
ಏಪ್ರಿಲ್ 12ರಿಂದ 18ರ ಅವಧಿಯಲ್ಲಿ ಸಾಡೇ ಸಾಥ್ ಶನಿ ಮೀನ ರಾಶಿಯಲ್ಲಿ ಹಾಗೂ ಗುರು ಮಿಥುನ ರಾಶಿಯಲ್ಲಿದ್ದಾನೆ. ಈ ಗ್ರಹಸ್ಥಿತಿಗಳು ಉದ್ಯೋಗದ ಮೇಲೆ ಬೀರುವ ಅನೇಕ ಪ್ರಭಾವಗಳನ್ನು ಬೀರಲಿವೆ.
ಮೇಷ:
ಉದ್ಯೋಗದಲ್ಲಿ ಹಠಾತ್ ಬದಲಾವಣೆ ಸಾಧ್ಯತೆ. ಹಿರಿಯ ಅಧಿಕಾರಿಗಳಿಂದ ಒತ್ತಡ ಬರಬಹುದು. ಆದರೆ ನಿಮ್ಮ ಸಂವಹನ ಕಲೆ ಮತ್ತು ಶ್ರಮದಿಂದ ವಾರದ ಕೊನೆಯಲ್ಲಿ ಉತ್ತಮ ಲಾಭ ಹಾಗೂ ಕಚೇರಿಯಲ್ಲಿ ಸ್ಥಾನಮಾನ ಪಡೆಯುವಿರಿ.
ವೃಷಭ:
ವೃತ್ತಿಯಲ್ಲಿ ಬಹಳ ಸಮಯದಿಂದ ನಿರೀಕ್ಷಿಸುತ್ತಿದ್ದ ಬಡ್ತಿ ಸಿಗುವ ಸಮಯ. ಆರ್ಥಿಕವಾಗಿ ಲಾಭದಾಯಕ ದಿನಗಳು. ಹೊಸ ಉದ್ಯೋಗದ ಆಫರ್ಗಳು ನಿಮ್ಮನ್ನು ಹುಡುಕಿ ಬರಲಿವೆ. ಆತ್ಮವಿಶ್ವಾಸದಿಂದ ಹೆಜ್ಜೆ ಇಡಿ, ಯಶಸ್ಸು ನಿಮ್ಮದಾಗಲಿದೆ.
ಮಿಥುನ:
ನಿಮ್ಮ ರಾಶಿಯಲ್ಲೇ ಗುರು ಇರುವುದರಿಂದ ಉದ್ಯೋಗದಲ್ಲಿ ಹೊಸ ಆಯಾಮ ತೆರೆದುಕೊಳ್ಳಲಿದೆ. ಸೃಜನಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ವ್ಯಾಪಾರಸ್ಥರಿಗೆ ಲಾಭದಾಯಕ ವಾರವಿದು. ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳಿ.
ಕರ್ಕಾಟಕ:
ದೂರದ ಪ್ರಯಾಣದಿಂದ ವೃತ್ತಿಜೀವನದಲ್ಲಿ ಲಾಭವಾಗಲಿದೆ. ಧಾರ್ಮಿಕ ಅಥವಾ ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಇದು ಅತ್ಯಂತ ಶುಭ ಕಾಲ. ಭಾಗ್ಯೋದಯವಾಗುವ ಸೂಚನೆಗಳಿದ್ದು, ಮೇಲಧಿಕಾರಿಗಳ ಸಂಪೂರ್ಣ ಸಹಕಾರ ನಿಮಗಿರುತ್ತದೆ.
ಸಿಂಹ:
ಕೆಲಸದ ಸ್ಥಳದಲ್ಲಿ ಶತ್ರುಗಳ ಕಾಟವಿರಬಹುದು, ಜಾಗರೂಕರಾಗಿರಿ. ಹಠಾತ್ ವರ್ಗಾವಣೆಯ ಯೋಗವಿದೆ. ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯಿರಿ. ಆರೋಗ್ಯದ ಕಡೆಗೂ ಸ್ವಲ್ಪ ಗಮನ ನೀಡುವುದು ಅನಿವಾರ್ಯ.
ಕನ್ಯಾ:
ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರುತ್ತದೆ. ಸಾರ್ವಜನಿಕ ಸಂಪರ್ಕ ಹೊಂದಿರುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ನಿಮ್ಮ ಕಾರ್ಯಕ್ಷಮತೆ ಹೆಚ್ಚಾಗಲಿದ್ದು, ಹೊಸ ಒಪ್ಪಂದಗಳಿಗೆ ಸಹಿ ಹಾಕಲು ಇದು ಅತ್ಯಂತ ಸೂಕ್ತವಾದ ಸಮಯವಾಗಿದೆ.
ತುಲಾ:
ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಶುಭ ವಾರ್ತೆ ಇದೆ. ಉದ್ಯೋಗದಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳು ಬಗೆಹರಿಯಲಿವೆ. ಕಠಿಣ ಪರಿಶ್ರಮದಿಂದ ಮಾತ್ರ ಗುರಿ ತಲುಪಲು ಸಾಧ್ಯ. ಸಾಲದ ಬಾಧೆಗಳಿಂದ ಮುಕ್ತಿ ಪಡೆಯಲು ದಾರಿ ಗೋಚರಿಸಲಿದೆ.
ವೃಶ್ಚಿಕ:
ಬುದ್ಧಿವಂತಿಕೆಯಿಂದ ಕಠಿಣ ಸವಾಲುಗಳನ್ನು ಎದುರಿಸುವಿರಿ. ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಉತ್ತಮ ವೇದಿಕೆ ಸಿಗಲಿದೆ. ಉದ್ಯೋಗ ಬದಲಾವಣೆಗೆ ಇದು ಪೂರಕ ಸಮಯವಲ್ಲ, ಇರುವ ಕಡೆಯೇ ನಿಮ್ಮ ಶಕ್ತಿ ಪ್ರದರ್ಶಿಸಿ ಜಯಿಸಿ.
ಧನು:
ವೃತ್ತಿ ಕ್ಷೇತ್ರದಲ್ಲಿ ಸುಧಾರಣೆ ಕಂಡುಬರುತ್ತದೆ. ಭೂಮಿ ಅಥವಾ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿರುವವರಿಗೆ ಹೆಚ್ಚಿನ ಲಾಭ. ಮನೆಯಿಂದಲೇ ಕೆಲಸ ಮಾಡುವವರಿಗೆ ಕೆಲಸದ ಒತ್ತಡ ಹೆಚ್ಚಿರಬಹುದು. ಸ್ಥಿರವಾದ ಮನಸ್ಥಿತಿ ಕಾಪಾಡಿಕೊಳ್ಳಿ.
ಮಕರ:
ನಿಮ್ಮ ಪರಾಕ್ರಮದಿಂದ ಕಷ್ಟದ ಕೆಲಸಗಳನ್ನು ಸುಲಭವಾಗಿ ಮುಗಿಸುವಿರಿ. ಲೇಖಕರು ಮತ್ತು ಪತ್ರಕರ್ತರಿಗೆ ಶುಭ ಕಾಲ. ಕಿರಿಯ ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ಸಿಗಲಿದೆ. ಆರ್ಥಿಕವಾಗಿ ಈ ವಾರ ಧನ ಲಾಭದ ಸೂಚನೆಗಳಿವೆ.
ಕುಂಭ:
ಮಾತಿನ ಮೇಲೆ ನಿಗಾ ಇರಲಿ, ಕಚೇರಿಯಲ್ಲಿ ವಾದಗಳನ್ನು ತಪ್ಪಿಸಿ. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರ ಅಗತ್ಯ. ಕುಟುಂಬದ ವ್ಯವಹಾರಗಳನ್ನು ವೃತ್ತಿಯೊಂದಿಗೆ ಬೆರೆಸಬೇಡಿ. ತಾಳ್ಮೆಯಿಂದ ಕೆಲಸ ಮಾಡಿದರೆ ವಾರಾಂತ್ಯಕ್ಕೆ ಶುಭ ಫಲ ದೊರೆಯಲಿದೆ.
ಮೀನ:
ರಾಶಿಯಲ್ಲಿ ಶನಿ ಇರುವುದರಿಂದ ಕೆಲಸದಲ್ಲಿ ಗೊಂದಲವಿರಬಹುದು. ಶಿಸ್ತುಬದ್ಧವಾಗಿ ಕೆಲಸ ಮಾಡುವುದು ಅನಿವಾರ್ಯ. ಅತಿಯಾದ ಆಲೋಚನೆ ಬಿಟ್ಟು ಕರ್ತವ್ಯದ ಮೇಲೆ ಗಮನವಿಡಿ. ಧೈರ್ಯದಿಂದ ಕೆಲಸ ಮಾಡಿದರೆ ಅಡೆತಡೆಗಳು ದೂರವಾಗುತ್ತವೆ.
– ಲೋಹಿತ ಹೆಬ್ಬಾರ್ – 8762924271