
ಬೆಂಗಳೂರು, ಮಾರ್ಚ್ 06: ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2026ರ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಈ ಹೆಸರು ಬದಲಾವಣೆಯು ರಾಜ್ಯದ ಗೌರವಾನ್ವಿತ ವ್ಯಕ್ತಿಗೆ ಸಲ್ಲಿಸಲಾದ ಗೌರವವಾಗಿದೆ.
ಮರುನಾಮಕರಣದ ಜೊತೆಗೆ, ರಾಜ್ಯದ ವಿವಿಧ ಭಾಗಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ಹಲವಾರು ಹೊಸ ಯೋಜನೆಗಳನ್ನು ಸಹ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಅದರಂತೆ, ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ ವೆಚ್ಚದಲ್ಲಿ ಎರಡು ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲು ಸರ್ಕಾರ ಯೋಜಿಸಿದೆ. ಇವು ಸ್ಥಳೀಯ ಜನರಿಗೆ ವಿಶೇಷ ಆರೋಗ್ಯ ಸೇವೆಗಳನ್ನು ಒದಗಿಸಲಿವೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ