Headlines

Karnataka Weather Forecast: ಕರಾವಳಿಯಲ್ಲಿ ನಾಳೆಯೂ ವರ್ಷಧಾರೆ; ಹಲವೆಡೆ ಗಾಳಿ ಅಬ್ಬರದ ಎಚ್ಚರಿಕೆ – Kannada News | Karnataka Weather Update: Widespread Rain to Continue in Coastal Regions

ಬೆಂಗಳೂರು, ಜುಲೈ 10: ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ವರ್ಷಧಾರೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 12ರಿಂದ ರಾಜ್ಯದಲ್ಲಿ ವರುಣಾರ್ಭಟ ಮತ್ತಷ್ಟು ತಗ್ಗಲಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ನಾಳೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಜುಲೈ 11ರಂದು ಎಲ್ಲೆಲ್ಲಿ ಮಳೆ?

ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದು ಅಥವಾ ಎರಡು ಪ್ರದೇಶಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಯೂ ಸಾಧಾರಣದಿಂದ ಮಳೆಯಾಗಬಹುದು ಎಂದು ಎಚ್ಚರಿಸಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಭಾರಿ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ; ಸಿಎಂ ಡಿಕೆ ಶಿವಕುಮಾರ್

ಕಳಸದ ತೋಟದೂರಿನಲ್ಲಿ ದಾಖಲೆಯ ಮಳೆ

ಚಿಕ್ಕಮಗಳೂರಿನ ಕಳಸದ ತೋಟದೂರಿನಲ್ಲಿ ನಿನ್ನೆ ರಾಜ್ಯದಲ್ಲಿಯೇ ಅತ್ಯಧಿಕ 82 ಮಿ.ಮೀ. ಮಳೆಯಾಗಿದೆ. ಉಳಿದಂತೆ ದಕ್ಷಿಣ ಕನ್ನಡದ ಪುತ್ತೂರಿನ ನೆಲ್ಯಾಡಿಯಲ್ಲಿ 75.5 ಮಿ.ಮೀ, ಹಾಸನದ ಸಕಲೆಶಪುರದ ಹೊಗದಹಳ್ಳದಲ್ಲಿ 71.5 ಮಿ.ಮೀ, ಕೊಡಗಿನ ವಿರಾಜಪೇಟೆಯ ಬಿರುನಾನಿಯಲ್ಲಿ 71 ಮಿ.ಮೀ, ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ 50 ಮಿ.ಮೀ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ನಗರಬಸ್ತಿಕೇರಿಯಲ್ಲಿ 43 ಮಿ.ಮೀ, ಉಡುಪಿಯ ಕುಂದಾಪುರದ ಹೊಸಂಗಡಿಯಲ್ಲಿ 38 ಮಿ.ಮೀ, ಬೆಂಗಳೂರು ಗ್ರಾಮಾಂತರದ ದೇವನಳ್ಳಿಯ ಕೋರಮಂಗಲದಲ್ಲಿ 36 ಮಿ.ಮೀ ಮಳೆಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *