾರೆ. ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಪ್ರತಿ ಎಸೆತವನ್ನು ಸಿಕ್ಸರ್​ಗಟ್ಟಲು ಯತ್ನಿಸುತ್ತಿದ್ದ ಭಾರತದ ಬ್ಯಾಟ್ಸ್‌ಮನ್​ಗಳು ವಿದೇಶಿ ಪಿಚ್​ಗಳಲ್ಲಿ ರನ್ ಬರ ಎದುರಿಸುತ್ತಿದ್ದಾರೆ. ಮೊದಲಿಗೆ ಐರ್ಲೆಂಡ್ ವಿರುದ್ಧ ಟಿ20 ಸರಣಿ ಸೋತಿದ್ದ ಟೀಂ ಇಂಡಿಯಾ ಇದೀಗ ಇಂಗ್ಲೆಂಡ್‌ (India vs England) ವಿರುದ್ಧವೂ ಸರಣಿ ಸೋಲಿನ ಆತಂಕದಲ್ಲಿದೆ. ಇದಕ್ಕೆ ಕಾರಣ ತಂಡದಲ್ಲಿನ ಸಾಂಘಿಕ ಹೋರಾಟದ ಕೊರತೆ. ಬ್ಯಾಟಿಂಗ್‌ ವಿಭಾಗದಲ್ಲಿ ಯಾರೂ ಪರಿಸ್ಥಿತಿಗೆ ಅನುಗುಣವಾಗಿ ಆಡುತ್ತಿಲ್ಲ. ಹಾಗೆಯೇ ಅನಾನುಭವಿ ಬೌಲಿಂಗ್ ವಿಭಾಗಕ್ಕೂ ರನ್​ಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಇದು ತಂಡದ ಸೋಲಿಗೆ ಕಾರಣವಾಗುತ್ತಿದೆ. ಇದರ ನಡುವೆ ಇಂಗ್ಲೆಂಡ್‌ ತಂಡದ ಸ್ಟಾರ್ ವೇಗದ ಬೌಲರ್ ಜೋಫ್ರಾ ಆರ್ಚರ್, ಟೀಂ ಇಂಡಿಯಾ ಆಟಗಾರರು ಐಪಿಎಲ್ ಗುಂಗಿನಿಂದ ಹೊರಬಂದು ನಿಜವಾದ ಕ್ರಿಕೆಟ್​ಗೆ ಒತ್ತು ನೀಡಲಿ ಎಂಬ ಎಚ್ಚರಿಕೆ ನೀಡಿದ್ದಾರೆ.

ಮೂರನೇ ಟಿ20 ಪಂದ್ಯ ಮುಗಿದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಆರ್ಚರ್ ಟೀಂ ಇಂಡಿಯಾ ಆಟಗಾರರು ಎಲ್ಲಿ ಎಡವುತ್ತಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ವಿವರಿಸಿದರು. ಅದರಲ್ಲೂ ಬಹುಮುಖ್ಯವಾಗಿ ಟೀಂ ಇಂಡಿಯಾ ಆಟಗಾರರು ಐಪಿಎಲ್​ ಗುಂಗಿನಿಂದ ಹೊರಬಂದು, ಇಂಗ್ಲೆಂಡ್‌ ಪರಿಸ್ಥಿತಿಗೆ ತಕ್ಕನಾಗಿ ಆಡಬೇಕು ಎಂಬುದನ್ನು ಒತ್ತಿ ಹೇಳಿದರು.

ಐಪಿಎಲ್‌ನಲ್ಲಿ ಬ್ಯಾಟಿಂಗ್‌ ಸ್ನೇಹಿ ಪಿಚ್

ಭಾರತೀಯ ಬ್ಯಾಟ್ಸ್‌ಮನ್‌ಗಳ ವಿರುದ್ಧದ ನಿಮ್ಮ ತಂತ್ರವು ಐಪಿಎಲ್ ತಂತ್ರಕ್ಕಿಂತ ಹೇಗೆ ಭಿನ್ನವಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಆರ್ಚರ್, ‘ಇಂಗ್ಲಿಷ್ ಪರಿಸ್ಥಿತಿಗಳಲ್ಲಿ ಬೌಲರ್‌ಗಳು ಸಣ್ಣ ವಿವರಗಳ ಬಗ್ಗೆ ನಿರಂತರವಾಗಿ ಚಿಂತಿಸುವ ಬದಲು ಸಾಂಪ್ರದಾಯಿಕ ವಿಧಾನಗಳಿಗೆ ಒಗ್ಗಿಕ್ಕೊಳ್ಳುವುದು ಉತ್ತಮ. ಐಪಿಎಲ್‌ನಲ್ಲಿ ಬ್ಯಾಟಿಂಗ್‌ ಸ್ನೇಹಿ ಪಿಚ್ ಹಾಗೂ ಚಿಕ್ಕ ಬೌಂಡರಿಗಳನ್ನು ಇಡುವುದರಿಂದ ಅಲ್ಲಿ ನೀವು ತುಂಬಾ ಜಾಗರೂಕರಾಗಿ ಬೌಲ್ ಮಾಡಬೇಕು. ಆದರೆ ಇಲ್ಲಿ ಬೌಲರ್​ಗಳಿಗೆ ಕೆಲವು ತಪ್ಪುಗಳನ್ನು ಮಾಡಲು ಅವಕಾಶವಿದೆ ಎಂದು ನಾನು ಭಾವಿಸುತ್ತೇನೆ.

IND vs SL: ಟಿ20 ಸರಣಿ ರದ್ದು; ಭಾರತ- ಲಂಕಾ ನಡುವಿನ ಟೆಸ್ಟ್ ಸರಣಿ ವೇಳಾಪಟ್ಟಿ ಪ್ರಕಟ

ವಿಶೇಷ ಇನ್ನಿಂಗ್ಸ್​ನ ಅಗತ್ಯವಿರುತ್ತದೆ

ಹೀಗಾಗಿ ಇಂಗ್ಲೆಂಡ್​ನಲ್ಲಿ ಗೆಲುವಿಗೆ 200+ ಟಾರ್ಗೆಟ್ ಸಾಕು ಎಂದು ನಾನು ಭಾವಿಸುತ್ತೇನೆ. ಆದರೆ ಐಪಿಎಲ್‌ನಲ್ಲಿ 200 ಕ್ಕಿಂತ ಹೆಚ್ಚು ಸ್ಕೋರ್‌ಗಳನ್ನು ಸುಲಭವಾಗಿ ಬೆನ್ನಟ್ಟಲಾಗುತ್ತದೆ. ಹಾಗಂತ ಇಂಗ್ಲೆಂಡ್ ಪಿಚ್‌ಗಳಲ್ಲಿ 200 ರನ್ ಗಳಿಸಿದರೆ ಗೆಲುವು ಖಚಿತ ಎಂದು ಹೇಳಲಾಗದು. ಆದರೆ ಈ 200+ ರನ್​ಗಳ ಗುರಿಯನ್ನು ಬೆನ್ನಟ್ಟಲು ಎದುರಾಳಿ ತಂಡದಿಂದ ವಿಶೇಷ ಇನ್ನಿಂಗ್ಸ್​ನ ಅಗತ್ಯವಿರುತ್ತದೆ. ಇನ್ನು ಈ ಪಂದ್ಯದಲ್ಲಿ ನಮ್ಮ ತಂಡದ ಎಲ್ಲಾ ಬೌಲರ್​ಗಳು ಅತ್ಯುತ್ತಮವಾಗಿ ಬೌಲಿಂಗ್‌ ಮಾಡಿದರು. ಹೀಗಾಗಿ ಅವರೆಲ್ಲರಿಗೂ ವಿಕೆಟ್​ಗಳು ಸಿಕ್ಕವು. ಎಲ್ಲರೂ ತಂಡದ ಗೆಲುವಿಗೆ ಕೊಡುಗೆ ನೀಡಿದ್ದಕ್ಕೆ ನನಗೆ ಸಂತೋಷವಾಗಿದೆ’ ಎಂದು ಆರ್ಚರ್ ಹೇಳಿಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *