ಬೆಂಗಳೂರು, (ಜುಲೈ 05): ಜೂನ್ ತಿಂಗಳಲ್ಲಿ ಕರ್ನಾಟಕದಲ್ಲಿ (Karnataka) ಕೈಕೊಟ್ಟಿದ್ದ ಮುಂಗಾರು ಮಳೆ (Monsoon Rain) ಇದೀಗ ಜುಲೈ ಆರಂಭದಿಂದಲೇ ಚುರುಕುಗೊಂಡಿದ್ದು, ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅದಲ್ಲೂ ಮುಖ್ಯವಾಗಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ
ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಭಾರಿ ಮಳೆ, ದಕ್ಷಿಣ ಒಳನಾಡು ಮತ್ತಯ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 5 ರಿಂದ 8 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದ್ದು, ಕೆಲ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ನೋಡಿ: ಈ ಬಾರಿ ಮಳೆಗಾಲದಲ್ಲಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. #KSNDMC #ಎಚ್ಚರಿಕೆವಹಿಸಿ
Next 5 days #SouthwestMonsoon #Rainfall #forecast maps for #Karnataka state with district-wise warnings. Source: @Indiametdept @KarnatakaVarthe #KarnataKaRains pic.twitter.com/yUKU3t8RRx— Karnataka State Natural Disaster Monitoring Centre (@KarnatakaSNDMC) July 5, 2026
ಕರಾವಳಿ- ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವ್ಯಾಪಕವಾದ ಭಾರಿ ಮಳೆಯಾಗಲಿದೆ. ಮುಂಗಾರು ಮಾರುತಗಳು ಚುರುಕಾಗಿರುವುದರಿಂದ ಈ ಭಾಗಗಳಿಗೆ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ.
ಬೆಂಗಳೂರು ಹವಾಮಾನ ವರದಿ
ಮುಂದಿನ 3-4 ದಿನಗಳ ಕಾಲ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಜೊತೆಗೆ ನಗರದ ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ತಾಪಮಾನ 27°C ರಿಂದ 29°C ಹಾಗೂ ಕನಿಷ್ಠ ತಾಪಮಾನ 23°C ಆಸುಪಾಸಿನಲ್ಲಿರಲಿದೆ.
ಒಳನಾಡು -ಉತ್ತರ ಒಳನಾಡು
ಇನ್ನು ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಕಲಬುರಗಿ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಭಾರಿ ಗಾಳಿಯೊಂದಿಗೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿತ್ರದುರ್ಗ, ಹಾಸನ ಹಾಗೂ ಮೈಸೂರು ಭಾಗಗಳಲ್ಲಿ ಮುಂಗಾರು ಮಳೆ ಸಾಧಾರಣವಾಗಿ ಮುಂದುವರಿಯಲಿದೆ.
ಒಟ್ಟಿನಲ್ಲಿ ಆರಂಭದಲ್ಲಿ ಕೈಕೊಟ್ಟಿರುವ ಮುಂಗಾರು ಮಳೆ ಜುಲೈ ಮೊಲದ ವಾರದಲ್ಲಿ ಚುರುಕು ಪಡೆದುಕೊಂಡಿದ್ದು ರೈತರಲ್ಲಿ ಸಂತಸ ಮನೆ ಮಾಡಿದೆ.
