ಹಾಲಿ ಚಾಂಪಿಯನ್ ಆರ್ಸಿಬಿ 2026 ರ ಐಪಿಎಲ್ನಲ್ಲಿ ಅಮೋಘ ಪ್ರದರ್ಶನ ನೀಡಿ ಮೊದಲ ತಂಡವಾಗಿ ಪ್ಲೇಆಫ್ಗೇರಿದೆ. ಆರ್ಸಿಬಿ ಕಳೆದ ಐಪಿಎಲ್ನಂತೆ ಈ ಐಪಿಎಲ್ನಲ್ಲೂ ಎಲ್ಲಾ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಆರ್ಸಿಬಿಯ ಸಾಂಘಿಕ ಹೋರಾಟವನ್ನು ವೀಕ್ಷಿಸಿರುವ ಹಲವಾರು ಮಾಜಿ ಕ್ರಿಕೆಟಿಗರು ಈ ಬಾರಿಯೂ ಆರ್ಸಿಬಿಯೇ ಚಾಂಪಿಯನ್ ಎನ್ನುತ್ತಿದ್ದಾರೆ. ಈ ರೀತಿಯಾಗಿ ಭವಿಷ್ಯ ನುಡಿದವರಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಕೂಡ ಒಬ್ಬರು.
ಆರ್ಸಿಬಿಯದ್ದೇ ಟ್ರೋಫಿ
ಕ್ರಿಕ್ಬಜ್ನಲ್ಲಿ ಆರ್ಸಿಬಿ ತಂಡದ ಪ್ರದರ್ಶನದ ಕುರಿತು ಮಾತನಾಡಿದ ವೀರೇಂದ್ರ ಸೆಹ್ವಾಗ್, ‘ಚಾಂಪಿಯನ್ ತಂಡವು ಅಗ್ರ ಎರಡು ಸ್ಥಾನಗಳಲ್ಲಿ ಅರ್ಹತೆ ಪಡೆಯಬೇಕು. ಅದರಂತೆ ಆರ್ಸಿಬಿ ಆಡುತ್ತಿರುವ ರೀತಿಯನ್ನು ನೋಡಿದರೆ, ಈ ವರ್ಷವೂ ಅವರೇ ಟ್ರೋಫಿಯನ್ನು ಎತ್ತಿಹಿಡಿಯುತ್ತಾರೆ ಎಂದು ತೋರುತ್ತದೆ’ ಎಂದಿದ್ದಾರೆ. ಆದಾಗ್ಯೂ, ಆರ್ಸಿಬಿ ಎದುರಿಸುತ್ತಿರುವ ದೊಡ್ಡ ಸವಾಲನ್ನು ಸಹ ಉಲ್ಲೇಖಿಸಿರುವ ಸೆಹ್ವಾಗ್. ಟ್ರೋಫಿ ಗೆಲುವಿನಲ್ಲಿ ಆರ್ಸಿಬಿಗೆ ಕಠಿಣ ಹೋರಾಟ ನೀಡಬಲ್ಲ ತಂಡವೆಂದರೆ ಅದು ಗುಜರಾತ್ ಟೈಟಾನ್ಸ್.
ಒಂದು ವೇಳೆ ಗುಜರಾತ್ ತಂಡ ಕೂಡ ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆದರೆ, ಆರ್ಸಿಬಿಗೆ ಅದು ಕಷ್ಟಕರವಾಗಿರುತ್ತದೆ. ಏಕೆಂದರೆ ಗುಜರಾತ್ ಟೈಟಾನ್ಸ್ ಕೂಡ ಉತ್ತಮ ಬೌಲಿಂಗ್ ಘಟಕವನ್ನು ಹೊಂದಿದೆ. ಈ ಎರಡೂ ತಂಡಗಳ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ಬಲಿಷ್ಠವಾಗಿರುವುದರಿಂದ ಪ್ಲೇಆಫ್ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದನ್ನು ನೋಡಲು ಖುಷಿಯಾಗುತ್ತದೆ. ಉಭಯ ತಂಡಗಳ ಅಗ್ರ ಮೂವರು ಬ್ಯಾಟ್ಸ್ಮನ್ಗಳು ಸ್ಥಿರವಾಗಿ ರನ್ ಗಳಿಸುತ್ತಿದ್ದಾರೆ ಎಂದು ಸೆಹ್ವಾಗ್ ಎಚ್ಚರಿಸಿದ್ದಾರೆ.
ಪ್ಲೇಆಫ್ಗೆ ಅರ್ಹತೆ ಪಡೆದ ಮೊದಲ ತಂಡ
ಸೆಹ್ವಾಗ್ ನೀಡಿರುವ ಹೇಳಿಕೆಗೆ ಪೂರಕವಾಗಿ ಆರ್ಸಿಬಿ ಕೂಡ ಚಾಂಪಿಯನ್ ತಂಡದಂತೆಯೇ ಪ್ರದರ್ಶನ ನೀಡುತ್ತಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 23 ರನ್ಗಳಿಂದ ಜಯಗಳಿಸಿದ ಆರ್ಸಿಬಿ ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಈ ಆವೃತ್ತಿಯಲ್ಲಿ ಪ್ಲೇಆಫ್ಗೆ ಅರ್ಹತೆ ಪಡೆದ ಮೊದಲ ಐಪಿಎಲ್ ತಂಡ ೆಎನಿಸಿಕೊಂಡಿದೆ. ಹಾಲಿ ಚಾಂಪಿಯನ್ ಆರ್ಸಿಬಿ ಈ ಆವೃತ್ತಿಯಲ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಿದ್ದು, ಒಂಬತ್ತು ಪಂದ್ಯಗಳನ್ನು ಗೆದ್ದು ನಾಲ್ಕರಲ್ಲಿ ಸೋತಿದ್ದು, ಒಟ್ಟು 18 ಅಂಕಗಳೊಂದಿಗೆ ಪ್ಲೇಆಫ್ಗೆ ಅರ್ಹತೆ ಪಡೆದಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ