Headlines

IPL Final 2026: ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​, ಅಭಿಮಾನಿಗಳಿಗೆ ಪೊಲೀಸರಿಂದ ಖಡಕ್​​ ಎಚ್ಚರಿಕೆ

ಅಭಿಮಾನಿಗಳಿಗೆ ಬೆಂಗಳೂರು ಪೊಲೀಸರಿಂದ ಖಡಕ್​​ ಎಚ್ಚರಿಕೆ

ಬೆಂಗಳೂರು, ಮೇ 31: ಕಳೆದ ವರ್ಷ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ತಂಡ ಐಪಿಎಲ್​ ಟ್ರೋಫಿ ಗೆದ್ದ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ವೇಳೆ ದುರಂತ ನಡೆದು 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆ ಬಳಿಕ ಬೆಂಗಳೂರಿನಲ್ಲಿ ನಡೆದ ಪ್ರತಿಯೊಂದು ಐಪಿಎಲ್​​ ಪಂದ್ಯಕ್ಕೂ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಈ ನಡುವೆ ಇಂದು (ಮೇ 31) ಬೆಂಗಳೂರು ‌ಮತ್ತು ಗುಜರಾತ್ ತಂಡಗಳ ನಡುವೆ ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದರೂ ಫಲಿತಾಂಶದ ಬಳಿಕ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಅಲರ್ಟ್​​ ಆಗಿದ್ದಾರೆ. ಅಭಿಮಾನಿಗಳಿಗೆ ಖಡಕ್​​ ಎಚ್ಚರಿಕೆ ನೀಡಿ ಮಾರ್ಗಸೂಚಿ ರಿಲೀಸ್​​ ಮಾಡಿದ್ದಾರೆ.

ಪೊಲೀಸರ ಮಾರ್ಗಸೂಚಿಯಲ್ಲಿ ಏನಿದೆ?

  • ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ
  • ಅನುಮತಿ ಇಲ್ಲದೆ ರಸ್ತೆಗಳಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಸುವಂತಿಲ್ಲ
  • ಪಟಾಕಿ ಸಿಡಿಸಬಾರದು, ಅಪಾಯಕಾರಿ ವಸ್ತುಗಳನ್ನು ಬಳಸಬಾರದು
  • ಜನಸಂದಣಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಶಾಂತಿ, ಶಿಸ್ತು ಪಾಲಿಸಬೇಕು
  • ಸಂಚಾರ ವಿಭಾಗದ ಪೊಲೀಸರು ನೀಡುವ ಸಲಹೆ ಸೂಚನೆ ಪಾಲಿಸಬೇಕು
  • ಬೈಕ್ ರ್ಯಾಲಿ, ಅತಿವೇಗದ ಚಾಲನೆ, ಸ್ಟಂಟ್, ಹಾರ್ನ್ ಮಾಡುವಂತಿಲ್ಲ
  • ರಸ್ತೆ ತಡೆದು ಸಂಭ್ರಮಾಚರಣೆ ಮಾಡುವಂತಿಲ್ಲವೆಂದು ಪೊಲೀಸರ ಸೂಚನೆ
  • ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಬಾರದು
  • ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಟಿಸುವ ಪೋಸ್ಟ್ ಹಾಕುವಂತಿಲ್ಲ
  • ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳಬಾರದು
  • ಫಲಿತಾಂಶದ ಹೆಸರಿನಲ್ಲಿ ಬೇರೆ ತಂಡದ ಅಭಿಮಾನಿಗಳನ್ನು ನಿಂದಿಸಬಾರದು

ಇದನ್ನೂ ಓದಿ: ಫೈನಲ್ ಪ್ಲೇಯಿಂಗ್ ಇಲೆವೆನ್; RCB ಮುಂದಿದೆ 2 ಆಯ್ಕೆ

IPL ಫೈನಲ್ ಹಿನ್ನೆಲೆ ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಂಗಳೂರು ಪೊಲೀಸರು ಈ ಸೂಚನೆಗಳನ್ನು ಪಾಲಿಸುವಂತೆ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕ್ರೀಡೆಯನ್ನ ಕ್ರೀಡೆಯಾಗಿ ಸ್ವೀಕರಿಸಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ಸೂಚಿಸಲಾಗಿದ್ದು, ಇದನ್ನು ಮೀರಿ ಹುಚ್ಚಾಟ ನಡೆಸಿದರೆ ಕಾನೂನು ಕ್ರಮ ಫಿಕ್ಸ್​​ ಎಂಬ ಎಚ್ಚರಿಕೆಯನ್ನೂ ನಗರ ಪೊಲೀಸ್​​ ಆಯುಕ್ತ ಸೀಂಮತ್ ಕುಮಾರ್‌ ಸಿಂಗ್ ನೀಡಿದ್ದಾರೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:53 am, Sun, 31 May 26

Source link

Leave a Reply

Your email address will not be published. Required fields are marked *