Headlines

Karnataka Weather Forecast: ಮೂರು ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​; ಹೊನ್ನಾವರದಲ್ಲಿ ಅಧಿಕ ಮಳೆ – Kannada News | Karnataka Weather Update: IMD Issues Orange Alert for 3 Districts; Honnavar Records Highest Rainfall

ಬೆಂಗಳೂರು, ಜುಲೈ 28: ಕರ್ನಾಟಕದಲ್ಲಿ (Karnataka) ಮುಂಗಾರು ಮಳೆ (Rain) ಮತ್ತೆ ಚುರುಕು ಪಡೆದಿದ್ದು, ಹಲವು ಜಿಲ್ಲೆಗಳಲ್ಲಿ ಉತ್ತಮ ವರ್ಷಧಾರೆಯಾಗುತ್ತಿದೆ. ಈ ನಡುವೆ ರಾಜ್ಯಾದ್ಯ ಕೆಲವೆಡೆ ನಾಳೆ ಉತ್ತಮ ಮಳೆಯ ನಿರೀಕ್ಷೆ ಇದ್ದು ಕರಾವಳಿಯ ಎರಡು ಮತ್ತು ಮಲೆನಾಡು ಭಾಗದ ಒಟ್ಟು 3 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿಯೂ ಮಳೆಯ ಸಾಧ್ಯತೆ ಅಂದಾಜಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ-ಮಲೆನಾಡಲ್ಲಿ ಮಳೆ ಅಬ್ಬರ

ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ನಿರೀಕ್ಷಿಸಲಾಗಿದ್ದು, ಈ ಪೈಕಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದ ಬಾಗಲಕೋಟೆ, ಬೀದರ್​​, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ್ಲಿ ಗಂಟೆಗೆ 40-50 ಕಿ.ಮೀ. ವೇಗದ ಗಾಳಿಯ ಜೊತೆಗೆ ವರುಣಾರ್ಭಟ ಇರಲಿದೆ. ಹಾಗೆಯೇ ದಕ್ಷಿಣ ಒಳನಾಡಿನ, ಚಿಕ್ಕಮಗಳೂರಿಗೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಕೋಲಾರ, ಕೊಡಗು, ಮೈಸೂರು, ರಾಮನಗರ ಮತ್ತು ತುಮಕೂರಲ್ಲೂ ಮಳೆಯ ಸಾಧ್ಯತೆ ಇದೆ.

ಇದನ್ನೂ ಓದಿ: ಮಳೆ ಅಭಾವಕ್ಕೆ ತುಮಕೂರು ಮಂದಿ ಕಂಗಾಲು; ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು

ಹೊನ್ನಾವರದಲ್ಲಿ ಉತ್ತಮ ಮಳೆ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ನಗರಬಸ್ತಿಕೇರಿಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ 102 ಮಿ.ಮೀ. ಮಳೆಯಾಗಿದೆ. ಸುಳ್ಯದ ದೇವಚಳ್ಳ ಮತ್ತು ಕಾರ್ಕಳದ ನೀರೆಯಲ್ಲಿ ತಲಾ 99 ಮಿ.ಮೀ, ತೀರ್ಥಹಳ್ಳಿಯ ಆಗುಂಬೆಯಲ್ಲಿ 81 ಮಿ.ಮೀ, ಶೃಂಗೇರಿಯ ಕಿಗ್ಗದಲ್ಲಿ 52 ಮಿ.ಮೀ, ಸಕಲೇಶಪುರದ ಹೊಗದಹಳ್ಳದಲ್ಲಿ 44 ಮಿ.ಮೀ ಮತ್ತು ವಿರಾಜಪೇಟೆಯ ಬಿರುನಾನಿಯಲ್ಲಿ 43 ಮಿ.ಮೀ ಮಳೆಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *