
ಬೆಂಗಳೂರು, ಮಾರ್ಚ್ 27: ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿನ್ನಸ್ವಾಮಿ ಮೈದಾನದಲ್ಲಿ ನಾಳೆ IPL ಉದ್ಘಾಟನಾ ಪಂದ್ಯ ನಡೆಯಲಿದೆ. ಸಕಲ ಭದ್ರತೆ ಕೂಡ ಕೈಗೊಳ್ಳಲಾಗಿದೆ. ಈ ಬಗ್ಗೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಪ್ರತಿಕ್ರಿಯಿಸಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3 ಹಂತದ ಸೆಕ್ಯುರಿಟಿ ಇರಲಿದೆ. ಆರ್ಎಎಫ್ ಮತ್ತು ಗರುಡ ಟೀಂ, ಪಿಕಪ್ ಸ್ಕ್ವಾಡ್ ಇದೆ. ಭದ್ರತೆಗೆ 2,500 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಆಫ್ಲೈನ್ ಟಿಕೆಟ್ ಸಿಗುತ್ತೆ ಎಂದು ಯಾರು ಬರಬಾರದು. ಮೈದಾನ ಬಳಿ ರಸ್ತೆಗೆ ಬಂದು ನಿಲ್ಲುವವರಿಗೆ ಅವಕಾಶ ನೀಡಲ್ಲ. ಟಿಕೆಟ್ ಇಲ್ಲದಿದ್ದರೆ ಮನೆಯಲ್ಲಿ ಕುಳಿತು ಪಂದ್ಯವನ್ನ ನೋಡಿ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.