Headlines

Karnataka Weather Forecast: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​; ಮಡಿಕೇರಿಯ ಬೆಂಗೂರಿನಲ್ಲಿ ದಾಖಲೆಯ ಮಳೆ – Kannada News | Karnataka Weather Forecast: Yellow Alert Issued for 7 Districts; Madikeri Records Heaviest Rainfall

ಬೆಂಗಳೂರು, ಜುಲೈ 08: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸುತ್ತಿದ್ದ ವರುಣನ ಆರ್ಭಟ ಕಡಿಮೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್​​ ತಿಂಗಳಿನಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಮಳೆಯಾಗಿಲ್ಲವಾಗಿತ್ತಾದರೂ ಜುಲೈ ಆರಂಭದಿಂದ ಹಲವೆಡೆ ಉತ್ತಮ ಮಳೆಯಾಗಿತ್ತು. ಆದರೆ ಜುಲೈ 2ನೇ ವಾರದಿಂದ ಮತ್ತೆ ಮುಂಗಾರು ಮಳೆಯ ಚಟುವಟಿಕೆಗಳು ಕ್ಷೀಣಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ಕೇವಲ ಬೆರಳೆಣಿಕೆಯ ಜಿಲ್ಲೆಗಳಲ್ಲಿ ಮಾತ್ರ ನಾಳೆ (ಜುಲೈ 9)ರಂದು ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನ ಕೆಲವೆಡೆ ಭಾರಿ ಮಳೆಯನ್ನು ನಿರಿಕ್ಷಿಸಲಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 50-60 ಕಿಲೋ ಮೀಟರ್​​ ವೇಗದ ಗಾಳಿಯ ಜೊತೆಗೆ ವರ್ಷಧಾರೆಯ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಮೈಸೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತುಂರುರು ಮಳೆಯ ಸಾಧ್ಯತೆ ಬಗ್ಗೆ ಇಲಾಖೆ ಎಚ್ಚರಿಸಿದೆ.

ಇದನ್ನೂ ಓದಿ: ಕರ್ನಾಟಕದ ಪ್ರಮುಖ ಡ್ಯಾಂಗಳ ಜುಲೈ 8ರ ನೀರಿನ ಮಟ್ಟದ ವಿವರ

ಕೊಡಗು ಜಿಲ್ಲೆಯ ಬೆಂಗೂರಲ್ಲಿ ದಾಖಲೆ ಮಳೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಂಗೂರಿನಲ್ಲಿ ನಿನ್ನೆ ದಾಖಲೆಯ ಅಂದರೆ, 211.5 ಮಿ.ಮೀ. ಮಳೆ ಸುರಿದಿದೆ. ನಂತರ ಸ್ಥಾನಗಳಲ್ಲಿ ಶಿವಮೊಗ್ಗದ ತೀರ್ಥಹಳ್ಳಿಯ ಹೊನ್ನೆತಾಳುವಿನಲ್ಲಿ 199.5 ಮಿ.ಮೀ., ಚಿಕ್ಕಮಗಳೂರಿನ ಕೊಪ್ಪದ ಕಮ್ಮರಡಿಯಲ್ಲಿ 194 ಮಿ.ಮೀ., ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ಹಲಗೇರಿಯಲ್ಲಿ 179.5 ಮಿ.ಮೀ., ದಕ್ಷಿಣ ಕನ್ನಡದ ಬೆಳ್ತಂಗಡಿಯ ಮಲವಂತಿಗೆಯಲ್ಲಿ 165.5 ಮಿ.ಮೀ., ಸಕಲೇಶಪುರದ ಹೊಗಲಹಳ್ಳ ಅಥವಾ ಹೊಂಗಡಹಳ್ಳದಲ್ಲಿ 163.5 ಮಿ.ಮೀ. ಮತ್ತು ಉಡುಪಿಯ ಕುಂದಾಪುರದ ಮಡಾಮಕ್ಕಿಯಲ್ಲಿ 124.5 ಮಿ.ಮೀ. ಮಳೆ ಸುರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *