IPL ಫೈನಲ್​​​ ದಿನದಂದು ಆರ್‌ಸಿಬಿ ಫ್ಯಾನ್ಸ್​​​ಗೆ ಉಚಿತ ಮೆಟ್ರೋ ಪ್ರಯಾಣ: ಅಂತೆಕಂತೆಗಳಿಗೆ BMRCL ಸ್ಪಷ್ಟನೆ

ಬೆಂಗಳೂರು, ಮೇ 30: ಅಹಮದಾಬಾದ್‌ನಲ್ಲಿ ಮೇ 31ರಂದು ನಡೆಯಲಿರುವ ಐಪಿಎಲ್ (IPL) ಫೈನಲ್ ಪಂದ್ಯ ಹಿನ್ನೆಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ನಮ್ಮ ಮೆಟ್ರೋದಲ್ಲಿ ಉಚಿತ ಪ್ರಯಾಣದ ಸೌಲಭ್ಯ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಸ್ಪಷ್ಟಪಡಿಸಿದೆ. ಯಾರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ. ಎಲ್ಲರೂ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಬೇಕೆಂದು ಮನವಿ ಮಾಡಲಾಗಿದೆ.

ಮುಖ್ಯಾಂಶಗಳು

  • ನಾಳೆ ಅಹಮದಾಬಾದ್​​ನಲ್ಲಿ ಐಪಿಎಲ್​ ಫೈನಲ್ ಪಂದ್ಯ
  • ಮೆಟ್ರೋದಲ್ಲಿ RCB ಅಭಿಮಾನಿಗಳಿಗೆ ಉಚಿತ ಪ್ರಯಾಣ ವದಂತಿ
  • ಉಚಿತ ಪ್ರಯಾಣ ಇಲ್ಲ ಎಂದು ಬಿಎಂಆರ್​ಸಿಎಲ್​​​​

ವದಂತಿ ಬಗ್ಗೆ ಸ್ಪಷ್ಟನೆ ನೀಡಿದ ಬಿಎಂಆರ್​ಸಿಎಲ್

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಎಂಆರ್​ಸಿಎಲ್, ಬಿಎಂಆರ್‌ಸಿಎಲ್​​ ಗಮನಕ್ಕೆ ಬಂದಿರುವಂತೆ ಕೆಲವು ಖಾಸಗಿ ವ್ಯಕ್ತಿಗಳು, ಸಂಸ್ಥೆಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಸಂದೇಶಗಳು ಹಾಗೂ ಜಾಹೀರಾತುಗಳಲ್ಲಿ, 2026ರ ಮೇ 31ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯಾವಳಿಯ ಪ್ರಯುಕ್ತ ಆರ್‌ಸಿಬಿ ಅಭಿಮಾನಿಗಳಿಗೆ ಉಚಿತ ಮೆಟ್ರೋ ಪ್ರಯಾಣ ಸೌಲಭ್ಯ ಲಭ್ಯವಿರುತ್ತದೆ ಎಂದು ತಪ್ಪಾಗಿ ಪ್ರಚಾರ ಮಾಡಲಾಗಿದೆ.

ಬಿಎಂಆರ್​ಸಿಎಲ್ ಟ್ವೀಟ್​

ಇದನ್ನೂ ಓದಿ: ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್!

2026ರ ಮೇ 31ರಂದು ಆರ್‌ಸಿಬಿ ಅಭಿಮಾನಿಗಳಿಗೆ ಅಥವಾ ಯಾವುದೇ ಇತರ ಪ್ರಯಾಣಿಕ ವರ್ಗಕ್ಕೆ ಉಚಿತ ಮೆಟ್ರೋ ಪ್ರಯಾಣ ಸೌಲಭ್ಯ ಒದಗಿಸುವ ಯಾವುದೇ ಯೋಜನೆಯನ್ನು ಬಿಎಂಆರ್‌ಸಿಎಲ್ ಘೋಷಿಸಿಲ್ಲ ಹಾಗೂ ಅನುಮೋದಿಸಿಲ್ಲ. ಉಚಿತ ಮೆಟ್ರೋ ಪ್ರಯಾಣ ಎಂದು ಜಾಹೀರಾತು ನೀಡಲು, ಪ್ರಚಾರ ಮಾಡಲು ಅಥವಾ ಪ್ರತಿನಿಧಿಸಲು ಯಾವುದೇ ವ್ಯಕ್ತಿ, ಸಂಸ್ಥೆ ಅಥವಾ ಸಂಘಟನೆಗೆ ಬಿಎಂಆರ್‌ಸಿಎಲ್ ಅನುಮತಿ ಅಥವಾ ಅಧಿಕೃತ ಮಾನ್ಯತೆ ನೀಡಿಲ್ಲ ಎಂದು ತಿಳಿಸಿದೆ.

ಪ್ರಯಾಣಿಕರು ಟಿಕೆಟ್ ಖರೀದಿಸಿ ಪ್ರಯಾಣಿಸಬೇಕು

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲು ಎಲ್ಲಾ ಪ್ರಯಾಣಿಕರು ಟಿಕೆಟ್ ಖರೀದಿಸಬೇಕು ಅಥವಾ ಸ್ಮಾರ್ಟ್ ಕಾರ್ಡ್, ಕ್ಯೂಆರ್ ಟಿಕೆಟ್, ಎನ್‌ಸಿಎಂಸಿ ಕಾರ್ಡ್ ಅಥವಾ ಬಿಎಂಆರ್‌ಸಿಎಲ್ ಅನುಮೋದಿಸಿರುವ ಇತರೆ ಪ್ರಯಾಣ ಮಾಧ್ಯಮಗಳನ್ನು ಬಳಸಬೇಕು. ಪ್ರಯಾಣವು ಬಿಎಂಆರ್‌ಸಿಎಲ್‌ನ ಪ್ರಚಲಿತ ದರ ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತವೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಹಳದಿ ಮಾರ್ಗದಲ್ಲಿ ಮೆಟ್ರೋ ರೈಲುಗಳ ಕೊರತೆ ಹಿನ್ನೆಲೆ ನಿತ್ಯ ಪರದಾಟ: BMRCL ವಿರುದ್ಧ ಪ್ರಯಾಣಿಕರ ಆಕ್ರೋಶ

ಸಾರ್ವಜನಿಕರು ಅನಧಿಕೃತ ಸಾಮಾಜಿಕ ಜಾಲತಾಣದ ಪೋಸ್ಟ್​ಗಳು, ಜಾಹೀರಾತುಗಳು ಅಥವಾ ಸಂದೇಶಗಳನ್ನು ನಂಬಬಾರದು ಹಾಗೂ ಮಾಹಿತಿಗಾಗಿ ಬಿಎಂಆರ್‌ಸಿಎಲ್‌ ಅಧಿಕೃತ ಪ್ರಕಟಣೆಗಳು ಮತ್ತು ಅಧಿಕೃತ ಮಾಧ್ಯಮಗಳನ್ನು ಮಾತ್ರ ಅವಲಂಬಿಸುವಂತೆ ಮನವಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:02 pm, Sat, 30 May 26

Source link

Leave a Reply

Your email address will not be published. Required fields are marked *