Leopard In Bengaluru: 5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಬೆಂಗಳೂರು, ಜುಲೈ 13: ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿ ಮತ್ತು ಭಾರತ ನಗರದಲ್ಲಿ ಕಳೆದ ಐದು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಗುರುವಾರ ಮತ್ತು ಶುಕ್ರವಾರದಂದು ಒಂದು ಪಾರ್ಕ್​ನಲ್ಲಿ ಮತ್ತು ರಸ್ತೆಗೆ ಅಡ್ಡಲಾಗಿರುವ ಖಾಲಿ ಸೈಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಅವರು ಸಾರ್ವಜನಿಕರ ಒತ್ತಾಯದ ಮೇರೆಗೆ ಪೊದೆಗಳನ್ನು ತೆರವುಗೊಳಿಸಿದ ನಂತರವೂ, ಚಿರತೆ ನಿನ್ನೆ ಮತ್ತೆ ಕಾಣಿಸಿಕೊಂಡಿದ್ದು, ಭಯ ಹೆಚ್ಚಿಸಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಒಂದು ಬೋನನ್ನು ಇರಿಸಿದ್ದಾರೆ. ಆದರೆ, ಒಂದು ಬೋನು ಸಾಕಾಗುವುದಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಚಿರತೆಯನ್ನು ತ್ವರಿತವಾಗಿ ಹಿಡಿಯಲು ಎರಡು-ಮೂರು ಬೋನುಗಳನ್ನು ಇಡಬೇಕು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ಹೆಚ್ಚಿಸಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ. ಸಂಜೆ ಆಗುತ್ತಿದ್ದಂತೆ ಜನರು ಈ ರಸ್ತೆಯಲ್ಲಿ ಓಡಾಡಲು ಹಿಂದೇಟು ಹಾಕುತ್ತಿದ್ದು, ವಾಹನ ಸಂಚಾರವೂ ಕಡಿಮೆಯಾಗಿದೆ. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಚಿರತೆಯನ್ನು ಸೆರೆಹಿಡಿಯಲು ಕ್ರಮ ಕೈಗೊಳ್ಳುವಂತೆ ಜನರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *