IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್​​ 04: IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಬೇಡಿಕೆ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕಿಡಿ ಕಾರಿದ್ದಾರೆ. ಶಾಸಕರ ಪಿಎಗಳು IPL ಟಿಕೆಟ್ ಪಡೆದಿದ್ದನ್ನು ಖಂಡಿಸಿದ ಡಿವಿಎಸ್, ಪಂದ್ಯದ ಟಿಕೆಟ್​ಗಾಗಿ ಯಾವುದೇ ಶಾಸಕರು ಭಿಕ್ಷೆ ಬೇಡಬಾರದು. ಆರ್​ಸಿಬಿ ವಿಜಯೋತ್ಸವ ವೇಳೆ 11 ಅಭಿಮಾನಿಗಳ ಸಾವಿನ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಿದ್ದರೆ ಗೌರವವಿರುತ್ತಿತ್ತು. ಚುನಾವಣೆಯಲ್ಲಿ ನೂರಾರು ಕೋಟಿ ಸುರಿದು ಶಾಸಕರಾದವರು ಟಿಕೆಟ್​ಗೆ ಭಿಕ್ಷೆ ಬೇಡುತ್ತಾರಲ್ಲಾ ನಾಚಿಕೆಯಾಗಬೇಕು. ಯಾವುದೇ ಜನಪ್ರತಿನಿಧಿ ಹೀಗೆ ಮಾಡಬಾರದು. ಕ್ಷೇತ್ರಕ್ಕೆ ಏನಾದರೂ ಸಹಕಾರ ಬೇಕು ಅಂದಾಗ ಭಿಕ್ಷೆ ಬೇಡಿ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *