ಕೆಆರ್ಎಸ್ ಡ್ಯಾಮ್Image Credit source: gettyimages.com
ಬೆಂಗಳೂರು, ಜುಲೈ 06: ರಾಜ್ಯದಲ್ಲಿ ಮುಂಗಾರು ಮಳೆ (Monsoon rain) ಚುರುಕುಗೊಂಡಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಆರಂಭವಾಗಿದೆ. ಜೂನ್ ತಿಂಗಳಲ್ಲಿ ಮಳೆ ಕೈಕೊಟ್ಟಿದ್ದರಿಂದ ಆತಂಕದಲ್ಲಿದ್ದ ರೈತರಿಗೆ ಈಗ ಜಲಾಶಯಗಳಿಗೆ ಹರಿದುಬರುತ್ತಿರುವ ನೀರು ಕೊಂಚ ನಿರಾಳ ತಂದಿದ್ದು, ಕೃಷಿ ಚಟುವಟಿಕೆಗಳಿಗೆ ಮರುಜೀವ ಬಂದಂತಾಗಿದೆ. ಕಾವೇರಿ ಹಾಗೂ ಕೃಷ್ಣಾ ನದಿ ಪ್ರದೇಶದ ಡ್ಯಾಂಗಳು ಭರ್ತಿಯಾಗುವ ಮುನ್ಸೂಚನೆ ಸಿಕ್ಕಿದೆ.
ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ (ಜುಲೈ 06)
ಮುಂದಿನ ದಿನಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಮತ್ತಷ್ಟು ಏರಿಕೆ
ಶಿವಮೊಗ್ಗದ ಗಾಜನೂರು ಡ್ಯಾಂ ಈಗಾಗಲೇ ಸಂಪೂರ್ಣ ಭರ್ತಿಯಾಗಿದ್ದು, 14 ಗೇಟ್ಗಳ ಮೂಲಕ 18 ಸಾವಿರ ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಹರಿಸಲಾಗುತ್ತಿದೆ. ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಳೆದ 6 ದಿನಗಳಲ್ಲಿ ಡ್ಯಾಂ ಮಟ್ಟ 5.5 ಅಡಿಯಷ್ಟು ಏರಿಕೆಯಾಗಿದ್ದು, ವಿದ್ಯುತ್ ಉತ್ಪಾದನೆಗೆ ಕೊಂಚ ನಿರಾಳ ತಂದಿದೆ. ಹಾಗೆಯೇ ಕಬಿನಿ ಮತ್ತು ತುಂಗಭದ್ರಾ ಜಲಾಶಯಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನೀರಿನ ಸಂಗ್ರಹ ಕೊಂಚ ಕಡಿಮೆಯಿದೆ.
ಒಟ್ಟಾರೆಯಾಗಿ, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಮತ್ತಷ್ಟು ತೀವ್ರಗೊಳ್ಳುವ ಮುನ್ಸೂಚನೆ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಮತ್ತಷ್ಟು ವೇಗವಾಗಿ ಏರಿಕೆಯಾಗಲಿದ್ದು, ಜಲಕ್ಷಾಮದ ಆತಂಕ ದೂರಾಗಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On – 11:10 am, Mon, 6 July 26
